ಕರಾವಳಿ

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ| ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್‌ ಆದೇಶಿಸಿದ್ದಾರೆ. ಮಂಗಳೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು, […]

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ| ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ Read More »

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಆನೆ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕದ ಗುಂಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ. ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡುಬಂದಿದೆ. ಸ್ಥಳಕ್ಕೆ

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು Read More »

ಏಕಾಏಕಿ ಧುಮ್ಮಿಕ್ಕಿ ಹರಿದ ಅರೆಬೈಲ್ ಫಾಲ್ಸ್| ನಡುವೆ ಸಿಲುಕಿದ ಪ್ರವಾಸಿಗರ ರಕ್ಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟ ಭಾಗದ ಅರೆಬೈಲ್ ಜಲಪಾತದಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾಗಿ ಜಲಪಾತ ವೀಕ್ಷಿಸಲು ಆಗಮಿಸಿದ್ದ ಪ್ರವಾಸಿಗರು ನಡುವೆ ಸಿಲುಕಿದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಖಾಸಗಿ ಮೆಡಿಕಲ್‌ ಕಾಲೇಜಿನ ಐವರು ವಿದ್ಯಾರ್ಥಿಗಳು ಅರೆಬೈಲ್ ಘಟ್ಟದ ಕಾಡಿನ ಮಧ್ಯದಲ್ಲಿ ಇರುವ ಅರೆಬೈಲ್ ಜಲಪಾತಕ್ಕೆ ಆಗಮಿಸಿದ್ದರು. ಜಲಪಾತ ವೀಕ್ಷಣೆ ವೇಳೆ ಅವರು ಚಿಕ್ಕ ಹಳ್ಳವನ್ನು ದಾಟಲು ಮುಂದಾಗಿದ್ದರು. ಆಗ ಏಕಾಏಕಿ ನೀರಿನ ಹರಿವು ಹೆಚ್ಚಳವಾಗಿದೆ. ಜಲಪಾತದಲ್ಲಿ ನೀರು ಧುಮ್ಮಿಕ್ಕಲು ಪ್ರಾರಂಭಿಸಿದಂತೆ

ಏಕಾಏಕಿ ಧುಮ್ಮಿಕ್ಕಿ ಹರಿದ ಅರೆಬೈಲ್ ಫಾಲ್ಸ್| ನಡುವೆ ಸಿಲುಕಿದ ಪ್ರವಾಸಿಗರ ರಕ್ಷಣೆ Read More »

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತ| ಮಂಗಳೂರು – ಬೆಂಗಳೂರು ರಸ್ತೆ ಸಂಚಾರ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಜುಲೈ 17, 2025ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆಯಿಂದಾಗಿ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ. ಬೃಹತ್ ಪ್ರಮಾಣದ ಮಣ್ಣು ಕುಸಿದು ರಸ್ತೆಯ ಮೇಲೆ ಬಿದ್ದಿರುವುದರಿಂದ ವಾಹನ ಸಂಚಾರ ತಾತ್ಕಾಲಿಕವಾಗಿ ಸಂಪೂರ್ಣ ಸ್ಥಗಿತಗೊಂಡಿದೆ. ಪ್ರಸ್ತುತ, ಸ್ಥಳದಲ್ಲಿ ಮಣ್ಣು ತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾರ್ಯ ಆರಂಭಿಸಿದ್ದಾರೆ. ಮಣ್ಣು

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತ| ಮಂಗಳೂರು – ಬೆಂಗಳೂರು ರಸ್ತೆ ಸಂಚಾರ ತಾತ್ಕಾಲಿಕ ಸ್ಥಗಿತ Read More »

ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯ ಶಾಲೆ ಹಾಗೂ ದ.ಕ ಜಿಲ್ಲೆಯ ಪಿಯುವರೆಗಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟೂಬಿಡದೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢ ಶಾಲೆಗಳಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳಿಗೆ ಗುರುವಾರ (ಜು.17) ರಂದು ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಸಿದ್ದಾರೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ

ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯ ಶಾಲೆ ಹಾಗೂ ದ.ಕ ಜಿಲ್ಲೆಯ ಪಿಯುವರೆಗಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »

ಪುತ್ತೂರು: ಪ್ರಜ್ಞಾ ಆಶ್ರಮದಲ್ಲಿನ ವಿಶೇಷ ಮಕ್ಕಳೊಂದಿಗೆ ಡಾ. ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬ ಆಚರಣೆ 

ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಪುತ್ತೂರಿನ ಬೀರಮಲೆಯ ಪ್ರಜ್ಞಾ ಆಶ್ರಮದಲ್ಲಿ ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದರು. ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ಹಂಚಿ ಆರ್ಥಿಕ ಸಹಾಯ ಮಾಡುವ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಸಂಭ್ರಮಿಸಿ ಆಚರಿಸಿದರು.  ಈ ಸಂಧರ್ಭದಲ್ಲಿ ಉನೈಸ್ , ಪ್ರಹ್ಲಾದ್ ಬೆಳ್ಳಿಪ್ಪಾಡಿ , ಆದ್ಯ ಬ್ಯಾಗ್ಸ್ ಮಾಲಕರಾದ ಅಶೋಕ್ ರಾವ್ ಬಪ್ಪಳಿಗೆ , ಹರೀಶ್ ಬಪ್ಪಳಿಗೆ , ಬ್ರಾಂಡ್ ಬಾಯ್ ಮಾಲಕರಾದ

ಪುತ್ತೂರು: ಪ್ರಜ್ಞಾ ಆಶ್ರಮದಲ್ಲಿನ ವಿಶೇಷ ಮಕ್ಕಳೊಂದಿಗೆ ಡಾ. ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬ ಆಚರಣೆ  Read More »

ಬಂಟ್ವಾಳ: ಮದುವೆ ನಿರಾಕರಿಸಿದ ಪ್ರಿಯತಮೆಯ ಇರಿದು ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟಳೆಂದು ಭಾವಿಸಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ಇಂದು(ಜೂ.7) ನಡೆದಿದೆ. ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ ದೀಕ್ಷಿತಾ (26) ಹಲ್ಲೆಗೊಳಗಾದ ಯುವತಿಯಾಗಿದ್ದು, ಕೋಡ್ಮನ್ ಗ್ರಾಮದ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ದಿವ್ಯಾ ಮತ್ತು ಸುಧೀರ್ ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇತ್ತೀಚಿನ ಕೆಲವು ತಿಂಗಳುಗಳಿಂದ ಇಬ್ಬರ ನಡುವೆ ಮನಸ್ತಾಪ

ಬಂಟ್ವಾಳ: ಮದುವೆ ನಿರಾಕರಿಸಿದ ಪ್ರಿಯತಮೆಯ ಇರಿದು ನೇಣಿಗೆ ಶರಣಾದ ಯುವಕ Read More »

ಮಂಗಳೂರು: ವಶಪಡಿಸಿಕೊಂಡ ಮೊಬೈಲ್ ತನಿಖೆ ವೇಳೆ ಬಯಲಾಯ್ತು‌ ಹಲವು ಅಶ್ಲೀಲ ವೀಡಿಯೋ| ಹಿಂದೂ ಮುಖಂಡ ಸಮಿತ್ ರಾಜ್ ಮೊಬೈಲ್ ನಲ್ಲಿ ಪ್ರಮುಖರ ಹಸಿಬಿಸಿ ದೃಶ್ಯಾವಳಿ!!

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. ಆ ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ. ಆ ಅಶ್ಲೀಲ

ಮಂಗಳೂರು: ವಶಪಡಿಸಿಕೊಂಡ ಮೊಬೈಲ್ ತನಿಖೆ ವೇಳೆ ಬಯಲಾಯ್ತು‌ ಹಲವು ಅಶ್ಲೀಲ ವೀಡಿಯೋ| ಹಿಂದೂ ಮುಖಂಡ ಸಮಿತ್ ರಾಜ್ ಮೊಬೈಲ್ ನಲ್ಲಿ ಪ್ರಮುಖರ ಹಸಿಬಿಸಿ ದೃಶ್ಯಾವಳಿ!! Read More »

ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನು ರೀತಿಯಲ್ಲಿ ಅವಕಾಶ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳುಗಾರಿಕೆಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಮುಂದಿನ ವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ಶಾಸಕರು, ಜಿಲ್ಲೆಯಲ್ಲಿ ಮನೆ ನಿರ್ಮಾಣ ಸೇರಿದಂತೆ ಬಡ ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿರುವ

ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನು ರೀತಿಯಲ್ಲಿ ಅವಕಾಶ – ದಿನೇಶ್ ಗುಂಡೂರಾವ್ Read More »

ದ.ಕ‌ ಎಸ್ಪಿ ಅರುಣ್ ಗೆ ನೋಟೀಸ್ ನೀಡಿದ ಹೈಕೋರ್ಟ್| ರಾತ್ರೋರಾತ್ರಿ ಹಿಂದೂ ಮುಖಂಡರ ಮನೆಗೆ ನುಗ್ಗಿ ಫೋಟೋ ತೆಗೆಸಿದ್ದೇ ಮುಳುವಾಯ್ತೇ?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರೋ ರಾತ್ರಿ ಹಿಂದೂ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಜಿಲ್ಲೆಯ ಹಿರಿಯ ಆರ್.ಎಸ್.ಎಸ್ ಮುಖಂಡ ಯು.ಜಿ.ರಾಧಾ ಅವರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೋಲನೆ ನಡೆಸಿದ್ದರು. ಇದೀಗ ಎಸ್ ಪಿ ಡಾ.ಅರುಣ್ ಕುಮಾರ್ ಅವರಿಗೆ ಕಾರಣ ಕೇಳಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಸೂಕ್ತ ದಾಖಲೆ ಸಲ್ಲಿಸಬೇಕು. ಅಲ್ಲದೇ ಕಾನೂನು ಹೊರತಾಗಿ

ದ.ಕ‌ ಎಸ್ಪಿ ಅರುಣ್ ಗೆ ನೋಟೀಸ್ ನೀಡಿದ ಹೈಕೋರ್ಟ್| ರಾತ್ರೋರಾತ್ರಿ ಹಿಂದೂ ಮುಖಂಡರ ಮನೆಗೆ ನುಗ್ಗಿ ಫೋಟೋ ತೆಗೆಸಿದ್ದೇ ಮುಳುವಾಯ್ತೇ? Read More »