ಕರಾವಳಿ

ಕಾರ್ಕಳ: ಆಸ್ತಿ ವಿಚಾರಕ್ಕೆ ಸಹೋದರನ ಕೊಲೆ: ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್ : ಆಸ್ತಿ ವಿಚಾರವಾಗಿ ಸಹೋದರನನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜು ಯಾನೆ ಕಪಿಲ (38) ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ.12ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಾರ್ಕಳ ತಾಲೂಕು ನಿಟ್ಟೆ ಬಜಕಳ ನಿವಾಸಿ ರಾಜು ಯಾನೆ ಕಪಿಲ ಮತ್ತು ಶೇಖರ ಸಹೋದರರಾಗಿದ್ದು, ಇವರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. 2022ರ ಮಾ.6ರಂದು ಶೇಖರ ಅವರು ಮನೆಯ ಬಳಿ ಕೆಲಸ ಮಾಡುತ್ತಿದ್ದಾಗ ರಾಜು ಬಂದು ಗಲಾಟೆ ನಡೆಸಿ […]

ಕಾರ್ಕಳ: ಆಸ್ತಿ ವಿಚಾರಕ್ಕೆ ಸಹೋದರನ ಕೊಲೆ: ಜೀವಾವಧಿ ಶಿಕ್ಷೆ Read More »

ಕಾಪು : ಉಸಿರಾಟದ ತೊಂದರೆ: ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ಎದೆನೋವು ಕಾಣಿಸಿಕೊಂಡು ಉಸಿರಾಟದ ತೊಂದರೆಯಿಂದ ಕಾಪು ಇನ್ನಂಜೆ ನಿವಾಸಿ ಪ್ರಶಾಂತ್ (44) ಅವರು ಇತ್ತೀಚೆಗೆ ಮೃತಪಟ್ಟ ಘಟನೆ ನಡೆದಿದೆ. ವಿಪರೀತ ಮದ್ಯ ಸೇವನೆ ಅಭ್ಯಾಸ ಹೊಂದಿದ್ದ ಅವರು ಮದ್ಯಸೇವನೆಯನ್ನು ಬಿಡಲು 3 ವರ್ಷಗಳ ಹಿಂದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಒಂದು ವಾರದ ಹಿಂದೆ ಕಾಲು ಊತ ಕಾಣಿಸಿಕೊಂಡಿದ್ದರಿಂದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ಕಾಪು : ಉಸಿರಾಟದ ತೊಂದರೆ: ವ್ಯಕ್ತಿ ಸಾವು Read More »

ಪಡುಬಿದ್ರಿ : ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರ ರಕ್ಷಣೆ

ಸಮಗ್ರ ನ್ಯೂಸ್ : ಸಂತೆಯಲ್ಲಿ ಬಾಲಕಾರ್ಮಿಕರು ಹಾಗೂ ಭಿಕ್ಷಾಟನೆ ನಡೆಸುತ್ತಿರುವವರ ಬಗ್ಗೆ ಮಾಹಿತಿ ಪಡೆದ ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ಅವರು ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ಸಹಕಾರದೊಂದಿಗೆ ದಿಢೀರ್ ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಿದರು. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾಗ ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರು ಪತ್ತೆಯಾದರು. ಇದೇ ವೇಳೆ ಮಕ್ಕಳನ್ನು ಬಳಸಿ ಭಿಕ್ಷಾಟನೆ ನಡೆಸುತ್ತಿರುವುದೂ ಕಂಡು ಬಂದಿದ್ದು, ಅವರು ಅಧಿಕಾರಿಗಳನ್ನು ನೋಡಿ ಅಲ್ಲಿಂದ ಪರಾರಿಯಾದರು. ಪತ್ತೆಹಚ್ಚಲಾದ ಬಾಲ ಕಾರ್ಮಿಕರನ್ನು ಮಕ್ಕಳ

ಪಡುಬಿದ್ರಿ : ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರ ರಕ್ಷಣೆ Read More »

ಶಿರಾಡಿ‌ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ| ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ| ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ಎನ್‍ಎಚ್-75 ರ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್‍ವೊಂದು ಪಲ್ಟಿಯಾಗಿ ಟ್ಯಾಂಕರ್‍ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಇಂದು (ಮಾ.13) ಸಂಭವಿಸಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಪಲ್ಟಿಯಾದ ಗ್ಯಾಸ್ ಟ್ಯಾಂಕರ್‍ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾರ್ಗಮಧ್ಯೆ ನೂರಾರು ವಾಹನಗಳು ನಿಂತಲ್ಲೆ ನಿಂತಿವೆ. ಸದ್ಯ ಪೊಲೀಸರು ಮಂಗಳೂರು- ಹಾಸನ- ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ. ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು

ಶಿರಾಡಿ‌ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ| ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ| ವಾಹನ ಸಂಚಾರಕ್ಕೆ ನಿರ್ಬಂಧ Read More »

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್ : ವಿವೇಕಾನಂದ ಪಾಲಿಟೆಕ್ನಿಕ್‌ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ (60)ಯವರು ಹೃದಯಾಘಾತದಿಂದ ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧಾನರಾದರು. 1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊAಡಿದ್ದು 1987ರಲ್ಲಿ ಅದರ ಪ್ರಾಂಶುಪಾಲರಾಗಿ ಗೋಪಿನಾಥ್ ಶೆಟ್ಟಿಯವರು ನೇಮಕಗೊಂಡಿದ್ದರು. ಅದಾದ ಬಳಿಕ ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಈ ಮೂಲಕ ವಿವೇಕಾನಂದ ಪಾಲಿಟೆಕ್ನಿಕ್ ಆಧಾರ ಸ್ಥಂಭವಾಗಿದ್ದರು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಪ್ರಸ್ತುತ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ Read More »

ಪುತ್ತೂರು: ಮಹಿಳೆಯ ಖಾತೆಯಿಂದ ಹಣ ವಂಚನೆ- ದೂರು ದಾಖಲು..!

ಸಮಗ್ರ ನ್ಯೂಸ್ : ಮಹಿಳೆಯೋರ್ವರ ಖಾತೆಯಿಂದ ಅಪರಿಚಿತ ವ್ಯಕ್ತಿ ಯಾವುದೋ ರೀತಿಯಲ್ಲಿ ವಂಚಿಸಿ ಹಣವನ್ನು ಪಡೆದುಕೊಂಡ ಘಟನೆ ಚಿಕ್ಕಮಡ್ನೂರು ಗ್ರಾಮ ಪುತ್ತೂರಿನಲ್ಲಿ ನಡೆದಿದೆ. ಚಿಕ್ಕಮಡ್ನೂರು ಗ್ರಾಮ ,ಪುತ್ತೂರು ನಿವಾಸಿ ಐಡಾ ಶಾಂತಿ ಲೋಬೊ (43) ಎಂಬವರ ದೂರಿನಂತೆ, ಪುತ್ತೂರಿನ ದರ್ಬೆ ಎಂಬಲ್ಲಿರುವ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು, ಖಾತೆಯಿಂದ ದಿನಾಂಕ 02-02-2024 ರಂದು ರಾತ್ರಿ ಸಮಯ ರೂ 13,000/- ಹಣ ಕಡಿತಗೊಂಡಿರುವ ಬಗ್ಗೆ ಮೊಬೈಲ್ ಗೆ ಸಂದೇಶ ಬಂದಿರುತ್ತದೆ. ಮಹಿಳೆಯ ಖಾತೆಯಿಂದ ಯಾರೋ ಅಪರಿಚಿತ ವ್ಯಕ್ತಿ ಯಾವುದೋ

ಪುತ್ತೂರು: ಮಹಿಳೆಯ ಖಾತೆಯಿಂದ ಹಣ ವಂಚನೆ- ದೂರು ದಾಖಲು..! Read More »

ಬೆಳ್ಳಾರೆ: ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ!

ಸಮಗ್ರ ನ್ಯೂಸ್ : ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ ನಂತರ ಸಹೋದ್ಯೋಗಿ ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು. ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಮಹಿಳೆಯನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ಳಾರೆ: ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ! Read More »

ಕಳೆದುಹೋದ ಮೊಬೈಲ್ ಪೋನ್‍ಗಳು/ ಕಂಡುಹಿಡಿಯುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿ

ಸಮಗ್ರ ನ್ಯೂಸ್: ಕಳೆದುಹೋದ ಮೊಬೈಲ್ ಪೋನ್‍ಗಳನ್ನು ಕಂಡುಹಿಡಿಯುವಲ್ಲಿ ಮತ್ತು ಮರುಪಡೆಯುವಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಸಿಇಐಆರ್ ಪೋರ್ಟಲ್‍ನಲ್ಲಿ ಮೊಬೈಲ್ ಸಾಧನಗಳ ನವೀಕರಣದಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ ಎಂದು ವರದಿಯಾಗಿದೆ. 2,06,905 ಲಕ್ಷ ಮೊಬೈಲ್ ಪೋನ್ ಪ್ರಕರಣಗಳು ಸಿಇಐಆರ್ (ಸೆಂಟ್ರಲ್ ಈಕ್ವಿಪ್ಟೆಂಟ್ ಐಡೆಂಟಿಟಿ ರಿಜಿಸ್ಟ್ರಿ) ಪೋರ್ಟಲ್‍ನಲ್ಲಿ ದಾಖಲಾಗಿವೆ. ಇವುಗಳಲ್ಲಿ 89,794 ಸೆಲ್ ಪೋನ್‍ಗಳ ಉಲ್ಲೇಖಗಳು ಕಂಡುಬಂದಿವೆ. ಪೋಲೀಸರು 29,550 ಮೊಬೈಲ್ ಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದ ಕದ್ದ ಮೊಬೈಲ್ ಪೋನ್ ಗಳನ್ನು ವಾಪಸ್ ಪಡೆಯುವಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ ಎನ್ನಲಾಗಿದೆ.

ಕಳೆದುಹೋದ ಮೊಬೈಲ್ ಪೋನ್‍ಗಳು/ ಕಂಡುಹಿಡಿಯುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿ Read More »

ಮಂಗಳೂರು: ಜೀವ ಬೆದರಿಕೆ ಆರೋಪ: ಪೊಲೀಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಉಳ್ಳಾಲ ಠಾಣಾಧಿಕಾರಿ ಎಚ್.ಎನ್.ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಮಲ ಭಾರತ್ ಚಾರಿಟೇಬಲ್ ಟ್ರಸ್ಟ್ನ ಮಹಿಳಾ ಕಾರ್ಯದರ್ಶಿಗೆ ಅಡ್ಡಿಪಡಿಸುವುದು, ಹಲ್ಲೆ ಮಾಡುವುದು ಮತ್ತು ಜೀವ ಬೆದರಿಕೆ ಹಾಕಿರುವುದು ಆರೋಪದಲ್ಲಿ ಉಲ್ಲೇಖಿಸಲಾಗಿದೆ. ಕೊಣಾಜೆ ಗ್ರಾಮದ ಸರ್ವೆ ನಂ.149ರಲ್ಲಿ ಎರಡು ಎಕರೆ ಜಮೀನನ್ನು ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಜನವರಿ 26ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟ್ರಸ್ಟ್ನ ಕಾರ್ಯದರ್ಶಿ ಲತಾ ರೈ, ಸದಸ್ಯರಾದ ಡಾ.ಸಿ.ಎನ್.ಶಂಕರ್ ರಾವ್ ಮತ್ತು ಪ್ರೊ.ಕೆ.ಎಂ.ಬಾಲಕೃಷ್ಣ ಅವರೊಂದಿಗೆ ನಿವೇಶನದ ಗಡಿಭಾಗಕ್ಕೆ ತೆರಳಿದ್ದರು.

ಮಂಗಳೂರು: ಜೀವ ಬೆದರಿಕೆ ಆರೋಪ: ಪೊಲೀಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು Read More »

ಬೈಂದೂರು: ಮೀನಿಗೆ ಗಾಳ ಹಾಕುತ್ತಿದ್ದ ವೇಳೆ ಕಾಲು ಜಾರಿ ವ್ಯಕ್ತಿ ಸಮುದ್ರಪಾಲು

ಸಮಗ್ರ ನ್ಯೂಸ್ : ಅರಬ್ಬಿ ಸಮುದ್ರದಲ್ಲಿ ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ನೇಜಿ ಮೊಹಮ್ಮದ್ ರಿಜ್ವಾನ್ (33) ಮೃತಪಟ್ಟರು. ಇವರು ನಿನ್ನೆ ರಾತ್ರಿಯಿಂದ ಇಂದು ಬೆಳಿಗ್ಗಿನ ಅವಧಿಯಲ್ಲಿ ಬೈಂದೂರಿನ ಶಿರೂರು ಗ್ರಾಮದ ಶಿರೂರು ಅಳಿವೆಗದ್ದೆ ಬಂದರಿನ ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಸಂಬಂಧಿ ನೀಡಿದ

ಬೈಂದೂರು: ಮೀನಿಗೆ ಗಾಳ ಹಾಕುತ್ತಿದ್ದ ವೇಳೆ ಕಾಲು ಜಾರಿ ವ್ಯಕ್ತಿ ಸಮುದ್ರಪಾಲು Read More »