ಕರಾವಳಿ

ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ| ಬೈಕ್ ಸವಾರ ಗಂಭೀರ

ಸಮಗ್ರ ನ್ಯೂಸ್ : ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ನಡೆದಿದೆ. ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಎಬ್ಸಿ ಬೈಕ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತೀ ವೇಗದ ಚಾಲನೆಯಿಂದ ಈ ಅಪಘಾತ

ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ| ಬೈಕ್ ಸವಾರ ಗಂಭೀರ Read More »

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ ಅವರ ಮೃತದೇಹ ಶನಿವಾರ ಬೆಳಿಗ್ಗೆ ಮನೆ ಎದುರಿನ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ನಿದ್ದೆಯಿಂದ ಎದ್ದು ಮನೆ ಹೊರಗಡೆ ಬಂದ ಸದಾನಂದರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ. ಬೆAಗಳೂರಿನಲ್ಲಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಸಿಬ್ಬಂದಿಯಾಗಿದ್ದ ಸದಾನಂದ ಅವರು

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಬೆಳ್ಳಾರೆ : ಸುಲಿದು ಇಟ್ಟಿದ್ದ 5 ಗೋಣಿ ಅಡಿಕೆ ಕಳವು

ಸಮಗ್ರ ನ್ಯೂಸ್ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಲಿದು ದಾಸ್ತಾನು ಇಟ್ಟಿದ್ದ 5 ಗೋಣಿ ಅಡಿಕೆ ಕಳವಾಗಿರುವ ಘಟನೆ ಸುಳ್ಯದ ಕುಳ್ಳಂಪಾಡಿ ಎಂಬಲ್ಲಿ ನಡೆದಿದೆ. ಕುಳ್ಳಂಪಾಡಿ ಗ್ರಾಮ ನಿವಾಸಿ ಹಿರಿಯಣ್ಣ ಗೌಡ (54) ಎಂಬವರು ಮಾರ್ಚ್ 14 ರಂದು ಸಂಜೆ ತನ್ನ ಕುಟುಂಬ ಸಮೇತ ಪುತ್ತೂರು ತಾಲೂಕು ಮಾಡಾವಿನಲ್ಲಿರುವ ತನ್ನ ಅಕ್ಕನ ಮನೆಗೆ ಹೋದವರು ರಾತ್ರಿ ವಾಪಾಸು ಮನೆಗೆ ಬಂದಿದ್ದು, ಮರುದಿನ ಬೆಳಿಗ್ಗೆ ಎದ್ದು, ಕೊಟ್ಟಿಗೆಗೆ ಹೋಗಿ ನೋಡಿದಾಗ ಕೊಟ್ಟಿಗೆಯಲ್ಲಿ ಸುಮಾರು ಒಂದು ವಾರಗಳಿಂದ ಸುಲಿದು

ಬೆಳ್ಳಾರೆ : ಸುಲಿದು ಇಟ್ಟಿದ್ದ 5 ಗೋಣಿ ಅಡಿಕೆ ಕಳವು Read More »

ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು

ಸಮಗ್ರ ನ್ಯೂಸ್ : ಆಟೋ ರಿಕ್ಷಾ ಢಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು. ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ. ಈ ವೇಳೆ ಅದೇ ಸಮಯಕ್ಕೆ ಬಂದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ

ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು Read More »

ಉಡುಪಿ: ಈಶ್ವರಪ್ಪನವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ; ಯಶ್ ಪಾಲ್ ಸುವರ್ಣ

ಸಮಗ್ರ ನ್ಯೂಸ್ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು. ಆದರೆ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಈಶ್ವರಪ್ಪ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಬೇಸರ ಶಮನಗೊಂಡು 28 ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ

ಉಡುಪಿ: ಈಶ್ವರಪ್ಪನವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ; ಯಶ್ ಪಾಲ್ ಸುವರ್ಣ Read More »

ಮಂಗಳೂರು: ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ;ರಮಾನಾಥ ರೈ

ಸಮಗ್ರ ನ್ಯೂಸ್: ರಾಜ್ಯದಲ್ಲಿ 18 ರಿಂದ 20 ಸ್ಥಾನಗಳು ಗೆಲ್ಲುವ ವಿಶ್ವಾಸ ಇದೆ, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ. ಕರಾವಳಿಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಕೆಲಸ ಮಾಡಿಲ್ಲ ಅಂತ ಅಭ್ಯರ್ಥಿ ಬದಲಾವಣೆ ಮಾಡಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅನೇಕ ಹಗರಣಗಳು ನಡೆಸಿದೆ. ಪಾಕಿಸ್ತಾನದ ಮೂಲದ ಕಂಪೆನಿಯಿಂದಲೂ ಬಿಜೆಪಿ ದೇಣಿಗೆ ಪಡೆದಿದೆ.

ಮಂಗಳೂರು: ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ;ರಮಾನಾಥ ರೈ Read More »

ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ|ಸಿಸಿಟಿವಿಯಲ್ಲಿ ಸೆರೆ

ಸಮಗ್ರ ನ್ಯೂಸ್ : ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾಗಿದ್ದಾನೆ. ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ|ಸಿಸಿಟಿವಿಯಲ್ಲಿ ಸೆರೆ Read More »

ಉಡುಪಿ:ಯುವಕನ ಹತ್ಯೆ ಪ್ರಕರಣ| ಘಟನೆ ನಡೆದು 13 ದಿನಗಳು ಕಳೆದರೂ ಆರೋಪಿಗಳ ಸುಳಿವಿಲ್ಲ

ಸಮಗ್ರ ನ್ಯೂಸ್ : ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ಮಾ.2 ರ ರಾತ್ರಿ ತನ್ನದೇ ಮನೆಯಲ್ಲಿ ಆಗಂತುಕರು ಹಾರಿಸಿದ ಗುಂಡಿಗೆ ಬಲಿಯಾದ ಕೃಷ್ಣನ ಹತ್ಯೆ ನಡೆದು ಇಂದಿಗೆ 13 ದಿನಗಳು ಉರುಳಿದೆ. ಹತ್ಯೆ ನಡೆದ ಕೆಲವು ದಿನಗಳ ಬಳಿಕ ಮನೆಯೊಳಗಿದ್ದ ಟ್ರಂಕ್ ಕಾಣೆಯಾಗಿದೆ ಎಂದು ಕುಟುಂಬಸ್ಥರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಟ್ರಂಕ್ ನ ಒಳಗೇನಿತ್ತು ಎಂಬುದು ಇಲಾಖೆಗೆ ಯಕ್ಷಪ್ರಶ್ನೆಯಾಗಿದೆ. ಮೃತ ಕೃಷ್ಣನ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದು ಪ್ರಾಥಮಿಕ ತನಿಖೆಯನ್ನು ನಡೆಸಿ, ಸಿಡಿಆರ್ ಪಡೆದಿದ್ದಾರೆ. ಅದರಲ್ಲಿ

ಉಡುಪಿ:ಯುವಕನ ಹತ್ಯೆ ಪ್ರಕರಣ| ಘಟನೆ ನಡೆದು 13 ದಿನಗಳು ಕಳೆದರೂ ಆರೋಪಿಗಳ ಸುಳಿವಿಲ್ಲ Read More »

ಉಡುಪಿ: ಲಾಕರ್‍ನಲ್ಲಿದ್ದ ಲಕ್ಷಾಂತರ ರೂ. ಲಪಟಾಯಿಸಿದ ಡೆಲಿವರಿ ಬಾಯ್

ಸಮಗ್ರ ನ್ಯೂಸ್ : ಬ್ರಹ್ಮಾವರ ಸಮೀಪದ ಸಾಲಿಕೇರಿ ಎಂಬಲ್ಲಿರುವ ವಿಲ್‍ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪನಿಯ ಖಾತೆಯ ಲಾಕರ್ ನಲ್ಲಿದ್ದ 3,25,000ರೂ. ಹಣವನ್ನು ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ ಎಂಬಾತನು ಕಳ್ಳತನ ಮಾಡಿಕೊಂಡು ಹೋಗಿದ್ದು, ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಉಡುಪಿ: ಲಾಕರ್‍ನಲ್ಲಿದ್ದ ಲಕ್ಷಾಂತರ ರೂ. ಲಪಟಾಯಿಸಿದ ಡೆಲಿವರಿ ಬಾಯ್ Read More »

ಬೆಳ್ತಂಗಡಿ: ಕಾರು ಪಲ್ಟಿ| ಚಾಲಕ ಗಂಭೀರ

ಸಮಗ್ರ ನ್ಯೂಸ್ : ಗುರುವಾಯನ ಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದು ಪಕ್ಕದ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ. ಉಡುಪಿ ಮೂಲದ ವ್ಯಾಪಾರಿ ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಳ್ತಂಗಡಿ: ಕಾರು ಪಲ್ಟಿ| ಚಾಲಕ ಗಂಭೀರ Read More »