ಕರಾವಳಿ

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಬಿಜೆಪಿ ವಿರುದ್ಧ ಬಂಡಾಯ ಸಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಪುತ್ತೂರಿನ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.‌ ಈ ಮೂಲಕ ಮತ್ತೆ ಮರಳಿ ಗೂಡಿಗೆ ವಾಪಾಸ್ಸಾಗಿದ್ದಾರೆ. ಮಾ.14ರ ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಉಪಸ್ಥಿತರಿದ್ದರು. ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅರುಣ್ ಕುಮಾರ್ ಪುತ್ತಿಲ […]

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ Read More »

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್ : ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಸುಮಾರು ನಾಲ್ಕೈದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು, ಮೃತ ದೇಹದ ಮುಖ ಗುರುತು ಹಿಡಿಯಲಾರದಷ್ಟು ಕೊಳೆತು ಹೋಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಹಾಗೂ ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ ತಂಡ ಆಗಮಿಸಿದೆ.

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಕೂದಲೆಳೆಯ ಅಂತರದಲ್ಲಿ ಸವಾರ ಪಾರು

ಸಮಗ್ರ ನ್ಯೂಸ್: ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕೂದಲೆಳೆಯ ಅಂತರದಲ್ಲಿ ಜೀವಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ ಕಡೆಗೆ ಬರುತ್ತಿದ್ದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯ ತೀವ್ರತೆಗೆ ಸವಾರನು ಕಾರಿನ ಗಾಜಿನ ಮೇಲೆ ಹಾರಿಬಿದ್ದು ತಲೆಗೆ ಗಾಯವಾಗಿದೆ. ನಿಯಂತ್ರಣ ತಪ್ಪಿದ ಕಾರಿನ ಚಕ್ರ ರಸ್ತೆ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣಿನ ಹೂತು ಹೋಗಿರುವುದಿಂದ

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಕೂದಲೆಳೆಯ ಅಂತರದಲ್ಲಿ ಸವಾರ ಪಾರು Read More »

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಸಹಕಾರಿ ಸಂಘದಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ ಕಾರ್ಯ ಪ್ರಗತಿಯಲ್ಲಿದೆ. ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ. 31 ರವರೆಗೆ ಕಾಲವಕಾಶವನ್ನು ನೀಡಲಾಗಿದೆ.

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ Read More »

ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ

ಸಮಗ್ರ ಸಮಾಚಾರ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಲೋಕಸಬಾ ಸ್ಪರ್ಧೆ ಅವಕಾಶ ಈ ಬಾರಿ ಬ್ರಿಜೇಶ್ ಚೌಟರಿಗೆ ಒಲಿದು ಬಂದಿದೆ. ಈ ಕ್ಷೇತ್ರದಲ್ಲಿ ಜೈನ್ ಸಮುದಾಯದಿಂದ ಧನಂಜಯ ಕುಮಾರ್ ಬಿಜೆಪಿಯಿಂದ ಒಕ್ಕಲಿಗ ಸದಾನಂದ ಗೌಡ ಒಂದು ಬಾರಿ, ಬಂಟ್ಸ್ ನಳಿನ್ 3 ಬಾರಿ ಅದ ಬಳಿಕ ಮತ್ತೇ ಬಿಜೆಪಿ ಬಂಟ ಸಮುದಾಯಕ್ಕೆ ಮಣೆ ಹಾಕಿದೆ‌. 1990 ಅಯೋಧ್ಯೆ ರಾಮ ಮಂದಿರ,ಹಿಂದುತ್ವ ಈ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ ಪೂರಕವಾಗಿತ್ತು. ನಾಲ್ಕನೇ ಬಾರಿ ಕಟೀಲ್ ಟಿಕೆಟ್ ಖಂಡಿತ ಅವರ ಆಪ್ತ ವಲಯದಲ್ಲಿ

ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ Read More »

ಮಣಿಪಾಲ: ಚಾಲಕನ ನಿರ್ಲಕ್ಷ್ಯದಿಂದ ಚಕ್ರಕ್ಕೆ ಸಿಲುಕಿ ಬಸ್ ಮಾಲಕ ಸಾವು

ಸಮಗ್ರ ನ್ಯೂಸ್: ಬಸ್‍ವೊಂದನ್ನು ಗ್ಯಾರೇಜ್‍ನಲ್ಲಿ ರಿಪೇರಿಗೆ ನೀಡಿದ್ದರು. ಈ ವೇಳೆ ಬಸ್‍ನ ಎದುರು ಮಾಲಕ ನಿಂತಿದ್ದನ್ನು ಚಾಲಕ ಗಮನಿಸದೆ ಬಸ್ ಚಲಾಯಿಸಿದ ಪರಿಣಾಮ ಮಾಲಕ ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ಬುಧವಾರ ಅವಘಡದಲ್ಲಿ ಸಂಭವಿಸಿದೆ. ಖಾಸಗಿ ಬಸ್‍ನ ಮಾಲಕ ದಯಾನಂದ ಶೆಟ್ಟಿ (65) ಮೃತಪಟ್ಟವರು. ತತ್‍ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಮಣಿಪಾಲ: ಚಾಲಕನ ನಿರ್ಲಕ್ಷ್ಯದಿಂದ ಚಕ್ರಕ್ಕೆ ಸಿಲುಕಿ ಬಸ್ ಮಾಲಕ ಸಾವು Read More »

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನಿಗೆ ಸೆರೆವಾಸ

ಸಮಗ್ರ ನ್ಯೂಸ್ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು ವಾಯಿಕಡವು ಗ್ರಾಮದ ಅಡಕ್ಕರ ನಿವಾಸಿ ಅಬಿನ್ ಸಿಬಿ (22) ತನ್ನ ಊರಿನಿಂದ ರೈಲಿನ ಮೂಲಕ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿ ಆ್ಯಸಿಡ್ ಖರೀದಿಸಿ

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನಿಗೆ ಸೆರೆವಾಸ Read More »

ನೆಲ್ಯಾಡಿ: ಅನಾರೋಗ್ಯದಿಂದ ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ಬಿದ್ದು ತಲೆಗೆ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ ಘಟನೆ ನೆಲ್ಯಾಡಿಯ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಶೀನ ಮುಗೇರ(50) ಎಂದು ಗುರುತಿಸಲಾಗಿದೆ. ಮಾ.10ರಂದು ಸಾಯಂಕಾಲ ನೆಲ್ಯಾಡಿ ಪೇಟೆಗೆ ಹೋದವರು ವಾಪಾಸು ಮನೆಗೆ ಬಂದಾಗ ಅವರ ತಲೆಯ ಹಿಂಬದಿ ಗಾಯವಾಗಿತ್ತು. ಮನೆಯವರು ವಿಚಾರಿಸಿದಾಗ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಬಿದ್ದು ಗಾಯವಾಗಿದೆ ಎಂದು ತಿಳಿಸಿದ್ದರು. ಬಳಿಕ ಅವರಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿ ಕಳುಹಿಸಿಕೊಟ್ಟಿದ್ದರು.

ನೆಲ್ಯಾಡಿ: ಅನಾರೋಗ್ಯದಿಂದ ವ್ಯಕ್ತಿ ಸಾವು Read More »

ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ

ಸಮಗ್ರ ನ್ಯೂಸ್: ಬೆಳ್ಳಾರೆ ಪೆರುವಾಜೆಯ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು. ಡಾ.ಕೆ.ಶಿವರಾಮ ಕಾರಂತ ಸರಕಾರಿ ಫುಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಪ್ರಾಂಶುಪಾಲ ದಾಮೋದರ ಕಣಜಾಲು ಅವರು ಸಭಾಧ್ಯಕ್ಷತೆ ವಹಿಸಿದ್ದರು. ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಹೆಚ್. ಭೀಮರಾವ್

ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ Read More »

ಮಂಗಳೂರು ಮಹಾನಗರ ಪಾಲಿಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಭರವಸೆ

ಸಮಗ್ರ ನ್ಯೂಸ್ : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಈ ಬೇಸಿಗೆಯಲ್ಲಿ ಕುಡಿಯುವ ನೀರಿನ ಪಡಿತರವನ್ನು ಜಾರಿಗೊಳಿಸುವುದಿಲ್ಲ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಾರ್ವಜನಿಕರಿಗೆ ಭರವಸೆ ನೀಡಿದರು, ನಗರದ ನೀರಿನ ಲಭ್ಯತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಕಣ್ಣೂರು, ಕೊಂಚ ಇಳಿಕೆಯಾಗಿದ್ದರೂ, ಕುಡಿಯುವ ನೀರಿನ ಪ್ರಾಥಮಿಕ ಮೂಲವಾದ ನೇತ್ರಾವತಿಯ ಒಳಹರಿವು ಸಂಪೂರ್ಣವಾಗಿ ನಿಂತಿಲ್ಲ. ಮಂಗಳೂರು, ಉಳ್ಳಾಲ ಮತ್ತು ಮೂಲ್ಕಿಗೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಂ ಪ್ರಸ್ತುತ 6 ಮೀಟರ್ ತೃಪ್ತಿದಾಯಕ

ಮಂಗಳೂರು ಮಹಾನಗರ ಪಾಲಿಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಭರವಸೆ Read More »