ಕರಾವಳಿ

ಕಡಬ: ಅನಾರೋಗ್ಯದಿಂದ ಹೂವಿನ ವ್ಯಾಪಾರಿ ಸಾವು

ಸಮಗ್ರ ನ್ಯೂಸ್ : ಇಲ್ಲಿನ ದುರ್ಗಾಂಬಿಕ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವರು ಹಲವು ವರ್ಷಗಳಿಂದ ಹೂವಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರು ಕಡಬದ ಹೊಯ್ಗೆಕೆರೆ ನಿವಾಸಿ ರಮೇಶ್ ಶೆಟ್ಟಿ ಹಲವು ಸಮಯಗಳಿಂದ ಮಾರಕ ಕಾಯಿಲೆಗೆ ತುತ್ತಾಗಿದ್ದ ಇವರು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಮಾ.14 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಇತ್ತೀಚೆಗೆ ಉತ್ಸಾಹಿ ಯುವಕರ ಕಾರುಣ್ಯ ಸೇವಾ

ಕಡಬ: ಅನಾರೋಗ್ಯದಿಂದ ಹೂವಿನ ವ್ಯಾಪಾರಿ ಸಾವು Read More »

ವಿಟ್ಲ: ಅಡಿಕೆ, ಕರಿಮೆಣಸು ಕಳ್ಳತನ|ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಕೊಠಡಿಯಲ್ಲಿಟ್ಟಿದ್ದ ಅಡಿಕೆ ಮತ್ತು ಕರಿಮೆಣಸು ಕಳ್ಳತನ ವಾಗಿರುವ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿನ ಮನೆಯ ಸಮೀಪ ನಡೆದಿದೆ. ಕುಡ್ತಮುಗೇರು ಕೆ. ಅಣ್ಣು ಸಪಲ್ಯ (62) ಅವರು ಒಣಗಿಸಿ ಸುಲಿಯದ ಅಡಿಕೆ (ಅಂದಾಜು 150 ಕೆ.ಜಿ.) ಮತ್ತು 4 ಗೋಣಿಚೀಲದಲ್ಲಿ ಒಣಗಿದ ಕರಿಮೆಣಸು (ಅಂದಾಜು 30 ಕೆ.ಜಿ.)ಗಳನ್ನು ಸಂಗ್ರಹಿಸಿಟ್ಟಿದ್ದರು. ಕೊಠಡಿಯ ಬಾಗಿಲಿನ ಚಿಲಕವನ್ನು ಮುರಿದಿರುವುದು ಕಂಡು ಬಂದಿದ್ದು, ಪರಿಶೀಲಿಸಿದಾಗ, ಅಡಿಕೆ ಮತ್ತು ಕಾಳುಮೆಣಸು ಕಳ್ಳತನ ಆಗಿರುವುದು ತಿಳಿಯಿತು. ಕಳ್ಳತನವಾದ ಸೊತ್ತುಗಳ ಒಟ್ಟು

ವಿಟ್ಲ: ಅಡಿಕೆ, ಕರಿಮೆಣಸು ಕಳ್ಳತನ|ಪ್ರಕರಣ ದಾಖಲು Read More »

ಕಡಬ: ಅಕ್ರಮ ಮರಳು ಸಾಗಾಟ|ಇಬ್ಬರ ಸೆರೆ

ಸಮಗ್ರ ನ್ಯೂಸ್ : ಅಧಿಕಾರಿಗಳು ಕಂದಕ ನಿರ್ಮಿಸಿದ್ದರೂ ಅದನ್ನು ಮುಚ್ಚಿ ನೂಜಿಬಾಳ್ತಿಲ ಗ್ರಾಮದ ಇಚ್ಲಂಪಾಡಿ ಸೇತುವೆ ಅಡಿಭಾಗದಿಂದ ರಾಜರೋಷವಾಗಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವಾಹನ ಸಹಿತ ಕಡಬ ಪೆÇಲೀಸರು ವಶಕ್ಕೆ ಪಡೆದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಡಬ ತಾಲೂಕು ನೂಳಿಬಾಳ್ತಿಲ ಗ್ರಾಮದ ಪ್ರಭಾಕರ ಮತ್ತು ಸಜಿ ಅಕ್ರಮ ಮರಳು ಸಾಗಾಟ ಮಾಡುತ್ತಿರುವಾಗ ಸಿಕ್ಕಿಬಿದ್ದ ಬಂಧಿತರು. ಕಡಬ ಠಾಣಾ ಎಸ್.ಐ ಅಭಿನಂದನ್ ಅವರು ಮಾ.14 ರ ನಸುಕಿನ ಜಾವ 03 ರ ಸುಮಾರಿಗೆ ನೂಜಿಬಾಳ್ತಿಲ

ಕಡಬ: ಅಕ್ರಮ ಮರಳು ಸಾಗಾಟ|ಇಬ್ಬರ ಸೆರೆ Read More »

ಪುತ್ತೂರು : ತೆಂಗಿನ ಮರದ ವಿಚಾರ| ಮಹಿಳೆಗೆ ಹಲ್ಲೆ, ಜೀವ ಬೆದರಿಕೆ

ಸಮಗ್ರ ನ್ಯೂಸ್ :ತೋಟದಲ್ಲಿದ್ದ ಮಹಿಳೆಯೊಬ್ಬರಿಗೆ ಪಕ್ಕದ ತೋಟದ ವ್ಯಕ್ತಿಯೊಬ್ಬರು ತೆಂಗಿನ ಮರದ ವಿಚಾರ ತೆಗೆದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಇತ್ತೀಚೆಗೆ ಸಾಮೆತ್ತಡ್ಕದಲ್ಲಿ ನಡೆದಿದೆ. ಸಾಮೆತ್ತಡ್ಕ ನಿವಾಸಿ ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ‘ಮಹಿಳೆಯ ತಂದೆಯ ಮರಣಾನಂತರ ಅವರ ಅಡಿಕೆ ಮತ್ತು ತೆಂಗಿನ ತೋಟವನ್ನು ನೋಡಿಕೊಳ್ಳುತ್ತಿದ್ದು, ಮಾ.13ರಂದು ಸಂಜೆ ಸಹೋದರ ಮುಹಮ್ಮದ್ ಮುಸ್ತಾಫ ಅವರೊಂದಿಗೆ ತೋಟಕ್ಕೆ ಹೋಗಿದ್ದ ಸಮಯ ನೌಫಲ್ ಎಂಬವರ ಮೂಲಕ ತೆಂಗಿನ ಮರದಿಂದ ಎಳನೀರು ಮತ್ತು ತೆಂಗಿನ ಕಾಯಿ ತೆಗೆಸುತ್ತಿದ್ದ ವೇಳೆ ಪಕ್ಕದ

ಪುತ್ತೂರು : ತೆಂಗಿನ ಮರದ ವಿಚಾರ| ಮಹಿಳೆಗೆ ಹಲ್ಲೆ, ಜೀವ ಬೆದರಿಕೆ Read More »

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಚಾರ: ಆರೋಪಿಗಳಿಬ್ಬರ ಬಂಧನ

ಸಮಗ್ರ ನ್ಯೂಸ್ : ಕೆಲಸದ ಆಮಿಷವೊಡ್ಡಿ ವಾಮಂಜೂರು ಮೂಲದ ಯುವತಿಯೊಬ್ಬಳನ್ನು ಪುತ್ತೂರಿಗೆ ಕರೆತಂದ ಇಬ್ಬರು ಯುವಕರು ಕೆಮ್ಮಯಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ನಡೆಸಿ, ಆರೋಪಿಗಳು ಪರಾರಿಯಾಗಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿ ಅಸ್ವಸ್ತಗೊಂಡು ಕುಸಿದು ಬಿದ್ದಾಗ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದಾಗ ಯುವಕರ ಈ ಕೃತ್ಯ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಯ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಕರ್ವೇಲು ನಿವಾಸಿ ಮತ್ತು ಬಂಟ್ವಾಳ ತಾಲೂಕು ನಿವಾಸಿ ಇಬ್ಬರನ್ನು ಪುತ್ತೂರು ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಗೆ

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಚಾರ: ಆರೋಪಿಗಳಿಬ್ಬರ ಬಂಧನ Read More »

ಅಕ್ರಮ ನೀರು ಬಳಕೆ -ಮಂಗಳೂರು ಮೇಯರ್ ಎಚ್ಚರಿಕೆ

ಸಮಗ್ರ ನ್ಯೂಸ್ : ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಪೈಪ್‌ಲೈನ್‌ನಿಂದ ತುಂಬೆ ಮಾರ್ಗವಾಗಿ ಅಕ್ರಮವಾಗಿ ನೀರನ್ನು ತೆಗೆದುಕೊಂಡು ನೀರಾವರಿ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಬಳಸುವ ವ್ಯಕ್ತಿಗಳ ವಿರುದ್ಧ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಹಲವಾರು ಅಕ್ರಮ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ಎಂಸಿಸಿ ಕುಡಿಯುವ ನೀರು ಪೂರೈಕೆಗೆ ಪಡಿತರವನ್ನು ಆಯ್ಕೆ ಮಾಡುವುದಿಲ್ಲ ಎಂದು ಮೇಯರ್ ಶೆಟ್ಟಿ ಸುದ್ದಿಗಾರರಿಗೆ ಭರವಸೆ ನೀಡಿದರು. ಈ ಬೇಸಿಗೆಯಲ್ಲಿ ನಗರವು ನೀರಿನ ಕೊರತೆಯನ್ನು ಎದುರಿಸುವುದಿಲ್ಲ ಎಂಬ ವಿಶ್ವಾಸ ನಮಗಿದೆ.

ಅಕ್ರಮ ನೀರು ಬಳಕೆ -ಮಂಗಳೂರು ಮೇಯರ್ ಎಚ್ಚರಿಕೆ Read More »

ಬಂಟ್ವಾಳ: ಬೈಕ್-ಸ್ಕೂಟರ್ ಢಿಕ್ಕಿ|ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್ : ಶಂಭೂರು ಶ್ರೀ ಷಣ್ಮುಖ ದೇವಸ್ಥಾನದ ದ್ವಾರದ ಬಳಿಯಲ್ಲಿ ಬೈಕ್ ಹಾಗೂ ಸ್ಕೂಟರ್ ಢಿಕ್ಕಿ ಹೊಡೆದುಕೊಂಡ ಪರಿಣಾಮ ಎರಡೂ ವಾಹನಗಳ ನಾಲ್ವರು ಸವಾರರು ಗಾಯಗೊಂಡಿರುವ ಘಟನೆ ನಡೆದಿದೆ. ಸ್ಕೂಟರ್ ಸವಾರ ಮಂಗಳೂರು ಅಳಪೆ ನಿವಾಸಿ ಉದಯಕುಮಾರ್ ಅವರು ಸಂಬAಧಿ ಸುಂದರ ಬಂಗೇರ ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಅಶ್ವತ್ಥ್ ಅವರು ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯಲ್ಲಿ ಎರಡು ಬೈಕ್‌ಗಳಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಸುಂದರ ಬಂಗೇರ ಅವರನ್ನು ಒಳರೋಗಿಯಾಗಿ

ಬಂಟ್ವಾಳ: ಬೈಕ್-ಸ್ಕೂಟರ್ ಢಿಕ್ಕಿ|ನಾಲ್ವರಿಗೆ ಗಾಯ Read More »

ಬಂಟ್ವಾಳ: ಕಾರು-ಬೈಕ್ ಢಿಕ್ಕಿ

ಸಮಗ್ರ ನ್ಯೂಸ್ : ಕೊಯಿಲ ಗ್ರಾಮದ ಅಣ್ಣಳಿಕೆಯಲ್ಲಿ ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದು ಸವಾರ, ಪಿಲಿಮೊಗರು ಗ್ರಾಮ ನಿವಾಸಿ ಸುರೇಶ್ ಅವರು ಗಾಯಗೊಂಡ ಘಟನೆ ಮಾ. 14ರಂದು ಸಂಭವಿಸಿದೆ. ಗಾಯಾಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸ್ನೇಹಿತ ಪುಷ್ಪೇಂದ್ರ ಸಿಂಗ್ ಅವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಚಾಲಕ ಉಮೇಶ್ ತನ್ನ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಕಾರು-ಬೈಕ್ ಢಿಕ್ಕಿ Read More »

ಬಜಪೆ: ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

ಸಮಗ್ರ ನ್ಯೂಸ್ : ಎಲ್ಲಿಂದಲೋ ಕದ್ದು ವಾಹನದಲ್ಲಿ ಮರಳು ಮತ್ತು ಕೆಂಪು ಕಲ್ಲು ಸಾಗಿಸುತ್ತಿದ್ದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ 2014ರ ಜು.12ರಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸುಲ್ತಾಡಿ ಮನೆಯ ನಿತಿನ್ (37) ನನ್ನು ಬಂಧಿಸಲಾಗಿದೆ. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆತನನ್ನು ಬಜಪೆ ಪೊಲೀಸ್ ನಿರೀಕ್ಷಕರ ನಂದೇಶ್ ಬಿ. ಕುಂಬಾರ್ ನೇತೃತ್ವದ ತಂಡ ಗುರುವಾರ ಕಡಬದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಜಪೆ: ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ Read More »

ಉಡುಪಿ: ರಬ್ಬರ್ ಸ್ಟಾಂಪ್ ಅಂಗಡಿಯ ಮಾಲಕ ಕುಸಿದು ಬಿದ್ದು ಮೃತ್ಯು

ಸಮಗ್ರ ನ್ಯೂಸ್ : ರಬ್ಬರ್ ಸ್ಟಾಂಪ್ ಅಂಗಡಿಯ ಮಾಲಕ, ದೊಡ್ಡಣಗುಡ್ಡೆಯ ಕೇಶವ ಶೇರಿಗಾರ (68) ಅವರು ಕೆಲಸ ನಿರ್ವಹಿಸುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬಡಗುಪೇಟೆಯಲ್ಲಿ ಸಂಭವಿಸಿದೆ. ಮೃತರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು. ಮೃತರನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದು, ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.

ಉಡುಪಿ: ರಬ್ಬರ್ ಸ್ಟಾಂಪ್ ಅಂಗಡಿಯ ಮಾಲಕ ಕುಸಿದು ಬಿದ್ದು ಮೃತ್ಯು Read More »