ಕರಾವಳಿ

ಬೆಳ್ಳಾರೆ: ಮಹಮ್ಮದ್ ಇಂಜಿನಿಯರ್ ನಿಧನ|ಸುಳ್ಯ ಎಸ್‌ಡಿಪಿಐ ಸಂತಾಪ

ಸಮಗ್ರ ನ್ಯೂಸ್:ಮಾ 13;ಬೆಳ್ಳಾರೆ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಬೆಳ್ಳಾರೆ ನಿವಾಸಿ ಇಂಜಿನಿಯರ್ ಆರಿಫ್ ರವರ ತಂದೆ ಹಿರಿಯರಾದ ಮಹಮ್ಮದ್ ಇಂಜಿನಿಯರ್ ರವರು ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಹಲವಾರು ದೀನಿ ಸಂಘ ಸಂಸ್ಥೆಗಳಲ್ಲಿ ನೇತೃತ್ವ ವಹಿಸಿದ್ದ ಸಾಮಾಜಿಕ ಹಾಗೂ ಉಲಾಮ ನೇತಾರರು ಕೊಡುಗೈ ದಾನಿಯೂ ಆಗಿದ್ದ ಇವರ ಅಗಲಿಕೆಯು ಸಮುದಾಯಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.ಇವರ ಬಂದು ಬಳಗಕ್ಕೆ

ಬೆಳ್ಳಾರೆ: ಮಹಮ್ಮದ್ ಇಂಜಿನಿಯರ್ ನಿಧನ|ಸುಳ್ಯ ಎಸ್‌ಡಿಪಿಐ ಸಂತಾಪ Read More »

ಪಡುಬಿದ್ರಿ: 30 ವರ್ಷಗಳಿಂದ “ತಲೆಮರೆಸಿಕೊಂಡಿದ್ದ” ಆರೋಪಿ ಸಾವು

ಸಮಗ್ರ ನ್ಯೂಸ್ : ಸರಕಾರಿ ಜಾಗದಿಂದ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದಾಗ ನಂದಿಕೂರು ಪೇಟೆಯಲ್ಲಿ 1981ರಲ್ಲಿ ಲಾರಿ ಸಮೇತ ಸಿಕ್ಕಿಬಿದ್ದ ಆರೋಪಿಗಳಲ್ಲಿ ಓರ್ವನಾದ ಮಂಜರಪಲ್ಕೆಯ ಸುಧಾಕರ ಶೆಟ್ಟಿ 1994ರಲ್ಲಿ ಯಾವುದೋ ಕಾಯಿಲೆಯಿಂದ ಸಾವನ್ನಪ್ಪಿರುವುದನ್ನು ಪಡುಬಿದ್ರಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಹಳಷ್ಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ಇದ್ದ ಕಾರಣದಿಂದ ಸುಧಾಕರ ಶೆಟ್ಟಿ ವಿರುದ್ಧ ವಾರಂಟ್ ಜಾರಿಯಾಗಿತ್ತು. ಪಡುಬಿದ್ರಿ ಎಎಸ್‌ಐ ರಾಜೇಶ್ ಪಿ. ಅವರು ಆರೋಪಿ ಮೃತಪಟ್ಟಿರುವ ಬಗ್ಗೆ ಕಾರ್ಕಳ ಸರಕಾರಿ ಆಸ್ಪತ್ರೆಯಿಂದ ದಾಖಲೆಗಳನ್ನು ಪಡೆದು, ಕಾರ್ಕಳ ಪುರಸಭೆಯಿಂದ ಮರಣ

ಪಡುಬಿದ್ರಿ: 30 ವರ್ಷಗಳಿಂದ “ತಲೆಮರೆಸಿಕೊಂಡಿದ್ದ” ಆರೋಪಿ ಸಾವು Read More »

ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

ಸಮಗ್ರ ನ್ಯೂಸ್ : ಇನ್ನೋವಾ ಮತ್ತು ಫೋರ್ಡ್ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಪುತ್ತೂರಿನ ಸಂಟ್ಯಾರಿನಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋವಾ ಕಾರು ಚಾಲಕ, ಉಪ್ಪಿನಂಗಡಿ ಮೂಲದ ವ್ಯಕ್ತಿ ಸಹಿತ ಹಲವರಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಸ್ತೆ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದ ಕಾರಣ ಕಿಲೋಮೀಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿದ್ದು, ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿ, ಟ್ರಾಫಿಕ್ ಜಾಮ್ ಸಂಭವಿಸಿದೆ.

ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ Read More »

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಬಿಜೆಪಿ ವಿರುದ್ಧ ಬಂಡಾಯ ಸಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಪುತ್ತೂರಿನ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.‌ ಈ ಮೂಲಕ ಮತ್ತೆ ಮರಳಿ ಗೂಡಿಗೆ ವಾಪಾಸ್ಸಾಗಿದ್ದಾರೆ. ಮಾ.14ರ ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಉಪಸ್ಥಿತರಿದ್ದರು. ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅರುಣ್ ಕುಮಾರ್ ಪುತ್ತಿಲ

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ Read More »

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್ : ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಸುಮಾರು ನಾಲ್ಕೈದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು, ಮೃತ ದೇಹದ ಮುಖ ಗುರುತು ಹಿಡಿಯಲಾರದಷ್ಟು ಕೊಳೆತು ಹೋಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಹಾಗೂ ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ ತಂಡ ಆಗಮಿಸಿದೆ.

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಕೂದಲೆಳೆಯ ಅಂತರದಲ್ಲಿ ಸವಾರ ಪಾರು

ಸಮಗ್ರ ನ್ಯೂಸ್: ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕೂದಲೆಳೆಯ ಅಂತರದಲ್ಲಿ ಜೀವಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ ಕಡೆಗೆ ಬರುತ್ತಿದ್ದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯ ತೀವ್ರತೆಗೆ ಸವಾರನು ಕಾರಿನ ಗಾಜಿನ ಮೇಲೆ ಹಾರಿಬಿದ್ದು ತಲೆಗೆ ಗಾಯವಾಗಿದೆ. ನಿಯಂತ್ರಣ ತಪ್ಪಿದ ಕಾರಿನ ಚಕ್ರ ರಸ್ತೆ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣಿನ ಹೂತು ಹೋಗಿರುವುದಿಂದ

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಕೂದಲೆಳೆಯ ಅಂತರದಲ್ಲಿ ಸವಾರ ಪಾರು Read More »

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಸಹಕಾರಿ ಸಂಘದಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ ಕಾರ್ಯ ಪ್ರಗತಿಯಲ್ಲಿದೆ. ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ. 31 ರವರೆಗೆ ಕಾಲವಕಾಶವನ್ನು ನೀಡಲಾಗಿದೆ.

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ Read More »

ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ

ಸಮಗ್ರ ಸಮಾಚಾರ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಲೋಕಸಬಾ ಸ್ಪರ್ಧೆ ಅವಕಾಶ ಈ ಬಾರಿ ಬ್ರಿಜೇಶ್ ಚೌಟರಿಗೆ ಒಲಿದು ಬಂದಿದೆ. ಈ ಕ್ಷೇತ್ರದಲ್ಲಿ ಜೈನ್ ಸಮುದಾಯದಿಂದ ಧನಂಜಯ ಕುಮಾರ್ ಬಿಜೆಪಿಯಿಂದ ಒಕ್ಕಲಿಗ ಸದಾನಂದ ಗೌಡ ಒಂದು ಬಾರಿ, ಬಂಟ್ಸ್ ನಳಿನ್ 3 ಬಾರಿ ಅದ ಬಳಿಕ ಮತ್ತೇ ಬಿಜೆಪಿ ಬಂಟ ಸಮುದಾಯಕ್ಕೆ ಮಣೆ ಹಾಕಿದೆ‌. 1990 ಅಯೋಧ್ಯೆ ರಾಮ ಮಂದಿರ,ಹಿಂದುತ್ವ ಈ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ ಪೂರಕವಾಗಿತ್ತು. ನಾಲ್ಕನೇ ಬಾರಿ ಕಟೀಲ್ ಟಿಕೆಟ್ ಖಂಡಿತ ಅವರ ಆಪ್ತ ವಲಯದಲ್ಲಿ

ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ Read More »

ಮಣಿಪಾಲ: ಚಾಲಕನ ನಿರ್ಲಕ್ಷ್ಯದಿಂದ ಚಕ್ರಕ್ಕೆ ಸಿಲುಕಿ ಬಸ್ ಮಾಲಕ ಸಾವು

ಸಮಗ್ರ ನ್ಯೂಸ್: ಬಸ್‍ವೊಂದನ್ನು ಗ್ಯಾರೇಜ್‍ನಲ್ಲಿ ರಿಪೇರಿಗೆ ನೀಡಿದ್ದರು. ಈ ವೇಳೆ ಬಸ್‍ನ ಎದುರು ಮಾಲಕ ನಿಂತಿದ್ದನ್ನು ಚಾಲಕ ಗಮನಿಸದೆ ಬಸ್ ಚಲಾಯಿಸಿದ ಪರಿಣಾಮ ಮಾಲಕ ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ಬುಧವಾರ ಅವಘಡದಲ್ಲಿ ಸಂಭವಿಸಿದೆ. ಖಾಸಗಿ ಬಸ್‍ನ ಮಾಲಕ ದಯಾನಂದ ಶೆಟ್ಟಿ (65) ಮೃತಪಟ್ಟವರು. ತತ್‍ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಮಣಿಪಾಲ: ಚಾಲಕನ ನಿರ್ಲಕ್ಷ್ಯದಿಂದ ಚಕ್ರಕ್ಕೆ ಸಿಲುಕಿ ಬಸ್ ಮಾಲಕ ಸಾವು Read More »

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನಿಗೆ ಸೆರೆವಾಸ

ಸಮಗ್ರ ನ್ಯೂಸ್ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು ವಾಯಿಕಡವು ಗ್ರಾಮದ ಅಡಕ್ಕರ ನಿವಾಸಿ ಅಬಿನ್ ಸಿಬಿ (22) ತನ್ನ ಊರಿನಿಂದ ರೈಲಿನ ಮೂಲಕ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿ ಆ್ಯಸಿಡ್ ಖರೀದಿಸಿ

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನಿಗೆ ಸೆರೆವಾಸ Read More »