ಕರಾವಳಿ

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಮಾ.11ರಂದು ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸಂಪಾಜೆ ಮಸೀದಿಯ ಜಮಾಲುದ್ದೀನ್ ಎಂಬವರ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹನೀಫ್ ಎಂಬವರ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ Read More »

ಗೋಳಿತ್ತಡಿ: ಮನೆಯಿಂದ ನಗದು, ಚಿನ್ನಾಭರಣ ಕಳವು

ಸಮಗ್ರ ನ್ಯೂಸ್: ಇಲ್ಲಿನ ಗೋಳಿತ್ತಡಿಯ ನೆಬಿಸಾ ಎಂಬವರ ಮನೆಯಿಂದ ಕಳೆದ ರಾತ್ರಿ ಚಿನ್ನ ಹಾಗೂ ನಗದು ಕಳವುಗೊಂಡಿರುವ ಘಟನೆ ನಡೆದಿದೆ. ನೆಬಿಸಾ ಅವರ ಪುತ್ರಿ ಹೆರಿಗೆ ಹಿನ್ನೆಲೆಯಲ್ಲಿ ಪುತ್ರಿಯೊಂದಿಗೆ ನೆಬಿಸಾ ಹಾಗೂ ಅವರ ಅಳಿಯ ಮಂಗಳೂರಿನ ಆಸ್ಪತ್ರೆಗೆ ತೆರಳಿದ್ದರು. ಕಳೆದ ನಾಲ್ಕೈದು ದಿನಗಳಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಮಾ.11ರಂದು ಸಂಜೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಲಕ್ಷಾಂತರ ರೂ ಮೌಲ್ಯ ದ ಚಿನ್ನ ಹಾಗೂ ನಗದು ಕಳವುಗೊಂಡಿರುವುದಾಗಿ ವರದಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಗೋಳಿತ್ತಡಿ: ಮನೆಯಿಂದ ನಗದು, ಚಿನ್ನಾಭರಣ ಕಳವು Read More »

ಬಂಟ್ವಾಳ: ಕಾನೂನು ಬಾಹಿರ ಆಟೋ ಚಾಲನೆ- ಚಾಲಕನಿಂದ ಆಕ್ರೋಶ

ಸಮಗ್ರ ನ್ಯೂಸ್ : ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದ್ದಾರೆ. ಈ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಂಟ್ವಾಳ ಬಿಸಿರೋಡಿನ ಕೈಕಂಬ ಎಂಬಲ್ಲಿ ಸೋಮವಾರ ನಡೆದಿದೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿರುತ್ತಾನೆ. ಟ್ರಾಫಿಕ್ ಎಸ್‍ಐ. ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್

ಬಂಟ್ವಾಳ: ಕಾನೂನು ಬಾಹಿರ ಆಟೋ ಚಾಲನೆ- ಚಾಲಕನಿಂದ ಆಕ್ರೋಶ Read More »

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು

ಸಮಗ್ರ ನ್ಯೂಸ್ : ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ, ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಇಂದು ಬೆಳಿಗ್ಗೆ ಉದಯ ಎದ್ದಿಲ್ಲಾ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ,

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು Read More »

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನ- ಐವರ ಬಂಧನ

ಸಮಗ್ರ ನ್ಯೂಸ್ : ಶಿವರಾತ್ರಿ ಹೆಸರಿನಲ್ಲಿ ಯುವಕರ ತಂಡ ಸಾರ್ವಜನಿಕ ರಸ್ತೆಯಲ್ಲಿ ಗಾಜು ಪುಡಿ ಮಾಡಿ ಪುಂಡಾಟಿಕೆ ಮೆರೆದಿದ್ದು, ಅದನ್ನು ತಡೆದ ಪೊಲೀಸರ ಮೇಲೆಯೇ ಕೈ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಐವರನ್ನು ವೇಣೂರು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸ್ಥಳೀಯರಾದ ಮಹೇಶ್ (28), ಸುರೇಶ್ (33), ಗೌತಂ (21), ಅರುಣ್ (29) ಹಾಗೂ ಸುರೇಶ್ (28) ಬಂಧಿತರು. ಶಿವರಾತ್ರಿಯಂದು ಮಧ್ಯರಾತ್ರಿ ಎಎಸ್‍ಐ ರಾಮಯ್ಯ ಅವರು ಸಿಬ್ಬಂದಿ ಶಾಂತ ಕುಮಾರ್ ಜತೆ ಇಲಾಖಾ ವಾಹನ ದಲ್ಲಿ

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನ- ಐವರ ಬಂಧನ Read More »

ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು

ಸಮಗ್ರ ನ್ಯೂಸ್: ಮನೆಯ ಕೌಂಪೌಂಡನ್ನು ಜೆಸಿಬಿ ಯಂತ್ರದ ಮೂಲಕ ಕೆಡವಿದ್ದಲ್ಲದೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿರುವುದಾಗಿ ಕಡಬ ಕೊಂಬಾರು ಗ್ರಾಮದ ಗಂಗಮ್ಮ(72) ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾ.10ರಂದು ನೆರೆಕೆರೆಯ ಸಂಬಂಧಿಯೂ ಆಗಿರುವ ಶಶಿಧರ ಎಂಬಾತ ಜೆಸಿಬಿ ಯಂತ್ರದ ಮೂಲಕ ಮನೆಯ ಆವರಣಗೋಡೆಯನ್ನು ಕೆಡವಿದ್ದು, ಇದನ್ನು ಪ್ರಶ್ನಿಸಿದಾಗ ಆತ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿದ್ದು, ಗಾಯಗೊಂಡ ಗಂಗಮ್ಮ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಗಂಗಮ್ಮ ನೀಡಿದ ದೂರಿನನ್ವಯ ಕಡಬ ಪೊಲೀಸರು

ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು Read More »

ಪುತ್ತೂರು: ಆಟೋಚಾಲಕನ ಮೇಲೆ ಹಲ್ಲೆ, ಜೀವಬೆದರಿಕೆ-ದೂರು ದಾಖಲು

ಸಮಗ್ರ ನ್ಯೂಸ್ : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದ ದಯಾನಂದ, ಅಚ್ಚುತ ಹಾಗೂ ಇಬ್ಬರು ಅಪರಿಚಿತರು ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿರುವುದಾಗಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗಿನ ಜಾವ, ತನ್ನ ಆಟೋರಿಕ್ಷಾದಲ್ಲಿ ಪ್ರಯಾಣಿಕರೊಬ್ಬರಿಗೆ ಡ್ರಾಪ್ ಕೊಡಲು ಪುತ್ತೂರು ತಾಲೂಕು ಪಡವನ್ನೂರು ಗ್ರಾಮದ ಕೆಳಗಿನ ಕನ್ನಡ್ಕ ಬಸ್ ನಿಲ್ದಾಣ ಬಲಿ ಬಂದಿದ್ದಾಗ ದಯಾನಂದ, ಅಚ್ಚುತ ಹಾಗೂ ಮತ್ತಿಬ್ಬರು ಅಪರಿಚಿತರು ಆಟೋ ಬಳಿ ಬಂದು, ಈ ಹಿಂದೆ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ತಕರಾರು ತೆಗೆದು

ಪುತ್ತೂರು: ಆಟೋಚಾಲಕನ ಮೇಲೆ ಹಲ್ಲೆ, ಜೀವಬೆದರಿಕೆ-ದೂರು ದಾಖಲು Read More »

ಮಂಗಳೂರು: ಕಾಂಗ್ರೆಸ್‍ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಕರೆ

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಶುರು ಮಾಡಿದ್ದು, ಕರ್ನಾಟಕದ ಚುಕ್ಕಾಣಿ ಹಿಡಿಯಬೇಕೆಂದು ಬಿಜೆಪಿ ನಾನಾ ತಂತ್ರಗಳನ್ನು ಹೆಣೆಯುತ್ತಿದೆ. ಇಂತಹ ಸಮಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಕಾಂಗ್ರೆಸ್‍ನ ರಕ್ಷಿತ್ ಶಿವರಾಂ ಅವರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ. ಬೆಳ್ತಂಗಡಿ ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲಿನ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಅಸಮಾಧಾನ ಹೊರ ಹಾಕಿದ್ದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮಂಗಳೂರು: ಕಾಂಗ್ರೆಸ್‍ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಕರೆ Read More »

ಮಂಗಳೂರಿನಲ್ಲಿ ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಹೊಡೆದ ಸೊಸೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ, ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಸೊಸೆ ಹೊಡೆದಿರುವಂತಹ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ಮಾರ್ಚ್ 9 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ (76) ಎಂಬುವವರು ಹಲ್ಲೆಗೊಳಗಾದವರು, ಇವರ ಮಗಪ್ರೀತಂ. ಇವರು ವಿದೇಶದಲ್ಲಿ ಕೆಲಸದಲ್ಲಿದ್ದಾರೆ, ಆದರೆ ಮನೆಯಲ್ಲಿ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್‌ ಮಾಡಿದ್ದರು. ತನ್ನ ಪತ್ನಿ ಉಮಾಶಂಕರಿ ಅವರು ಎರಡು ದಿನಗಳ ಹಿಂದೆ ವಾಕಿಂಗ್‌ ಸ್ಟಿಕ್‌ನಲ್ಲಿ ತಂದೆ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಹೊಡೆದ ಸೊಸೆ Read More »

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವವೊಂದು ಪತ್ತೆಯಾಗಿದೆ. ಧರ್ಮಸ್ಥಳ ಠಾಣಾಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಠಾಣೆಯ ಆರಕ್ಷಕರಾದ ಸಾಮ್ಯುವೆಲ್‌ ಹಾಗೂ ಧರ್ಮಪಾಲ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ಶವ ಪತ್ತೆ Read More »