ಕರಾವಳಿ

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ

ಸಮಗ್ರ ನ್ಯೂಸ್ : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ […]

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ Read More »

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆ- ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಮಹೇಶ್, ಸುರೇಶ್, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯ ಎ.ಎಸ್.ಐ ರಾಮಯ್ಯ ಹೆಗ್ಡೆ ಅವರು ಯುವಕರ

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆ- ಪ್ರಕರಣ ದಾಖಲು Read More »

ಬೆಳ್ತಂಗಡಿ: ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ

ಸಮಗ್ರ ನ್ಯೂಸ್ : ಸುಳ್ಳು ಆರೋಪಗಳನ್ನು ಹೊರಿಸಿ, ಕರ್ತವ್ಯದ ಸಮಯ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ವೇಣೂರು ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ನಡೆದಿದೆ. ಶಿರ್ಲಾಲು ಗ್ರಾಮದ ಬಗ್ಯೋಟ್ಟು ಮನೆಯ ಮಾಧವ ಕುಲಾಲ್ ಶಿರ್ಲಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಜಯ ಲಕ್ಷ್ಮೀ ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ಮೇಲಾಧಿಕಾರಿಗಳಿಗೆ ದೂರು ನೀಡುತ್ತಿದ್ದು, ಕೆಲಸಕ್ಕೆ ತೆರಳುವ ಸಮಯ ಆತನ ಆಟೋರಿಕ್ಷಾದಲ್ಲಿ ಹಿಂಬಾಲಿಸುತ್ತ ತೊಂದರೆ ನೀಡುತ್ತಿದ್ದ ಎಂದು ದೂರಲಾಗಿದೆ.

ಬೆಳ್ತಂಗಡಿ: ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ Read More »

ಕಡಬ: ಯವತಿಯ ಜತೆ ಸರ್ಕಾರಿ ಬಸ್ ನಿರ್ವಾಹಕ ಅನುಚಿತ ವರ್ತನೆ

ಸಮಗ್ರ ನ್ಯೂಸ್ : ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸರಕಾರಿ ಬಸ್ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನನ್ನು ಕಡಬ ಪೋಲೀಸರು ವಶಕ್ಕೆ ಪಡೆದ ಘಟನೆ ಕಡಬದಲ್ಲಿ ಶನಿವಾರ ಸಂಭವಿಸಿದೆ. ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್ ಹತ್ತಿದ್ದು, ಆಲಂಕಾರಿಗೆ ಟಿಕೆಟ್ ಕೊಡಿ ಎಂದು ಯುವತಿ ಹೇಳಿದ್ದರೂ ನಿರ್ವಾಹಕ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಪ್ರಯಾಣ ಮುಂದುವರಿಸಿದರು. ಯುವತಿ ತಾನು

ಕಡಬ: ಯವತಿಯ ಜತೆ ಸರ್ಕಾರಿ ಬಸ್ ನಿರ್ವಾಹಕ ಅನುಚಿತ ವರ್ತನೆ Read More »

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮೂಲಿಕ್ಕಾರ್ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ- ಪಾದಾಚಾರಿ ಮಹಿಳೆ ಸಾವು

ಸಮಗ್ರ ನ್ಯೂಸ್ : ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಹಾಲಿನ ಡೈರಿಗೆ ಹೋಗುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾಣಿಯೂರು ಸಮೀಪದ ಬರೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಬರೆಪ್ಪಾಡಿ ನಿವಾಸಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ (45) ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಹಾಲಿನ ಡೈರಿಗೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ಗಳೆರಡು ಅಪಘಾತವಾಗಿದೆ. ಒಂದು ಬೈಕ್ ರಸ್ತೆಯಂಚಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಪಾದಾಚಾರಿ ಮಹಿಳೆ ಮೃತಪಟ್ಟಿರುವುದಾಗಿ ಮಾಹಿತಿ ತಿಳಿದು

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ- ಪಾದಾಚಾರಿ ಮಹಿಳೆ ಸಾವು Read More »

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬAಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟçದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್‌ನಲ್ಲಿ ಇಳಿದು, ಎಟಿಎಂ ಹಣ

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು Read More »

ಕೊನೇ ಕ್ಷಣದ ಬದಲಾವಣೆ ನಡೆಯದಿದ್ದರೆ ನಳಿನ್ ಕುಮಾರ್ ಕಟೀಲ್‌ಗೆ ಎಂಪಿ ಟಿಕೆಟ್ ಫಿಕ್ಸ್!

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ಟಿಕೆಟ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಕೋರ್ ಕಮಿಟಿ ಸಭೆಯಲ್ಲಿ ನಳಿನ್‌ಗೆ ಮತ್ತೆ ಟಿಕೆಟ್ ಕೊಡಿಸುವ ಬಗ್ಗೆ ಪ್ರಸ್ತಾಪವಾಗಿದೆ ಎನ್ನಲಾಗಿದೆ. ಇಂದು ಸಂಜೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಕೊನೆ ಹಂತದ ಬದಲವಾಣೆ ನಡೆಯದೇ ಇದ್ದರೆ ನಳಿನ್‌ಗೆ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಆದರೆ ಕೊನೆ ಹಂತದಲ್ಲಿ ನಾಯಕರು ಬದಲಾವಣೆ ಬಯಸಿದರೆ ಮಾತ್ರ ಹೊಸ ಮುಖಗಳಿಗೆ ಮಣೆ ಹಾಕುವ

ಕೊನೇ ಕ್ಷಣದ ಬದಲಾವಣೆ ನಡೆಯದಿದ್ದರೆ ನಳಿನ್ ಕುಮಾರ್ ಕಟೀಲ್‌ಗೆ ಎಂಪಿ ಟಿಕೆಟ್ ಫಿಕ್ಸ್! Read More »

ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ

ಸಮಗ್ರ ನ್ಯೂಸ್ : ಬಜಪೆ ಪೇಟೆಯಲ್ಲಿ ಐತಿಹಾಸಿಕ ಶಾರದೋತ್ಸವ ಸಹಿತ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದ ಸಾರ್ವಜನಿಕ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರು ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಿರೋಧ ವ್ಯಕ್ತಪಡಿಸುತ್ತಿದ್ದು, ಇಂದಿರಾ ಕ್ಯಾಂಟೀನ್ ಅನ್ನು ಬೇರೆ ಸ್ಥಳದಲ್ಲಿ ನಿರ್ಮಿಸುವಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದಿರಾ ಕ್ಯಾಂಟಿನ್‍ಗೆ ತಾಲ್ಲೂಕು ಪಂಚಾಯಿತಿಯ ಜಾಗ ತೋರಿಸಿದರು ಆ ಜಾಗ ಬೇಡ ಕೇಂದ್ರ ಮೈದಾನದ ಬದಿಯಲ್ಲೇ

ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ Read More »

ಕಟಪಾಡಿ: ಚಾಲಕನ ನಿರ್ಲಕ್ಷ್ಯದಿಂದ ಮೋರಿಗೆ ಬಿದ್ದ ಕಾರು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮೋರಿಗೆ ಬಿದ್ದು, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಾ.9ರ ಶನಿವಾರ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾಶ್ರ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ ಮೋರಿಗೆ ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ

ಕಟಪಾಡಿ: ಚಾಲಕನ ನಿರ್ಲಕ್ಷ್ಯದಿಂದ ಮೋರಿಗೆ ಬಿದ್ದ ಕಾರು Read More »