ಕರಾವಳಿ

ನೆಲ್ಯಾಡಿ: ಅನಾರೋಗ್ಯದಿಂದ ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ಬಿದ್ದು ತಲೆಗೆ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ ಘಟನೆ ನೆಲ್ಯಾಡಿಯ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಶೀನ ಮುಗೇರ(50) ಎಂದು ಗುರುತಿಸಲಾಗಿದೆ. ಮಾ.10ರಂದು ಸಾಯಂಕಾಲ ನೆಲ್ಯಾಡಿ ಪೇಟೆಗೆ ಹೋದವರು ವಾಪಾಸು ಮನೆಗೆ ಬಂದಾಗ ಅವರ ತಲೆಯ ಹಿಂಬದಿ ಗಾಯವಾಗಿತ್ತು. ಮನೆಯವರು ವಿಚಾರಿಸಿದಾಗ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಬಿದ್ದು ಗಾಯವಾಗಿದೆ ಎಂದು ತಿಳಿಸಿದ್ದರು. ಬಳಿಕ ಅವರಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿ ಕಳುಹಿಸಿಕೊಟ್ಟಿದ್ದರು.

ನೆಲ್ಯಾಡಿ: ಅನಾರೋಗ್ಯದಿಂದ ವ್ಯಕ್ತಿ ಸಾವು Read More »

ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ

ಸಮಗ್ರ ನ್ಯೂಸ್: ಬೆಳ್ಳಾರೆ ಪೆರುವಾಜೆಯ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು. ಡಾ.ಕೆ.ಶಿವರಾಮ ಕಾರಂತ ಸರಕಾರಿ ಫುಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಪ್ರಾಂಶುಪಾಲ ದಾಮೋದರ ಕಣಜಾಲು ಅವರು ಸಭಾಧ್ಯಕ್ಷತೆ ವಹಿಸಿದ್ದರು. ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಹೆಚ್. ಭೀಮರಾವ್

ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಮಹಿಳಾ ಕವಿಗೋಷ್ಠಿ Read More »

ಮಂಗಳೂರು ಮಹಾನಗರ ಪಾಲಿಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಭರವಸೆ

ಸಮಗ್ರ ನ್ಯೂಸ್ : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಈ ಬೇಸಿಗೆಯಲ್ಲಿ ಕುಡಿಯುವ ನೀರಿನ ಪಡಿತರವನ್ನು ಜಾರಿಗೊಳಿಸುವುದಿಲ್ಲ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಾರ್ವಜನಿಕರಿಗೆ ಭರವಸೆ ನೀಡಿದರು, ನಗರದ ನೀರಿನ ಲಭ್ಯತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಕಣ್ಣೂರು, ಕೊಂಚ ಇಳಿಕೆಯಾಗಿದ್ದರೂ, ಕುಡಿಯುವ ನೀರಿನ ಪ್ರಾಥಮಿಕ ಮೂಲವಾದ ನೇತ್ರಾವತಿಯ ಒಳಹರಿವು ಸಂಪೂರ್ಣವಾಗಿ ನಿಂತಿಲ್ಲ. ಮಂಗಳೂರು, ಉಳ್ಳಾಲ ಮತ್ತು ಮೂಲ್ಕಿಗೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಂ ಪ್ರಸ್ತುತ 6 ಮೀಟರ್ ತೃಪ್ತಿದಾಯಕ

ಮಂಗಳೂರು ಮಹಾನಗರ ಪಾಲಿಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಭರವಸೆ Read More »

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ-ಆತ್ಮಹತ್ಯೆ ಶಂಕೆ

ಸಮಗ್ರ ನ್ಯೂಸ್ : ಕುಂಪಲದ ಕುಜುಮಗದ್ದೆ ಬಳಿ ಅಧಿಕಾರಿಗಳು ವಾಸಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿರುವ ಆತಂಕಕಾರಿ ದೃಶ್ಯ ಕಂಡು ಬಂದಿದೆ. ಆತ್ಮಹತ್ಯೆಯ ಪ್ರಕರಣವೆಂದು ಶಂಕಿಸಲಾಗಿದೆ, ವ್ಯಕ್ತಿಯ ಅವಶೇಷಗಳು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ, ಇದು ದುರಂತ ಘಟನೆ ಸಂಭವಿಸಿದ ಅಂದಾಜು ಮೂರು ದಿನಗಳನ್ನು ಸೂಚಿಸುತ್ತದೆ. ಘಟನೆಯಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಕಿರಣ್ ಕುಮಾರ್ (48) ಎಂದು ಗುರುತಿಸಲಾಗಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಹೌಸ್ ಕೀಪಿಂಗ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದಾರೆ. ಕಿರಣ್ ಕೊನೆಯದಾಗಿ ಮಾರ್ಚ್ 7

ಮಂಗಳೂರು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ-ಆತ್ಮಹತ್ಯೆ ಶಂಕೆ Read More »

ಬಂಟ್ವಾಳ: ಜಮೀನಿನ ಮಾಲಕನಿಗೆ ಜೀವ ಬೇದರಿಕೆ- ಹಲ್ಲೆ..!

ಸಮಗ್ರ ನ್ಯೂಸ್ : ವ್ಯಕ್ತಿಯೋರ್ವರ ಕೃಷಿಯೇತರ ಜಾಗದಲ್ಲಿ ಸುತ್ತಲೂ ಅಳವಡಿಸಿದ್ದ ಬೇಲಿ ಹಾಳಾಗಿದ್ದ ಬೇಲಿಯ ಕಂಬಗಳನ್ನು ರಿಪೇರಿ ಮಾಡುತ್ತಿದ್ದ ವೇಳೆ ತಂಡವೊಂದು ಅಕ್ರಮ ಪ್ರವೇಶಿಸಿ ಜಮೀನಿನ ಮಾಲಿಕನಿಗೆ ಜೀವ ಬೇದರಿಕೆ ಒಡ್ಡಿ, ಹಲ್ಲೆ ನಡೆಸಿ ಕೃಷಿ ಕೃತಗಳಿಗೆ ಹಾನಿ ಮಾಡಿದ ಘಟನೆ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ಜೆರಾಲ್ಡ್ ಗ್ರೇಶನ ಡಿ ಸೋಜ, ಆಂದ್ರು ಡಿ ಸೋಜ, ಚಾಲ್ಸ್ ಡಿ ಸೋಜ, ಅಸ್ಟಿನ್ ಡಿ ಸೋಜ ಎಂದು ಗುರುತಿಸಲಾಗಿದೆ. ಕಳ್ಳಿಗೆ ಗ್ರಾಮ, ಬಂಟ್ವಾಳ ನಿವಾಸಿ

ಬಂಟ್ವಾಳ: ಜಮೀನಿನ ಮಾಲಕನಿಗೆ ಜೀವ ಬೇದರಿಕೆ- ಹಲ್ಲೆ..! Read More »

ಪುತ್ತೂರು : ಮಾ.14 ರಂದು ವಿದ್ಯುತ್ ನಿಲುಗಡೆ

ಸಮಗ್ರ ನ್ಯೂಸ್ : ಉಪ್ಪಿನಂಗಡಿ- ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‍ಪ್ರೆಸ್, ಕಾಂಚನ ಮತ್ತು ವಾಟರ್ ಸಪ್ಲೈ ಫೀಡರ್ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‍ನಲ್ಲಿ ಮಾ.14 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್

ಪುತ್ತೂರು : ಮಾ.14 ರಂದು ವಿದ್ಯುತ್ ನಿಲುಗಡೆ Read More »

ಕಾರ್ಕಳ: ಆಸ್ತಿ ವಿಚಾರಕ್ಕೆ ಸಹೋದರನ ಕೊಲೆ: ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್ : ಆಸ್ತಿ ವಿಚಾರವಾಗಿ ಸಹೋದರನನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜು ಯಾನೆ ಕಪಿಲ (38) ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ.12ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಾರ್ಕಳ ತಾಲೂಕು ನಿಟ್ಟೆ ಬಜಕಳ ನಿವಾಸಿ ರಾಜು ಯಾನೆ ಕಪಿಲ ಮತ್ತು ಶೇಖರ ಸಹೋದರರಾಗಿದ್ದು, ಇವರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. 2022ರ ಮಾ.6ರಂದು ಶೇಖರ ಅವರು ಮನೆಯ ಬಳಿ ಕೆಲಸ ಮಾಡುತ್ತಿದ್ದಾಗ ರಾಜು ಬಂದು ಗಲಾಟೆ ನಡೆಸಿ

ಕಾರ್ಕಳ: ಆಸ್ತಿ ವಿಚಾರಕ್ಕೆ ಸಹೋದರನ ಕೊಲೆ: ಜೀವಾವಧಿ ಶಿಕ್ಷೆ Read More »

ಕಾಪು : ಉಸಿರಾಟದ ತೊಂದರೆ: ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ಎದೆನೋವು ಕಾಣಿಸಿಕೊಂಡು ಉಸಿರಾಟದ ತೊಂದರೆಯಿಂದ ಕಾಪು ಇನ್ನಂಜೆ ನಿವಾಸಿ ಪ್ರಶಾಂತ್ (44) ಅವರು ಇತ್ತೀಚೆಗೆ ಮೃತಪಟ್ಟ ಘಟನೆ ನಡೆದಿದೆ. ವಿಪರೀತ ಮದ್ಯ ಸೇವನೆ ಅಭ್ಯಾಸ ಹೊಂದಿದ್ದ ಅವರು ಮದ್ಯಸೇವನೆಯನ್ನು ಬಿಡಲು 3 ವರ್ಷಗಳ ಹಿಂದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಒಂದು ವಾರದ ಹಿಂದೆ ಕಾಲು ಊತ ಕಾಣಿಸಿಕೊಂಡಿದ್ದರಿಂದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ಕಾಪು : ಉಸಿರಾಟದ ತೊಂದರೆ: ವ್ಯಕ್ತಿ ಸಾವು Read More »

ಪಡುಬಿದ್ರಿ : ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರ ರಕ್ಷಣೆ

ಸಮಗ್ರ ನ್ಯೂಸ್ : ಸಂತೆಯಲ್ಲಿ ಬಾಲಕಾರ್ಮಿಕರು ಹಾಗೂ ಭಿಕ್ಷಾಟನೆ ನಡೆಸುತ್ತಿರುವವರ ಬಗ್ಗೆ ಮಾಹಿತಿ ಪಡೆದ ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ಅವರು ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ಸಹಕಾರದೊಂದಿಗೆ ದಿಢೀರ್ ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಿದರು. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾಗ ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರು ಪತ್ತೆಯಾದರು. ಇದೇ ವೇಳೆ ಮಕ್ಕಳನ್ನು ಬಳಸಿ ಭಿಕ್ಷಾಟನೆ ನಡೆಸುತ್ತಿರುವುದೂ ಕಂಡು ಬಂದಿದ್ದು, ಅವರು ಅಧಿಕಾರಿಗಳನ್ನು ನೋಡಿ ಅಲ್ಲಿಂದ ಪರಾರಿಯಾದರು. ಪತ್ತೆಹಚ್ಚಲಾದ ಬಾಲ ಕಾರ್ಮಿಕರನ್ನು ಮಕ್ಕಳ

ಪಡುಬಿದ್ರಿ : ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರ ರಕ್ಷಣೆ Read More »

ಶಿರಾಡಿ‌ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ| ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ| ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ಎನ್‍ಎಚ್-75 ರ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್‍ವೊಂದು ಪಲ್ಟಿಯಾಗಿ ಟ್ಯಾಂಕರ್‍ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಇಂದು (ಮಾ.13) ಸಂಭವಿಸಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಪಲ್ಟಿಯಾದ ಗ್ಯಾಸ್ ಟ್ಯಾಂಕರ್‍ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾರ್ಗಮಧ್ಯೆ ನೂರಾರು ವಾಹನಗಳು ನಿಂತಲ್ಲೆ ನಿಂತಿವೆ. ಸದ್ಯ ಪೊಲೀಸರು ಮಂಗಳೂರು- ಹಾಸನ- ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ. ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು

ಶಿರಾಡಿ‌ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ| ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ| ವಾಹನ ಸಂಚಾರಕ್ಕೆ ನಿರ್ಬಂಧ Read More »