ಕರಾವಳಿ

ಉಡುಪಿ : ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು

ಸಮಗ್ರ ನ್ಯೂಸ್ : ಬೈಕೊಂದು ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಬೈಕ್ ಸವಾರ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಇದರ ಪರಿಣಾಮ […]

ಉಡುಪಿ : ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು Read More »

ಉಡುಪಿ ಚಿಕ್ಕಮಗಳೂರಿನಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ– ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಸ್ಪೋಟಕ ಮಾಹಿತಿಯನ್ನು ನೀಡಿದ್ದು, ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ನಮ್ಮ ಬಗ್ಗೆ ವಿರೋಧ ವ್ಯಕ್ತವಾದರೆ ಕೇಂದ್ರದ ನಾಯಕರು ನಾವು ಮಾಡಿರುವ ಕೆಲಸದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ ಅದು ನನಗೆ ಅನುಕೂಲವಾಗುತ್ತೆ ಎಂದ ಅವರು ಇಲ್ಲವಾದರೆ

ಉಡುಪಿ ಚಿಕ್ಕಮಗಳೂರಿನಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ– ಶೋಭಾ ಕರಂದ್ಲಾಜೆ Read More »

ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ

ಸಮಗ್ರ ನ್ಯೂಸ್ : ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆರೂರಿನ ರಾಕೇಶ್ ಅವರು ಸ್ಕೂಟರ್‌ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ ರಮಿತಾ ಅವರು ತನ್ನ ಕಾರನ್ನು ಬ್ರಹ್ಮಗಿರಿ ಕಡೆಯಿಂದ ಚಲಾಯಿಸಿಕೊಂಡು ಬಂದು ಹುತಾತ್ಮರ ಸ್ಮಾರಕದ ಬಳಿ ಹಠಾತ್ ಯು ಟರ್ನ್ ಮಾಡಿದ ಪರಿಣಾಮ ಸ್ಕೂಟರ್ ಸವಾರ ಬಿದ್ದು ಗಾಯಗೊಂಡರು. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ Read More »

ಬಂಟ್ವಾಳ: ಲಾರಿ-ಖಾಸಗಿ ಬಸ್ ಅಪಘಾತ| ಲಾರಿ ಚಾಲಕ ಗಂಭೀರ

ಸಮಗ್ರ ನ್ಯೂಸ್ : ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಿ.ಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಬಸ್‌ನಲ್ಲಿ ಕಾಲೇಜಿಗೆ

ಬಂಟ್ವಾಳ: ಲಾರಿ-ಖಾಸಗಿ ಬಸ್ ಅಪಘಾತ| ಲಾರಿ ಚಾಲಕ ಗಂಭೀರ Read More »

ಅಂಜಲಿ ಮೊಂಟೇಸ್ಸರಿ ಸ್ಕೂಲ್ ನಲ್ಲಿ ಎ. 1 ರಿಂದ 8 ಚಿಣ್ಣರ ಕಲರವ-2024

ಸಮಗ್ರ ನ್ಯೂಸ್: ಅಂಜಲಿ ಮೊಂಟೇಸ್ಸರಿ ಸ್ಕೂಲ್ ಪ್ರಸ್ತುತಪಡಿಸುವ ಮೂರನೇ ವರ್ಷದ ಚಿಣ್ಣರ ಕಲರವ 2024 ಎ. 1ರಿಂದ 8ರವರೆಗೆ ಸುಳ್ಯ ವರ್ತಕ ಸಮುದಾಯ ಭವನ ಅಂಬಟಡ್ಕದಲ್ಲಿ ನಡೆಯಲಿದೆ. 7-14 ವರ್ಷದವರೆಗಿನ ಮಕ್ಕಳಿಗಾಗಿ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರು ಮಾ. 21ರ ಒಳಗಾಗಿ ನೊಂದಾವಣೆ ಮಾಡಿಕೊಳ್ಳಬಹುದಾಗಿರುತ್ತದೆ. ಮಕ್ಕಳಿಗಾಗಿ ಯೋಗ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯಗಳು, ಅಡುಗೆ, ಮೆಹಂದಿ ವಿನ್ಯಾಸ, ಮುಖವರ್ಣಿಕೆ, ಭಜನೆ, ನೃತ್ಯ, ಕಲೆ ಮತ್ತು ಕರಕುಶಲ, ಗಣಿತದೊಂದಿಗೆ ವಿನೋದ, ಇಂಗ್ಲಿಷ್‌ನೊಂದಿಗೆ ವಿನೋದ, ನಾಟಕ, ತಮಾಷೆಯ ಆಟಗಳು, ಟ್ಯಾಲೆಂಟ್ ಶೋ,

ಅಂಜಲಿ ಮೊಂಟೇಸ್ಸರಿ ಸ್ಕೂಲ್ ನಲ್ಲಿ ಎ. 1 ರಿಂದ 8 ಚಿಣ್ಣರ ಕಲರವ-2024 Read More »

ವಿಟ್ಲ: ಎರಡು ಮಕ್ಕಳ ತಾಯಿ ನಾಪತ್ತೆ – ಲವ್ ಜಿಹಾದ್ ಶಂಕೆ

ಸಮಗ್ರ ನ್ಯೂಸ್ : ವಿಟ್ಲಪಡೂರು ಗ್ರಾಮದ ಪರ್ತಿಪ್ಪಾಡಿಯ ಎರಡು ಮಕ್ಕಳ ತಾಯಿ ನಾಪತ್ತೆಯಾದ ಘಟನೆ ನಡೆದಿದೆ. ಮಹಿಳೆಯ ಪತಿ ನಿಧನ ಹೊಂದಿದ್ದು, ಈಕೆ ನಾಪತ್ತೆಯಾಗುತ್ತಿದ್ದಂತೆ ಈಕೆಯ ಪುತ್ರ 2 ದಿನಗಳ ಹಿಂದೆ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಆದರೆ ಈ ವರೆಗೆ ಮಾಹಿತಿ ದೊರೆತಿಲ್ಲ. ಈಕೆ ಸಜೀಪ ಮೂಲದ ಅನ್ಯ ಕೋಮಿಗೆ ಸೇರಿದ ನಾಲ್ಕು ಮಕ್ಕಳ ತಂದೆಯ ಜತೆಗೆ ಪರಾರಿಯಾಗಿದ್ದಾಳೆಂದು ಹಾಗೂ ವಶೀಕರಣ ಮಾಡಿ ವಿಧವೆ ಮಹಿಳೆಯನ್ನು ಬಲೆಗೆ ಬೀಳಿಸಲಾಗಿದೆ ಎಂಬ ಮಾತು ಕುಟುಂಬ ಸದಸ್ಯರಿಂದ ಆರೋಪ

ವಿಟ್ಲ: ಎರಡು ಮಕ್ಕಳ ತಾಯಿ ನಾಪತ್ತೆ – ಲವ್ ಜಿಹಾದ್ ಶಂಕೆ Read More »

ಒಕ್ಕಲಿಗರಿಗೆ ಪಕ್ಷ ನಾಯಕತ್ವ; ಬಿಜೆಪಿಗೆ ಸವಾಲೊಡ್ಡಿದ ಕಾಂಗ್ರೆಸ್ ?| ದ.ಕ‌ ಲೋಕಸಭಾ ಕ್ಷೇತ್ರದ ಟಿಕೆಟ್ ಸುಳ್ಯದ ಕಿರಣ್ ಬುಡ್ಲೆಗುತ್ತು ‘ಕೈ’ಗೆ!?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಗಣನೆ ಶುರುವಾಗುತ್ತಿರುವಂತೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಹೆಚ್ಚಾಗುತ್ತಿರುವ ನಡುವೆ ದ.ಕ ಲೋಕಸಭಾ ಕ್ಷೇತ್ರದಲ್ಲಿ ಅಚ್ಚರಿಯ ನಡೆಯನ್ನು ಕಾಂಗ್ರೆಸ್ ತೆಗೆದುಕೊಳ್ಳುವ ನಿರ್ಧಾರ ಕೈಗೊಂಡಿದೆ. ತೀರಾ ಕುತೂಹಲದ ಕ್ಷೇತ್ರವಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ನ ಪ್ರಮುಖ ಮೂರು ಅಭ್ಯರ್ಥಿ ಆಕಾಂಕ್ಷಿಗಳ ಪೈಕಿ ಭರವಸೆಯ ಒಕ್ಕಲಿಗ ಗೌಡ ಯುವನಾಯಕ ಸುಳ್ಯ ಮೂಲದ ಕಿರಣ್ ಬುಡ್ಲೆಗುತ್ತು ಹೆಸರು ಪ್ರಬಲ ಚಾಲ್ತಿಯೊಂದಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಒಕ್ಕಲಿಗರಿಗೆ ಪಕ್ಷ ನಾಯಕತ್ವ; ಬಿಜೆಪಿಗೆ ಸವಾಲೊಡ್ಡಿದ ಕಾಂಗ್ರೆಸ್ ?| ದ.ಕ‌ ಲೋಕಸಭಾ ಕ್ಷೇತ್ರದ ಟಿಕೆಟ್ ಸುಳ್ಯದ ಕಿರಣ್ ಬುಡ್ಲೆಗುತ್ತು ‘ಕೈ’ಗೆ!? Read More »

ಕಡಬ: ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಆಯೋಜಿಸಿದ ಮಹಿಳಾ ದಿನಾಚರಣೆಯ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗಿ

ಸಮಗ್ರ ನ್ಯೂಸ್: ರಾಷ್ಟ್ರಿಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದ ದಿನೇಶ್ ಗೌಡ ಬಿಳಿನೆಲೆ ಯವರ ನೇತೃತ್ವದಲ್ಲಿ ಭಾಗವಹಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಹಿಳಾ ಕಾಂಗ್ರೆಸ್ ಮುಖಂಡರುಗಳಾದ

ಕಡಬ: ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಆಯೋಜಿಸಿದ ಮಹಿಳಾ ದಿನಾಚರಣೆಯ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗಿ Read More »

ಚಾರ್ಮಾಡಿ: ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್| ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿಸಿದ ಚಾಲಕ

ಸಮಗ್ರ ನ್ಯೂಸ್: ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 70 ಪ್ರಯಾಣಿಕರ ಜೀವವನ್ನು ಉಳಿಸಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಮಾ. 8ರಂದು ಬೆಳಗ್ಗೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ಫೇಲ್ ಆದುದನ್ನು ಅರಿತ ಚಾಲಕ ಸಮಯಪ್ರಜ್ಞೆಯಿಂದ ರಸ್ತೆಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲುವಂತೆ ಮಾಡಿದ್ದಾನೆ. ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಸ್ ನಿಂತಿದೆ.

ಚಾರ್ಮಾಡಿ: ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್| ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿಸಿದ ಚಾಲಕ Read More »

ಸುಳ್ಯ: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಸಮಗ್ರ ನ್ಯೂಸ್: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುದೀರ್ಘ 31 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಮಾ.12 ರಂದು ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಮಾ.08 ರಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪದ್ಮನಾಭ ಭಟ್ ಮತ್ತು ಚಂದ್ರಾವತಿ ಪಿ. ದಂಪತಿಗಳನ್ನು ಶಾಲು ಹೊದಿಸಿ, ಫಲ-ಪುಷ್ಪ ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪದ್ಮನಾಭ ಭಟ್ ಅವರು ಮಾತನಾಡಿ ತಾನು ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿಕೊಂಡು

ಸುಳ್ಯ: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ Read More »