ಕರಾವಳಿ

ಉಜಿರೆಯ ಲಾಡ್ಜ್ ಗಳಲ್ಲಿ ‌ಮಾಂಸದಂಧೆ| ಪೊಲೀಸರ ದಿಢೀರ್ ದಾಳಿ; ಮೂರು ಮಂದಿ ಅಂದರ್

ಸಮಗ್ರ ನ್ಯೂಸ್: ಉಜಿರೆಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಾರ್ಚ್ 6 ರಂದು ನಡೆದಿದೆ. ಉಜಿರೆಯ ಹಳೆ ಪೇಟೆ ಎಂಬಲ್ಲಿರುವ ಸುರೇಶ್ ಬೋರ್ಡಿಂಗ್ & ಲಾಡ್ಜಿಂಗ್ / ಐಶ್ವರ್ಯಾ ಲಾಡ್ಜಿಂಗ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸ್ ನಿರೀಕ್ಷಕರಾದ ಬಿ.ಜಿ.ಸುಬ್ಬಾಪೂರ ಮಠ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ವೇಶ್ಯಾವಾಟಿಕೆ‌ ನಿರತರಾಗಿದ್ದ […]

ಉಜಿರೆಯ ಲಾಡ್ಜ್ ಗಳಲ್ಲಿ ‌ಮಾಂಸದಂಧೆ| ಪೊಲೀಸರ ದಿಢೀರ್ ದಾಳಿ; ಮೂರು ಮಂದಿ ಅಂದರ್ Read More »

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ವಾರ್ಷಿಕ ದಾಖಲಾತಿ ಆರಂಭ|ಮಾರ್ಚ್ 15 ರೊಳಗಿನ ದಾಖಲಾತಿಗೆ 10% ಆಫರ್

ಸಮಗ್ರ ನ್ಯೂಸ್: ಸುಳ್ಯದ ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ 2024-25 ರ ಪ್ಲೇ.ಗ್ರೂಪ್, ಪ್ರಿ.ಕೆ.ಜಿ, ಯು.ಕೆ.ಜಿ, ಎಲ್.ಕೆ.ಜಿ ಮಕ್ಕಳ ವಾರ್ಷಿಕ ದಾಖಲಾತಿ ಆರಂಭಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಮಾರ್ಚ್ 15 ರೊಳಗಿನ ದಾಖಲಾತಿಗೆ1 0% ಆಫರ್ ನೀಡಲಾಗಿದೆ. ಈ ಸ್ಕೂಲ್ ನಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿ ಕೊಡಲಾಗುತ್ತದೆ. ಈ ದಾಖಲಾತಿಗೆ ಸೀಮಿತ ಸಂಖ್ಯೆಯ ಆವಕಾಶವಿದ್ದು ಆಸಕ್ತರು ಕೂಡಲೇ ಕೆ ವಿ ಜಿ ಆಯುರ್ವೇದಿಕ್ ಕಾಲೇಜ್ ಮುಂಭಾಗದಲ್ಲಿ ಇರುವ

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ವಾರ್ಷಿಕ ದಾಖಲಾತಿ ಆರಂಭ|ಮಾರ್ಚ್ 15 ರೊಳಗಿನ ದಾಖಲಾತಿಗೆ 10% ಆಫರ್ Read More »

ಎನ್ಐಎ ಶೋಧ ಕಾರ್ಯಾಚರಣೆ| ದ.ಕ ಜಿಲ್ಲೆಯ ಇಬ್ಬರು ಸೇರಿ ಮೂರು ಮಂದಿ ವಶಕ್ಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು (ಎನ್‌ಐಎ) ಮಂಗಳವಾರ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸೇರಿ ಮೂವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ ಪ್ರಸ್ತುತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿರುವ ಬಿಜು ಅಬ್ರಹಾಂ ಹಾಗೂ ಮಂಗಳೂರಿನ ಅತ್ತಾವರದ ನಬೀದ್ ಎಂಬಾತನನ್ನು ವಶಕ್ಕೆ

ಎನ್ಐಎ ಶೋಧ ಕಾರ್ಯಾಚರಣೆ| ದ.ಕ ಜಿಲ್ಲೆಯ ಇಬ್ಬರು ಸೇರಿ ಮೂರು ಮಂದಿ ವಶಕ್ಕೆ Read More »

ಮಂಗಳೂರು ವಿವಿ‌ ನೂತನ ಕುಲಪತಿಯಾಗಿ ಪ್ರೊ. ಪಿ.ಎಲ್ ಧರ್ಮ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ಇಂದು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ.ಪಿ.ಎಲ್. ಧರ್ಮ ಅವರು ಮಂಗಳೂರು ವಿವಿಯ 10ನೇ ಕುಲಪತಿಯಾಗಿದ್ದಾರೆ. ಮಂಗಳೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಕುಲಪತಿ ಹುದ್ದೆಗೇರುವ ಅವಕಾಶ ಗಿಟ್ಟಿಸಿಕೊಂಡವರಲ್ಲಿ ಎರಡನೇಯವರು ಪ್ರೊ.ಧರ್ಮ. ಈ ಹಿಂದೆ

ಮಂಗಳೂರು ವಿವಿ‌ ನೂತನ ಕುಲಪತಿಯಾಗಿ ಪ್ರೊ. ಪಿ.ಎಲ್ ಧರ್ಮ ಅಧಿಕಾರ ಸ್ವೀಕಾರ Read More »

ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಎಂದು ಗುರುತಿಸಲಾಗಿದೆ. ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ

ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ Read More »

ಸುಳ್ಯ: ಬೆಳ್ಳಂಬೆಳಗ್ಗೆ ಮನೆಮೇಲೆ ಎನ್ಐಎ ದಾಳಿ; ಪರಿಶೀಲನೆ

ಸಮಗ್ರ ನ್ಯೂಸ್: ಎನ್ಐಎ ಅಧಿಕಾರಿಗಳ ತಂಡವೊಂದು ಬೆಳ್ಳಂಬೆಳಗ್ಗೆ ಮನೆಯೊಂದರ ಮೇಲೆಲ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಇಲ್ಲಿನ ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಳ್ಳಾರೆ ಮಾತ್ರವಲ್ಲದೇ, ದೇಶದ 7 ಕಡೆ ಏಕಕಾಲದಲ್ಲಿ NIA

ಸುಳ್ಯ: ಬೆಳ್ಳಂಬೆಳಗ್ಗೆ ಮನೆಮೇಲೆ ಎನ್ಐಎ ದಾಳಿ; ಪರಿಶೀಲನೆ Read More »

ಸುಳ್ಯ:ಎಲಿಮಲೆಯಲ್ಲಿ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಶಿಬಿರ

ಸಮಗ್ರ ನ್ಯೂಸ್: ಸೇವಾ ಭಾರತೀ Helpline ಟ್ರಸ್ಟ್ ಸುಳ್ಯ (ರಿ) ಮತ್ತು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಮಿತ್ರ ಬಳಗ ಎಲಿಮಲೆ ಹಾಗೂ ಎಜೆ ಆಸ್ಪತ್ರೆ ಮಂಗಳೂರು ಸಹಕಾರದೊಂದಿಗೆ ಮಾ. 03ರಂದು ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಬೆಳ್ಳಿಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಬಳಗ (ರಿ) ಎಲಿಮಲೆ ಇದರ ಅಧ್ಯಕ್ಷ ಉದಯಕುಮಾರ್ ಚಳ್ಳ ವಹಿಸಿದರು. ಜ್ಞಾನದೀಪ ವಿದ್ಯಾ ಸಂಸ್ಥೆಯ ಸಂಚಾಲಕ

ಸುಳ್ಯ:ಎಲಿಮಲೆಯಲ್ಲಿ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಶಿಬಿರ Read More »

ಕಡಬ: ಅಪಪ್ರಚಾರಕ್ಕೆ ನೊಂದು ಸಾವಿಗೆ ಶರಣಾದ ಯುವತಿ

ಸಮಗ್ರ ನ್ಯೂಸ್: ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ಇಲ್ಲಿನ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾ ಶ್ರೀ(26) ಜೀವಾಂತ್ಯ ಮಾಡಿಕೊಂಡ ದುರ್ದೈವಿ. ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ದಿವ್ಯಾ ಶ್ರೀ ಮೃತಪಟ್ಟರೆನ್ನಲಾಗಿದೆ. ಅಪಪ್ರಚಾರಕ್ಕೆ ಮನನೊಂದು ದಿವ್ಯಾ ಜೀವಾಂತ್ಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ

ಕಡಬ: ಅಪಪ್ರಚಾರಕ್ಕೆ ನೊಂದು ಸಾವಿಗೆ ಶರಣಾದ ಯುವತಿ Read More »

ಕಡಬ: ಆ್ಯಸಿಡ್ ದಾಳಿಗೆ ನಲುಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ| ಪ್ರೀತಿಯ ತಿರಸ್ಕಾರ ತಂದಿತೇ ಬಾಳಿಗೆ ಸಂಚಕಾರ!?

ಸಮಗ್ರ ನ್ಯೂಸ್: ಕಾಲೇಜು ಆವರಣದಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಆಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ(ಮಾ.4) ಬೆಳಿಗ್ಗೆ ನಡೆದಿದೆ. ಪ್ರಕರಣದ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ಎಂದು ಗುರುತಿಸಲಾಗಿದೆ. ಸಮವಸ್ತ್ರ ಧರಿಸಿದ್ದ ಆರೋಪಿ:ಆರೋಪಿಯು ಸೋಮವಾರದಂದು ಕಡಬ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಆಗಮಿಸಿದ್ದು, ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಇತರ

ಕಡಬ: ಆ್ಯಸಿಡ್ ದಾಳಿಗೆ ನಲುಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ| ಪ್ರೀತಿಯ ತಿರಸ್ಕಾರ ತಂದಿತೇ ಬಾಳಿಗೆ ಸಂಚಕಾರ!? Read More »

ಕಡಬ: ಪ.ಪೂ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ| ಮೂವರು ವಿದ್ಯಾರ್ಥಿನಿಯರು ಗಂಭೀರ

ಸಮಗ್ರ ನ್ಯೂಸ್: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಅಭಿದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರು

ಕಡಬ: ಪ.ಪೂ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ| ಮೂವರು ವಿದ್ಯಾರ್ಥಿನಿಯರು ಗಂಭೀರ Read More »