ಕರಾವಳಿ

ಸುಳ್ಯ: ಕಲ್ಮಕಾರಿನಲ್ಲಿ ಪತ್ತೆಯಾದ ಸುರಂಗ ಮಾದರಿಯ ಗುಹೆ

ಸಮಗ್ರ ನ್ಯೂಸ್: ಜೆಸಿಬಿ ಮೂಲಕ ಭೂಮಿ ಅಗೆಯುತ್ತಿರುವ ವೇಳೆ ಸುರಂಗ ಮಾದರಿಯ ಗುಹೆಯೊಂದು ಪತ್ತೆಯಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಬಿಳಿಮಲೆ ಉಮೇಶ್‌ ಅವರಿಗೆ ಸೇರಿದ ಜಮೀನಿನ ರಬ್ಬರ್‌ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ. ಉಮೇಶ್‌ ರಬ್ಬರ್‌ ತೋಟದಲ್ಲಿ ಅರಣ್ಯ ಕೃಷಿ ಉದ್ದೇಶದಿಂದ ಜೆಸಿಬಿಯಲ್ಲಿ ಮಣ್ಣು ತೆಗೆಯುವ ಆರಂಭಿಸಿದ್ದರು. ಪೊದೆ, ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದಾಗ

ಸುಳ್ಯ: ಕಲ್ಮಕಾರಿನಲ್ಲಿ ಪತ್ತೆಯಾದ ಸುರಂಗ ಮಾದರಿಯ ಗುಹೆ Read More »

ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ- ಆರೋಪಿ ಸಹಿತ ಕೇರಳ ಮೂಲದ ಮೂವರು ಪೊಲೀಸರ ವಶ

ಸಮಗ್ರ ನ್ಯೂಸ್: ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಆರೋಪಿಗಳ ಬಗೆಗಿನ ಕೆಲವೊಂದು ಮಹತ್ತರವಾದ ಮಾಹಿತಿಯನ್ನು ಕಲೆ ಹಾಕಿ ಪ್ರಕರಣದ ಪ್ರಮುಖ ಸೂತ್ರದಾರನ ಸಹಿತ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಕಾಸರಗೋಡು ಮೂಲದ ಖಲಂದರ್, ರಫೀಕ್, ಬಾಯಾರು ಮೂಲದ ದಯಾನಂದ ಪೊಲೀಸ್ ವಶಕ್ಕೆ ತೆಗೆದುಕೊಂಡ ಆರೋಪಿಗಳೆಂದು ತಿಳಿದು ಬಂದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕಿನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು

ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ- ಆರೋಪಿ ಸಹಿತ ಕೇರಳ ಮೂಲದ ಮೂವರು ಪೊಲೀಸರ ವಶ Read More »

ಪುತ್ತೂರು : ಅಕ್ರಮ ಪ್ರವೇಶ -ಜೆಸಿಬಿಯಿಂದ ಮನೆ ಕೆಡವಿದ ಘಟನೆ

ಸಮಗ್ರ ನ್ಯೂಸ್ : ಯಾರು ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಮನೆಯೊಂದನ್ನು ಕೆಡವಿದ ಘಟನೆ ಮಾ.9ರ ಮಧ್ಯಾಹ್ನ ನಡೆದಿರುವುದಾಗಿ ವರದಿಯಾಗಿದೆ. ಘಟನೆ ಕುರಿತು ಮನೆಯಲ್ಲಿ ವಾಸ್ತವ್ಯ ಇದ್ದ ವಸಂತ ಪೂಜಾರಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪುತ್ತೂರು : ಅಕ್ರಮ ಪ್ರವೇಶ -ಜೆಸಿಬಿಯಿಂದ ಮನೆ ಕೆಡವಿದ ಘಟನೆ Read More »

ಮಾಣಿ -ಕೋಡಾಜೆಯಲ್ಲಿ ಆ್ಯಕ್ಟೀವಾ – ಕಾರು ಢಿಕ್ಕಿ: ಇಬ್ಬರಿಗೆ ಗಾಯ

ಸಮಗ್ರ ನ್ಯೂಸ್ : ಕಾರು ಮತ್ತು ಆ್ಯಕ್ಟೀವಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಜಾಲ್ಸೂರು ಸಮೀಪದ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿಯ ಇಬ್ಬರು ಮಹಿಳೆಯರು ಗಾಯಗೊಂಡು, ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಮಾಣಿ-ಕೊಡಾಜೆ ಎಂಬಲ್ಲಿ ಇಂದು ನಡೆದಿದೆ. ಹುಕ್ರಪ್ಪ ಪೂಜಾರಿ ಅವರ ಪುತ್ರ ಕಿಶೋರ್, ಇಬ್ಬರು ಪುತ್ರಿಯರಾದ ವಿದ್ಯಾ ಮತ್ತು ಚೈತ್ರ ಸೇರಿದಂತೆ ಮೂವರು ಕಾರಿನಲ್ಲಿ ಮಂಗಳೂರಿಗೆ ಹೋಗಿ ಮದುವೆ ಬಟ್ಟೆ ಖರೀದಿಸಿ, ಹಿಂತಿರುಗುತ್ತಿದ್ದ ವೇಳೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ –

ಮಾಣಿ -ಕೋಡಾಜೆಯಲ್ಲಿ ಆ್ಯಕ್ಟೀವಾ – ಕಾರು ಢಿಕ್ಕಿ: ಇಬ್ಬರಿಗೆ ಗಾಯ Read More »

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಮಾ.11ರಂದು ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸಂಪಾಜೆ ಮಸೀದಿಯ ಜಮಾಲುದ್ದೀನ್ ಎಂಬವರ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹನೀಫ್ ಎಂಬವರ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ Read More »

ಗೋಳಿತ್ತಡಿ: ಮನೆಯಿಂದ ನಗದು, ಚಿನ್ನಾಭರಣ ಕಳವು

ಸಮಗ್ರ ನ್ಯೂಸ್: ಇಲ್ಲಿನ ಗೋಳಿತ್ತಡಿಯ ನೆಬಿಸಾ ಎಂಬವರ ಮನೆಯಿಂದ ಕಳೆದ ರಾತ್ರಿ ಚಿನ್ನ ಹಾಗೂ ನಗದು ಕಳವುಗೊಂಡಿರುವ ಘಟನೆ ನಡೆದಿದೆ. ನೆಬಿಸಾ ಅವರ ಪುತ್ರಿ ಹೆರಿಗೆ ಹಿನ್ನೆಲೆಯಲ್ಲಿ ಪುತ್ರಿಯೊಂದಿಗೆ ನೆಬಿಸಾ ಹಾಗೂ ಅವರ ಅಳಿಯ ಮಂಗಳೂರಿನ ಆಸ್ಪತ್ರೆಗೆ ತೆರಳಿದ್ದರು. ಕಳೆದ ನಾಲ್ಕೈದು ದಿನಗಳಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಮಾ.11ರಂದು ಸಂಜೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಲಕ್ಷಾಂತರ ರೂ ಮೌಲ್ಯ ದ ಚಿನ್ನ ಹಾಗೂ ನಗದು ಕಳವುಗೊಂಡಿರುವುದಾಗಿ ವರದಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಗೋಳಿತ್ತಡಿ: ಮನೆಯಿಂದ ನಗದು, ಚಿನ್ನಾಭರಣ ಕಳವು Read More »

ಬಂಟ್ವಾಳ: ಕಾನೂನು ಬಾಹಿರ ಆಟೋ ಚಾಲನೆ- ಚಾಲಕನಿಂದ ಆಕ್ರೋಶ

ಸಮಗ್ರ ನ್ಯೂಸ್ : ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದ್ದಾರೆ. ಈ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಂಟ್ವಾಳ ಬಿಸಿರೋಡಿನ ಕೈಕಂಬ ಎಂಬಲ್ಲಿ ಸೋಮವಾರ ನಡೆದಿದೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿರುತ್ತಾನೆ. ಟ್ರಾಫಿಕ್ ಎಸ್‍ಐ. ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್

ಬಂಟ್ವಾಳ: ಕಾನೂನು ಬಾಹಿರ ಆಟೋ ಚಾಲನೆ- ಚಾಲಕನಿಂದ ಆಕ್ರೋಶ Read More »

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು

ಸಮಗ್ರ ನ್ಯೂಸ್ : ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ, ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಇಂದು ಬೆಳಿಗ್ಗೆ ಉದಯ ಎದ್ದಿಲ್ಲಾ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ,

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು Read More »

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನ- ಐವರ ಬಂಧನ

ಸಮಗ್ರ ನ್ಯೂಸ್ : ಶಿವರಾತ್ರಿ ಹೆಸರಿನಲ್ಲಿ ಯುವಕರ ತಂಡ ಸಾರ್ವಜನಿಕ ರಸ್ತೆಯಲ್ಲಿ ಗಾಜು ಪುಡಿ ಮಾಡಿ ಪುಂಡಾಟಿಕೆ ಮೆರೆದಿದ್ದು, ಅದನ್ನು ತಡೆದ ಪೊಲೀಸರ ಮೇಲೆಯೇ ಕೈ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಐವರನ್ನು ವೇಣೂರು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸ್ಥಳೀಯರಾದ ಮಹೇಶ್ (28), ಸುರೇಶ್ (33), ಗೌತಂ (21), ಅರುಣ್ (29) ಹಾಗೂ ಸುರೇಶ್ (28) ಬಂಧಿತರು. ಶಿವರಾತ್ರಿಯಂದು ಮಧ್ಯರಾತ್ರಿ ಎಎಸ್‍ಐ ರಾಮಯ್ಯ ಅವರು ಸಿಬ್ಬಂದಿ ಶಾಂತ ಕುಮಾರ್ ಜತೆ ಇಲಾಖಾ ವಾಹನ ದಲ್ಲಿ

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನ- ಐವರ ಬಂಧನ Read More »

ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು

ಸಮಗ್ರ ನ್ಯೂಸ್: ಮನೆಯ ಕೌಂಪೌಂಡನ್ನು ಜೆಸಿಬಿ ಯಂತ್ರದ ಮೂಲಕ ಕೆಡವಿದ್ದಲ್ಲದೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿರುವುದಾಗಿ ಕಡಬ ಕೊಂಬಾರು ಗ್ರಾಮದ ಗಂಗಮ್ಮ(72) ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾ.10ರಂದು ನೆರೆಕೆರೆಯ ಸಂಬಂಧಿಯೂ ಆಗಿರುವ ಶಶಿಧರ ಎಂಬಾತ ಜೆಸಿಬಿ ಯಂತ್ರದ ಮೂಲಕ ಮನೆಯ ಆವರಣಗೋಡೆಯನ್ನು ಕೆಡವಿದ್ದು, ಇದನ್ನು ಪ್ರಶ್ನಿಸಿದಾಗ ಆತ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿದ್ದು, ಗಾಯಗೊಂಡ ಗಂಗಮ್ಮ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಗಂಗಮ್ಮ ನೀಡಿದ ದೂರಿನನ್ವಯ ಕಡಬ ಪೊಲೀಸರು

ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು Read More »