ಕರಾವಳಿ

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ

ಸಮಗ್ರ ನ್ಯೂಸ್: ಮಲಕ್ಕಾ ಮತ್ತು ದಕ್ಷಿಣ ಅಂಡಮಾನ್‌ ಸಮುದ್ರ, ಬಂಗಾಲಕೊಲ್ಲಿ ಮತ್ತು ಶ್ರೀಲಂಕಾದಲ್ಲಿ ನಿಮ್ನ ಒತ್ತಡ ನಿರ್ಮಾಣಗೊಂಡಿದ್ದು, ಪಶ್ಚಿಮ ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ನ. 24ರಂದು ಇದರ ತೀವ್ರತೆ ಇನ್ನಷ್ಟು ಹೆಚ್ಚಾಗಿ ಮುಂದಿನ 48 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆ ಯಾಗುವ ಸಾಧ್ಯತೆ ಇದೆ. ನಿಮ್ನ ಒತ್ತಡದ ಪರಿಣಾಮ ಮತ್ತು ಹಿಂಗಾರು ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ರವಿವಾರವೂ ಮಳೆ […]

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ Read More »

ಕಡಬ: ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು| ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ಜೀವಾಂತ್ಯಕ್ಕೆ ಶರಣಾದ ಹೃದಯ ವಿದ್ರಾವಕ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದಲ್ಲಿ ಸಂಭವಿಸಿದೆ. ಮೃತನನ್ನು ದಿ. ವಾಲ್ಟರ್ ರೋಡ್ರಿಗಸ್ ವಾಲ್ಟರ್ ರೋಡ್ರಿಗಸ್ ಅವರ ಪುತ್ರ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ತನ್ನ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾನೆ. ಪದವಿ ಶಿಕ್ಷಣ ಮುಗಿಸಿದ್ದ ಚೇತನ್, ಮನೆಯಲ್ಲಿ ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದನು. ಆದರೆ, ಕಳೆದ ಕೆಲ ಸಮಯದಿಂದ ಆತ ತೀವ್ರ ಮಾನಸಿಕ

ಕಡಬ: ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು| ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಆತ್ಮಹತ್ಯೆ Read More »

ಬೆಳ್ತಂಗಡಿ ಕೋರ್ಟ್ ಗೆ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಸಿದ ಎಸ್ಐಟಿ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು, ಈ ಪ್ರಕರಣದ ಸಾಕ್ಷಿ ದೂರುದಾರ ಸೇರಿ ಆರು ಮಂದಿ ಸೇರಿ ಯಾವ ರೀತಿ ನ್ಯಾಯಾಲಯದ ದಾರಿ ತಪ್ಪಿಸಿದ್ದಾರೆ ಎಂಬ ಕುರಿತು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ವರದಿ ಸಲ್ಲಿಸಿದರು. ಎಸ್‌ಐಟಿಯ ಮುಖ್ಯ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್‌ ದಯಾಮ ಹಾಗೂ ಸಿ.ಎ.ಸೈಮನ್‌ ಅವರು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ

ಬೆಳ್ತಂಗಡಿ ಕೋರ್ಟ್ ಗೆ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಸಿದ ಎಸ್ಐಟಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ತಿಮರೋಡಿ, ಮಟ್ಟಣ್ಣನವರ್ ಸೇರಿ‌ 6 ಮಂದಿ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಲಾಗಿದೆ ಎಂದು ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಂದು ಎಸ್‌ಐಟಿ ವತಿಯಿಂದ 4000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗುವುದು. ಎಸ್‌ಐಟಿಯ ಮುಖ್ಯ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಒಟ್ಟು ಆರು ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು. ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್, ವಿಠಲ್ ಗೌಡ ಸೇರಿ

ಧರ್ಮಸ್ಥಳ ಬುರುಡೆ ಪ್ರಕರಣ| ತಿಮರೋಡಿ, ಮಟ್ಟಣ್ಣನವರ್ ಸೇರಿ‌ 6 ಮಂದಿ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ Read More »

ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ| ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ

ಸಮಗ್ರ ನ್ಯೂಸ್: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. ‘ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡಬೇಕು’ ಎಂದು ಶಾಸಕ ಅಶೋಕ್‌

ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ| ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ Read More »

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ (DKWJA) 2025-28ರ ಸಾಲಿಗಾಗಿ ನಡೆದ ಚುನಾವಣೆಯಲ್ಲಿ, ವಾರ್ತಾಭಾರತಿ ಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಆಗಿರುವ ಪುಷ್ಪರಾಜ್ ಬಿ.ಎನ್. ಅವರು ನೂತನ ಅಧ್ಯಕ್ಷರಾಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಪುಷ್ಪರಾಜ್ ಅವರು ಒಟ್ಟು 187 ಮತಗಳನ್ನು ಪಡೆದು, ತಮ್ಮ ಪ್ರತಿಸ್ಪರ್ಧಿ, ವಿಜಯವಾಣಿ ವರದಿಗಾರ ಶ್ರವಣ್ ಕುಮಾರ್ ನಾಳ (144 ಮತಗಳು) ಅವರನ್ನು ಸೋಲಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಸುಮಾರು

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ Read More »

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿ ಬಂಧಕ ಗುಣಗಳನ್ನು ಹೊಂದಿವೆ ಎಂದು ಯೆನಪೊಯ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಮಂಗಳೂರಿನ‌ ಯೆನೆಪೊಯ ವಿಶ್ವವಿದ್ಯಾನಿಲಯವು ಅಡಿಕೆಯ ಮೇಲೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಿ ತಯಾರಿಸಿದ ವರದಿಯಲ್ಲಿ ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿಯನ್ನುಂಟು ಮಾಡುವುದಿಲ್ಲ. ಸಂಪ್ರದಾಯಕವಾಗಿ ಸಂಸ್ಕರಿಸಿದ ಅಡಿಕೆಯನ್ನು ಬಳಸಿದರೆ

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ Read More »

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ

ಸಮಗ್ರ ನ್ಯೂಸ್: ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ Read More »

ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಸಾಯಲು ಹೊರಟಿದ್ದ ಕುಟುಂಬ ಬಚಾವ್| ವೈರಲ್ ಆಗಿತ್ತು‌ ‘ಸಾಯೋದು ಬೇಡಪ್ಪಾ’ ಎಂದ ಮಗುವಿನ ಮಾತು!!

ಸಮಗ್ರ ನ್ಯೂಸ್: ಸಂಸಾರದಲ್ಲಿನ ಕಲಹಕ್ಕೆ ಬೇಸತ್ತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಕಾವೂರಿನಲ್ಲಿ ಈ ಘಟನೆ ನಡೆದಿದೆ. ಕಾವೂರು ಅಂಬಿಕಾ ನಗರ ನಿವಾಸಿ ರಾಜೇಶ್ (35) ಸಾಯಲು ಹೋಗಿ ಪೊಲೀಸರಿಂದ ರಕ್ಷಿಸಲ್ಪಟ್ಟವನು. ಹೆಂಡತಿ ಜೊತೆ ಜಗಳಕ್ಕೆ ಬೇಸತ್ತ ಪತಿ ರಾಜೇಶ್ ಸೋಮವಾರ ಸಂಜೆ ತನ್ನ ಮಗಳನ್ನು ಕರೆದುಕೊಂಡಿ ತಣ್ಣೀರುಬಾವಿ ಬೀಚ್ ಗೆ ಹೋಗಿದ್ದು ‘ನಾವು ಸಾಯೋಣ ಮಗಳೇ, ಅವಳಿಗೆ ಬೇಕಾದ ರೀತಿ ಇರಲಿ,

ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಸಾಯಲು ಹೊರಟಿದ್ದ ಕುಟುಂಬ ಬಚಾವ್| ವೈರಲ್ ಆಗಿತ್ತು‌ ‘ಸಾಯೋದು ಬೇಡಪ್ಪಾ’ ಎಂದ ಮಗುವಿನ ಮಾತು!! Read More »

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಮಗುವಿಗೆ ಮಿಡಿದ ತಾಯಿಹೃದಯ| ಚಂದ್ರಪ್ರಭಾ ಗೌಡ ಕಾರ್ಯಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ಪರ್ಪುಂಜದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಪರ್ಪುಂಜದಲ್ಲಿ ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಆಟೋದಲ್ಲಿದ್ದ ಬಾಲಕಿ ಮತ್ತು ಮಹಿಳೆಯೊಬ್ಬರು ಸಾವನಪ್ಪಿದ್ದರು. ಈ ಘಟನೆ ಬಗ್ಗೆ ಮಾಹಿತಿ ಅರಿತ ಕೂಡಲೇ ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಮಗುವಿಗೆ ಮಿಡಿದ ತಾಯಿಹೃದಯ| ಚಂದ್ರಪ್ರಭಾ ಗೌಡ ಕಾರ್ಯಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ Read More »