ಕರಾವಳಿ

ಕಡಬ: ಅಪಪ್ರಚಾರಕ್ಕೆ ನೊಂದು ಸಾವಿಗೆ ಶರಣಾದ ಯುವತಿ

ಸಮಗ್ರ ನ್ಯೂಸ್: ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ಇಲ್ಲಿನ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾ ಶ್ರೀ(26) ಜೀವಾಂತ್ಯ ಮಾಡಿಕೊಂಡ ದುರ್ದೈವಿ. ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ದಿವ್ಯಾ ಶ್ರೀ ಮೃತಪಟ್ಟರೆನ್ನಲಾಗಿದೆ. ಅಪಪ್ರಚಾರಕ್ಕೆ ಮನನೊಂದು ದಿವ್ಯಾ ಜೀವಾಂತ್ಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ […]

ಕಡಬ: ಅಪಪ್ರಚಾರಕ್ಕೆ ನೊಂದು ಸಾವಿಗೆ ಶರಣಾದ ಯುವತಿ Read More »

ಕಡಬ: ಆ್ಯಸಿಡ್ ದಾಳಿಗೆ ನಲುಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ| ಪ್ರೀತಿಯ ತಿರಸ್ಕಾರ ತಂದಿತೇ ಬಾಳಿಗೆ ಸಂಚಕಾರ!?

ಸಮಗ್ರ ನ್ಯೂಸ್: ಕಾಲೇಜು ಆವರಣದಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಆಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ(ಮಾ.4) ಬೆಳಿಗ್ಗೆ ನಡೆದಿದೆ. ಪ್ರಕರಣದ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ಎಂದು ಗುರುತಿಸಲಾಗಿದೆ. ಸಮವಸ್ತ್ರ ಧರಿಸಿದ್ದ ಆರೋಪಿ:ಆರೋಪಿಯು ಸೋಮವಾರದಂದು ಕಡಬ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಆಗಮಿಸಿದ್ದು, ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಇತರ

ಕಡಬ: ಆ್ಯಸಿಡ್ ದಾಳಿಗೆ ನಲುಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ| ಪ್ರೀತಿಯ ತಿರಸ್ಕಾರ ತಂದಿತೇ ಬಾಳಿಗೆ ಸಂಚಕಾರ!? Read More »

ಕಡಬ: ಪ.ಪೂ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ| ಮೂವರು ವಿದ್ಯಾರ್ಥಿನಿಯರು ಗಂಭೀರ

ಸಮಗ್ರ ನ್ಯೂಸ್: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಅಭಿದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರು

ಕಡಬ: ಪ.ಪೂ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ| ಮೂವರು ವಿದ್ಯಾರ್ಥಿನಿಯರು ಗಂಭೀರ Read More »

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು

ಸಮಗ್ರ ನ್ಯೂಸ್: ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ನಡೆದಿದೆ. ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಎಂಬವರು ಮಾ.3 ರಾತ್ರಿ ಗಂಟೆ 9 ರ ಆಸುಪಾಸು ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು Read More »

ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲು

ಸಮಗ್ರ ನ್ಯೂಸ್: ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದ್ದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲು Read More »

ಯೋಗದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಸುಳ್ಯದ ಕುವರಿ

ಸಮಗ್ರ ನ್ಯೂಸ್: ಈಗಾಗಲೇ 2 ರಾಷ್ಟ್ರ ಹಾಗೂ 4 ವಿಶ್ವ ದಾಖಲೆ ಮಾಡಿರುವ ಯೋಗ ಪಟು ಗೌರಿತಾ ಕೆ. ಜಿ ಇದೀಗ ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಮತ್ತು ಕಿಂಗ್ಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾಳೆ. 11ನಿಮಿಷ 42ಸೆಕೆಂಡುಗಳ ಕಾಲ ಕೊಡಪಾನದ ಮೇಲೆ ಪರ್ವತಾಸನ ಮಾಡುವ ಮೂಲಕ ವಿಶ್ವ ದಾಖಲೆ ಮಾಡಿದ್ದಾಳೆ. ಇದೊಂದು ವಿಶೇಷ ದಾಖಲೆಯಾಗಿದ್ದು ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ನ ಇತಿಹಾಸದಲ್ಲಿ ಇದು ಮೊತ್ತ ಮೊದಲ ದಾಖಲೆಯಾಗಿದೆ ಎಂದು

ಯೋಗದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಸುಳ್ಯದ ಕುವರಿ Read More »

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು

ಸಮಗ್ರ ನ್ಯೂಸ್: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು ಆಯ್ಕೆ. ಸುಳ್ಯ ಮಂಡಲ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹಸಂಚಾಲಕರಾಗಿದ್ದ ಪ್ರಸಾದ್ ಕಾಟೂರು ಈ ಬಾರಿ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು Read More »

ನವದೆಹಲಿಯಲ್ಲಿ ಸೌಜನ್ಯ ‌ತಾಯಿ‌ ಹಾಗೂ ಪ್ರತಿಭಟನಾ ನಿರತರು ಅರೆಸ್ಟ್| ಸೌಜನ್ಯಳ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರು

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಕ್ಕಾಗಿ ಹತ್ಯೆಯಾದ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ ಸೌಜನ್ಯ ತಾಯಿ ಮತ್ತು ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಬಿಜೆಪಿ ವತಿಯಿಂದ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ಸಂಸದ, ಆಗಿನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುನೀಲ್ ಕುಮಾರ್ , ಹರೀಶ್ ಪೂಂಜಾ ಇದ್ದ ವೇದಿಕೆಯಲ್ಲಿ ಭಾಗವಹಿಸಿದ್ದ ಸೌಜನ್ಯ ತಾಯಿ ಕುಸುಮಾವತಿ ಭಾಷಣದಲ್ಲಿ ನನ್ನನ್ನು ಪ್ರಧಾನಿ ಮೋದಿಯನ್ನು

ನವದೆಹಲಿಯಲ್ಲಿ ಸೌಜನ್ಯ ‌ತಾಯಿ‌ ಹಾಗೂ ಪ್ರತಿಭಟನಾ ನಿರತರು ಅರೆಸ್ಟ್| ಸೌಜನ್ಯಳ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರು Read More »

ಮಂಗಳೂರಿನ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಸಾಹಿತಿ ಭೀಮರಾವ್ ವಾಷ್ಠರ್ ಅವರ 48ನೇ ಜನ್ಮದಿನ ಸಂಭ್ರಮ|ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾಸಮ್ಮೇಳನ

ಸಮಗ್ರ ನ್ಯೂಸ್:ಸುಳ್ಯದ ಚಂದನ ಸಾಹಿತ್ಯ ವೇದಿಕೆ ಮತ್ತು ಕಲ್ಲೂರಾಯ ಪ್ರತಿಷ್ಠಾನ ಬನದಗದ್ದೆ ಇವರ ಜಂಟಿ ಆಶ್ರಯದಲ್ಲಿ ಕಡಲ ಕವಿಗೋಷ್ಠಿ 2024 , ಸಾಹಿತಿ ಜ್ಯೋತಿಷಿ ಎಚ್ ಭೀಮರಾವ್ ವಾಷ್ಠರ್ ರವರ 48 ನೇ ಹುಟ್ಟುಹಬ್ಬದ ಆಚರಣೆ ಪ್ರಯುಕ್ತ ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾ ಸಮ್ಮೇಳನವು ಮಂಗಳೂರಿನ ಸಮುದ್ರದ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಅದ್ದೂರಿಯಾಗಿ ಜರುಗಿತು. ಸಮಾರಂಭದ ಸಭಾಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ಅವರು

ಮಂಗಳೂರಿನ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಸಾಹಿತಿ ಭೀಮರಾವ್ ವಾಷ್ಠರ್ ಅವರ 48ನೇ ಜನ್ಮದಿನ ಸಂಭ್ರಮ|ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾಸಮ್ಮೇಳನ Read More »

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆ ದರೋಡೆ ಪ್ರಕರಣ| ನಾಲ್ವರು ವಶಕ್ಕೆ, ಉಳಿದವರಿಗೆ ಬಲೆ ಬೀಸಿದ ಖಾಕಿ ಪಡೆ

ಸಮಗ್ರ ನ್ಯೂಸ್ : ಬಂಟ್ವಾಳ ತಾಲೂಕಿನ ವಿಟ್ಲ‌ ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಗೆ ನುಗ್ಗಿದ ದರೋಡೆಕೋರರು ಚಿನ್ನ ಹಾಗೂ ನಗದು ದೋಚಿದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತು ದ.ಕ.ಜಿಲ್ಲಾ ವಿಶೇಷ ಕ್ರೈಂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಲ್ಕು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಬಲೆ ಬಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಡ್ಯನಡ್ಕದ ಕರ್ಣಾಟಕ ಬ್ಯಾಂಕ್ ನಲ್ಲಿ ಫೆ.7 ರಂದು ಕಟ್ಟಡದ ಹಿಂಬದಿಯ ಕಿಟಕಿ ಒಡೆದು

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆ ದರೋಡೆ ಪ್ರಕರಣ| ನಾಲ್ವರು ವಶಕ್ಕೆ, ಉಳಿದವರಿಗೆ ಬಲೆ ಬೀಸಿದ ಖಾಕಿ ಪಡೆ Read More »