ಕರಾವಳಿ

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬAಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟçದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್‌ನಲ್ಲಿ ಇಳಿದು, ಎಟಿಎಂ ಹಣ

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು Read More »

ಕೊನೇ ಕ್ಷಣದ ಬದಲಾವಣೆ ನಡೆಯದಿದ್ದರೆ ನಳಿನ್ ಕುಮಾರ್ ಕಟೀಲ್‌ಗೆ ಎಂಪಿ ಟಿಕೆಟ್ ಫಿಕ್ಸ್!

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ಟಿಕೆಟ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಕೋರ್ ಕಮಿಟಿ ಸಭೆಯಲ್ಲಿ ನಳಿನ್‌ಗೆ ಮತ್ತೆ ಟಿಕೆಟ್ ಕೊಡಿಸುವ ಬಗ್ಗೆ ಪ್ರಸ್ತಾಪವಾಗಿದೆ ಎನ್ನಲಾಗಿದೆ. ಇಂದು ಸಂಜೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಕೊನೆ ಹಂತದ ಬದಲವಾಣೆ ನಡೆಯದೇ ಇದ್ದರೆ ನಳಿನ್‌ಗೆ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಆದರೆ ಕೊನೆ ಹಂತದಲ್ಲಿ ನಾಯಕರು ಬದಲಾವಣೆ ಬಯಸಿದರೆ ಮಾತ್ರ ಹೊಸ ಮುಖಗಳಿಗೆ ಮಣೆ ಹಾಕುವ

ಕೊನೇ ಕ್ಷಣದ ಬದಲಾವಣೆ ನಡೆಯದಿದ್ದರೆ ನಳಿನ್ ಕುಮಾರ್ ಕಟೀಲ್‌ಗೆ ಎಂಪಿ ಟಿಕೆಟ್ ಫಿಕ್ಸ್! Read More »

ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ

ಸಮಗ್ರ ನ್ಯೂಸ್ : ಬಜಪೆ ಪೇಟೆಯಲ್ಲಿ ಐತಿಹಾಸಿಕ ಶಾರದೋತ್ಸವ ಸಹಿತ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದ ಸಾರ್ವಜನಿಕ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರು ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಿರೋಧ ವ್ಯಕ್ತಪಡಿಸುತ್ತಿದ್ದು, ಇಂದಿರಾ ಕ್ಯಾಂಟೀನ್ ಅನ್ನು ಬೇರೆ ಸ್ಥಳದಲ್ಲಿ ನಿರ್ಮಿಸುವಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದಿರಾ ಕ್ಯಾಂಟಿನ್‍ಗೆ ತಾಲ್ಲೂಕು ಪಂಚಾಯಿತಿಯ ಜಾಗ ತೋರಿಸಿದರು ಆ ಜಾಗ ಬೇಡ ಕೇಂದ್ರ ಮೈದಾನದ ಬದಿಯಲ್ಲೇ

ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ Read More »

ಕಟಪಾಡಿ: ಚಾಲಕನ ನಿರ್ಲಕ್ಷ್ಯದಿಂದ ಮೋರಿಗೆ ಬಿದ್ದ ಕಾರು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮೋರಿಗೆ ಬಿದ್ದು, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಾ.9ರ ಶನಿವಾರ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾಶ್ರ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ ಮೋರಿಗೆ ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ

ಕಟಪಾಡಿ: ಚಾಲಕನ ನಿರ್ಲಕ್ಷ್ಯದಿಂದ ಮೋರಿಗೆ ಬಿದ್ದ ಕಾರು Read More »

ಉಡುಪಿ : ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು

ಸಮಗ್ರ ನ್ಯೂಸ್ : ಬೈಕೊಂದು ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಬೈಕ್ ಸವಾರ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಇದರ ಪರಿಣಾಮ

ಉಡುಪಿ : ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು Read More »

ಉಡುಪಿ ಚಿಕ್ಕಮಗಳೂರಿನಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ– ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಸ್ಪೋಟಕ ಮಾಹಿತಿಯನ್ನು ನೀಡಿದ್ದು, ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ನಮ್ಮ ಬಗ್ಗೆ ವಿರೋಧ ವ್ಯಕ್ತವಾದರೆ ಕೇಂದ್ರದ ನಾಯಕರು ನಾವು ಮಾಡಿರುವ ಕೆಲಸದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ ಅದು ನನಗೆ ಅನುಕೂಲವಾಗುತ್ತೆ ಎಂದ ಅವರು ಇಲ್ಲವಾದರೆ

ಉಡುಪಿ ಚಿಕ್ಕಮಗಳೂರಿನಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ– ಶೋಭಾ ಕರಂದ್ಲಾಜೆ Read More »

ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ

ಸಮಗ್ರ ನ್ಯೂಸ್ : ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆರೂರಿನ ರಾಕೇಶ್ ಅವರು ಸ್ಕೂಟರ್‌ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ ರಮಿತಾ ಅವರು ತನ್ನ ಕಾರನ್ನು ಬ್ರಹ್ಮಗಿರಿ ಕಡೆಯಿಂದ ಚಲಾಯಿಸಿಕೊಂಡು ಬಂದು ಹುತಾತ್ಮರ ಸ್ಮಾರಕದ ಬಳಿ ಹಠಾತ್ ಯು ಟರ್ನ್ ಮಾಡಿದ ಪರಿಣಾಮ ಸ್ಕೂಟರ್ ಸವಾರ ಬಿದ್ದು ಗಾಯಗೊಂಡರು. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ Read More »

ಬಂಟ್ವಾಳ: ಲಾರಿ-ಖಾಸಗಿ ಬಸ್ ಅಪಘಾತ| ಲಾರಿ ಚಾಲಕ ಗಂಭೀರ

ಸಮಗ್ರ ನ್ಯೂಸ್ : ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಿ.ಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಬಸ್‌ನಲ್ಲಿ ಕಾಲೇಜಿಗೆ

ಬಂಟ್ವಾಳ: ಲಾರಿ-ಖಾಸಗಿ ಬಸ್ ಅಪಘಾತ| ಲಾರಿ ಚಾಲಕ ಗಂಭೀರ Read More »

ಅಂಜಲಿ ಮೊಂಟೇಸ್ಸರಿ ಸ್ಕೂಲ್ ನಲ್ಲಿ ಎ. 1 ರಿಂದ 8 ಚಿಣ್ಣರ ಕಲರವ-2024

ಸಮಗ್ರ ನ್ಯೂಸ್: ಅಂಜಲಿ ಮೊಂಟೇಸ್ಸರಿ ಸ್ಕೂಲ್ ಪ್ರಸ್ತುತಪಡಿಸುವ ಮೂರನೇ ವರ್ಷದ ಚಿಣ್ಣರ ಕಲರವ 2024 ಎ. 1ರಿಂದ 8ರವರೆಗೆ ಸುಳ್ಯ ವರ್ತಕ ಸಮುದಾಯ ಭವನ ಅಂಬಟಡ್ಕದಲ್ಲಿ ನಡೆಯಲಿದೆ. 7-14 ವರ್ಷದವರೆಗಿನ ಮಕ್ಕಳಿಗಾಗಿ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರು ಮಾ. 21ರ ಒಳಗಾಗಿ ನೊಂದಾವಣೆ ಮಾಡಿಕೊಳ್ಳಬಹುದಾಗಿರುತ್ತದೆ. ಮಕ್ಕಳಿಗಾಗಿ ಯೋಗ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯಗಳು, ಅಡುಗೆ, ಮೆಹಂದಿ ವಿನ್ಯಾಸ, ಮುಖವರ್ಣಿಕೆ, ಭಜನೆ, ನೃತ್ಯ, ಕಲೆ ಮತ್ತು ಕರಕುಶಲ, ಗಣಿತದೊಂದಿಗೆ ವಿನೋದ, ಇಂಗ್ಲಿಷ್‌ನೊಂದಿಗೆ ವಿನೋದ, ನಾಟಕ, ತಮಾಷೆಯ ಆಟಗಳು, ಟ್ಯಾಲೆಂಟ್ ಶೋ,

ಅಂಜಲಿ ಮೊಂಟೇಸ್ಸರಿ ಸ್ಕೂಲ್ ನಲ್ಲಿ ಎ. 1 ರಿಂದ 8 ಚಿಣ್ಣರ ಕಲರವ-2024 Read More »

ವಿಟ್ಲ: ಎರಡು ಮಕ್ಕಳ ತಾಯಿ ನಾಪತ್ತೆ – ಲವ್ ಜಿಹಾದ್ ಶಂಕೆ

ಸಮಗ್ರ ನ್ಯೂಸ್ : ವಿಟ್ಲಪಡೂರು ಗ್ರಾಮದ ಪರ್ತಿಪ್ಪಾಡಿಯ ಎರಡು ಮಕ್ಕಳ ತಾಯಿ ನಾಪತ್ತೆಯಾದ ಘಟನೆ ನಡೆದಿದೆ. ಮಹಿಳೆಯ ಪತಿ ನಿಧನ ಹೊಂದಿದ್ದು, ಈಕೆ ನಾಪತ್ತೆಯಾಗುತ್ತಿದ್ದಂತೆ ಈಕೆಯ ಪುತ್ರ 2 ದಿನಗಳ ಹಿಂದೆ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಆದರೆ ಈ ವರೆಗೆ ಮಾಹಿತಿ ದೊರೆತಿಲ್ಲ. ಈಕೆ ಸಜೀಪ ಮೂಲದ ಅನ್ಯ ಕೋಮಿಗೆ ಸೇರಿದ ನಾಲ್ಕು ಮಕ್ಕಳ ತಂದೆಯ ಜತೆಗೆ ಪರಾರಿಯಾಗಿದ್ದಾಳೆಂದು ಹಾಗೂ ವಶೀಕರಣ ಮಾಡಿ ವಿಧವೆ ಮಹಿಳೆಯನ್ನು ಬಲೆಗೆ ಬೀಳಿಸಲಾಗಿದೆ ಎಂಬ ಮಾತು ಕುಟುಂಬ ಸದಸ್ಯರಿಂದ ಆರೋಪ

ವಿಟ್ಲ: ಎರಡು ಮಕ್ಕಳ ತಾಯಿ ನಾಪತ್ತೆ – ಲವ್ ಜಿಹಾದ್ ಶಂಕೆ Read More »