ಕರಾವಳಿ

ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ| ಸ್ಪರ್ಧೆ ಸ್ಪಷ್ಟಪಡಿಸಿದ ಪುತ್ತಿಲ‌ ಪರಿವಾರ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಪುತ್ತಿಲ ಪರಿವಾರ ಸಂಘಟನೆಯ ನಡುವಿನ ಮಾತುಕತೆ ಫಲಪ್ರದ ಆಗದೇ ಇರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಅರುಣ್‌ಕುಮಾರ್ ಪುತ್ತಿಲ, ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತ ತಿಳಿಸಿದ್ದಾರೆ. ಗುರುವಾರ ಪುತ್ತೂರಿನಲ್ಲಿ ಮಾತನಾಡಿದ ಅವರು, ‘ಮುಂದಿನ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸಂಘಟನೆ ಜಿಲ್ಲೆಯಲ್ಲಿ ಸ್ಪರ್ಧಿಸುತ್ತದೆ. ಮಾತೃಪಕ್ಷವಾದ ಬಿಜೆಪಿ ಜತೆ ‌ಪುತ್ತಿಲ ಪರಿವಾರ ವಿಲೀನ ಮಾಡಲು ನಮ್ಮದು ಅಭ್ಯಂತರ ಇರಲಿಲ್ಲ. ಕಾರ್ಯಕರ್ತರ ಭಾವನೆಗೆ ಬೆಲೆಕೊಟ್ಟು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು […]

ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ| ಸ್ಪರ್ಧೆ ಸ್ಪಷ್ಟಪಡಿಸಿದ ಪುತ್ತಿಲ‌ ಪರಿವಾರ Read More »

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಸಿದ್ದತೆ| ಮಾ.11ರಂದು ಮತದಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಮಾ.11ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಫೆ.26ರಿಂದ ಪ್ರಾರಂಭಗೊಂಡಿದ್ದು, ನಾಮಪತ್ರ ಸಲ್ಲಿಸಲು ಮಾ. 3 ಅಂತಿಮ ದಿನವಾಗಿದೆ. ಮಾ.4ರಂದು ನಾಮಪತ್ರ ಪರಿಶೀಲನೆ, ಮಾ.5ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಅದೇ ದಿನ ರಿಟರ್ನಿಂಗ್‌ ಅಧಿಕಾರಿಯವರು ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನೀಡಲಿದ್ದಾರೆ. ಮಾ.11ರಂದು ಮಂಗಳೂರಿನ ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಸಿದ್ದತೆ| ಮಾ.11ರಂದು ಮತದಾನ Read More »

ಸುಳ್ಯದ ಇಬ್ಬರು ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಭಾಗ್ಯ| ಮಾ.1ರಂದು ಹಳ್ಳಿಯಿಂದ ದಿಲ್ಲಿಗೆ ಪಯಣ

ಸಮಗ್ರ ನ್ಯೂಸ್: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆಯ ‘ಸಂಜೀವಿನೀ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿರುವ ಯೋಜನೆಯಡಿ ಸುಳ್ಯ ತಾಲೂಕಿನ ಇಬ್ಬರಿಗೆ ರಾಷ್ಟ್ರಪತಿ ಭೇಟಿಯ ಭಾಗ್ಯ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕದಿಂದ ಒಟ್ಟು 35 ಮಂದಿ ದೆಹಲಿಗೆ ತೆರಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಕೊರಗ ಸಮುದಾಯಕ್ಕೆ ಸೇರಿದ ಬೆಂಡೋಡಿಯ ಮೀನಾಕ್ಷಿ ಹಾಗೂ ವನಿತಾ ರಾಷ್ಟ್ರಪತಿ ಭೇಟಿ

ಸುಳ್ಯದ ಇಬ್ಬರು ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಭಾಗ್ಯ| ಮಾ.1ರಂದು ಹಳ್ಳಿಯಿಂದ ದಿಲ್ಲಿಗೆ ಪಯಣ Read More »

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಎಸ್.ಎಸ್.ಎಲ್.ಸಿ. ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಬಳಿಕ ನಾಪತ್ತೆಯಾಗಿದ್ದರು. ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಅವರ ಶವ ಪತ್ತೆಯಾಗಿದೆ. ಇವರು ಸುರತ್ಕಲ್ ನ ವಿದ್ಯಾದಾಯಿನಿ ಶಾಲೆಯ ವಿದ್ಯಾರ್ಥಿಗಳು. ಇವರ ಮೃತದೇಹಗಳು ಹಳೆಯಂಗಡಿ ಸಮೀಪ ನದಿಯಲ್ಲಿ ಪತ್ತೆಯಾಗಿವೆ. ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರೀಕ್ಷೆ ಮುಗಿದ ನಂತರ ಈಜಲು

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ Read More »

ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಕರಾವಳಿ ಭಾಗದ ಪ್ರಮುಖ ದೇವಸ್ಥಾನ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ ನೀಡಲಾಗಿದೆ. ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿ ವಿಶೇಷ ಸೂಚನೆ ನೀಡಿದೆ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ತಂಗಲು ದೇವಾಲಯ ಆಡಳಿತ ಮಂಡಳಿಗೆ ಒಳಪಟ್ಟ ವಿವಿಧ ವಸತಿಗೃಹಗಳ ವೆಬ್‌ಸೈಟ್‌ ಮೂಲಕ

ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು… Read More »

ಕುಕ್ಕೆ ಸುಬ್ರಹ್ಮಣ್ಯ: ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿನಾಯಿ!!

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿಯುವುದನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ್ದರು. ಆಗ ಮಗು ರಸ್ತೆಯ ಬದಿಗೆ ಬಂದಿದ್ದು, ಅದೇ ಸಮಯಕ್ಕೆ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ಮಗು ಇನ್ನೇನು ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ

ಕುಕ್ಕೆ ಸುಬ್ರಹ್ಮಣ್ಯ: ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿನಾಯಿ!! Read More »

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ

Samagra news: ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್​ಗೂ ರೂಮ್ ಕಡೆ ಬಾರದಂತೆ ತಿಳಿಸಿ ಚೈತ್ರಾ ಪರಾರಿಯಾಗಿದ್ದರು. 2017ರಿಂದಲೇ ಶಾರೂಖ್ ಜೊತೆ ಚೈತ್ರಾಗೆ ನಂಟು ಇತ್ತು ಎನ್ನಲಾಗಿದೆ. ಬೆಂಗಳೂರಿಗೆ

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ Read More »

ಕಡಬ: ನೈತಿಕ ಪೊಲೀಸ್ ಗಿರಿ| ನಾಲ್ವರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮನೆಯ ಬಳಿ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವ ಆರೋಪದ ಮೇಲೆ ಕಡಬ ಪೊಲೀಸರು ನಾಲ್ವರನ್ನು ಫೆ.22ರಂದು ರಾತ್ರಿ ಬಂಧಿಸಿದ್ದಾರೆ. ಮರ್ದಾಳ ಶಿವಾಜಿನಗರ ನಿವಾಸಿ ದಿ| ಇಲ್ಯಾಸ್‌ ಅವರ ಪುತ್ರ ಫಯಾಜ್‌ ಅವರು ಗುರುವಾರ ಸಂಜೆ ನನ್ನ ತಾಯಿ ಮತ್ತು ಸಹೋದರರೊಂದಿಗೆ ಮನೆಯಲ್ಲಿದ್ದಾಗ ಅಪರಿಚಿತ ಮಹಿಳೆಯೊಬ್ಬಳು ಚಿಕ್ಕ ಮಗುವನ್ನು ಎತ್ತಿಕೊಂಡು ಬಂದಿದ್ದು, ರಿಯಾಝ್ನ ಮನೆ ಯಾವುದು ಎಂದು ಕೇಳಿದರು. ಅವರು ಇದು ರಿಯಾಝ್ನ ಮನೆ ಅಲ್ಲ ಎಂದರು ಮಹಿಳೆ ಅಳುತ್ತಾ ನಿಂತಾಗ ಅವರ ತಾಯಿ

ಕಡಬ: ನೈತಿಕ ಪೊಲೀಸ್ ಗಿರಿ| ನಾಲ್ವರು ಆರೋಪಿಗಳ ಬಂಧನ Read More »

ಅರಂತೋಡು: ಜಮಾಅತ್ ವತಿಯಿಂದ ಉಮ್ರಾ ಯಾತ್ರಿ ಇಬ್ರಾಹಿಂ ಕುಕ್ಕುಂಬಳರವರಿಗೆ ಬೀಳ್ಕೊಡುಗೆ

ಸಮಗ್ರ ನ್ಯೂಸ್: ಅರಂತೋಡು ಜುಮಾ ಮಸೀದಿಯ ದಿಕ್ರ್ ಸ್ವಲಾತ್ ಸಮಿತಿಯ ಉಪಾಧ್ಯಕ್ಷ ಕೆ.ಎಸ್. ಇಬ್ರಾಹಿಂ ಕುಕ್ಕುಂಬಳ ಬಿಳಿಯಾರ್ ರವರು ಪವಿತ್ರ ಉಮ್ರಾ ನಿರ್ವಹಿಸಲು ಪ್ರಯಾಣ ಬೆಳೆಸಿದ್ದು ಅವರನ್ನು ಅರಂತೋಡು ಜಮಾಅತ್ ಸಮಿತಿ ವತಿಯಿಂದ ಬೀಳ್ಕೊಡುಗೆ ಮಾಡಲಾಯಿತು. ಸದರ್ ಬಹು| ನೌಶಾದ್ ಅಝ್ ಹರಿ ದುವಾ ನೆರವೇರಿಸಿದರು. ಬಹು| ಶಾಫಿ ಮುಸ್ಲಿಯಾರ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕೋಶಾಧಿಕಾರಿ ಕೆ.ಎಂ. ಅಬೂಬಕ್ಕರ್ ಪಾರೆಕ್ಕಲ್, ಎ.ಹನೀಫ್, ಕೆ.ಎಂ. ಮೊಯಿದು ಕುಕ್ಕುಂಬಳ, ಅಮೀರ್ ಕುಕ್ಕುಂಬಳ, ಸಂಶುದ್ಧೀನ್ ಪೆಲ್ತಡ್ಕ, ಮುಜೀಬ್ ಅರಂತೋಡು, ಸಂಶುದ್ಧೀನ್

ಅರಂತೋಡು: ಜಮಾಅತ್ ವತಿಯಿಂದ ಉಮ್ರಾ ಯಾತ್ರಿ ಇಬ್ರಾಹಿಂ ಕುಕ್ಕುಂಬಳರವರಿಗೆ ಬೀಳ್ಕೊಡುಗೆ Read More »

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ! Read More »