ಕರಾವಳಿ

ಅತೀ ಕಿರಿಯ ನ್ಯಾಯಾದೀಶರಾಗಿ ಆಯ್ಕೆಯಾದ ಬಂಟ್ವಾಳದ ಅನಿಲ್ ಜಾನ್ ಸೀಕ್ವೈರಾ| 33 ಅಭ್ಯರ್ಥಿಗಳು ನ್ಯಾಯಾದೀಶರಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸೇಂಟ್‌ ಫಿಲೊಮಿನಾ ಮತ್ತು ಎಸ್‌ಡಿಎಂ ಕಾಲೇಜಿನ ಮಾಜಿ ವಿದ್ಯಾರ್ಥಿ, 25 ವರ್ಷದ ಅನಿಲ್‌ ಜಾನ್‌ ಸೀಕ್ವೈರಾ ಸೇರಿದಂತೆ 33 ಅಭ್ಯರ್ಥಿಗಳು ಸಿವಿಲ್‌ ನ್ಯಾಯಮೂರ್ತಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಪ್ರಕಟಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ. 25ನೇ ವರ್ಷಕ್ಕೆ ಸಿವಿಲ್‌ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿರುವ ಅನಿಲ್‌ ಅವರು ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರು ಎನ್ನಲಾಗಿದೆ. ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು 2004 ಮತ್ತು ತಿದ್ದುಪಡಿ ನಿಯಮಗಳು 2011, […]

ಅತೀ ಕಿರಿಯ ನ್ಯಾಯಾದೀಶರಾಗಿ ಆಯ್ಕೆಯಾದ ಬಂಟ್ವಾಳದ ಅನಿಲ್ ಜಾನ್ ಸೀಕ್ವೈರಾ| 33 ಅಭ್ಯರ್ಥಿಗಳು ನ್ಯಾಯಾದೀಶರಾಗಿ ಆಯ್ಕೆ Read More »

ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು

ಸಮಗ್ರ ನ್ಯೂಸ್: ದುಬೈನಲ್ಲಿ ರಸ್ತೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಯುವತಿ ಮೃತಪಟ್ಟಿದ್ದಾಳೆ. ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ , ಕೋಟೆಕಾರಿನ ಬೀರಿಯ ಕೆಂಪುಮಣ್ಣು ನಿವಾಸಿ ರಾಜೀವಿ ಅವರ ಏಕೈಕ ಪುತ್ರಿ ವಿದಿಶಾ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ವಿದಿಶಾ ದುಬೈನಲ್ಲಿ ವಾಸವಿದ್ದರು. ಪ್ರತಿ ದಿನ ಕಂಪನಿಗೆ ಕ್ಯಾಬ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆದರೆ ಫೆಬ್ರವರಿ 22 ರಂದು ಕ್ಯಾಬ್ ತಪ್ಪಿದ ಕಾರಣಕ್ಕೆ ತಮ್ಮದೇ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ ಕಾರಿನ ನಿಯಂತ್ರಣ

ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು Read More »

ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ವಿಜ್ಞಾನ ಮತ್ತು ಪ್ರಪಂಚ ಜ್ಞಾನ ಇಲಾಖೆ ನೀಡುವ ಇನ್ಸ್ಪೈರ್ ಅವಾರ್ಡ್ ಗೆ ಅಜಿತ್ ಕೃಷ್ಣ ಕೆ. ಆಯ್ಕೆ. ಇವರು ಸುಳ್ಯ ಪಿ.ಎಲ್.ಡಿ. ಬ್ಯಾಂಕ್ ಇಲ್ಲಿನ ಕ್ಷೇತ್ರ ಅಧಿಕಾರಿಯಾಗಿರುವ ದಾಮೋದರ ಎಂ. ಮತ್ತು ಶೀಲಾವತಿ ದಂಪತಿಗಳ ಪುತ್ರ. ಇವರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರ ಸಹಕಾರದಲ್ಲಿ ವಿಜ್ಞಾನ ಶಿಕ್ಷಕಿ ಪೂರ್ಣಿಮಾ ಮಾರ್ಗದರ್ಶನ ನೀಡಿದ್ದಾರೆ.

ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ Read More »

ಸುಳ್ಯ: ಫೆ.24, ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳ ನೇಮೋತ್ಸವ

ಸಮಗ್ರ ನ್ಯೂಸ್: ಪೇರಾಲು ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ ಫೆ. 24ನೇ ಶನಿವಾರದಂದು 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳನೇಮೋತ್ಸವ ಕಾರ್ಯಕ್ರಮ ನಡೆಯಲಿದೆ. ಫೆ. 24ರಂದು ಬೆಳಗ್ಗೆ 8.00 ಕ್ಕೆ ಗಣಪತಿ ಹವನ ಮತ್ತು ನಾಗಪೂಜೆ, 10.00 ರಿಂದ ಶನಿಪೂಜೆ, ಹೂವಿನ ಪೂಜೆ, ಕಲಶ ಸ್ನಾನ, 10.00ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 1.00ಕ್ಕೆ ಅನ್ನಸಂತರ್ಪಣೆ, ಸಂಜೆ 3.00ಕ್ಕೆ ಗುಳಿಗನ ಕೋಲ, ಪ್ರಸಾರ ವಿತರಣೆ, ರಾತ್ರಿ

ಸುಳ್ಯ: ಫೆ.24, ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳ ನೇಮೋತ್ಸವ Read More »

ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಕರೋನ ಸಮಯದಲ್ಲಿ ಸ್ಥಗಿತಗೊಂಡಿದ್ದ ಮುಂಜಾನೆ ಸಮಯದ ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರವನ್ನು ಪುನರಾರಂಭಿಸಲಾಗಿದೆ. ಮಡಿಕೇರಿಯಿಂದ ಬೆಳಗ್ಗೆ 5:30 ಗಂಟೆಗೆ ಹೊರಟು ಮಂಗಳೂರಿಗೆ 9:30 ಗಂಟೆಗೆ ತಲುಪಲಿದೆ. ಮರಳಿ ಮಂಗಳೂರಿನಿಂದ 10:45 ಗಂಟೆಗೆ ಹೊರಟು ಮಡಿಕೇರಿಗೆ 3:00 ಗಂಟೆಗೆ ತಲುಪಲಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಪುನರಾರಂಭ Read More »

ಅರುಣ್ ಪುತ್ತಿಲರನ್ನು ಭೇಟಿಯಾಗಿದ್ದು‌ ನಿಜ – ಬಿ.ವೈ ವಿಜಯೇಂದ್ರ| ಬಿಜೆಪಿಗೆ ಮರಳಿ ಸೇರ್ಪಡೆ ಬಗ್ಗೆ ರಾಜ್ಯಧ್ಯಕ್ಷರು ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಮುಖಂಡ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ. ಬೆಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಅವರಿಗೆ ಸೂಚಿಸಿದ್ದೇನೆ. ಯಾವುದೇ ಷರತ್ತುಗಳು ಬೇಡ. ಪ್ರಧಾನಿ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಪುತ್ತಿಲ ವಿಚಾರವಾಗಿ ದಕ್ಷಿಣ ಕನ್ನಡದ

ಅರುಣ್ ಪುತ್ತಿಲರನ್ನು ಭೇಟಿಯಾಗಿದ್ದು‌ ನಿಜ – ಬಿ.ವೈ ವಿಜಯೇಂದ್ರ| ಬಿಜೆಪಿಗೆ ಮರಳಿ ಸೇರ್ಪಡೆ ಬಗ್ಗೆ ರಾಜ್ಯಧ್ಯಕ್ಷರು ಹೇಳಿದ್ದಿಷ್ಟು… Read More »

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲು ಹೈಕೋರ್ಟ್ ಆದೇಶ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸೌಜನ್ಯ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದು, ಆರೋಪಿಗಳ ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ರಚಿಸಿ ಆರೋಪಿಗಳ ಪತ್ತೆಯಾಗದಂತೆ ಸಾಕ್ಷಿ ನಾಶಪಡಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದು, ಇದೀಗ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐ ತನಿಖಾ ತಂಡಕ್ಕೆ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ನೋಟಿಸ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲು ಹೈಕೋರ್ಟ್ ಆದೇಶ Read More »

ಸುಳ್ಯ: ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ|

ಸಮಗ್ರ ನ್ಯೂಸ್: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಳಿಸಿದ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ಫೆ.22 ರಂದು ನಡೆದಿದೆ. ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪಾರ್ ಆಗಿರುವ ಪದ್ಮಾವತಿ ಅವರು ಇಂದು ಮುಂಜಾನೆ ದುಗಲಡ್ಕ ಸೆಕ್ಷನಿ‌ನ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿದೆ. ಕಾಡು ಹಂದಿಯ ದಾಳಿಯಿಂದ ಮಹಿಳೆಯ ಬೆನ್ನು ಮತ್ತಿತರೆಡೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಸುಳ್ಯ ಸರಕಾರಿ

ಸುಳ್ಯ: ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ| Read More »

ಮಂಗಳೂರು: ಶಾಲೆಯಲ್ಲಿ ಧರ್ಮ ಅವಹೇಳನ ಪ್ರಕರಣ| ಹೇಳಿಕೆ ನೀಡಿದ ವಿದ್ಯಾರ್ಥಿನಿ ತಾಯಿಗೆ ಜೀವ ಬೆದರಿಕೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂಬ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಶಾಲೆಯ ವಿದ್ಯಾರ್ಥಿನಿಯೋರ್ವರ ತಾಯಿ ಕವಿತಾ ಅವರಿಗೆ ಅಪರಿಚಿತರು ಜೀವಬೆದರಿಕೆ ಹಾಕಿರುವ ಕುರಿತಾಗಿ ಕಂಕನಾಡಿ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅಪರಿಚಿತರು ವಾಯ್ಸ ಮೆಸೇಜ್‌ಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಕವಿತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದು ಕತಾರ್‌, ಸೌದಿ ಮೊದಲಾದೆಡೆಗಳಿಂದ ಬೆದರಿಕೆಗಳು ಬಂದಿರುವುದು ಗೊತ್ತಾಗಿದೆ ಎಂದು

ಮಂಗಳೂರು: ಶಾಲೆಯಲ್ಲಿ ಧರ್ಮ ಅವಹೇಳನ ಪ್ರಕರಣ| ಹೇಳಿಕೆ ನೀಡಿದ ವಿದ್ಯಾರ್ಥಿನಿ ತಾಯಿಗೆ ಜೀವ ಬೆದರಿಕೆ Read More »

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!?

ಸಮಗ್ರ ನ್ಯೂಸ್: ಪುತ್ತೂರು ನಗರದ ಹೊರ ವಲಯದ ಮುಕ್ರಂಪಾಡಿ ಜಂಕ್ಷನ್‌ನಲ್ಲಿ ಫೆ. 19ರಂದು ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳು, ಕಲ್ಲೇಗ ಅಕ್ಷಯ್‌ ಕೊಲೆ ಪ್ರಕರಣದ ಆರೋಪಿಯೋರ್ವನ ಸಹೋದರನನ್ನು ಕೊಲ್ಲಲು ಸಂಚು ರೂಪಿಸಿದ ಅಂಶ ಬೆಳಕಿಗೆ ಬಂದಿದೆ. ಕಿಶೋರ್‌ ಪೂಜಾರಿ ಕಲ್ಲಡ್ಕ, ಮನೋಜ್‌, ಆಶಿಕ್‌ ಮತ್ತು ಸನತ್‌ ಕುಮಾರ್‌ ಬಂಧಿತರು. ಈ ಪೈಕಿ ಕಿಶೋರ್‌ ಪೂಜಾರಿಯು ಕೊಲೆ ಪ್ರಕರಣವೊಂದರಲ್ಲಿ ಜೈಲಿನಲಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿ ನಲ್ಲಿ ಬಿಡುಗಡೆ ಗೊಂಡಿದ್ದ. ಆರೋಪಿ ಗಳು

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!? Read More »