ಕರಾವಳಿ

ಒಕ್ಕಲಿಗರಿಗೆ ಪಕ್ಷ ನಾಯಕತ್ವ; ಬಿಜೆಪಿಗೆ ಸವಾಲೊಡ್ಡಿದ ಕಾಂಗ್ರೆಸ್ ?| ದ.ಕ‌ ಲೋಕಸಭಾ ಕ್ಷೇತ್ರದ ಟಿಕೆಟ್ ಸುಳ್ಯದ ಕಿರಣ್ ಬುಡ್ಲೆಗುತ್ತು ‘ಕೈ’ಗೆ!?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಗಣನೆ ಶುರುವಾಗುತ್ತಿರುವಂತೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಹೆಚ್ಚಾಗುತ್ತಿರುವ ನಡುವೆ ದ.ಕ ಲೋಕಸಭಾ ಕ್ಷೇತ್ರದಲ್ಲಿ ಅಚ್ಚರಿಯ ನಡೆಯನ್ನು ಕಾಂಗ್ರೆಸ್ ತೆಗೆದುಕೊಳ್ಳುವ ನಿರ್ಧಾರ ಕೈಗೊಂಡಿದೆ. ತೀರಾ ಕುತೂಹಲದ ಕ್ಷೇತ್ರವಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ನ ಪ್ರಮುಖ ಮೂರು ಅಭ್ಯರ್ಥಿ ಆಕಾಂಕ್ಷಿಗಳ ಪೈಕಿ ಭರವಸೆಯ ಒಕ್ಕಲಿಗ ಗೌಡ ಯುವನಾಯಕ ಸುಳ್ಯ ಮೂಲದ ಕಿರಣ್ ಬುಡ್ಲೆಗುತ್ತು ಹೆಸರು ಪ್ರಬಲ ಚಾಲ್ತಿಯೊಂದಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಒಕ್ಕಲಿಗರಿಗೆ ಪಕ್ಷ ನಾಯಕತ್ವ; ಬಿಜೆಪಿಗೆ ಸವಾಲೊಡ್ಡಿದ ಕಾಂಗ್ರೆಸ್ ?| ದ.ಕ‌ ಲೋಕಸಭಾ ಕ್ಷೇತ್ರದ ಟಿಕೆಟ್ ಸುಳ್ಯದ ಕಿರಣ್ ಬುಡ್ಲೆಗುತ್ತು ‘ಕೈ’ಗೆ!? Read More »

ಕಡಬ: ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಆಯೋಜಿಸಿದ ಮಹಿಳಾ ದಿನಾಚರಣೆಯ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗಿ

ಸಮಗ್ರ ನ್ಯೂಸ್: ರಾಷ್ಟ್ರಿಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದ ದಿನೇಶ್ ಗೌಡ ಬಿಳಿನೆಲೆ ಯವರ ನೇತೃತ್ವದಲ್ಲಿ ಭಾಗವಹಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಹಿಳಾ ಕಾಂಗ್ರೆಸ್ ಮುಖಂಡರುಗಳಾದ

ಕಡಬ: ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಆಯೋಜಿಸಿದ ಮಹಿಳಾ ದಿನಾಚರಣೆಯ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗಿ Read More »

ಚಾರ್ಮಾಡಿ: ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್| ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿಸಿದ ಚಾಲಕ

ಸಮಗ್ರ ನ್ಯೂಸ್: ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 70 ಪ್ರಯಾಣಿಕರ ಜೀವವನ್ನು ಉಳಿಸಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಮಾ. 8ರಂದು ಬೆಳಗ್ಗೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ಫೇಲ್ ಆದುದನ್ನು ಅರಿತ ಚಾಲಕ ಸಮಯಪ್ರಜ್ಞೆಯಿಂದ ರಸ್ತೆಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲುವಂತೆ ಮಾಡಿದ್ದಾನೆ. ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಸ್ ನಿಂತಿದೆ.

ಚಾರ್ಮಾಡಿ: ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್| ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿಸಿದ ಚಾಲಕ Read More »

ಸುಳ್ಯ: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಸಮಗ್ರ ನ್ಯೂಸ್: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುದೀರ್ಘ 31 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಮಾ.12 ರಂದು ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಮಾ.08 ರಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪದ್ಮನಾಭ ಭಟ್ ಮತ್ತು ಚಂದ್ರಾವತಿ ಪಿ. ದಂಪತಿಗಳನ್ನು ಶಾಲು ಹೊದಿಸಿ, ಫಲ-ಪುಷ್ಪ ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪದ್ಮನಾಭ ಭಟ್ ಅವರು ಮಾತನಾಡಿ ತಾನು ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿಕೊಂಡು

ಸುಳ್ಯ: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ ಪದ್ಮನಾಭ ಭಟ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ Read More »

ಸಂತ ಜೆರೋಸಾ ಶಾಲೆಯಲ್ಲಿ ಶ್ರೀ ರಾಮನ ಅವಮಾನ ಪ್ರಕರಣ| ತನಿಖಾ ವರದಿ ಸಿದ್ಧ

ಸಮಗ್ರ ನ್ಯೂಸ್: ನಗರದ ವೆಲೆನ್ಸಿಯಾದ ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕಿಯೊಬ್ಬರು ಶ್ರೀರಾಮನ ಬಗ್ಗೆ ತೀರಾ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಕುರಿತು ತನಿಖಾಧಿಕಾರಿಗಳು ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ನಂತರ ಆ ಅಧಿಕಾರಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ಆಕಾಶ ಶಂಕರ್ ರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಿದ್ದು, ಡಾ.ಆಕಾಶ್ ಶಂಕರ್ ರವರು ತನಿಖೆ ನಡೆಸಿ ತನಿಖಾ ವರದಿಯನ್ನು ಇಲಾಖೆಯ ಮುಖ್ಯ

ಸಂತ ಜೆರೋಸಾ ಶಾಲೆಯಲ್ಲಿ ಶ್ರೀ ರಾಮನ ಅವಮಾನ ಪ್ರಕರಣ| ತನಿಖಾ ವರದಿ ಸಿದ್ಧ Read More »

ಉಡುಪಿ: ಬಿಸಿಲ ಬೇಗೆ ತೀವ್ರತೆ, ಸೊರಗಿದ ಸ್ವರ್ಣ ನದಿ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಉಡುಪಿ ಜಿಲ್ಲೆಯ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಜೀವನದಿ ಸ್ವರ್ಣೆಯೂ ಬಿಸಿಲಿನ ತಾಪಕ್ಕೆ ಬಸವಳಿದಿದ್ದು ನೀರಿನ ಹರಿವು ಕಡಿಮೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ಪ್ರಮುಖ ಅಣೆಕಟ್ಟಾಗಿರುವ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹಣಾ ಮಟ್ಟವೂ ತಗ್ಗುತ್ತಿದೆ. ಬಿಸಿಲ ಬೇಗೆಯು ತೀವ್ರವಾಗಿದ್ದು, ನಗರಸಭೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಾರ್ಚ್ ಆರಂಭದಲ್ಲಿಯೇ ನೀರಿನ ಬೇಡಿಕೆ ಹೆಚ್ಚಿರುವುದು ನಗರಸಭೆಯ ಗೊಂದಲಕ್ಕೆ ಕಾರಣವಾಗಿದೆ. ಉಡುಪಿ

ಉಡುಪಿ: ಬಿಸಿಲ ಬೇಗೆ ತೀವ್ರತೆ, ಸೊರಗಿದ ಸ್ವರ್ಣ ನದಿ Read More »

ಆಲಿ ವಿರುದ್ಧ ಮಾಡಿರುವ ಆರೋಪ ಸುಳ್ಳಾದರೆ ಕಾಂಗ್ರಸ್ ಪಕ್ಷದಿಂದ ನಿವೃತ್ತಿ: ಇಸಾಕ್ ಸಾಲ್ಮರ

ಸಮಗ್ರ ನ್ಯೂಸ್: ಬಡ ಜನರಿಗೆ ನೀಡಲಾಗುವ 5 ಮನೆ ನಿವೇಶನಗಳನ್ನು ಮಹಮ್ಮದ್ ಆಲಿಯವರು ದುರುಪಯೋಗ ಮಾಡಿದ್ದಾರೆಂದು ಆರೋಪಿಸಿ ಸಂಬAಧಿಸಿ ಇಲಾಖೆಗೆ ನೀಡಿದ ದೂರು ಮತ್ತು ಕೆಮ್ಮಿಂಜೆ ಗ್ರಾಮದ ಎರಡು ಹಕ್ಕುಪತ್ರದಲ್ಲಿ ಪುರಸಭೆಯಿಂದ ಪರವಾನಿಗೆ ಪಡೆಯದೇ ಪೌಂಢೇಶನ್ ಹಾಕುವ ಕೆಲಸ ಮಾಡಿರುವುದು ಸುಳ್ಳಾದರೆ ನಾನು ಕಾಂಗ್ರಸ್ ಪಕ್ಷದಿಂದ ಸಾಮಾಜಿಕ ಕ್ಷೇತ್ರದಿಂದ ನಿವೃತ್ತಿ ಹೊಂದಲಿದ್ದೇನೆ. ಈ ಕುರಿತು ನಾನು ನಂಬುವ ಮತ್ತು ಅವರು ನಂಬುವ ಸ್ಥಳಕ್ಕೆ ಬಂದು ಪ್ರಮಾಣ ಮಾಡಲು ಸಿದ್ಧ ಎಂದು ಇಸಾಕ್ ಸಾಲ್ಮರ ಅವರು ಪತ್ರಿಕಾಗೋಷ್ಟಿಯಲ್ಲಿ ಸವಾಲು

ಆಲಿ ವಿರುದ್ಧ ಮಾಡಿರುವ ಆರೋಪ ಸುಳ್ಳಾದರೆ ಕಾಂಗ್ರಸ್ ಪಕ್ಷದಿಂದ ನಿವೃತ್ತಿ: ಇಸಾಕ್ ಸಾಲ್ಮರ Read More »

ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ಮೃತ್ಯು

ಸಮಗ್ರ ನ್ಯೂಸ್: ಶಿವರಾತ್ರಿ ದಿನದಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಮೃತಪಟ್ಟಿರುವ ಘಟನೆ ನಡೆದಿದೆ. ಆನೆ ಲತಾಗೆ 60 ವರ್ಷ ವಯಸ್ಸಾಗಿತ್ತು. ಇಂದು ಮಧ್ಯಾಹ್ನದ ವೇಳೆ ಲತಾ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ 50 ವರ್ಷಗಳಿಂದ ಆನೆ ಲತಾ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿತ್ತು. ಲತಾ ಸುಮಾರು 50 ವರ್ಷಗಳಿಂದ ಧರ್ಮಸ್ಥಳ ಜಾತ್ರಾಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಭಕ್ತರ ಗಮನವನ್ನು ತನ್ನತ್ತ ಸೆಳೆಯುತ್ತಿತ್ತು. ಧರ್ಮಸ್ಥಳದಲ್ಲಿ ಪ್ರಸ್ತುತ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎಂಬ ಹೆಸರಿನ ಆನೆಗಳಿದ್ದು, ಲತಾ

ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ಮೃತ್ಯು Read More »

ಉಡುಪಿ: ಭಕ್ತರನ್ನು ಸೆಳೆಯುತ್ತಿದೆ ಶಿವನ ಮರಳುಶಿಲ್ಪ

ಸಮಗ್ರ ನ್ಯೂಸ್: ಮಹಾ ಶಿವರಾತ್ರಿಯ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮುರ್ಡೇಶ್ವರ ಸನ್ನಿದಾನದಲ್ಲಿ ವಿಶೇಷ ಸ್ಯಾಂಡ್ ಆರ್ಟ್ ರಚಿಸಲಾಗಿದೆ. ಶಿವರಾತ್ರಿಯ ಪ್ರಯುಕ್ತ ನಡೆಯುತ್ತಿರುವ ವಿಶೇಷ ಪ್ರದರ್ಶನ ಪ್ರದರ್ಶನ ದಲ್ಲಿ “ಓಂ ನಮಃ ಶಿವಾಯ” ಎಂಬ ಮಂತ್ರ ಧೈಯದೊಂದಿಗೆ ಕಲಾಕೃತಿಯೊಂದನ್ನು ರಚಿಸಲಾಗಿದ್ದು, ಉಡುಪಿಯ ‘ಸ್ಯಾಂಡ್ ಥೀಮ್’ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಪ್ರಸಾದ್ ಆರ್. ಅವರಿಂದ ರಚಿತಗೊಂಡ ಮರಳು ಶಿಲ್ಪಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಉಡುಪಿ: ಭಕ್ತರನ್ನು ಸೆಳೆಯುತ್ತಿದೆ ಶಿವನ ಮರಳುಶಿಲ್ಪ Read More »

ಉಪ್ಪಿನಂಗಡಿ: ಶಾಲೆಗೆ ನುಗ್ಗಿದ ಕಳ್ಳರು| 1500 ರೂ.ಯೊಂದಿಗೆ ಪರಾರಿ

ಸಮಗ್ರ ನ್ಯೂಸ್: ಶಾಲೆಯ ಬೀಗ ಒಡೆದು ಕಳ್ಳರು ನುಗ್ಗಿದ ಘಟನೆ ನಿನ್ನೆ ರಾತ್ರಿ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಕಪಾಟಿನಲ್ಲಿದ್ದ 1500 ರೂಪಾಯಿಗಳೊಂದಿಗೆ ಕಳ್ಳರು ಪರಾರಿಯಾಗಿದ್ದಾರೆ. ಇಂದು ಶಾಲೆಗೆ ಬಂದ ಮುಖ್ಯೋಪಾಧ್ಯಾಯಿನಿ ಶಾಲೆಯ ಬೀಗ ಒಡೆದಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯ ಪುಡಿ ಕಳ್ಳರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಶಾಲೆಯ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ

ಉಪ್ಪಿನಂಗಡಿ: ಶಾಲೆಗೆ ನುಗ್ಗಿದ ಕಳ್ಳರು| 1500 ರೂ.ಯೊಂದಿಗೆ ಪರಾರಿ Read More »