ಕರಾವಳಿ

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​

ಸಮಗ್ರ ನ್ಯೂಸ್: ರಾಮನಗರದ 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ಅಹೋ ರಾತ್ರಿ ಪ್ರತಿಭಟನೆ ನಡೆಸಿ ಇಂದಿಗೆ ಮೂರನೇ ದಿನಕ್ಕೂ ಕಾಲಿಡುತ್ತಿದೆ.ಈ ಪ್ರಕರಣ ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಮತ್ತೊಂದೆಡೆ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಲಾಗಿದೆ. 40 ವಕೀಲರ ವಿರುದ್ಧ ಐಜೂರು ಪೊಲೀಸ್ ಠಾಣೆ ಪಿಎಸ್​ಐ ಆಗಿದ್ದ ತನ್ವೀರ್ ಹುಸೇನ್​ ಅವರು ಎಫ್​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರ ಪ್ರತಿಭಟನೆ ಆರಂಭಿಸಿದರು. ವಕೀಲರಿಗೆ ಪ್ರತಿಪಕ್ಷ […]

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​ Read More »

ಗಡಿಭಾಗದಲ್ಲಿನ ಆನೆದಾಳಿಗೆ ಕೇರಳದಿಂದ ಪರಿಹಾರ ತರಿಸಲು ಸಾಧ್ಯವೇ? – ಡಿ.ವಿ ಸದಾನಂದ ಗೌಡ ಪ್ರಶ್ನೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡುತ್ತಿದ್ದು, ಇದಕ್ಕೆ ಕೇರಳ ಸರಕಾರದಿಂದ ಪರಿಹಾರ ತರಿಸಬಹುದೇ ಎಂದು ಕಾಂಗ್ರೆಸ್‌ ಅನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡಿ ಸಾವಿರಾರು ಎಕರೆ ಕೃಷಿ ನಾಶ ಮಾಡುತ್ತಿವೆ. ಈ ಆನೆಗಳು ಕೇರಳ ಭಾಗದಿಂದ ಬರುತ್ತಿರುವುದರಿಂದ ಪರಿಹಾರವನ್ನು ಕೇರಳ ಸರಕಾರದಿಂದ ತರಿಸಿ

ಗಡಿಭಾಗದಲ್ಲಿನ ಆನೆದಾಳಿಗೆ ಕೇರಳದಿಂದ ಪರಿಹಾರ ತರಿಸಲು ಸಾಧ್ಯವೇ? – ಡಿ.ವಿ ಸದಾನಂದ ಗೌಡ ಪ್ರಶ್ನೆ Read More »

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ: ರಿಯಾಝ್ ಫರಂಗಿಪೇಟೆ

ಸಮಗ್ರ ನ್ಯೂಸ್: ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಸೋಶಿಯಲ್ ಧಮಾಕರೆಟಿಕ್ ಪಾರ್ಟಿ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ: ರಿಯಾಝ್ ಫರಂಗಿಪೇಟೆ Read More »

ಸುಳ್ಯ: ಹಾವು ಕಚ್ಚಿದ ಮಹಿಳೆಯ ಚಿಕಿತ್ಸೆಯ ನೆರವಿಗೆ ಮನವಿ

ಸಮಗ್ರ ನ್ಯೂಸ್: ವಿಷದ ಹಾವೊಂದು ಕಚ್ಚಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಣ್ಣ ಮಗುವಿನ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಕಷ್ಟವಾಗಿದ್ದು, ಚಿಕಿತ್ಸೆಗೆ ನೆರವು ನೀಡಬೇಕೆಂದು ಮನೆಯವರು ಮನವಿ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ಕಮಿಲ ಸಮೀಪದ ಹೊಳಕೆರೆ ಮನೆ ಜಗದೀಶ್ ಅವರ ಪತ್ನಿ ಅಶ್ವಿನಿಯವರಿಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರ ಹಾವೊಂದು ಕಚ್ಚಿದೆ. ಇದರಿಂದ ತೀವ್ರ ಅಸ್ವಸ್ಥರಾದ ಅವರನ್ನು ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ಕಾಲನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದ್ದು, ಇದೀಗ ಚಿಕಿತ್ಸೆಗೆ

ಸುಳ್ಯ: ಹಾವು ಕಚ್ಚಿದ ಮಹಿಳೆಯ ಚಿಕಿತ್ಸೆಯ ನೆರವಿಗೆ ಮನವಿ Read More »

ಸುಳ್ಯ: ಹೀಗೊಂದು ಗ್ಯಾಸ್ ಸಿಲಿಂಡರ್ ಕಳ್ಳತನ

ಸಮಗ್ರ ನ್ಯೂಸ್: ಮನೆಯ ಹಿಂಬದಿ ಗ್ಯಾಸ್‌ ಒಲೆಗೆ ಇರಿಸಲಾಗಿದ್ದ ಗ್ಯಾಸ್‌ ಸಿಲಿಂಡರನ್ನು ಕಳವುಗೈದು ತಾನು ತಂದ ಖಾಲಿ ಜಾಡಿಯನ್ನು ಅಲ್ಲಿರಿಸಿ ಹೋಗಿರುವ ಘಟನೆ ಸುಳ್ಯದ ಜಯನಗರದಲ್ಲಿ ಫೆ. 18ರ ರಾತ್ರಿ ಬೆಳಕಿಗೆ ಬಂದಿದೆ. ಜಯನಗರ ನಿವಾಸಿ ದಿ| ನೌಶಾದ್‌ ಅವರ ಮನೆಯ ಹಿಂಬದಿಯಲ್ಲಿ ಗ್ಯಾಸ್‌ ಒಲೆಗೆ ಅಳವಡಿಸಲಾಗಿದ್ದ ಗ್ಯಾಸ್‌ ತುಂಬಿದ್ದ ಸಿಲಿಂಡರ್‌ ಕಳ್ಳತನವಾಗಿದೆ. ಮನೆಯಲ್ಲಿ ಮಹಿಳೆ ಮತ್ತು ಮಕ್ಕಳು ಮಾತ್ರ ಇದ್ದು ಅವರು ಮನೆಯ ಒಳಗೆ ಇದ್ದಾಗಲೇ ಕಳ್ಳ ಇಂಡೇನ್‌ ಕಂಪೆನಿಯ ಸಿಲಿಂಡರನ್ನು ಇರಿಸಿ ನೂತನ ಎಚ್‌ಪಿ

ಸುಳ್ಯ: ಹೀಗೊಂದು ಗ್ಯಾಸ್ ಸಿಲಿಂಡರ್ ಕಳ್ಳತನ Read More »

ಪ್ರಚಾರ ಬಯಸದ ಮೌನ ಸಾಧಕ ಕೆ.ಟಿ.ಗಟ್ಟಿ; ಡಾ | ಮೀನಾಕ್ಷಿ ರಾಮಚಂದ್ರ

ಸಮಗ್ರ ನ್ಯೂಸ್: ಪ್ರಚಾರ ಬಯಸದ ಸಹೃದಯಿ ಕೆ.ಟಿ. ಗಟ್ಟಿಯವರು ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದವರು ಎಂದು ಡಾ।ಮೀನಾಕ್ಷಿ ರಾಮಚಂದ್ರ ಅಭಿಪ್ರಾಯಪಟ್ಟರು. ನಮ್ಮನ್ನಗಲಿದ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿಯವರಿಗೆ, ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕದಿಂದ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ, ರಘು ಇಡ್ಕಿದು, ಬೆನೆಟ್ ಜಿ. ಅಮ್ಮನ್ನ, ನುಡಿ ನಮನ ಸಲ್ಲಿಸಿದರು. ಕೇಂದ್ರ ಪರಿಷತ್ತು

ಪ್ರಚಾರ ಬಯಸದ ಮೌನ ಸಾಧಕ ಕೆ.ಟಿ.ಗಟ್ಟಿ; ಡಾ | ಮೀನಾಕ್ಷಿ ರಾಮಚಂದ್ರ Read More »

ಅರಂತೋಡಿನಲ್ಲಿ ಎಸ್ ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಯನ್ನು ಬದ್ರಿಯಾ ಜುಮಾ ಮಸೀದಿ ವಠಾರ ದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಎಸ್.ಕೆ.ಎಸ್.ಎಸ್.ಎಫ್. ಶಾಖೆ ಅಧ್ಯಕ್ಷ ಜುಬೈರ್ ವಹಿಸಿದರು. ಧ್ವಜಾರೋಹಣವನ್ನು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ ನೆರವೇರಿಸಿ ಶುಭ ಹಾರೈಸಿದರು. ಬಹು ನೌಫಾಲ್ ರಹ್ಮಾನ್ ಅಜ್ಹರಿ ದುವಾ ನೇರವೇರಿಸಿ ಮಾತನಾಡಿ ಸಮಸ್ತ ನಡೆದು ಬಂದ ವಿಷಯವನ್ನು ವಿವರಿಸಿದರು. ಅರಂತೋಡಿನಲ್ಲಿ SKSSF ಸಂಘಟನೆ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಜಮಾ ಆತ್ ನಲ್ಲಿ

ಅರಂತೋಡಿನಲ್ಲಿ ಎಸ್ ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ Read More »

ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!!

ಸಮಗ್ರ ನ್ಯೂಸ್: ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬವರು ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗವೊಂದರಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೂಲದವರಾಗಿದ್ದು, 6 ವರ್ಷಗಳ ಹಿಂದೆ ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಆಗಮಿಸಿ,

ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!! Read More »

ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

ಸಮಗ್ರ ನ್ಯೂಸ್: ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿಸ್ತರಿಸಲು ವಿಕೇಂದ್ರೀಕರಣದ ಧ್ಯೇಯದೊಂದಿಗೆ ಹಾಗು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಮೂಡಿಸಲು ಹೋಬಳಿ ಘಟಕ ಸ್ಥಾಪಿಸುವ ಜೊತೆಗೆ ಗ್ರಾಮ ಮಟ್ಟದಲ್ಲೂ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಾದ ಡಾ. ಶ್ರೀನಾಥ್ ಎಂ.ಪಿ. ಸುಳ್ಯ ಹಾಗು ಪಂಜ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭದಲ್ಲಿ ಮಾತಾನಾಡಿದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ ಕುತ್ಯಾಳ ನಾಗಪ್ಪ ಗೌಡ ಮಾತನಾಡಿ ಸಾಹಿತ್ಯ ಸಮ್ಮೆಲನಗಳ

ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ Read More »

ಅರಂತೋಡು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ

ಸಮಗ್ರ ನ್ಯೂಸ್: ಸಂವಿಧಾನದ 75 ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲೆಯಾಧ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗ್ರತಿ ಜಾಥಾವು ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿದಾಗ ಗ್ರಾಮದ ಆರ್ಲಡ್ಕದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತಿಸಿ ವಾಹನ ಜಾಥಾದೊಂದಿಗೆ ಬರಮಾಡಿಕೊಳ್ಳಲಾಯಿತು. ತೆಕ್ಕಿಲ್ ಸಮುದಾಯ ಭವನದಿಂದ ಪಂಚಾಯತ್ ವಠಾರದವರೆಗೆ ನಾಸಿಕ್ ಬ್ಯಾಂಡ್, ಸ್ಕೌಟ್, ಶಾಲಾ ವಿಧಾರ್ಥಿಗಳು, ಸಂಘ ಸಂಸ್ಥೆಗಳ ಪಧಾಧಿಕಾರಿಗಳು, ವಾಹನ ಮಾಲಕರು ಹಾಗೂ ಸಾರ್ವಜನಿಕರೊಂದಿಗೆ ಅರಂತೋಡು ಪೇಟೆಯ ಮೂಲಕ ಮೆರವಣಿಗೆಯೊಂದಿಗೆ ಆಗಮಿಸಿ ಪಂಚಾಯತ್ ವಠಾರದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ವತಿಯಿಂದ

ಅರಂತೋಡು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ Read More »