ಕರಾವಳಿ

ವೆಂಕಟರಮಣನ ಜಾತ್ರೆಯಲ್ಲಿ ಗಂಜಿ ಊಟವೇ ವೈಶಿಷ್ಟ್ಯ| ಮಂಗಳೂರಿನಲ್ಲೊಂದು ಅಪರೂಪದ ಪರಂಪರೆ

ಸಮಗ್ರ ವಿಶೇಷ: ಅದು ನೂರ ಇಪ್ಪತ್ತೈದು ವರ್ಷಗಳ ಅವಿಚ್ಚಿನ್ನ ಪರಂಪರೆ. ಆ ಬೆಳಗ್ಗಿನ ಗಂಜಿ ಊಟಕ್ಕೆ ಶತಮಾನಗಳ ಇತಿಹಾಸ. ಜನ ರಸ್ತೆಯುದ್ದಕ್ಕೂ ಸರತಿ ಸಾಲಿನಲ್ಲಿ ನಿಂತು ಬೆಳಗ್ಗಿನ ಗಂಜಿಗಾಗಿ ಕಾಯುತ್ತಿರುವ ದೃಶ್ಯ ಕಂಡು ಬಂದಿದ್ದು, ಮಂಗಳೂರಿನ ವಿಟಿ ರೋಡ್‌ನಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ. ಮಂಗಳೂರಿನ ಸುಪ್ರಸಿದ್ಧ ವೆಂಕಟರಮಣ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಯ ಐದು ದಿನ ಬೆಳಗ್ಗಿನ ಗಂಜಿಯನ್ನು ನೀಡಲಾಗುತ್ತದೆ. ಬ್ರಹ್ಮರಥೋತ್ಸವದ ದಿನದಂದು ಮಾತ್ರ ಉದ್ದಿನ ದೋಸೆ, ಕಿಚಡಿಗಳ ಉಪಹಾರವನ್ನು ನೀಡಲಾಗುತ್ತದೆ. ಸಾವಿರಾರು ಜನ […]

ವೆಂಕಟರಮಣನ ಜಾತ್ರೆಯಲ್ಲಿ ಗಂಜಿ ಊಟವೇ ವೈಶಿಷ್ಟ್ಯ| ಮಂಗಳೂರಿನಲ್ಲೊಂದು ಅಪರೂಪದ ಪರಂಪರೆ Read More »

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ಎಂಬ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ ಮಾಡಿದ ಹರೀಶ್ ಪೂಂಜಾ| ಜನಪ್ರತಿನಿಧಿಯಾಗಲು ನಾಲಾಯಕ್: ಎಸ್‌ಡಿಪಿಐ ಆಕ್ರೋಶ

ಸಮಗ್ರ ನ್ಯೂಸ್: ಬಜೆಟ್ ಮಂಡನೆಯ ವಿಚಾರವಾಗಿ ಬಿಜೆಪಿ ಫೆ.17ರಂದು ವಿಧಾನಸೌಧದ ಹೊರಗೆ ಪ್ರತಿಭಟನೆಯ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಾಸಕ ಹರೀಶ್ ಪೂಂಜ “ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ವಿವಾದಾತ್ಮಕ ಪೋಸ್ಟರ್ ಪ್ರದರ್ಶನವು ಸಂವಿಧಾನ ಬಾಹಿರವಾಗಿದೆ. ಇಂತಹ ಕೋಮುವಾದಿ ಮನಸ್ಥಿತಿಯವರು ಜನಪ್ರತಿನಿಧಿಯಾಗಲು ನಾಲಾಯಾಕ್ ಎಂದು SDPI ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿರುವ ಅವರು ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ಎಂಬ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ ಮಾಡಿದ ಹರೀಶ್ ಪೂಂಜಾ| ಜನಪ್ರತಿನಿಧಿಯಾಗಲು ನಾಲಾಯಕ್: ಎಸ್‌ಡಿಪಿಐ ಆಕ್ರೋಶ Read More »

ಸಂವಿಧಾನ ವಿರೋಧಿ ಮನಸ್ಥಿತಿಯ ವ್ಯಕ್ತಿಯಿಂದಲೇ ಸಂವಿಧಾನ ಜಾಗೃತಿ ಮಾಡಿಸುತ್ತಿರುವುದು ಸಂವಿಧಾನಕ್ಕೆ ಮಾಡುವ ಅವಮಾನ: ಎಸ್‌ಡಿಪಿಐ ಖಂಡನೆ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಫೆ.17 ರಂದು ನಡೆಯುವ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂವಿಧಾನ ವಿರೋಧಿ ಮನಸ್ಥಿತಿ ಹೊಂದಿರುವ ಕೊಡಗು ಸಂಪಾಜೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೋಕ್ಯ ನಾಯ್ಕ ಬಿ. ಯವರಿಂದ ಸಾರ್ವಜನಿಕರಿಗೆ ಸಂವಿಧಾನದ ಬಗ್ಗೆ ಮಾಹಿತಿ ಜಾಗೃತಿ ಮೂಡಿಸುತ್ತಿರುವುದು ದುರದೃಷ್ಟಕರ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಪಾಜೆ ಗ್ರಾಮ ಸಮಿತಿ ಆಕ್ರೋಶ

ಸಂವಿಧಾನ ವಿರೋಧಿ ಮನಸ್ಥಿತಿಯ ವ್ಯಕ್ತಿಯಿಂದಲೇ ಸಂವಿಧಾನ ಜಾಗೃತಿ ಮಾಡಿಸುತ್ತಿರುವುದು ಸಂವಿಧಾನಕ್ಕೆ ಮಾಡುವ ಅವಮಾನ: ಎಸ್‌ಡಿಪಿಐ ಖಂಡನೆ Read More »

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಸಮಗ್ರ ನ್ಯೂಸ್: ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು ಆಯೋಜಿಸುತ್ತಿರುವ ಒಕ್ಕಲಿಗರ ಪ್ರೀಮಿಯರ್ ಲೀಗ್ 2024 ಅಂತರ್ ಜಿಲ್ಲಾ ಕ್ರಿಕೆಟ್ ಕೂಟವು ಅಡ್ಯಾರಿನ ಸಹ್ಯಾದ್ರಿ ಇಂಜಿನೀಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಫೆ.18ರಿಂದ ಆರಂಭವಾಗಲಿದೆ. ಕ್ರಿಕೆಟ್ ಕೂಟದ ಉದ್ಘಾಟನೆಯು ಫೆ.18 ರಂದು ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಫೆ.19ರ ಸಂಜೆ ನಡೆಯಲಿದೆ. ಈ ಕೂಟದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ , ಕಾಸರಗೋಡು ಜಿಲ್ಲೆಯ ಒಕ್ಕಲಿಗ ಸಮುದಾಯದ ತಂಡಗಳು ಪಾಲ್ಗೊಳ್ಳಲಿವೆ. ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ Read More »

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷ ಸಮಾವೇಶ ಫೆ.20ರಂದು ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆಯಲಿದೆ. ಸುಳ್ಯದ ಗ್ರಾಂಡ್ ಪರಿವಾರ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಪಕ್ಷ ಸಮಾವೇಶ ನಡೆಯಲಿದೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯು ಜೊತೆ ಕಾರ್ಯದರ್ಶಿಯವರಾದ ಶರೀಫ್ ನಿಂಥಿಕ್ಕಲ್ ರವರು ತಿಳಿಸಿದ್ದಾರೆ.

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ Read More »

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” Read More »

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ ನಡೆಯಲಿದೆ ಎಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ಪಾಟಾಳಿ ಯಾನೆ ಗಾಣಿಗರ ಸಂಘದ ವತಿಯಿಂದ ಪರ್ನೆ ಕಳಿಯಾಟ ಮಹೋತ್ಸವದ ಕುರಿತು ಫೆ. 16ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಹೇಳಿದರು. ಶ್ರೀ ಮುಚ್ಚಿಲೋಟ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ನಡೆದು

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ Read More »

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ

ಸಮಗ್ರ ನ್ಯೂಸ್: ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯ ಇದರ ಬೆಳ್ಳಿಹಬ್ಬದ ಪ್ರಯುಕ್ತ ಸಹ ಸಂಸ್ಥೆ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾ ಸಂಸ್ಥೆಯ 2 ಕೊಠಡಿಯ ಗುದ್ದಲಿ ಪೂಜೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಇತರೆ ಸಹಕಾರಿ ಸಂಘಗಳು, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ-ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ಕ್ರೀಡಾ ಸಮ್ಮಿಲನ ಕಾರ್ಯಕ್ರಮವು ಫೆ.24 ರಂದು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣ ಕೊಡಿಯಾಲಬೈಲಿನಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ಕ್ರೆಡಿಟ್

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಕಾಲೇಜು ವಿದ್ಯಾರ್ಥಿನಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಎಂಬಲ್ಲಿ ನಡೆದಿದೆ. ಇಲ್ಲಿನ‌ ಉದ್ಯಮಿ ದಾವೂದ್‌ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ. ಈಕೆ ಉಪ್ಪಿನಂಗಡಿಯ ಇಂಡಿಯನ್‌ ಸ್ಕೂಲ್‌ನ ಹಳೆವಿದ್ಯಾರ್ಥಿಯಾಗಿದ್ದು, ಪ್ರಸಕ್ತ ಪುತ್ತೂರಿನ ಸೈಂಟ್‌ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಳು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸ ನಿರತಳಾಗಿದ್ದ ಆಕೆ ಬಳಿಕ ನಿದ್ರಿಸಿದ್ದು, ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಎಬ್ಬಿಸಲು

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ Read More »

14ರ ಬಾಲಕ ಓಡಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕುಂಬಳೆ ಪೇಟೆಯಲ್ಲಿ 14 ವಯಸ್ಸಿನ, 9ನೇ ತರಗತಿಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್‌ ಗುದ್ದಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಅಂಗಡಿಮೊಗರು ಪೆರ್ಲಾಡ ನಿವಾಸಿ ಮೈಕ್‌ ಆಪರೇಟರ್‌ ಅಬ್ದುಲ್ಲ ಕುಂಞಿ (60) ಅವರು ಕುಂಬಳೆ ಬಸ್‌ ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ಪೇಟೆಗೆ ತೆರಳುತ್ತಿದ್ದ ವೇಳೆ ಅವರಿಗೆ ಬಾಲಕ ವೇಗವಾಗಿ ಒಡಿಸುತ್ತಿದ್ದ ಬೈಕ್‌ ಗುದ್ದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ್ದಾರೆ.

14ರ ಬಾಲಕ ಓಡಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು Read More »