ಕರಾವಳಿ

ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!!

ಸಮಗ್ರ ನ್ಯೂಸ್: ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬವರು ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗವೊಂದರಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೂಲದವರಾಗಿದ್ದು, 6 ವರ್ಷಗಳ ಹಿಂದೆ ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಆಗಮಿಸಿ, […]

ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!! Read More »

ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

ಸಮಗ್ರ ನ್ಯೂಸ್: ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿಸ್ತರಿಸಲು ವಿಕೇಂದ್ರೀಕರಣದ ಧ್ಯೇಯದೊಂದಿಗೆ ಹಾಗು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಮೂಡಿಸಲು ಹೋಬಳಿ ಘಟಕ ಸ್ಥಾಪಿಸುವ ಜೊತೆಗೆ ಗ್ರಾಮ ಮಟ್ಟದಲ್ಲೂ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಾದ ಡಾ. ಶ್ರೀನಾಥ್ ಎಂ.ಪಿ. ಸುಳ್ಯ ಹಾಗು ಪಂಜ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭದಲ್ಲಿ ಮಾತಾನಾಡಿದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ ಕುತ್ಯಾಳ ನಾಗಪ್ಪ ಗೌಡ ಮಾತನಾಡಿ ಸಾಹಿತ್ಯ ಸಮ್ಮೆಲನಗಳ

ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ Read More »

ಅರಂತೋಡು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ

ಸಮಗ್ರ ನ್ಯೂಸ್: ಸಂವಿಧಾನದ 75 ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲೆಯಾಧ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗ್ರತಿ ಜಾಥಾವು ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿದಾಗ ಗ್ರಾಮದ ಆರ್ಲಡ್ಕದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತಿಸಿ ವಾಹನ ಜಾಥಾದೊಂದಿಗೆ ಬರಮಾಡಿಕೊಳ್ಳಲಾಯಿತು. ತೆಕ್ಕಿಲ್ ಸಮುದಾಯ ಭವನದಿಂದ ಪಂಚಾಯತ್ ವಠಾರದವರೆಗೆ ನಾಸಿಕ್ ಬ್ಯಾಂಡ್, ಸ್ಕೌಟ್, ಶಾಲಾ ವಿಧಾರ್ಥಿಗಳು, ಸಂಘ ಸಂಸ್ಥೆಗಳ ಪಧಾಧಿಕಾರಿಗಳು, ವಾಹನ ಮಾಲಕರು ಹಾಗೂ ಸಾರ್ವಜನಿಕರೊಂದಿಗೆ ಅರಂತೋಡು ಪೇಟೆಯ ಮೂಲಕ ಮೆರವಣಿಗೆಯೊಂದಿಗೆ ಆಗಮಿಸಿ ಪಂಚಾಯತ್ ವಠಾರದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ವತಿಯಿಂದ

ಅರಂತೋಡು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ Read More »

ವೆಂಕಟರಮಣನ ಜಾತ್ರೆಯಲ್ಲಿ ಗಂಜಿ ಊಟವೇ ವೈಶಿಷ್ಟ್ಯ| ಮಂಗಳೂರಿನಲ್ಲೊಂದು ಅಪರೂಪದ ಪರಂಪರೆ

ಸಮಗ್ರ ವಿಶೇಷ: ಅದು ನೂರ ಇಪ್ಪತ್ತೈದು ವರ್ಷಗಳ ಅವಿಚ್ಚಿನ್ನ ಪರಂಪರೆ. ಆ ಬೆಳಗ್ಗಿನ ಗಂಜಿ ಊಟಕ್ಕೆ ಶತಮಾನಗಳ ಇತಿಹಾಸ. ಜನ ರಸ್ತೆಯುದ್ದಕ್ಕೂ ಸರತಿ ಸಾಲಿನಲ್ಲಿ ನಿಂತು ಬೆಳಗ್ಗಿನ ಗಂಜಿಗಾಗಿ ಕಾಯುತ್ತಿರುವ ದೃಶ್ಯ ಕಂಡು ಬಂದಿದ್ದು, ಮಂಗಳೂರಿನ ವಿಟಿ ರೋಡ್‌ನಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ. ಮಂಗಳೂರಿನ ಸುಪ್ರಸಿದ್ಧ ವೆಂಕಟರಮಣ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಯ ಐದು ದಿನ ಬೆಳಗ್ಗಿನ ಗಂಜಿಯನ್ನು ನೀಡಲಾಗುತ್ತದೆ. ಬ್ರಹ್ಮರಥೋತ್ಸವದ ದಿನದಂದು ಮಾತ್ರ ಉದ್ದಿನ ದೋಸೆ, ಕಿಚಡಿಗಳ ಉಪಹಾರವನ್ನು ನೀಡಲಾಗುತ್ತದೆ. ಸಾವಿರಾರು ಜನ

ವೆಂಕಟರಮಣನ ಜಾತ್ರೆಯಲ್ಲಿ ಗಂಜಿ ಊಟವೇ ವೈಶಿಷ್ಟ್ಯ| ಮಂಗಳೂರಿನಲ್ಲೊಂದು ಅಪರೂಪದ ಪರಂಪರೆ Read More »

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ಎಂಬ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ ಮಾಡಿದ ಹರೀಶ್ ಪೂಂಜಾ| ಜನಪ್ರತಿನಿಧಿಯಾಗಲು ನಾಲಾಯಕ್: ಎಸ್‌ಡಿಪಿಐ ಆಕ್ರೋಶ

ಸಮಗ್ರ ನ್ಯೂಸ್: ಬಜೆಟ್ ಮಂಡನೆಯ ವಿಚಾರವಾಗಿ ಬಿಜೆಪಿ ಫೆ.17ರಂದು ವಿಧಾನಸೌಧದ ಹೊರಗೆ ಪ್ರತಿಭಟನೆಯ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಾಸಕ ಹರೀಶ್ ಪೂಂಜ “ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ವಿವಾದಾತ್ಮಕ ಪೋಸ್ಟರ್ ಪ್ರದರ್ಶನವು ಸಂವಿಧಾನ ಬಾಹಿರವಾಗಿದೆ. ಇಂತಹ ಕೋಮುವಾದಿ ಮನಸ್ಥಿತಿಯವರು ಜನಪ್ರತಿನಿಧಿಯಾಗಲು ನಾಲಾಯಾಕ್ ಎಂದು SDPI ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿರುವ ಅವರು ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ಎಂಬ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ ಮಾಡಿದ ಹರೀಶ್ ಪೂಂಜಾ| ಜನಪ್ರತಿನಿಧಿಯಾಗಲು ನಾಲಾಯಕ್: ಎಸ್‌ಡಿಪಿಐ ಆಕ್ರೋಶ Read More »

ಸಂವಿಧಾನ ವಿರೋಧಿ ಮನಸ್ಥಿತಿಯ ವ್ಯಕ್ತಿಯಿಂದಲೇ ಸಂವಿಧಾನ ಜಾಗೃತಿ ಮಾಡಿಸುತ್ತಿರುವುದು ಸಂವಿಧಾನಕ್ಕೆ ಮಾಡುವ ಅವಮಾನ: ಎಸ್‌ಡಿಪಿಐ ಖಂಡನೆ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಫೆ.17 ರಂದು ನಡೆಯುವ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂವಿಧಾನ ವಿರೋಧಿ ಮನಸ್ಥಿತಿ ಹೊಂದಿರುವ ಕೊಡಗು ಸಂಪಾಜೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೋಕ್ಯ ನಾಯ್ಕ ಬಿ. ಯವರಿಂದ ಸಾರ್ವಜನಿಕರಿಗೆ ಸಂವಿಧಾನದ ಬಗ್ಗೆ ಮಾಹಿತಿ ಜಾಗೃತಿ ಮೂಡಿಸುತ್ತಿರುವುದು ದುರದೃಷ್ಟಕರ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಪಾಜೆ ಗ್ರಾಮ ಸಮಿತಿ ಆಕ್ರೋಶ

ಸಂವಿಧಾನ ವಿರೋಧಿ ಮನಸ್ಥಿತಿಯ ವ್ಯಕ್ತಿಯಿಂದಲೇ ಸಂವಿಧಾನ ಜಾಗೃತಿ ಮಾಡಿಸುತ್ತಿರುವುದು ಸಂವಿಧಾನಕ್ಕೆ ಮಾಡುವ ಅವಮಾನ: ಎಸ್‌ಡಿಪಿಐ ಖಂಡನೆ Read More »

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಸಮಗ್ರ ನ್ಯೂಸ್: ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು ಆಯೋಜಿಸುತ್ತಿರುವ ಒಕ್ಕಲಿಗರ ಪ್ರೀಮಿಯರ್ ಲೀಗ್ 2024 ಅಂತರ್ ಜಿಲ್ಲಾ ಕ್ರಿಕೆಟ್ ಕೂಟವು ಅಡ್ಯಾರಿನ ಸಹ್ಯಾದ್ರಿ ಇಂಜಿನೀಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಫೆ.18ರಿಂದ ಆರಂಭವಾಗಲಿದೆ. ಕ್ರಿಕೆಟ್ ಕೂಟದ ಉದ್ಘಾಟನೆಯು ಫೆ.18 ರಂದು ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಫೆ.19ರ ಸಂಜೆ ನಡೆಯಲಿದೆ. ಈ ಕೂಟದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ , ಕಾಸರಗೋಡು ಜಿಲ್ಲೆಯ ಒಕ್ಕಲಿಗ ಸಮುದಾಯದ ತಂಡಗಳು ಪಾಲ್ಗೊಳ್ಳಲಿವೆ. ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ Read More »

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷ ಸಮಾವೇಶ ಫೆ.20ರಂದು ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆಯಲಿದೆ. ಸುಳ್ಯದ ಗ್ರಾಂಡ್ ಪರಿವಾರ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಪಕ್ಷ ಸಮಾವೇಶ ನಡೆಯಲಿದೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯು ಜೊತೆ ಕಾರ್ಯದರ್ಶಿಯವರಾದ ಶರೀಫ್ ನಿಂಥಿಕ್ಕಲ್ ರವರು ತಿಳಿಸಿದ್ದಾರೆ.

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ Read More »

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” Read More »

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ ನಡೆಯಲಿದೆ ಎಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ಪಾಟಾಳಿ ಯಾನೆ ಗಾಣಿಗರ ಸಂಘದ ವತಿಯಿಂದ ಪರ್ನೆ ಕಳಿಯಾಟ ಮಹೋತ್ಸವದ ಕುರಿತು ಫೆ. 16ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಹೇಳಿದರು. ಶ್ರೀ ಮುಚ್ಚಿಲೋಟ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ನಡೆದು

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ Read More »