ಕರಾವಳಿ

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ

ಸಮಗ್ರ ನ್ಯೂಸ್: ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯ ಇದರ ಬೆಳ್ಳಿಹಬ್ಬದ ಪ್ರಯುಕ್ತ ಸಹ ಸಂಸ್ಥೆ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾ ಸಂಸ್ಥೆಯ 2 ಕೊಠಡಿಯ ಗುದ್ದಲಿ ಪೂಜೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಇತರೆ ಸಹಕಾರಿ ಸಂಘಗಳು, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ-ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ಕ್ರೀಡಾ ಸಮ್ಮಿಲನ ಕಾರ್ಯಕ್ರಮವು ಫೆ.24 ರಂದು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣ ಕೊಡಿಯಾಲಬೈಲಿನಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ಕ್ರೆಡಿಟ್ […]

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಕಾಲೇಜು ವಿದ್ಯಾರ್ಥಿನಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಎಂಬಲ್ಲಿ ನಡೆದಿದೆ. ಇಲ್ಲಿನ‌ ಉದ್ಯಮಿ ದಾವೂದ್‌ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ. ಈಕೆ ಉಪ್ಪಿನಂಗಡಿಯ ಇಂಡಿಯನ್‌ ಸ್ಕೂಲ್‌ನ ಹಳೆವಿದ್ಯಾರ್ಥಿಯಾಗಿದ್ದು, ಪ್ರಸಕ್ತ ಪುತ್ತೂರಿನ ಸೈಂಟ್‌ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಳು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸ ನಿರತಳಾಗಿದ್ದ ಆಕೆ ಬಳಿಕ ನಿದ್ರಿಸಿದ್ದು, ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಎಬ್ಬಿಸಲು

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ Read More »

14ರ ಬಾಲಕ ಓಡಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕುಂಬಳೆ ಪೇಟೆಯಲ್ಲಿ 14 ವಯಸ್ಸಿನ, 9ನೇ ತರಗತಿಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್‌ ಗುದ್ದಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಅಂಗಡಿಮೊಗರು ಪೆರ್ಲಾಡ ನಿವಾಸಿ ಮೈಕ್‌ ಆಪರೇಟರ್‌ ಅಬ್ದುಲ್ಲ ಕುಂಞಿ (60) ಅವರು ಕುಂಬಳೆ ಬಸ್‌ ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ಪೇಟೆಗೆ ತೆರಳುತ್ತಿದ್ದ ವೇಳೆ ಅವರಿಗೆ ಬಾಲಕ ವೇಗವಾಗಿ ಒಡಿಸುತ್ತಿದ್ದ ಬೈಕ್‌ ಗುದ್ದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ್ದಾರೆ.

14ರ ಬಾಲಕ ಓಡಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು Read More »

ಫೆ.18: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ

ಪ್ರಜಾಪ್ರಭುತ್ವ ವೇದಿಕೆ ಮತ್ತು ಸೌಜನ್ಯ ಹೋರಾಟ ಸಮಿತಿ ಉಪ್ಪಿನಂಗಡಿ ಇವುಗಳ ಸಂಯುಕ್ತಾಶ್ರಯದಲ್ಲಿ ಕು. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಫೆ. 18ರಂದು ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಲಿದೆ. ಇಲ್ಲಿನ ಎಚ್.ಎಂ. ಅಡಿಟೋರಿಯಂನ ವಠಾರದಲ್ಲಿ ಅಪರಾಹ್ನ 3ಗಂಟೆಗೆ ಸಭೆ ನಡೆಯಲಿದ್ದು, ಕು. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಕ್ಕಾಗಿ ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ಮರು ತನಿಖೆಗೆ ಒತ್ತಾಯಿಸಲು ಹಾಗೂ ನಿಜವಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ಮತ್ತು ಆರೋಪಿಗಳನ್ನು

ಫೆ.18: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ Read More »

ಸುಳ್ಯ: ಅನುದಾನ ತರಿಸಲು ಶ್ರಮಿಸಿದವರನ್ನು ಬಿಟ್ಟು ಶಾಲಾ ಕಟ್ಟಡ ಉದ್ಘಾಟನೆ| ಮರ್ಕಂಜ ಶಾಲಾ ಕಾರ್ಯಕ್ರಮದ ಮುನ್ನವೇ ಗೊಂದಲ

ಸಮಗ್ರ ನ್ಯೂಸ್: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಇಲ್ಲಿ ಫೆ.14 ರಂದು ನಡೆಯಲಿರುವ ಬೋಜನಾಲಯ ಮತ್ತು ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮದ ಬಗ್ಗೆ ಹಲವು ವಿರೋಧಾಭಾಸ ಚರ್ಚೆಗಳು ಹೊರಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರೊಬ್ಬರು ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ್ದಾರೆ.ಸುಳ್ಯ ತಾಲೂಕಿನ ‌ಮರ್ಕಂಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಶಾಲೆಯಲ್ಲಿ ಅನೇಕ ದಾನಿಗಳ ಹಾಗೂ ಸರ್ಕಾರದ ಅನುದಾನದಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ವಿಶೇಷವಾಗಿ ಊರ-ಪರಊರಿನ ಅನೇಕರಿಂದ ಹಾಗೂ ಹಿರಿಯ ವಿದ್ಯಾರ್ಥಿಗಳ

ಸುಳ್ಯ: ಅನುದಾನ ತರಿಸಲು ಶ್ರಮಿಸಿದವರನ್ನು ಬಿಟ್ಟು ಶಾಲಾ ಕಟ್ಟಡ ಉದ್ಘಾಟನೆ| ಮರ್ಕಂಜ ಶಾಲಾ ಕಾರ್ಯಕ್ರಮದ ಮುನ್ನವೇ ಗೊಂದಲ Read More »

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..?

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಸಚಿವಾಲಯದಿಂದ ವಿಶೇಷ ಕಾರಿನ‌ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಈ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. ಈ ಕಾರು ಟಯೋಟ ಕಂಪೆನಿಯ ಫಾರ್ಚುನರ್ ಕಾರಾಗಿದ್ದು ಇದು 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ. ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..? Read More »

ದ.ಕ. ಒಕ್ಕಲಿಗ ಗೌಡರ ಶಕ್ತಿ ಸಂಚಯನ|ಜಿಲ್ಲಾ ನೂತನ‌ ಸಮಿತಿ ಅಸ್ತಿತ್ವಕ್ಕೆ

ಸಮಗ್ರ ನ್ಯೂಸ್: ಜಿಲ್ಲೆಯ ಒಕ್ಕಲಿಗ ಗೌಡರ ಬಹುಕಾಲದ ಕನಸಾದ ನೂತನ ಜಿಲ್ಲಾ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲೆಯ ಎರಡನೆ ಅತೀ ದೊಡ್ಡ ಸಮುದಾಯವೆನಿಸಿದ ಒಕ್ಕಲಿಗ ಗೌಡರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ‌ ನಿರ್ಣಾಯಕ ಸಮುದಾಯವಾಗಿ ಹೊರಹೊಮ್ಮುವ ಸಾಧ್ಯತೆಯನ್ನು ವಿಶ್ಲೇಷಿಸಲಾಯಿತು. ನಾಲ್ಕೂ ಲಕ್ಷಕಿಂತ ಅಧಿಕ ಮತದಾರರೆ ಇದ್ದರು ಕ್ಯಾಂಪ್ಕೋ ಒಂದು ಹುದ್ದೆ ಸಮುದಾಯ ಪಡೆದುಕೊಂಡಿದ್ದರು ಉಳಿದಂತೆ ಯಾವುದೇ ಶಾಸನಾತ್ಮಕ ಹುದ್ದೆ, ಪ್ರಮುಖ ಮಂಡಳಿ, ಸಹಕಾರ ಕ್ಷೇತ್ರ ಗಳಲ್ಲಿ ಪ್ರಾತಿನಿದ್ಯದಿಂದ ಹೊರತಾಗಿರುವ ಬಗ್ಗೆ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳತ್ತ ಟೀಕೆ, ಆಕ್ರೋಶ

ದ.ಕ. ಒಕ್ಕಲಿಗ ಗೌಡರ ಶಕ್ತಿ ಸಂಚಯನ|ಜಿಲ್ಲಾ ನೂತನ‌ ಸಮಿತಿ ಅಸ್ತಿತ್ವಕ್ಕೆ Read More »

ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು?

ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದಿದ್ದಾರೆ. ಅವರು ಏನಾದರೂ ಹಾಕಿಕೊಂಡು ಬರಲಿ. ಕೇಸರಿ ಅವರ ಮನೆ ಆಸ್ತಿಯೇ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ.ಮಾಡಿಕೊಳ್ಳಲಿ. ಅವರು ಕೇಸರಿಯಾದರೂ ಧರಿಸಲಿ, ಕಪ್ಪಾದರೂ ಧರಿಸಲಿ. ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು

ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು? Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅಶೋಕ್ ನೆಕ್ರಾಜೆ!? ಏನಿದು ಹೊಸ ವಿಚಾರ?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ನಾಗಕ್ಷೇತ್ರವೆನಿಸಿರುವ ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹಾಲಿ ವ್ಯವಸ್ಥಾಪನಾ ಸಮಿತಿ‌ಯ ಅವಧಿ ಕೆಲ ತಿಂಗಳಲ್ಲೇ ಮುಗಿಯಲಿದ್ದು, ನೂತನ ಸಮಿತಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆಗೆ ಸ್ಥಾನ ಲಭ್ಯವಾಗುವ ಸಾಧ್ಯತೆ ಇದೆ. ಯುವ ನಾಯಕ ಅಶೋಕ್ ನೆಕ್ರಾಜೆಯವರ ಹೆಸರು ಪ್ರಮುಖವಾಗಿ ಮುನ್ನಲೆಗೆ ಬಂದಿದ್ದು, ಕುಕ್ಕೆ ಸುಬ್ರಹ್ಮಣ್ಯನ ಆಡಳಿತ ಚುಕ್ಕಾಣಿ ಹಿಡಿಯುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಇದುವರೆಗೆ ಆಡಳಿತಾತ್ಮಕ ಸಮಿತಿ ಅಧ್ಯಕ್ಷರಾಗಿ ಬಿಜೆಪಿ, ಕಾಂಗ್ರೆಸ್ ನಿಂದ ಮುಖಂಡರೆನಿಸಿದ ಹಿರಿಯರೇ ಆಯ್ಕೆಯಾಗುತ್ತಿದ್ದು,

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅಶೋಕ್ ನೆಕ್ರಾಜೆ!? ಏನಿದು ಹೊಸ ವಿಚಾರ? Read More »

ರಾಮನ ಬಗ್ಗೆ ಅವಹೇಳನಕಾರಿ‌ ಹೇಳಿಕೆ| ಮಂಗಳೂರಿನ ಖಾಸಗಿ ಶಾಲೆ‌ ಶಿಕ್ಷಕಿ ವಜಾ

ಸಮಗ್ರ ನ್ಯೂಸ್: ಅಯೋಧ್ಯೆ ಶ್ರೀರಾಮ ಮಂದಿರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ. ಪೋಷಕರು ಮತ್ತು ಹಿಂದೂ ಪರ ಸಂಘಟನೆಗಳ ಪ್ರತಿಭಟನೆಗೆ ಮಣಿದ ಶಾಲಾ ಆಡಳಿತ ಮಂಡಳಿ ಶಿಕ್ಷಕಿ ವಜಾಗೊಳಿಸುವ ನಿರ್ಧಾರ ಕೈಗೊಂಡಿದೆ. ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶಾಲೆಯಿಂದ ವಜಾಗೊಂಡವರು. ಕೆಲವು ದಿನಗಳ ಹಿಂದೆ ಅವರು ಅಯೋಧ್ಯೆ ಶ್ರೀರಾಮಮಂದಿರ ಮತ್ತು ಶ್ರೀರಾಮ ದೇವರ ಕುರಿತಾಗಿ ಅವಹೇಳನ ಮಾಡಿರುವುದಾಗಿ ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದ್ದರು. ಇದು ವಿವಾದದ ಸ್ವರೂಪ

ರಾಮನ ಬಗ್ಗೆ ಅವಹೇಳನಕಾರಿ‌ ಹೇಳಿಕೆ| ಮಂಗಳೂರಿನ ಖಾಸಗಿ ಶಾಲೆ‌ ಶಿಕ್ಷಕಿ ವಜಾ Read More »