ಕರಾವಳಿ

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು

ಸಮಗ್ರ ನ್ಯೂಸ್: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು ಆಯ್ಕೆ. ಸುಳ್ಯ ಮಂಡಲ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹಸಂಚಾಲಕರಾಗಿದ್ದ ಪ್ರಸಾದ್ ಕಾಟೂರು ಈ ಬಾರಿ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು Read More »

ನವದೆಹಲಿಯಲ್ಲಿ ಸೌಜನ್ಯ ‌ತಾಯಿ‌ ಹಾಗೂ ಪ್ರತಿಭಟನಾ ನಿರತರು ಅರೆಸ್ಟ್| ಸೌಜನ್ಯಳ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರು

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಕ್ಕಾಗಿ ಹತ್ಯೆಯಾದ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ ಸೌಜನ್ಯ ತಾಯಿ ಮತ್ತು ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಬಿಜೆಪಿ ವತಿಯಿಂದ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ಸಂಸದ, ಆಗಿನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುನೀಲ್ ಕುಮಾರ್ , ಹರೀಶ್ ಪೂಂಜಾ ಇದ್ದ ವೇದಿಕೆಯಲ್ಲಿ ಭಾಗವಹಿಸಿದ್ದ ಸೌಜನ್ಯ ತಾಯಿ ಕುಸುಮಾವತಿ ಭಾಷಣದಲ್ಲಿ ನನ್ನನ್ನು ಪ್ರಧಾನಿ ಮೋದಿಯನ್ನು

ನವದೆಹಲಿಯಲ್ಲಿ ಸೌಜನ್ಯ ‌ತಾಯಿ‌ ಹಾಗೂ ಪ್ರತಿಭಟನಾ ನಿರತರು ಅರೆಸ್ಟ್| ಸೌಜನ್ಯಳ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರು Read More »

ಮಂಗಳೂರಿನ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಸಾಹಿತಿ ಭೀಮರಾವ್ ವಾಷ್ಠರ್ ಅವರ 48ನೇ ಜನ್ಮದಿನ ಸಂಭ್ರಮ|ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾಸಮ್ಮೇಳನ

ಸಮಗ್ರ ನ್ಯೂಸ್:ಸುಳ್ಯದ ಚಂದನ ಸಾಹಿತ್ಯ ವೇದಿಕೆ ಮತ್ತು ಕಲ್ಲೂರಾಯ ಪ್ರತಿಷ್ಠಾನ ಬನದಗದ್ದೆ ಇವರ ಜಂಟಿ ಆಶ್ರಯದಲ್ಲಿ ಕಡಲ ಕವಿಗೋಷ್ಠಿ 2024 , ಸಾಹಿತಿ ಜ್ಯೋತಿಷಿ ಎಚ್ ಭೀಮರಾವ್ ವಾಷ್ಠರ್ ರವರ 48 ನೇ ಹುಟ್ಟುಹಬ್ಬದ ಆಚರಣೆ ಪ್ರಯುಕ್ತ ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾ ಸಮ್ಮೇಳನವು ಮಂಗಳೂರಿನ ಸಮುದ್ರದ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಅದ್ದೂರಿಯಾಗಿ ಜರುಗಿತು. ಸಮಾರಂಭದ ಸಭಾಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ಅವರು

ಮಂಗಳೂರಿನ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಸಾಹಿತಿ ಭೀಮರಾವ್ ವಾಷ್ಠರ್ ಅವರ 48ನೇ ಜನ್ಮದಿನ ಸಂಭ್ರಮ|ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾಸಮ್ಮೇಳನ Read More »

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆ ದರೋಡೆ ಪ್ರಕರಣ| ನಾಲ್ವರು ವಶಕ್ಕೆ, ಉಳಿದವರಿಗೆ ಬಲೆ ಬೀಸಿದ ಖಾಕಿ ಪಡೆ

ಸಮಗ್ರ ನ್ಯೂಸ್ : ಬಂಟ್ವಾಳ ತಾಲೂಕಿನ ವಿಟ್ಲ‌ ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಗೆ ನುಗ್ಗಿದ ದರೋಡೆಕೋರರು ಚಿನ್ನ ಹಾಗೂ ನಗದು ದೋಚಿದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತು ದ.ಕ.ಜಿಲ್ಲಾ ವಿಶೇಷ ಕ್ರೈಂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಲ್ಕು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಬಲೆ ಬಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಡ್ಯನಡ್ಕದ ಕರ್ಣಾಟಕ ಬ್ಯಾಂಕ್ ನಲ್ಲಿ ಫೆ.7 ರಂದು ಕಟ್ಟಡದ ಹಿಂಬದಿಯ ಕಿಟಕಿ ಒಡೆದು

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆ ದರೋಡೆ ಪ್ರಕರಣ| ನಾಲ್ವರು ವಶಕ್ಕೆ, ಉಳಿದವರಿಗೆ ಬಲೆ ಬೀಸಿದ ಖಾಕಿ ಪಡೆ Read More »

ಸುಳ್ಯ: ಮಾ. 03, ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಮಗ್ರ ನ್ಯೂಸ್: ಸೇವಾ ಭಾರತೀ Helpline ಟ್ರಸ್ಟ್ ಸುಳ್ಯ (ರಿ) ಮತ್ತು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಮಿತ್ರ ಬಳಗ ಎಲಿಮಲೆ ಹಾಗೂ ಎಜೆ ಆಸ್ಪತ್ರೆ ಮಂಗಳೂರು ಸಹಕಾರದೊಂದಿಗೆ ಮಾ. 03ರಂದು ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಬೆಳ್ಳಿಗೆ 9 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಡೆಯಲಿದೆ. ಕ್ಯಾನ್ಸರ್ ಶಾಸ್ತ್ರ – ಕರುಳು, ಮೂತ್ರಕೋಶ, ಸ್ಥನ, ಗರ್ಭಕೋಶ, ಗರ್ಭನಾಳ, ಅಂಡಾಶಯ, ಶ್ವಾಸಕೋಶ, ಬಾಯಿ, ಗಂಟಲು, ಅನ್ನನಾಳ ಮುಂತಾದ ಕ್ಯಾನ್ಸರ್

ಸುಳ್ಯ: ಮಾ. 03, ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ Read More »

ಮುಖವಾಡದ ಬದುಕು ಸರಿಯಲ್ಲ; ಶ್ರೀ. ಭಾಸ್ಕರ್ ಕೋಡಿಂಬಾಳ|ಕಸಾಪ ಪುತ್ತೂರು ಸರ್ವರನ್ನು ಒಗ್ಗೂಡಿಸುತ್ತಿದೆ;ದೆಹಲಿ ವಸಂತ ಶೆಟ್ಟಿ ಬೆಳ್ಳಾರೆ

ಸಮಗ್ರ ನ್ಯೂಸ್: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಫೆ. 25ರಂದು ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ಯುವ ಕವಯತ್ರಿ ಪ್ರಿಯಾ ಸುಳ್ಯರವರ ಬಾಳಿಗೆ ಬೆಳಕು ಕೃತಿ ಬಿಡುಗಡೆ ಸಮಾರಂಭವನ್ನು ದೀಪ ಪ್ರಜ್ವಲಿಸಿ ಮಾತನಾಡಿದ ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಅವರು “ಸಾಹಿತ್ಯ ಎನ್ನುವುದು ನಮ್ಮನ್ನ ಬೆಸೆಯುವಂತದ್ದು, ಸಾಹಿತಿಗಳು ಬರೆದಂತೆ ನಡೆಯುವ ಗುಣ ಹೊಂದಿರುವವರಾಗಿದ್ದಲ್ಲಿ ಸ್ವಚ್ಛ ಸಮಾಜದ ನಿರ್ಮಾಣ ಸಾಧ್ಯ ಎಂದು ಕೃತಿಕಾರರಿಗೆ

ಮುಖವಾಡದ ಬದುಕು ಸರಿಯಲ್ಲ; ಶ್ರೀ. ಭಾಸ್ಕರ್ ಕೋಡಿಂಬಾಳ|ಕಸಾಪ ಪುತ್ತೂರು ಸರ್ವರನ್ನು ಒಗ್ಗೂಡಿಸುತ್ತಿದೆ;ದೆಹಲಿ ವಸಂತ ಶೆಟ್ಟಿ ಬೆಳ್ಳಾರೆ Read More »

ಮಂಗಳೂರು: ಹಿರಿಯ ಪತ್ರಕರ್ತ‌ ಮನೋಹರ ಪ್ರಸಾದ್ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಮುಗಿಸಿ “ನವ ಭಾರತ’ ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಸೇರ್ಪಡೆಗೊಂಡ ಅವರು ಸುದೀರ್ಘ ಕಾಲ ಮುಖ್ಯ ವರದಿಗಾರರಾಗಿ, ಸಹಾಯಕ ಸಂಪಾದಕರಾಗಿ, ಮಂಗಳೂರು ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಓರ್ವ ಸಾಹಿತಿಯೂ ಆಗಿದ್ದ ಮನೋಹರ ಪ್ರಸಾದ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ

ಮಂಗಳೂರು: ಹಿರಿಯ ಪತ್ರಕರ್ತ‌ ಮನೋಹರ ಪ್ರಸಾದ್ ಇನ್ನಿಲ್ಲ Read More »

ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ| ಸ್ಪರ್ಧೆ ಸ್ಪಷ್ಟಪಡಿಸಿದ ಪುತ್ತಿಲ‌ ಪರಿವಾರ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಪುತ್ತಿಲ ಪರಿವಾರ ಸಂಘಟನೆಯ ನಡುವಿನ ಮಾತುಕತೆ ಫಲಪ್ರದ ಆಗದೇ ಇರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಅರುಣ್‌ಕುಮಾರ್ ಪುತ್ತಿಲ, ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತ ತಿಳಿಸಿದ್ದಾರೆ. ಗುರುವಾರ ಪುತ್ತೂರಿನಲ್ಲಿ ಮಾತನಾಡಿದ ಅವರು, ‘ಮುಂದಿನ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸಂಘಟನೆ ಜಿಲ್ಲೆಯಲ್ಲಿ ಸ್ಪರ್ಧಿಸುತ್ತದೆ. ಮಾತೃಪಕ್ಷವಾದ ಬಿಜೆಪಿ ಜತೆ ‌ಪುತ್ತಿಲ ಪರಿವಾರ ವಿಲೀನ ಮಾಡಲು ನಮ್ಮದು ಅಭ್ಯಂತರ ಇರಲಿಲ್ಲ. ಕಾರ್ಯಕರ್ತರ ಭಾವನೆಗೆ ಬೆಲೆಕೊಟ್ಟು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು

ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ| ಸ್ಪರ್ಧೆ ಸ್ಪಷ್ಟಪಡಿಸಿದ ಪುತ್ತಿಲ‌ ಪರಿವಾರ Read More »

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಸಿದ್ದತೆ| ಮಾ.11ರಂದು ಮತದಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಮಾ.11ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಫೆ.26ರಿಂದ ಪ್ರಾರಂಭಗೊಂಡಿದ್ದು, ನಾಮಪತ್ರ ಸಲ್ಲಿಸಲು ಮಾ. 3 ಅಂತಿಮ ದಿನವಾಗಿದೆ. ಮಾ.4ರಂದು ನಾಮಪತ್ರ ಪರಿಶೀಲನೆ, ಮಾ.5ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಅದೇ ದಿನ ರಿಟರ್ನಿಂಗ್‌ ಅಧಿಕಾರಿಯವರು ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನೀಡಲಿದ್ದಾರೆ. ಮಾ.11ರಂದು ಮಂಗಳೂರಿನ ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಸಿದ್ದತೆ| ಮಾ.11ರಂದು ಮತದಾನ Read More »

ಸುಳ್ಯದ ಇಬ್ಬರು ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಭಾಗ್ಯ| ಮಾ.1ರಂದು ಹಳ್ಳಿಯಿಂದ ದಿಲ್ಲಿಗೆ ಪಯಣ

ಸಮಗ್ರ ನ್ಯೂಸ್: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆಯ ‘ಸಂಜೀವಿನೀ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿರುವ ಯೋಜನೆಯಡಿ ಸುಳ್ಯ ತಾಲೂಕಿನ ಇಬ್ಬರಿಗೆ ರಾಷ್ಟ್ರಪತಿ ಭೇಟಿಯ ಭಾಗ್ಯ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕದಿಂದ ಒಟ್ಟು 35 ಮಂದಿ ದೆಹಲಿಗೆ ತೆರಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಕೊರಗ ಸಮುದಾಯಕ್ಕೆ ಸೇರಿದ ಬೆಂಡೋಡಿಯ ಮೀನಾಕ್ಷಿ ಹಾಗೂ ವನಿತಾ ರಾಷ್ಟ್ರಪತಿ ಭೇಟಿ

ಸುಳ್ಯದ ಇಬ್ಬರು ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಭಾಗ್ಯ| ಮಾ.1ರಂದು ಹಳ್ಳಿಯಿಂದ ದಿಲ್ಲಿಗೆ ಪಯಣ Read More »