ಕರಾವಳಿ

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಎಸ್.ಎಸ್.ಎಲ್.ಸಿ. ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಬಳಿಕ ನಾಪತ್ತೆಯಾಗಿದ್ದರು. ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಅವರ ಶವ ಪತ್ತೆಯಾಗಿದೆ. ಇವರು ಸುರತ್ಕಲ್ ನ ವಿದ್ಯಾದಾಯಿನಿ ಶಾಲೆಯ ವಿದ್ಯಾರ್ಥಿಗಳು. ಇವರ ಮೃತದೇಹಗಳು ಹಳೆಯಂಗಡಿ ಸಮೀಪ ನದಿಯಲ್ಲಿ ಪತ್ತೆಯಾಗಿವೆ. ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರೀಕ್ಷೆ ಮುಗಿದ ನಂತರ ಈಜಲು

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ Read More »

ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಕರಾವಳಿ ಭಾಗದ ಪ್ರಮುಖ ದೇವಸ್ಥಾನ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ ನೀಡಲಾಗಿದೆ. ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿ ವಿಶೇಷ ಸೂಚನೆ ನೀಡಿದೆ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ತಂಗಲು ದೇವಾಲಯ ಆಡಳಿತ ಮಂಡಳಿಗೆ ಒಳಪಟ್ಟ ವಿವಿಧ ವಸತಿಗೃಹಗಳ ವೆಬ್‌ಸೈಟ್‌ ಮೂಲಕ

ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು… Read More »

ಕುಕ್ಕೆ ಸುಬ್ರಹ್ಮಣ್ಯ: ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿನಾಯಿ!!

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿಯುವುದನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ್ದರು. ಆಗ ಮಗು ರಸ್ತೆಯ ಬದಿಗೆ ಬಂದಿದ್ದು, ಅದೇ ಸಮಯಕ್ಕೆ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ಮಗು ಇನ್ನೇನು ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ

ಕುಕ್ಕೆ ಸುಬ್ರಹ್ಮಣ್ಯ: ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿನಾಯಿ!! Read More »

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ

Samagra news: ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್​ಗೂ ರೂಮ್ ಕಡೆ ಬಾರದಂತೆ ತಿಳಿಸಿ ಚೈತ್ರಾ ಪರಾರಿಯಾಗಿದ್ದರು. 2017ರಿಂದಲೇ ಶಾರೂಖ್ ಜೊತೆ ಚೈತ್ರಾಗೆ ನಂಟು ಇತ್ತು ಎನ್ನಲಾಗಿದೆ. ಬೆಂಗಳೂರಿಗೆ

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ Read More »

ಕಡಬ: ನೈತಿಕ ಪೊಲೀಸ್ ಗಿರಿ| ನಾಲ್ವರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮನೆಯ ಬಳಿ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವ ಆರೋಪದ ಮೇಲೆ ಕಡಬ ಪೊಲೀಸರು ನಾಲ್ವರನ್ನು ಫೆ.22ರಂದು ರಾತ್ರಿ ಬಂಧಿಸಿದ್ದಾರೆ. ಮರ್ದಾಳ ಶಿವಾಜಿನಗರ ನಿವಾಸಿ ದಿ| ಇಲ್ಯಾಸ್‌ ಅವರ ಪುತ್ರ ಫಯಾಜ್‌ ಅವರು ಗುರುವಾರ ಸಂಜೆ ನನ್ನ ತಾಯಿ ಮತ್ತು ಸಹೋದರರೊಂದಿಗೆ ಮನೆಯಲ್ಲಿದ್ದಾಗ ಅಪರಿಚಿತ ಮಹಿಳೆಯೊಬ್ಬಳು ಚಿಕ್ಕ ಮಗುವನ್ನು ಎತ್ತಿಕೊಂಡು ಬಂದಿದ್ದು, ರಿಯಾಝ್ನ ಮನೆ ಯಾವುದು ಎಂದು ಕೇಳಿದರು. ಅವರು ಇದು ರಿಯಾಝ್ನ ಮನೆ ಅಲ್ಲ ಎಂದರು ಮಹಿಳೆ ಅಳುತ್ತಾ ನಿಂತಾಗ ಅವರ ತಾಯಿ

ಕಡಬ: ನೈತಿಕ ಪೊಲೀಸ್ ಗಿರಿ| ನಾಲ್ವರು ಆರೋಪಿಗಳ ಬಂಧನ Read More »

ಅರಂತೋಡು: ಜಮಾಅತ್ ವತಿಯಿಂದ ಉಮ್ರಾ ಯಾತ್ರಿ ಇಬ್ರಾಹಿಂ ಕುಕ್ಕುಂಬಳರವರಿಗೆ ಬೀಳ್ಕೊಡುಗೆ

ಸಮಗ್ರ ನ್ಯೂಸ್: ಅರಂತೋಡು ಜುಮಾ ಮಸೀದಿಯ ದಿಕ್ರ್ ಸ್ವಲಾತ್ ಸಮಿತಿಯ ಉಪಾಧ್ಯಕ್ಷ ಕೆ.ಎಸ್. ಇಬ್ರಾಹಿಂ ಕುಕ್ಕುಂಬಳ ಬಿಳಿಯಾರ್ ರವರು ಪವಿತ್ರ ಉಮ್ರಾ ನಿರ್ವಹಿಸಲು ಪ್ರಯಾಣ ಬೆಳೆಸಿದ್ದು ಅವರನ್ನು ಅರಂತೋಡು ಜಮಾಅತ್ ಸಮಿತಿ ವತಿಯಿಂದ ಬೀಳ್ಕೊಡುಗೆ ಮಾಡಲಾಯಿತು. ಸದರ್ ಬಹು| ನೌಶಾದ್ ಅಝ್ ಹರಿ ದುವಾ ನೆರವೇರಿಸಿದರು. ಬಹು| ಶಾಫಿ ಮುಸ್ಲಿಯಾರ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕೋಶಾಧಿಕಾರಿ ಕೆ.ಎಂ. ಅಬೂಬಕ್ಕರ್ ಪಾರೆಕ್ಕಲ್, ಎ.ಹನೀಫ್, ಕೆ.ಎಂ. ಮೊಯಿದು ಕುಕ್ಕುಂಬಳ, ಅಮೀರ್ ಕುಕ್ಕುಂಬಳ, ಸಂಶುದ್ಧೀನ್ ಪೆಲ್ತಡ್ಕ, ಮುಜೀಬ್ ಅರಂತೋಡು, ಸಂಶುದ್ಧೀನ್

ಅರಂತೋಡು: ಜಮಾಅತ್ ವತಿಯಿಂದ ಉಮ್ರಾ ಯಾತ್ರಿ ಇಬ್ರಾಹಿಂ ಕುಕ್ಕುಂಬಳರವರಿಗೆ ಬೀಳ್ಕೊಡುಗೆ Read More »

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ! Read More »

ಅತೀ ಕಿರಿಯ ನ್ಯಾಯಾದೀಶರಾಗಿ ಆಯ್ಕೆಯಾದ ಬಂಟ್ವಾಳದ ಅನಿಲ್ ಜಾನ್ ಸೀಕ್ವೈರಾ| 33 ಅಭ್ಯರ್ಥಿಗಳು ನ್ಯಾಯಾದೀಶರಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸೇಂಟ್‌ ಫಿಲೊಮಿನಾ ಮತ್ತು ಎಸ್‌ಡಿಎಂ ಕಾಲೇಜಿನ ಮಾಜಿ ವಿದ್ಯಾರ್ಥಿ, 25 ವರ್ಷದ ಅನಿಲ್‌ ಜಾನ್‌ ಸೀಕ್ವೈರಾ ಸೇರಿದಂತೆ 33 ಅಭ್ಯರ್ಥಿಗಳು ಸಿವಿಲ್‌ ನ್ಯಾಯಮೂರ್ತಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಪ್ರಕಟಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ. 25ನೇ ವರ್ಷಕ್ಕೆ ಸಿವಿಲ್‌ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿರುವ ಅನಿಲ್‌ ಅವರು ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರು ಎನ್ನಲಾಗಿದೆ. ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು 2004 ಮತ್ತು ತಿದ್ದುಪಡಿ ನಿಯಮಗಳು 2011,

ಅತೀ ಕಿರಿಯ ನ್ಯಾಯಾದೀಶರಾಗಿ ಆಯ್ಕೆಯಾದ ಬಂಟ್ವಾಳದ ಅನಿಲ್ ಜಾನ್ ಸೀಕ್ವೈರಾ| 33 ಅಭ್ಯರ್ಥಿಗಳು ನ್ಯಾಯಾದೀಶರಾಗಿ ಆಯ್ಕೆ Read More »

ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು

ಸಮಗ್ರ ನ್ಯೂಸ್: ದುಬೈನಲ್ಲಿ ರಸ್ತೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಯುವತಿ ಮೃತಪಟ್ಟಿದ್ದಾಳೆ. ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ , ಕೋಟೆಕಾರಿನ ಬೀರಿಯ ಕೆಂಪುಮಣ್ಣು ನಿವಾಸಿ ರಾಜೀವಿ ಅವರ ಏಕೈಕ ಪುತ್ರಿ ವಿದಿಶಾ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ವಿದಿಶಾ ದುಬೈನಲ್ಲಿ ವಾಸವಿದ್ದರು. ಪ್ರತಿ ದಿನ ಕಂಪನಿಗೆ ಕ್ಯಾಬ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆದರೆ ಫೆಬ್ರವರಿ 22 ರಂದು ಕ್ಯಾಬ್ ತಪ್ಪಿದ ಕಾರಣಕ್ಕೆ ತಮ್ಮದೇ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ ಕಾರಿನ ನಿಯಂತ್ರಣ

ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು Read More »

ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ವಿಜ್ಞಾನ ಮತ್ತು ಪ್ರಪಂಚ ಜ್ಞಾನ ಇಲಾಖೆ ನೀಡುವ ಇನ್ಸ್ಪೈರ್ ಅವಾರ್ಡ್ ಗೆ ಅಜಿತ್ ಕೃಷ್ಣ ಕೆ. ಆಯ್ಕೆ. ಇವರು ಸುಳ್ಯ ಪಿ.ಎಲ್.ಡಿ. ಬ್ಯಾಂಕ್ ಇಲ್ಲಿನ ಕ್ಷೇತ್ರ ಅಧಿಕಾರಿಯಾಗಿರುವ ದಾಮೋದರ ಎಂ. ಮತ್ತು ಶೀಲಾವತಿ ದಂಪತಿಗಳ ಪುತ್ರ. ಇವರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರ ಸಹಕಾರದಲ್ಲಿ ವಿಜ್ಞಾನ ಶಿಕ್ಷಕಿ ಪೂರ್ಣಿಮಾ ಮಾರ್ಗದರ್ಶನ ನೀಡಿದ್ದಾರೆ.

ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ Read More »