ಕರಾವಳಿ

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ

ಸಮಗ್ರ ನ್ಯೂಸ್: ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು, ಮಂಗಳವಾರ ರಾತ್ರಿ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರದ ಭಕ್ತರ ಸಮ್ಮುಖದಲ್ಲಿ ಜರುಗಿತು. ಈ ವೇಳೆ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ ವಿವಿಧ ವೈದಿಕ ‌, ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥೋತ್ಸವ ಜರುಗಿತು. […]

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ Read More »

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದಿನಿಂದ (ಫೆ.8) ಫೆ.10 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ. 8ರಂದು ಪೂರ್ವಾಹ್ನ ಗಂಟೆ 8-30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪೂರ್ವಾಹ್ನ ಗಂಟೆ 10ಕ್ಕೆ ಉಗ್ರಾಣ ತುಂಬುವುದು, ಪೂರ್ವಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ 7.30 ರಿಂದ ರಂಗಪೂಜೆಗಳು ನಡೆಯಲಿದೆ. ಫೆ.9ರಂದು ಪೂರ್ವಾಹ್ನ 9ಗಂಟೆಯಿಂದ ಶತರುದ್ರಾಭಿಷೇಕ, ಅಶ್ವಥನಾರಾಯಣ ಪೂಜೆ, 108 ಕಾಯಿ

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪ| ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ| ಶಾಸಕ ಸುನಿಲ್ ಕುಮಾರ್ ಗೆ ಕಗ್ಗಂಟಾಗುತ್ತಾ ಪ್ರಕರಣ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಅವ್ಯವಹಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಎರ್ಲಪಾಡಿ ಗ್ರಾಮದ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಕೋರಿ ಸಿಎಂ ಸಿದ್ದರಾಮಯ್ಯಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಪತ್ರ ಬರೆದಿದ್ದರು. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪ| ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ| ಶಾಸಕ ಸುನಿಲ್ ಕುಮಾರ್ ಗೆ ಕಗ್ಗಂಟಾಗುತ್ತಾ ಪ್ರಕರಣ Read More »

ವಿಟ್ಲ: ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ| ಕೋಟ್ಯಾಂತರ ರೂ. ನಗದು, ಚಿನ್ನಾಭರಣ ದೋಚಿದ ಕಳ್ಳರು

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಿಟ್ಲ ಕರ್ಣಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯಲ್ಲಿ ಗುರುವಾರ ಭಾರೀ ಕಳ್ಳತನ ನಡೆದಿದ್ದು, ಕೋಟ್ಯಾಂತರ ರೂ. ಮೌಲ್ಯದ ನಗ- ನಗದನ್ನು ದೋಚಿದ ಘಟನೆ ನಡೆದಿದೆ. ಸುಮಾರು 2 -3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ. ಕೃತ್ಯವು ಫೆ. 7ರ ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕರ್ಣಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯು ಕಲ್ಲಡ್ಕ ಕಾಂಞಂಗಾಡ್‌ ಅಂತಾರಾಜ್ಯ ಹೆದ್ದಾರಿಯ ಅಂಚಿನಲ್ಲಿದೆ.

ವಿಟ್ಲ: ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ| ಕೋಟ್ಯಾಂತರ ರೂ. ನಗದು, ಚಿನ್ನಾಭರಣ ದೋಚಿದ ಕಳ್ಳರು Read More »

ಸುಳ್ಯ: ಐವರ್ನಾಡಿನಲ್ಲಿ ಧ.ಗ್ರಾ.ಯೋ ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ| ಅಷ್ಟಕ್ಕೂ ಅಲ್ಲಿ ನಡೆದಿದ್ದೇನು?

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಮುತ್ತಿಗೆ ನಡೆಸಿ ಛೀಮಾರಿ ಹಾಕಿದ ಘಟನೆ ದ.ಕ‌ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಏನಿದು ಪ್ರಕರಣ?ಕಳೆದ ಕೆಲ ತಿಂಗಳ ಹಿಂದೆ ಐವರ್ನಾಡಿನಲ್ಲಿ ಕುಂದಾಪುರ ಮೂಲದ ಯೂಟ್ಯೂಬ್ ಚಾನೆಲ್ ಒಂದು ಸಂದರ್ಶನ ನಡೆಸಿ ಕಾರ್ಯಕ್ರಮ ಬಿತ್ತರಿಸಿತ್ತು. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಕುರಿತಂತೆ ವರದಿ ಮಾಡಲಾಗಿದ್ದು, ಐವರ್ನಾಡಿನಲ್ಲಿ ನಡೆಸಿದ ಸಂದರ್ಶನದ ತುಣುಕಿನಲ್ಲಿ ಜಾತಿನಿಂದನೆ ಕುರಿತಂತೆ ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆ ಯೂಟ್ಯೂಬ್

ಸುಳ್ಯ: ಐವರ್ನಾಡಿನಲ್ಲಿ ಧ.ಗ್ರಾ.ಯೋ ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ| ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? Read More »

ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ನ್ಯೂಸ್: ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಗಳೂರು ಹೊರವಲಯದ ವಲಚ್ಚಿಲ್ ಬಳಿ ನಡೆದಿದೆ. ಶ್ರೀನಿವಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ‌ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಊಟದಲ್ಲಿ ಹುಳ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಶಂಕೆ ವ್ಯಕ್ತವಾಗಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ Read More »

ಕಡಬ: ಬೀದಿನಾಯಿಗಳ ಅಟ್ಟಹಾಸಕ್ಕೆ ಬಡಪಾಯಿ ಆಡು ಬಲಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಯ ಕಡಬದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು ಜನರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಕಡಬ ಪೇಟೆಯಲ್ಲಿ ಅಲೆದಾಡುತ್ತಿದ್ದ ಆಡನ್ನು ಬೆನ್ನಟ್ಟಿದ್ದ ಬೀದಿನಾಯಿಗಳು ಅದರ ಹಿಂಬದಿ ಕಚ್ಚಿ ಎಳೆದಾಡಿ ಸಿಗಿದು ಹಾಕಿದ ಘಟನೆ ನಡೆದಿದೆ. ಬಡಪಾಯಿ ಆಡಿನ ಕಾಲು ಸಹಿತ ಹಿಂಭಾಗದ ಮಾಂಸವನ್ನು ಬೀದಿನಾಯಿಗಳು ಕಚ್ಚಿ ತಿಂದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡಿದ ಆಡು ಪ್ರಾಣ ಕಳೆದುಕೊಂಡಿದೆ. ಬೀದಿ ನಾಯಿಗಳ ದಾಳಿಯಿಂದ ಆಡನ್ನು ರಕ್ಷಿಸಲು ಸ್ಥಳೀಯ ವರ್ತಕರು ಮುಂದಾಗಿದ್ದರೂ ನಾಯಿಗಳ ಗುಂಪು ದಾಳಿಯಿಂದ

ಕಡಬ: ಬೀದಿನಾಯಿಗಳ ಅಟ್ಟಹಾಸಕ್ಕೆ ಬಡಪಾಯಿ ಆಡು ಬಲಿ Read More »

ಪುತ್ತಿಲ ಪರಿವಾರದ ಗಡುವಿಗೆ ಇನ್ನೊಂದು ದಿನ ಬಾಕಿ| ಡೋಂಟ್ ಕೇರ್ ಮಾಡುತ್ತಿರುವ ಪುತ್ತೂರು ಬಿಜೆಪಿಯ ನಡೆ ಏನು?

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿರುವ ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನ ಪ್ರಕ್ರಿಯೆಗೆ ಪುತ್ತಿಲ ಪರಿವಾರ ನೀಡಿದ್ದ ಮೂರು ದಿನಗಳ ಗಡುವಿನಲ್ಲಿ 2 ದಿನಗಳು ಮುಗಿದಿದ್ದು ಇನ್ನೊಂದೆ ದಿನ ಬಾಕಿ ಇದೆ. ಮೂರು ದಿನದಲ್ಲಿ ಅರುಣ್ ಕುಮಾರ್ ಪುತ್ತಿಲರಿಗೆ ಬಿಜೆಪಿಯಲ್ಲಿ ಅಪೇಕ್ಷಿಸಿದ ಹುದ್ದೆ ನೀಡಲು ಪುತ್ತೂರಿನಲ್ಲಿ ನಡೆದಿದ್ದ ಪುತ್ತಿಲ ಪರಿವಾರದ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆದರೆ ಪುತ್ತಿಲ ಪರಿವಾರದ ಗಡುವಿಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಅತಂತ್ರವಾಗಿದ್ದರೂ ಬಿಜೆಪಿ ನಡೆ ಕುತೂಹಲಕ್ಕೆ ಕಾರಣವಾಗಿದೆ. ಹಿಂದುತ್ವದ ಶಕ್ತಿ

ಪುತ್ತಿಲ ಪರಿವಾರದ ಗಡುವಿಗೆ ಇನ್ನೊಂದು ದಿನ ಬಾಕಿ| ಡೋಂಟ್ ಕೇರ್ ಮಾಡುತ್ತಿರುವ ಪುತ್ತೂರು ಬಿಜೆಪಿಯ ನಡೆ ಏನು? Read More »

ಸುಳ್ಯ:ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ|ಸಮಾರಂಭದಲ್ಲಿ ಪಕ್ಷದ ಟೀ ಶರ್ಟ್ ಬಿಡುಗಡೆ

ಸಮಗ್ರ ನ್ಯೂಸ್:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಕ್ರೀಡಾಕೂಟ ಕಾರ್ಯಕ್ರಮವು ಫೆ. 5ರಂದು ಕೊಟ್ಯಾಡಿಯಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಆಗಮಿಸಿ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಆಟೋಟಪಗಳನ್ನು ನಡೆಸಲಾಯಿತು. ಕ್ರೀಡಾಕೂಟವನ್ನು ಸುಳ್ಯ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಉದ್ಘಾಟಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಸ್ಫರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ

ಸುಳ್ಯ:ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ|ಸಮಾರಂಭದಲ್ಲಿ ಪಕ್ಷದ ಟೀ ಶರ್ಟ್ ಬಿಡುಗಡೆ Read More »

ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು?

ಸಮಗ್ರ ನ್ಯೂಸ್: ಉಡುಪಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಸಂಸದೆ ಹಾಗು ಸುಳ್ಯ ಪಕ್ಷ ಕಚೇರಿಗೆ ಬೀಗ ಜಡಿದ ಪ್ರಕರಣ ಸಂಬಂಧ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ರವರು ತೀವ್ರ ಗರಂ ಆಗಿರುವುದು ಶಾಸಕರಾಧಿಯಾಗಿ ಪಕ್ಷ ನಾಯಕರನ್ನು ದಂಗುಬಡಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸುಳ್ಯ ಕಚೇರಿಗೆ ಬೀಗ ಹಾಕಲು ಕೋರ್ ಕಮಿಟಿಯವರು ಯಾರು..? ೧೦ ವರ್ಷಗಳಿಂದ ಕಚೇರಿ ಬಾಡಿಗೆ ಕಟ್ಟಡದಲ್ಲಿದೆ. ಯಾರ ಮನೆಯಿಂದಲೂ ಸಂಗ್ರಹಿಸಿ ಬಾಡಿಗೆ ಕಟ್ಟುತ್ತಿಲ್ಲ. ಪಕ್ಷದ ದೇಣಿಗೆಯಿಂದ ನಿರ್ವಹಿಸಲಾಗುತ್ತಿದೆ. ಪಕ್ಷ, ಅಥವಾ

ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು? Read More »