ಕರಾವಳಿ

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು 20, 21 ರಂದು ರೆಡ್ ಅಲರ್ಟ್, ಮೇ 22 ರಿಂದ 25 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಿಡಿಲು ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. […]

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ Read More »

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ| ಹಲವು ಬಿಜೆಪಿ ಕಾರ್ಯಕರ್ತರ ಬಂಧನ

ಸಮಗ್ರ ನ್ಯೂಸ್: ನೂತನ ಜಿಲ್ಲಾಡಳಿತ ಕೇಂದ್ರ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದ್ದು, ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಡೀಲ್‌ನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಯೆಯ್ಯಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲು ಆರಂಭಿಸಿದರು. ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ| ಹಲವು ಬಿಜೆಪಿ ಕಾರ್ಯಕರ್ತರ ಬಂಧನ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ರೌಡಿಶೀಟರ್ ಯಾಕೆ ಅಧ್ಯಕ್ಷನಾಗಬಾರದು? ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಟ್ರಸ್ಟ್ ಗೆ ಮಾಜಿ ರೌಡಿ ಶೀಟರ್, ಕಾಂಗ್ರೆಸ್ ನಾಯಕ ಹರೀಶ್ ಗೌಡರನ್ನು ಆಯ್ಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ದಿನೇಶ್ ಗುಂಡೂರಾವ್ ಯಾಕೆ ಆಗಬಾರದು ಎಂದಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹರೀಶ್ ಗೌಡ ಈಗ ರೌಡಿ ಶೀಟರ್ ಅಲ್ಲ. ಮಾಜಿ ರೌಡಿ ಶೀಟರ್. ರೌಡಿ ಶೀಟರ್ ಗಳು ಸುಧಾರಣೆಯಾಗಬಾರದಾ? ಅವರು ಈಗ ಹಾಗಿಲ್ಲ. ಹಾಗಾಗಿ ಅವರು

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ರೌಡಿಶೀಟರ್ ಯಾಕೆ ಅಧ್ಯಕ್ಷನಾಗಬಾರದು? ಸಚಿವ ದಿನೇಶ್ ಗುಂಡೂರಾವ್ Read More »

ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಉದ್ಘಾಟನೆ| ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಹುಕಾಲದ ಬೇಡಿಕೆಯಾಗಿದ್ದ ಪಡೀಲ್‌ನಲ್ಲಿ ನಿರ್ಮಿಸಿರುವ ಸುಸಜ್ಜಿತ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ “ಪ್ರಜಾ ಸೌಧ’ದ ಉದ್ಘಾಟನೆಯನ್ನು ಇಂದು ಮೇ 16 ರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಎಲ್ಲ ಇಲಾಖೆಗಳು ಈ ನೂತನ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿವೆ. ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ. ಆಧುನಿಕ ವ್ಯವಸ್ಥೆ ಯೊಂದಿಗೆ ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ಕಟ್ಟಡ ನಿರ್ಮಾಣವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮೇ 16ರಂದು ಮಧ್ಯಾಹ್ನ 3.20ಕ್ಕೆ

ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಉದ್ಘಾಟನೆ| ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ Read More »

ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು..!

ಸಮಗ್ರ ನ್ಯೂಸ್: ಪ್ರೀತಿಸಿದ ಹುಡುಗನ ಜೊತೆಗೆ ದಾಂಪತ್ಯ ಜೀವನಕ್ಕೆ ಚೈತ್ರಾ ಕುಂದಾಪುರ ಕಾಲಿಟ್ಟಿದ್ದರು. ಆದ್ರೇ ತಮ್ಮ ಮದುವೆಗೆ ಖುದ್ದು ತಂದೆಯನ್ನೇ ಕರೆದಿಲ್ಲ ಎಂಬ ಆರೋಪ ಕೇಳಿಬಂದಿದೆ. ಖುದ್ದು ಈ ಬಗ್ಗೆ ಮಾಧ್ಯಮಗಳ ಮುಂದೆ ಬಂದು ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಮಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೀಗ ಈ ಪ್ರಕರಣಕ್ಕೆ ಚೈತ್ರಾ ಕುಂದಾಪುರ ಟ್ವಿಸ್ಟ್ ಹಾಕಿದ್ದಾರೆ. ತಂದೆಯ ಮಾತು ಕೇಳುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಹೀಗೆ ಬರೆದುಕೊಂಡು ಶೇರ್

ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು..! Read More »

ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು| ತಂದೆಯಿಂದ ಆರೋಪ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ವಿವಾಹ ನೆರವೇರಿತು. ಸದ್ದಿಲ್ಲದೆ ಇವರ ವಿವಾಹ ವಿಚಾರ ಕೇಳಿ ಅಭಿಮಾನಿಗಳಿಗೆ ಶಾಕ್ ಆಗಿದ್ದಂತ್ತು ನಿಜ. ಇದೀಗ  ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ದೊಡ್ಡ ಆರೋಪ ಒಂದನ್ನು ಮಾಡಿದ್ದಾರೆ. ‘ನನ್ನ ಮಗಳು ವಿವಾಹಕ್ಕೆ ನನಗೆ ಸರಿಯಾದ ಆಮಂತ್ರಣ ಕೊಟ್ಟಿಲ್ಲ’ ಎಂದು ಅವರು ಆರೋಪಿಸಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ

ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು| ತಂದೆಯಿಂದ ಆರೋಪ Read More »

ಮಂಗಳೂರು: ಸೇನೆಯನ್ನು ಅವಮಾನಿಸಿ ವಿದ್ಯಾರ್ಥಿನಿ ಪೋಸ್ಟ್| ಸೋಶಿಯಲ್ ಮೀಡಿಯಾದಲ್ಲಿ ಆಪರೇಶನ್ ಸಿಂಧೂರಕ್ಕೆ ದಿಕ್ಕಾರ

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸುತ್ತಿರುವಂತ ಆಪರೇಷನ್ ಸಿಂಧೂರ್ ಕುರಿತಂತೆ ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಧಿಕ್ಕಾರ ಆಪರೇಷನ್ ಸಿಂಧೂರ್ ಎಂಬುದಾಗಿ ದೇಶ ವಿರೋಧಿ ಪೋಸ್ಟ್ ಮಾಡಿದ್ದು, ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವಂತ ರೇಷ್ಮಾ ಎಂಬ ವಿದ್ಯಾರ್ಥಿನಿಯೇ ಹೀಗೊಂದು ದೇಶ ವಿರೋಧಿ ಪೋಸ್ಟ್ ನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಾಕಿರೋದು. ನನ್ನ ಮನೆಯ ದೀಪಕ್ಕೆ ಅವನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ.

ಮಂಗಳೂರು: ಸೇನೆಯನ್ನು ಅವಮಾನಿಸಿ ವಿದ್ಯಾರ್ಥಿನಿ ಪೋಸ್ಟ್| ಸೋಶಿಯಲ್ ಮೀಡಿಯಾದಲ್ಲಿ ಆಪರೇಶನ್ ಸಿಂಧೂರಕ್ಕೆ ದಿಕ್ಕಾರ Read More »

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಇಂದು (ಮೇ.9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯಂತೆ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರವೇ ಮದುವೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ಗೋಲ್ಡ್ ಸುರೇಶ್ ಮದುವೆಯಲ್ಲಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದರು. ಕಾಲೇಜಿನಲ್ಲಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ Read More »

ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಮೇ 1 ರಂದು ನಡೆದಿದೆ. ಇದೀಗ ತನಿಖೆಯು ನಡೆಯುತ್ತಿದ್ದು ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ

ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ Read More »

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2 ರಿಂದ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಶುಕ್ರವಾರ ಆದೇಶ ಮಾಡಿದ್ದಾರೆ. ‘ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ Read More »