ಕರಾವಳಿ

ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟಿಯೊಂದಕ್ಕೆ ಬಸ್ಸೊಂದು ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ‌ ಹೆದ್ದಾರಿಯ ಗುತ್ತಿಗಾರು ಸಮೀಪದ ಬಾಕಿಲ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸ್ ಬಾಕಿಲ ತಿರುವಿನಲ್ಲಿ ನಾಲ್ಕೂರಿನ ಶಿವರಾಮ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟಿಯನ್ನು ಬಸ್ಸ್ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ ಎಂಬ ಮಾಹಿತಿ ಲಭಿಸಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಶಿವರಾಮರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸುವ

ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು Read More »

ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಶಃ ಅರಣ್ಯ ಸಮಸ್ಯೆ ಸೇರಿ ಅರಣ್ಯ – ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಳ್ಯ

ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ Read More »

ಸುಳ್ಯ: ಐವರ್ನಾಡಿನ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ| ಇಂದು ರಾತ್ರಿ ಶ್ರೀದೈವಗಳಿಗೆ ನರ್ತನಸೇವೆ

ಸಮಗ್ರ ನ್ಯೂಸ್: ಇತಿಹಾಸ ಪ್ರಸಿದ್ದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೊಯಿಲ ಉಳ್ಳಾಕುಲು ದೈವಗಳ ಭಂಡಾರ ಆಗಮನದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು.ಬಳಿಕ ದರ್ಶನ ಬಲಿ ,ಬಟ್ಟಲು ಕಾಣಿಕೆ ನಡೆಯಿತು. ದರ್ಶನಬಲಿ ಬಳಿಕ ಶುದ್ಧಿ ಕಲಶ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ,ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಇಂದು(ಫೆ.10) ರಾತ್ರಿ ಗಂಟೆ 10.00

ಸುಳ್ಯ: ಐವರ್ನಾಡಿನ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ| ಇಂದು ರಾತ್ರಿ ಶ್ರೀದೈವಗಳಿಗೆ ನರ್ತನಸೇವೆ Read More »

ಜ್ಯೋತಿಷಿ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ರಿಗೆ ಮೈಸೂರಿನಲ್ಲಿ ಸಾಧಕರತ್ನ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಮೈಸೂರಿನ ಪುರಭವನದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಬೃಹತ್ ಸಮಾರಂಭದಲ್ಲಿ ಖ್ಯಾತ ಜ್ಯೋತಿಷಿ, ಗಾಯಕ, ಚಿತ್ರ ನಿರ್ದೇಶಕ ಮತ್ತು ಸಾಹಿತಿಗಳಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಸಾಧಕ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿಯದೊಟ್ಟು, ಸಂತರಾದ ತುಕಾರಾಮ್ ಸುರ್ವೇ, ಗಾಯಕ ಪ್ರಕಾಶ್ ಗೊಂಧಳಿ, ಖ್ಯಾತ ವಾಗ್ಮಿ

ಜ್ಯೋತಿಷಿ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ರಿಗೆ ಮೈಸೂರಿನಲ್ಲಿ ಸಾಧಕರತ್ನ ಪ್ರಶಸ್ತಿ ಪ್ರದಾನ Read More »

ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಧರ್ಮವನ್ನು ಎಳೆದು ತಂದ ಹರೀಶ್ ಪೂಂಜಾ| ಹಿಂದೂಗಳ ತೆರಿಗೆ ಹಿಂದೂಗಳಿಗೆ ನೀಡಲಿ ಎಂದ ಶಾಸಕ

ಸಮಗ್ರ ನ್ಯೂಸ್: ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ನಡೆಯುತ್ತಿರುವ ತೆರಿಗೆ ಗಲಾಟೆ ನಡುವೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣ ಮಾಡಿರುವ ಪೋಸ್ಟ್ ಒಂದು ಇದೀಗ ವೈರಲ್ ಆಗಿದೆ. ನನ್ನ ತೆರಿಗೆ ನನ್ನ ಹಕ್ಕು ಆಂದೋಲನದ ಹಿನ್ನೆಲೆಯಲ್ಲಿ ಅವರು “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆಹಣ ಹಿಂದುಗಳ ಅಭಿವೃದ್ಧಿಗೆ ಮಾತ್ರ ಉಪಯೋಗಿಸಬೇಕು. ಹಿಂದೂಗಳು ಕಟ್ಟಿದ ತೆರಿಗೆ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ, ಹಿಂದುಗಳ ತೆರಿಗೆ ಹಿಂದುಗಳ ಹಕ್ಕು” ಎಂದು

ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಧರ್ಮವನ್ನು ಎಳೆದು ತಂದ ಹರೀಶ್ ಪೂಂಜಾ| ಹಿಂದೂಗಳ ತೆರಿಗೆ ಹಿಂದೂಗಳಿಗೆ ನೀಡಲಿ ಎಂದ ಶಾಸಕ Read More »

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ

ಸಮಗ್ರ ನ್ಯೂಸ್: ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು, ಮಂಗಳವಾರ ರಾತ್ರಿ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರದ ಭಕ್ತರ ಸಮ್ಮುಖದಲ್ಲಿ ಜರುಗಿತು. ಈ ವೇಳೆ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ ವಿವಿಧ ವೈದಿಕ ‌, ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥೋತ್ಸವ ಜರುಗಿತು.

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ Read More »

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದಿನಿಂದ (ಫೆ.8) ಫೆ.10 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ. 8ರಂದು ಪೂರ್ವಾಹ್ನ ಗಂಟೆ 8-30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪೂರ್ವಾಹ್ನ ಗಂಟೆ 10ಕ್ಕೆ ಉಗ್ರಾಣ ತುಂಬುವುದು, ಪೂರ್ವಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ 7.30 ರಿಂದ ರಂಗಪೂಜೆಗಳು ನಡೆಯಲಿದೆ. ಫೆ.9ರಂದು ಪೂರ್ವಾಹ್ನ 9ಗಂಟೆಯಿಂದ ಶತರುದ್ರಾಭಿಷೇಕ, ಅಶ್ವಥನಾರಾಯಣ ಪೂಜೆ, 108 ಕಾಯಿ

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪ| ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ| ಶಾಸಕ ಸುನಿಲ್ ಕುಮಾರ್ ಗೆ ಕಗ್ಗಂಟಾಗುತ್ತಾ ಪ್ರಕರಣ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಅವ್ಯವಹಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಎರ್ಲಪಾಡಿ ಗ್ರಾಮದ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಕೋರಿ ಸಿಎಂ ಸಿದ್ದರಾಮಯ್ಯಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಪತ್ರ ಬರೆದಿದ್ದರು. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪ| ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ| ಶಾಸಕ ಸುನಿಲ್ ಕುಮಾರ್ ಗೆ ಕಗ್ಗಂಟಾಗುತ್ತಾ ಪ್ರಕರಣ Read More »

ವಿಟ್ಲ: ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ| ಕೋಟ್ಯಾಂತರ ರೂ. ನಗದು, ಚಿನ್ನಾಭರಣ ದೋಚಿದ ಕಳ್ಳರು

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಿಟ್ಲ ಕರ್ಣಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯಲ್ಲಿ ಗುರುವಾರ ಭಾರೀ ಕಳ್ಳತನ ನಡೆದಿದ್ದು, ಕೋಟ್ಯಾಂತರ ರೂ. ಮೌಲ್ಯದ ನಗ- ನಗದನ್ನು ದೋಚಿದ ಘಟನೆ ನಡೆದಿದೆ. ಸುಮಾರು 2 -3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ. ಕೃತ್ಯವು ಫೆ. 7ರ ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕರ್ಣಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯು ಕಲ್ಲಡ್ಕ ಕಾಂಞಂಗಾಡ್‌ ಅಂತಾರಾಜ್ಯ ಹೆದ್ದಾರಿಯ ಅಂಚಿನಲ್ಲಿದೆ.

ವಿಟ್ಲ: ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ| ಕೋಟ್ಯಾಂತರ ರೂ. ನಗದು, ಚಿನ್ನಾಭರಣ ದೋಚಿದ ಕಳ್ಳರು Read More »

ಸುಳ್ಯ: ಐವರ್ನಾಡಿನಲ್ಲಿ ಧ.ಗ್ರಾ.ಯೋ ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ| ಅಷ್ಟಕ್ಕೂ ಅಲ್ಲಿ ನಡೆದಿದ್ದೇನು?

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಮುತ್ತಿಗೆ ನಡೆಸಿ ಛೀಮಾರಿ ಹಾಕಿದ ಘಟನೆ ದ.ಕ‌ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಏನಿದು ಪ್ರಕರಣ?ಕಳೆದ ಕೆಲ ತಿಂಗಳ ಹಿಂದೆ ಐವರ್ನಾಡಿನಲ್ಲಿ ಕುಂದಾಪುರ ಮೂಲದ ಯೂಟ್ಯೂಬ್ ಚಾನೆಲ್ ಒಂದು ಸಂದರ್ಶನ ನಡೆಸಿ ಕಾರ್ಯಕ್ರಮ ಬಿತ್ತರಿಸಿತ್ತು. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಕುರಿತಂತೆ ವರದಿ ಮಾಡಲಾಗಿದ್ದು, ಐವರ್ನಾಡಿನಲ್ಲಿ ನಡೆಸಿದ ಸಂದರ್ಶನದ ತುಣುಕಿನಲ್ಲಿ ಜಾತಿನಿಂದನೆ ಕುರಿತಂತೆ ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆ ಯೂಟ್ಯೂಬ್

ಸುಳ್ಯ: ಐವರ್ನಾಡಿನಲ್ಲಿ ಧ.ಗ್ರಾ.ಯೋ ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ| ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? Read More »