ಕರಾವಳಿ

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ಘಟಕಗಳ ತಾತ್ಕಾಲಿಕ ಬಂದ್ ಗೆ ಡಿಸಿ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಘಟಕದಲ್ಲಿ ನಡೆದ ಸ್ಪೋಟದಿಂದ ಮೂವರ ಸಾವು ಘಟನೆ ನಡೆದ ಕೂಡಲೇ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ದ.ಕ ಜಿಲ್ಲಾಧಿಕಾರಿ(ಪ್ರಭಾರ) ಡಾ.ಆನಂದ ಕೆ. ಆದೇಶ ಮಾಡಿದ್ದಾರೆ. ದ‌‌‌.ಕ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿರ್ಬಂಧಿಸಿ ಅಮಾನತಿನಲ್ಲಿಡಲು ಆದೇಶ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ ಜಿಲ್ಲಾ […]

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ಘಟಕಗಳ ತಾತ್ಕಾಲಿಕ ಬಂದ್ ಗೆ ಡಿಸಿ ಆದೇಶ Read More »

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!?

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ನಿಷೇಧಿಸಲಾಗಿದೆ. ಅಲ್ಲದೇ ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್‌ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!? Read More »

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಪುನರಾಯ್ಕೆ..!?

ಸಮಗ್ರ ನ್ಯೂಸ್: ದ.ಕ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಮಂಡಲವಾರು ನೇಮಕ ಪ್ರಕ್ರಿಯೆಗಳು ನಡೆಯುತಿದೆ. ಈ ನಡುವೆ ಸುಳ್ಯ ಮಂಡಲ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರನ್ನು ಕೋರ್ ಕಮಿಟಿ ಆಯ್ಕೆ ಮಾಡಿದ್ದು ಘೋಷಣೆಯ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿ ಬಿಜೆಪಿ ಮಾಜಿ ಸಂಘಟನಾ ಕಾರ್ಯದರ್ಶಿ ಬೆಳ್ಳಾರೆ ಮೂಲದ ಯತೀಶ್ ಆರ್ವಾರ್ ಅವರನ್ನು ಆಯ್ಕೆ ಮಾಡಲಾಗಿದೆ.ವಕೀಲ ಮತ್ತು ಎಪಿಎಂಸಿ

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಪುನರಾಯ್ಕೆ..!? Read More »

ಪುತ್ತೂರು: ಟಿಪ್ಪರ್ – ಸ್ಕೂಟರ್ ನಡುವೆ ಅಪಫಾತ| ಶಾಲಾ ಶಿಕ್ಷಕಿ ದುರ್ಮರಣ

ಸಮಗ್ರ ನ್ಯೂಸ್: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ.ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ

ಪುತ್ತೂರು: ಟಿಪ್ಪರ್ – ಸ್ಕೂಟರ್ ನಡುವೆ ಅಪಫಾತ| ಶಾಲಾ ಶಿಕ್ಷಕಿ ದುರ್ಮರಣ Read More »

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ಮಾಲೀಕ ಸೈಯದ್ ಬಶೀರ್ ಅರೆಸ್ಟ್

ಸಮಗ್ರ ನ್ಯೂಸ್: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿಸುಡುಮದ್ದು ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನಪ್ಪಿದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್‌ ಮೇಲೆ ಎಫ್‌ಐಆರ್ ದಾಖಲಾಗಿದೆ‌. ಪ್ರಕರಣ

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ಮಾಲೀಕ ಸೈಯದ್ ಬಶೀರ್ ಅರೆಸ್ಟ್ Read More »

ಪಂಜ: ಫೆ. 1ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾಷಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಾವಿರ ಸೀಮೆ ಶ್ರೀ ದೇವರ ವರ್ಷಾಷಧಿ ಜಾತ್ರಾ ಮಹೋತ್ಸವವು ಫೆ. 1ರಿಂದ ಫೆ. 9ರವರೆಗೆ ನಡೆಯಲಿದೆ. ಫೆ. 1ರಂದು ಸಂಜೆ 6.00ಕ್ಕೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ ರಾತ್ರಿ ಗಂಟೆ 7.00ಕ್ಕೆ ಧ್ವಜಾರೋಹಣ, ಫೆ. 2ರಂದು ಬೆಳಿಗ್ಗೆ ಗಂಟೆ 7.00ಕ್ಕೆ ನಾಗತೀರ್ಥದ ಮೂಲಸ್ಥಾನ ಬಂಟಮಲೆಯಿಂದ ಶ್ರೀ ದೇವಾಲಯಕ್ಕೆ ತೀರ್ಥ ತರುವುದು, ಮಹಾಪೂಜೆ, ನಿತ್ಯ ಬಲಿ. ಫೆ. 3ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯ ಬಲಿ, ಸಂಜೆ ಗಂಟೆ 4.30ರಿಂದ ಹಸಿರು

ಪಂಜ: ಫೆ. 1ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾಷಧಿ ಜಾತ್ರೋತ್ಸವ Read More »

ಉಜಿರೆ: ರಾಷ್ಟ್ರೀಯ ಹಿಂ.ಜಾ.ವೇ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ

ಸಮಗ್ರ ನ್ಯೂಸ್: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ತಾಯಿ ಅಮಣಿ ಶೆಟ್ಟಿ ನಿಧನರಾಗಿದ್ದಾರೆ. 85 ವರ್ಷ ಪ್ರಾಯದ ಅಮಣಿ ಶೆಟ್ಟಿಯವರು ವಯೋಸಹಜ ಖಾಯಿಲೆಯಿಂದ ಬಳಲುತಿದ್ದರು. ಮೃತರು ಪುತ್ರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು ಇಬ್ಬರು ಪುತ್ರಿಯವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ತಿಮರೋಡಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಉಜಿರೆ: ರಾಷ್ಟ್ರೀಯ ಹಿಂ.ಜಾ.ವೇ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ Read More »

ಬೆಳ್ತಂಗಡಿ; ಸುಡುಮದ್ದು ತಯಾರಿಕೆ ಘಟಕದಲ್ಲಿ ಸ್ಫೋಟ| ಇಬ್ಬರು ಮೃತ್ಯು; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ‌ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮಾಹಿತಿಗಳು ಲಭ್ಯವಾಗುತ್ತಿದೆ.

ಬೆಳ್ತಂಗಡಿ; ಸುಡುಮದ್ದು ತಯಾರಿಕೆ ಘಟಕದಲ್ಲಿ ಸ್ಫೋಟ| ಇಬ್ಬರು ಮೃತ್ಯು; ಹಲವು ಮಂದಿಗೆ ಗಾಯ Read More »

ಕಸಕಡ್ಡಿಗೆ ಹಾಕಿದ ಬೆಂಕಿಗೆ ಸಿಲುಕಿ ದಂಪತಿ ಸಾವು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದಂಪತಿ ಸಜೀವ ದಹನವಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಟಾಡಿಯಲ್ಲಿ ಕಸ ಕಡ್ಡಿಗೆ ಹಾಕಿದ ಬೆಂಕಿಗೆ ಸಿಲುಕಿ ವೃದ್ಧ ದಂಪತಿ ಸಾವಿಗೀಡಾಗಿದ್ದಾರೆ. ಗಿಲ್ಬರ್ಟ್ ಕಾರ್ಲೋ(78) ಕ್ರಿಸ್ಟಿನಾ ಕಾರ್ಲೊ (70) ಮೃತ ಪಟ್ಟವರು. ತಮ್ಮ ಮನೆಯ ಪಕ್ಕದ ಕಸಕಡ್ಡಿಗೆ ಬೆಂಕಿ ಹಾಕಿದ ದಂಪತಿ, ಇದು ಮನೆಯ ಪಕ್ಕದ ಕಾಡಿಗೂ ಈ ಬೆಂಕಿ ತಗುಲಿದೆ. ಅದನ್ನು ನಂದಿಸಲು ಮುಂದಾದ ದಂಪತಿ ಬೆಂಕಿಯ ಕೆನ್ನಾಲೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ.

ಕಸಕಡ್ಡಿಗೆ ಹಾಕಿದ ಬೆಂಕಿಗೆ ಸಿಲುಕಿ ದಂಪತಿ ಸಾವು Read More »

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ

ಸಮಗ್ರ ನ್ಯೂಸ್: ಜ. 28, ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನಡೆಯಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಪರಿವಾರ ದೈವಗಳಾದ ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ ದೈವಗಳ ಕಟ್ಟುಕಟ್ಟಳೆಯ ನೇಮ, ಬೂಳ್ಯ ವಿತರಣೆ, ನಂತರ ಪೂ. 11:30 ರಿಂದ

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ Read More »