ಕರಾವಳಿ

ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ನ್ಯೂಸ್: ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಗಳೂರು ಹೊರವಲಯದ ವಲಚ್ಚಿಲ್ ಬಳಿ ನಡೆದಿದೆ. ಶ್ರೀನಿವಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ‌ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಊಟದಲ್ಲಿ ಹುಳ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಶಂಕೆ ವ್ಯಕ್ತವಾಗಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ Read More »

ಕಡಬ: ಬೀದಿನಾಯಿಗಳ ಅಟ್ಟಹಾಸಕ್ಕೆ ಬಡಪಾಯಿ ಆಡು ಬಲಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಯ ಕಡಬದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು ಜನರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಕಡಬ ಪೇಟೆಯಲ್ಲಿ ಅಲೆದಾಡುತ್ತಿದ್ದ ಆಡನ್ನು ಬೆನ್ನಟ್ಟಿದ್ದ ಬೀದಿನಾಯಿಗಳು ಅದರ ಹಿಂಬದಿ ಕಚ್ಚಿ ಎಳೆದಾಡಿ ಸಿಗಿದು ಹಾಕಿದ ಘಟನೆ ನಡೆದಿದೆ. ಬಡಪಾಯಿ ಆಡಿನ ಕಾಲು ಸಹಿತ ಹಿಂಭಾಗದ ಮಾಂಸವನ್ನು ಬೀದಿನಾಯಿಗಳು ಕಚ್ಚಿ ತಿಂದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡಿದ ಆಡು ಪ್ರಾಣ ಕಳೆದುಕೊಂಡಿದೆ. ಬೀದಿ ನಾಯಿಗಳ ದಾಳಿಯಿಂದ ಆಡನ್ನು ರಕ್ಷಿಸಲು ಸ್ಥಳೀಯ ವರ್ತಕರು ಮುಂದಾಗಿದ್ದರೂ ನಾಯಿಗಳ ಗುಂಪು ದಾಳಿಯಿಂದ

ಕಡಬ: ಬೀದಿನಾಯಿಗಳ ಅಟ್ಟಹಾಸಕ್ಕೆ ಬಡಪಾಯಿ ಆಡು ಬಲಿ Read More »

ಪುತ್ತಿಲ ಪರಿವಾರದ ಗಡುವಿಗೆ ಇನ್ನೊಂದು ದಿನ ಬಾಕಿ| ಡೋಂಟ್ ಕೇರ್ ಮಾಡುತ್ತಿರುವ ಪುತ್ತೂರು ಬಿಜೆಪಿಯ ನಡೆ ಏನು?

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿರುವ ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನ ಪ್ರಕ್ರಿಯೆಗೆ ಪುತ್ತಿಲ ಪರಿವಾರ ನೀಡಿದ್ದ ಮೂರು ದಿನಗಳ ಗಡುವಿನಲ್ಲಿ 2 ದಿನಗಳು ಮುಗಿದಿದ್ದು ಇನ್ನೊಂದೆ ದಿನ ಬಾಕಿ ಇದೆ. ಮೂರು ದಿನದಲ್ಲಿ ಅರುಣ್ ಕುಮಾರ್ ಪುತ್ತಿಲರಿಗೆ ಬಿಜೆಪಿಯಲ್ಲಿ ಅಪೇಕ್ಷಿಸಿದ ಹುದ್ದೆ ನೀಡಲು ಪುತ್ತೂರಿನಲ್ಲಿ ನಡೆದಿದ್ದ ಪುತ್ತಿಲ ಪರಿವಾರದ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆದರೆ ಪುತ್ತಿಲ ಪರಿವಾರದ ಗಡುವಿಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಅತಂತ್ರವಾಗಿದ್ದರೂ ಬಿಜೆಪಿ ನಡೆ ಕುತೂಹಲಕ್ಕೆ ಕಾರಣವಾಗಿದೆ. ಹಿಂದುತ್ವದ ಶಕ್ತಿ

ಪುತ್ತಿಲ ಪರಿವಾರದ ಗಡುವಿಗೆ ಇನ್ನೊಂದು ದಿನ ಬಾಕಿ| ಡೋಂಟ್ ಕೇರ್ ಮಾಡುತ್ತಿರುವ ಪುತ್ತೂರು ಬಿಜೆಪಿಯ ನಡೆ ಏನು? Read More »

ಸುಳ್ಯ:ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ|ಸಮಾರಂಭದಲ್ಲಿ ಪಕ್ಷದ ಟೀ ಶರ್ಟ್ ಬಿಡುಗಡೆ

ಸಮಗ್ರ ನ್ಯೂಸ್:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಕ್ರೀಡಾಕೂಟ ಕಾರ್ಯಕ್ರಮವು ಫೆ. 5ರಂದು ಕೊಟ್ಯಾಡಿಯಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಆಗಮಿಸಿ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಆಟೋಟಪಗಳನ್ನು ನಡೆಸಲಾಯಿತು. ಕ್ರೀಡಾಕೂಟವನ್ನು ಸುಳ್ಯ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಉದ್ಘಾಟಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಸ್ಫರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ

ಸುಳ್ಯ:ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ|ಸಮಾರಂಭದಲ್ಲಿ ಪಕ್ಷದ ಟೀ ಶರ್ಟ್ ಬಿಡುಗಡೆ Read More »

ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು?

ಸಮಗ್ರ ನ್ಯೂಸ್: ಉಡುಪಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಸಂಸದೆ ಹಾಗು ಸುಳ್ಯ ಪಕ್ಷ ಕಚೇರಿಗೆ ಬೀಗ ಜಡಿದ ಪ್ರಕರಣ ಸಂಬಂಧ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ರವರು ತೀವ್ರ ಗರಂ ಆಗಿರುವುದು ಶಾಸಕರಾಧಿಯಾಗಿ ಪಕ್ಷ ನಾಯಕರನ್ನು ದಂಗುಬಡಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸುಳ್ಯ ಕಚೇರಿಗೆ ಬೀಗ ಹಾಕಲು ಕೋರ್ ಕಮಿಟಿಯವರು ಯಾರು..? ೧೦ ವರ್ಷಗಳಿಂದ ಕಚೇರಿ ಬಾಡಿಗೆ ಕಟ್ಟಡದಲ್ಲಿದೆ. ಯಾರ ಮನೆಯಿಂದಲೂ ಸಂಗ್ರಹಿಸಿ ಬಾಡಿಗೆ ಕಟ್ಟುತ್ತಿಲ್ಲ. ಪಕ್ಷದ ದೇಣಿಗೆಯಿಂದ ನಿರ್ವಹಿಸಲಾಗುತ್ತಿದೆ. ಪಕ್ಷ, ಅಥವಾ

ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು? Read More »

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ನೇಮಕ ಗೊಂದಲ| ಮ್ಯಾರಥಾನ್ ಸಭೆ ನಡೆದರೂ ನಿರ್ಧಾರ ತಿಳಿಸದ ನಾಯಕರು

ಸಮಗ್ರ ನ್ಯೂಸ್: ಬಿಜೆಪಿ‌‌ ಮಂಡಲ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಸುಳ್ಯದಲ್ಲಿ ನಡೆದ ಮ್ಯಾರಥಾನ್ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಸಭೆ ಅಂತ್ಯವಾಗಿದ್ದು, ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುತ್ತೇವೆ ಎಂದಷ್ಟೇ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷರ ನೇಮಕ ವಿಷಯದಲ್ಲಿ

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ನೇಮಕ ಗೊಂದಲ| ಮ್ಯಾರಥಾನ್ ಸಭೆ ನಡೆದರೂ ನಿರ್ಧಾರ ತಿಳಿಸದ ನಾಯಕರು Read More »

ಸುಳ್ಯ: ಪಾದಾಚಾರಿ‌ ಮಹಿಳೆ ಮೇಲೆ ಹರಿದ ಲಾರಿ| ಗಾಯಾಳು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಯೊಬ್ಬರಿಗೆ ಯಮಸ್ವರೂಪಿ ಲಾರಿ ಗುದ್ದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ನಗರದ ಬಸ್ ನಿಲ್ದಾಣ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮಾಣಿ‌-ಮೈಸೂರು ರಾ. ಹೆದ್ದಾರಿಯಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ತಮಿಳು ನಾಡು ನೋಂದಣಿ ಲಾರಿಯೊಂದು ಮಹಿಳೆಗೆ ಗುದ್ದಿದ್ದು, ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮಾರು 40 ವರ್ಷ ಪ್ರಾಯವಿರಬಹುದೆಂದು ಅಂದಾಜಿಸಲಾಗಿದೆ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಪತ್ತೆಯಾಗಿರುವುದಿಲ್ಲ. ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ: ಪಾದಾಚಾರಿ‌ ಮಹಿಳೆ ಮೇಲೆ ಹರಿದ ಲಾರಿ| ಗಾಯಾಳು ಸ್ಥಳದಲ್ಲೇ ಸಾವು Read More »

ಸುಳ್ಯ: ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಫೆ.7) ಬೆಳಿಗ್ಗೆ ಸಂಭವಿಸಿದೆ. ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಪುತ್ತೂರು ತಾಲೂಕಿನ ತಿಂಗಳಾಡಿಯ ವಸಂತ ಎಂಬವರು ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿಕಾರರಾಗಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗಿದ್ದರು. ಇದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿತ್ತು‌ ಎಂದು ತಿಳಿದುಬಂದಿದೆ. ಮೃತರು ಪತ್ನಿ

ಸುಳ್ಯ: ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕುಮಾರ ಪರ್ವತ ಚಾರಣಕ್ಕೆ ನಿಷೇಧ ಯಾಕೆ? ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆಯಿಂದ ಚಾರಣ ಮಾಡಬಹುದಾದ ಪ್ರಸಿದ್ಧ ಸ್ಥಳ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ಹೇರಿದ್ದೇಕೆ ಎಂಬ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರ ಪರ್ವತ ಚಾರಣಪಥದಲ್ಲಿ ಜನಜಂಗುಳಿಯಿಂದ ಪರಿಸರ ಹಾನಿ ಭೀತಿ ಎದುರಾಗಿದೆ. ಹೀಗಾಗಿ ಚಾರಣ ನಿಯಂತ್ರಣ ಸಂಬಂಧ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಅದರ ಜೊತೆಗೆ ಚಾರಣಕ್ಕೆ ಆನ್ ಲೈನ್ ದಾಖಲಾತಿ ಕ್ರಮ

ಕುಮಾರ ಪರ್ವತ ಚಾರಣಕ್ಕೆ ನಿಷೇಧ ಯಾಕೆ? ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ Read More »

ಕರಾವಳಿಯಲ್ಲಿ ಮತ್ತೆ ಕೆಂಪು ಉಗ್ರರ ಕರಿನೆರಳು| ಉಡುಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ನಕ್ಸಲರ ಓಡಾಟ!!

ಸಮಗ್ರ ನ್ಯೂಸ್: ದಶಕದಿಂದ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಆಯಕ್ಟೀವ್ ಆಗಿದ್ದು ಉಡುಪಿಯ ಬೈಂದೂರು ಭಾಗದಲ್ಲಿ ಓಡಾಟ ಆರಂಭವಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲ್ಲೂರು ಪೊಲೀಸ್​ ಠಾಣಾ ವ್ಯಾಪ್ತಿಯ ಹಲವೆಡೆ ನಕ್ಸಲರ ಓಡಾಟದ ಸುಳಿವು ಸಿಕ್ಕಿದೆ. ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮಗಳ ಹಲವು ಮನೆಗಳಿಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಶಸ್ತ್ರ ಸಜ್ಜಿತ ನಕ್ಸಲರು ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದರ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಕರಾವಳಿಯಲ್ಲಿ ಮತ್ತೆ ಕೆಂಪು ಉಗ್ರರ ಕರಿನೆರಳು| ಉಡುಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ನಕ್ಸಲರ ಓಡಾಟ!! Read More »