ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ಘಟಕಗಳ ತಾತ್ಕಾಲಿಕ ಬಂದ್ ಗೆ ಡಿಸಿ ಆದೇಶ
ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಘಟಕದಲ್ಲಿ ನಡೆದ ಸ್ಪೋಟದಿಂದ ಮೂವರ ಸಾವು ಘಟನೆ ನಡೆದ ಕೂಡಲೇ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ದ.ಕ ಜಿಲ್ಲಾಧಿಕಾರಿ(ಪ್ರಭಾರ) ಡಾ.ಆನಂದ ಕೆ. ಆದೇಶ ಮಾಡಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿರ್ಬಂಧಿಸಿ ಅಮಾನತಿನಲ್ಲಿಡಲು ಆದೇಶ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ ಜಿಲ್ಲಾ […]










