ಕರಾವಳಿ

ಕಡಬ: ಮೊಬೈಲ್ ಶಾಪ್ ಬೀಗ ಮುರಿದು ಮೊಬೈಲ್, ಹಣ ಕಳ್ಳತನ| ಸಿಸಿಟಿವಿ ಯಲ್ಲಿ ದೃಶ್ಯ ಸೆರೆ

ಸಮಗ್ರ ನ್ಯೂಸ್: ಆಲಂಕಾರು ಶ್ರೀ ದುರ್ಗಾಟವರ್ ನಲ್ಲಿ ಕಾರ್ಯಚರಿಸುತ್ತಿದ್ದ ಸಾನಿಧ್ಯ ಮೊಬೈಲ್ ಅಂಗಡಿಯ ಎರಡು ಬೀಗಗಳನ್ನು ಏಕೋ ಬ್ಲಡ್ ಮೂಲಕ ಕತ್ತರಿಸಿ ಮೊಬೈಲ್ ಹಾಗೂ ಹಣ ಕಳ್ಳತನ ಮಾಡಿದ ಘಟನೆ ಫೆ.5 ರಂದು ರಾತ್ರಿ ಅಂದಾಜು 1:30 ಗಂಟೆಯ ಸಮಯಕ್ಕೆ ನಡೆದಿದೆ. ಸಿ.ಸಿ ಟಿವಿ ವೀಡಿಯೋ ಮೂಲಕ ಕಡಬ ಪೋಲಿಸರು ಪರೀಶಿಲನೆ ನಡೆಸಿದಾಗ ಆತ ಹೊರ ರಾಜ್ಯದಿಂದ ಬಂದಿದ್ದು ನೆಕ್ಕರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಹತ್ತಿರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಒಂದು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದಾನೆ

ಕಡಬ: ಮೊಬೈಲ್ ಶಾಪ್ ಬೀಗ ಮುರಿದು ಮೊಬೈಲ್, ಹಣ ಕಳ್ಳತನ| ಸಿಸಿಟಿವಿ ಯಲ್ಲಿ ದೃಶ್ಯ ಸೆರೆ Read More »

ಸುಳ್ಯ: ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಅವರಿಗೆ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಅಕ್ಷಯ ಬಾಬ್ಲು ಬೆಟ್ಟು ಹನುಮಾನಾಸನದಲ್ಲಿ 50 ನಿಮಿಷ 20 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಮತ್ತು ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಇದರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಫೆ. 5ರಂದು ಸಂತೃಪ್ತಿ ಸಭಾಭವನ ಏನೇಕಲ್ಲಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸುಂದರ ಗೌಡ ನೆರವೇರಿಸಿದರು. ಶಾಲಾ ಗುರುಗಳಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಪರ ಕೃಷಿಕ ರೇಗಪ್ಪ ಗೌಡ, ಸುಬ್ರಹ್ಮಣ್ಯ ಗ್ರಾಮ

ಸುಳ್ಯ: ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಅವರಿಗೆ ಪ್ರಶಸ್ತಿ ಪ್ರದಾನ Read More »

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸ ಮುಖ| ನಳಿನ್ ಕುಮಾರ್ ಗೆ ಸಿಗಲ್ವಂತೆ ಟಿಕೆಟ್!! ಕಾಂಗ್ರೆಸ್ ನಿಂದ ಎಚ್ಚರಿಕೆಯ ನಡೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಬಿಜೆಪಿಯ ಭದ್ರಕೋಟೆ. ಕರಾವಳಿ ಭಾಗದ ಪ್ರಮುಖ ಲೋಕಸಭಾ ಕ್ಷೇತ್ರವಾದ ದಕ್ಷಿಣ ಕನ್ನಡದಲ್ಲಿ ಈ ಬಾರಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.‌ ಕಮಲ ಪಕ್ಷದ ಈ ನಡೆ ಅಚ್ಚರಿ ಮೂಡಿಸಿದೆ. ಕರ್ನಾಟಕ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲು ಬೇರೆ ಅಭ್ಯರ್ಥಿ ಆಯ್ಕೆಯಾದರೂ ಅಚ್ಚರಿ ಇಲ್ಲ. ರಾಷ್ಟ್ರೀಯತೆ ಹಾಗೂ ಸಾಮಾಜಿಕ, ಹಿಂದೂ ಪರ ಕೆಲಸ ಮಾಡುತ್ತಿರುವ ಮುಖಂಡರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸ ಮುಖ| ನಳಿನ್ ಕುಮಾರ್ ಗೆ ಸಿಗಲ್ವಂತೆ ಟಿಕೆಟ್!! ಕಾಂಗ್ರೆಸ್ ನಿಂದ ಎಚ್ಚರಿಕೆಯ ನಡೆ Read More »

ಬಿಜೆಪಿಗೆ ಮೂರು ದಿನಗಳ ಗಡುವು ನೀಡಿದ ಪುತ್ತಿಲ ಪರಿವಾರ

ಸಮಗ್ರ ನ್ಯೂಸ್: ಬಿಜೆಪಿಯಿಂದ ಪುತ್ತಿಲ ಪರಿವಾರಕ್ಕೆ ಷರತ್ತು ಬದ್ಧ ಆಹ್ವಾನ ಸಿಕ್ಕಿರುವ ಹಿನ್ನಲೆಯಲ್ಲಿ ಪುತ್ತಿಲ ಪರಿವಾರ ಬಿಜೆಪಿಗೆ ಮೂರು ದಿನಗಳ ಗಡುವು ನೀಡಿದೆ. ಪುತ್ತಿಲ ಪರಿವಾರದ ಬೆಂಬಲಿಗರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶ್ರೀಕೃಷ್ಣ ಉಪಾದ್ಯಾಯ, ಬಿಜೆಪಿ ನಾಯಕರಿಗೆ ಗಡುವು ವಿಧಿಸಿದ್ದು, ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಿ. ಎಲ್ಲವೂ ಸರಿಯಾಗುವ ಶಕ್ತಿಯನ್ನು ಈ ತುಳುವ ಮಣ್ಣು ನೀಡಲಿ. ನೀವು ಸತಾಯಿಸುವುದು ಬೇಡ ನಾಲ್ಕು ಜನರನ್ನು ಸರಿ ಮಾಡಿ ಇಲ್ಲವಾದಲ್ಲಿ ಪುತ್ತಿಲ ಪರಿವಾರ ಸಾಮಾಜಿಕ ಸಂಘಟನೆಯಾಗಿ ಹುಟ್ಟಿದ್ದು

ಬಿಜೆಪಿಗೆ ಮೂರು ದಿನಗಳ ಗಡುವು ನೀಡಿದ ಪುತ್ತಿಲ ಪರಿವಾರ Read More »

ಸುಳ್ಯ: ಸೆಲ್ ಹೌಸ್ ಮೊಬೈಲ್‌ಶಾಪ್ ನಲ್ಲಿ ಉಚಿತ ಕೂಪನ್‌ಗಳ ಬಂಪರ್ ಬಹುಮಾನ ಡ್ರಾ

ಸಮಗ್ರ ನ್ಯೂಸ್: ಸೆಲ್ ಹೌಸ್ ಮೊಬೈಲ್ ಶಾಪ್ ನಲ್ಲಿ ದಸರಾ, ದೀಪಾವಳಿ, ಹೊಸ ವರ್ಷದ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಕೂಪನ್ ನ ಬಂಪರ್ ಬಹುಮಾನಗಳ ಡ್ರಾ ಜ.25 ರಂದು ಸಂಜೆ ಸುಳ್ಯದ ಮುಖ್ಯರಸ್ತೆಯ ದ್ವಾರಕ ಹೋಟೆಲ್ ಮುಂಭಾಗದಲ್ಲಿರುವ ಸೆಲ್ ಹೌಸ್ ಮೊಬೈಲ್ ಶಾಪ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕೆ.ಟಿ.ವಿಶ್ವನಾಥ, ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯ ಸದಾನಂದ ಮಾವಜಿ, ಉದ್ಯಮಿಗಳಾದ ಹಾಜಿ ಜಿ.

ಸುಳ್ಯ: ಸೆಲ್ ಹೌಸ್ ಮೊಬೈಲ್‌ಶಾಪ್ ನಲ್ಲಿ ಉಚಿತ ಕೂಪನ್‌ಗಳ ಬಂಪರ್ ಬಹುಮಾನ ಡ್ರಾ Read More »

ಪುತ್ತೂರು: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ

ಸಮಗ್ರ ನ್ಯೂಸ್: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ಅವರು ಪತಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್‌ ಠಾಣೆಯಲ್ಲಿ

ಪುತ್ತೂರು: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ Read More »

ಕಡಬ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ| ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮದ ಭರವಸೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಗೌರವಾನ್ವಿತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಂದು(ಫೆ.5) ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಹಲವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಗಳಾದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಜಿ. ರಾಮಕುಂಜ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತ್ರತ್ವದಲ್ಲಿ ಕಡಬ ತಾಲೂಕಿನಲ್ಲಿರುವ ಅರಣ್ಯ ಇಲಾಖೆಗೆ ಸಂಬಂದಪಟ್ಟ ಕಡತಗಳು, ಅಕ್ರಮ ಸಕ್ರಮದಲ್ಲಿ ಅರ್ಜಿ ವಿಲೇವಾರಿ ಹಾಗೂ ತಾಲೂಕಿನ ಅನೇಕ ಗ್ರಾಮಗಳಲ್ಲಿ

ಕಡಬ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ| ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮದ ಭರವಸೆ Read More »

ಬಂಟ್ವಾಳ: ಟಯರ್ ಸ್ಫೋಟಗೊಂಡು ರಿಕ್ಷಾಗೆ ಡಿಕ್ಕಿ ಹೊಡೆದ KSRTC ಬಸ್| ನಾಲ್ವರು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದ ಘಟನೆ ಬಂಟ್ವಾಳ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಎನ್.ಸಿ.ರೋಡ್ ಎಂಬಲ್ಲಿ ಇಂದು(ಫೆ.5) ಸಂಜೆ ವೇಳೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ಧ ಕೆ‌ಎಸ್.ಆರ್.ಟಿಸಿ ಬಸ್ ನ ಟಯರ್ ಕಾವಳಮೂಡೂರು ಎನ್.ಸಿ.ರೋಡ್ ತಲುಪುತ್ತಿದ್ಧಂತೆ ಸ್ಪೋಟಗೊಂಡಿದೆ. ಟಯರ್ ಒಡೆದು ಹೋದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿ

ಬಂಟ್ವಾಳ: ಟಯರ್ ಸ್ಫೋಟಗೊಂಡು ರಿಕ್ಷಾಗೆ ಡಿಕ್ಕಿ ಹೊಡೆದ KSRTC ಬಸ್| ನಾಲ್ವರು ಪ್ರಯಾಣಿಕರಿಗೆ ಗಾಯ Read More »

ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಯು.ಟಿ ಖಾದರ್: ಮುಸ್ಲಿಂ ಮುಖಂಡನೋರ್ವನಿಂದ ವಿರೋಧ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪಣೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಭಾಗವಹಿಸಿ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ

ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಯು.ಟಿ ಖಾದರ್: ಮುಸ್ಲಿಂ ಮುಖಂಡನೋರ್ವನಿಂದ ವಿರೋಧ Read More »

ಉಜಿರೆ: ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಯಮಸ್ವರೂಪಿ ಲಾರಿ| ಇಬ್ಬರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬಸ್ ಗೆ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಗಾಂಧಿ ನಗರ ಬಳಿ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಮೃತಪಟ್ಟ ಪುರುಷ ವ್ಯಕ್ತಿಯನ್ನು

ಉಜಿರೆ: ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಯಮಸ್ವರೂಪಿ ಲಾರಿ| ಇಬ್ಬರು ಸ್ಥಳದಲ್ಲೇ ಸಾವು Read More »