ಕರಾವಳಿ

ಪುತ್ತೂರು: ಉದ್ಯೋಗದ ಜಾಹೀರಾತು ನಂಬಿ ₹ 2.25ಲಕ್ಷ ಕಳೆದುಕೊಂಡ ಯುವತಿ

ಸಮಗ್ರ ನ್ಯೂಸ್: ಪತ್ರಿಕೆಯೊಂದರಲ್ಲಿ ಪ್ರಕಟಗೊಂಡಿದ್ದ ಉದ್ಯೋಗದ ಜಾಹೀರಾತನ್ನು ನಂಬಿ, ಉದ್ಯೋಗದ ಆಸೆಯಿಂದ ವಂಚಕರ ಖಾತೆಗೆ ₹ 2.25 ಲಕ್ಷ ಹಣ ಜಮೆ ಮಾಡಿ ಯುವತಿಯೊಬ್ಬರು ಮೋಸ ಹೋಗಿದ್ದಾರೆ. ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ನಿಶ್ಮಿತಾ (24) ವಂಚನೆಗೊಳಗಾದ ಯುವತಿ. ಪತ್ರಿಕೆ ಜಾಹೀರಾತಿನಲ್ಲಿ ನೀಡಲಾಗಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಿದ ಯುವತಿ, ಅವರು ಸೂಚಿಸಿದಂತೆ 2023ರಜೂನ್ 28ರಿಂದ 2024ರ ಜನವರಿ12ರ ಅವಧಿಯಲ್ಲಿ ಹಂತ ಹಂತವಾಗಿ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು ₹2.25 ಲಕ್ಷ ಪಾವತಿ ಮಾಡಿದ್ದರು. […]

ಪುತ್ತೂರು: ಉದ್ಯೋಗದ ಜಾಹೀರಾತು ನಂಬಿ ₹ 2.25ಲಕ್ಷ ಕಳೆದುಕೊಂಡ ಯುವತಿ Read More »

ಇಂದು ಕುಕ್ಕೆಗೆ ಮಾಜಿ ಪ್ರಧಾನಿ ದೇವೇಗೌಡ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಜ.26ರಂದು ಭೇಟಿ ನೀಡುವರು. ಜ.26ರಂದು ಧರ್ಮಸ್ಥಳದಿಂದ 1 ಗಂಟೆ ಹೊರಟು ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. ಸಂಜೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡುವರು. ಜ.27ರಂದು ಕುಕ್ಕೆ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ರಸ್ತೆ ಮಾರ್ಗದ ಮೂಲಕ ಬಿಳೆನೆಲೆ ಹೆಲಿಪ್ಯಾಡ್ ಗೆ ಆಗಮಿಸಿ

ಇಂದು ಕುಕ್ಕೆಗೆ ಮಾಜಿ ಪ್ರಧಾನಿ ದೇವೇಗೌಡ Read More »

ಕಡಬ: ಆಶಕ್ತ ಕುಟುಂಬಕ್ಕೆ ಆಸರೆಯಾದ ಒಕ್ಕಲಿಗ ಗೌಡ ಮಹಾ ಸೇವಾ ಬಳಗ| ಶಾರದೆಗೆ ಒಲಿದ ಸೂರು!!

ಸಮಗ್ರ ನ್ಯೂಸ್: ಆರ್ಥಿಕವಾಗಿ ದುರ್ಬಲ ಹೊಂದಿದ ತಾಯಿ – ಮಗಳ ಕಷ್ಟಕ್ಕೆ ಮಿಡಿದ ಸಮಾನ ಮನಸ್ಕರ ತಂಡ ಆಸರೆಯಾಗಿದ್ದು, ಸೂರು ಕಲ್ಪಿಸಿ ಮಾನವೀಯತೆ ಮೆರೆದಿದೆ. ಒಕ್ಕಲಿಗ ಗೌಡ ಮಹಾ ಸೇವಾ ಬಳಗ ಕಡಬ ಇದರ ವತಿಯಿಂದ ತಾಯಿ ಮತ್ತು ಮಗಳಿಗೆ ಮನೆಯನ್ನು ದುರಸ್ತಿ ಮಾಡಿ ಹಸ್ತಾಂತರಿಸಿದ ಕಾರ್ಯಕ್ರಮವು ಜ.25 ರಂದು ಕಡಬ ತಾಲೂಕಿನ ಐತ್ತೂರು ಗ್ರಾಮದ ಆಜನದಲ್ಲಿ ನಡೆಯಿತು. ಕೆಲ ತಿಂಗಳ ಹಿಂದೆ ಅಷ್ಟೆ ಒಕ್ಕಲಿಗ ಗೌಡ ಮಹಾ ಸೇವಾ ಬಳಗ ಎಂಬ ಯುವಕರ ತಂಡ ಕಡಬದಲ್ಲಿ

ಕಡಬ: ಆಶಕ್ತ ಕುಟುಂಬಕ್ಕೆ ಆಸರೆಯಾದ ಒಕ್ಕಲಿಗ ಗೌಡ ಮಹಾ ಸೇವಾ ಬಳಗ| ಶಾರದೆಗೆ ಒಲಿದ ಸೂರು!! Read More »

ಸುಳ್ಯ: ಕುಂಕುಂ ವಸ್ತ್ರ ಮಳಿಗೆಯಲ್ಲಿ ಬಂಪ‌ರ್ ಬಹುಮಾನವಾದ ಸ್ಕೂಟಿ ಡ್ರಾ

ಸಮಗ್ರ ನ್ಯೂಸ್: ಸುಳ್ಯದ ಹೆಸರಾಂತ ವಸ್ತ್ರಮಳಿಗೆ ಕುಂ..ಕುಂ.. ಪ್ಯಾಷನ್ ನಲ್ಲಿ ದೀಪಾವಳಿ, ಹೊಸ ವರುಷ ಹಾಗೂ ಸುಳ್ಯ ಜಾತ್ರೋತ್ಸವ ಹಬ್ಬಗಳ ಪ್ರಯುಕ್ತ 151 ದಿನಗಳ ಬಿಗ್ ಸೇಲ್ ನಲ್ಲಿ ಹಲವು ಬಹುಮಾನಗಳನ್ನು ಆಯೋಜಿಸಿದ್ದು ಬಂಪ‌ರ್ ಬಹುಮಾನವಾದ ಸ್ಕೂಟಿಯನ್ನು ಶಿವಲಿಂಗ ಮತ್ತು ದೀಪಾ ಅವರಿಗೆ ದೊರಕಿದೆ. ವಿಜೇತರಿಗೆ ಸಂಸ್ಥೆಯ ಮಾಲಕರು ಹಾಗೂ ಸಿಬ್ಬಂದಿಗಳು ಬಹುಮಾನ ಹಸ್ತಾಂತರಿಸಿ ಸಂಭ್ರಮಿಸಿದರು.

ಸುಳ್ಯ: ಕುಂಕುಂ ವಸ್ತ್ರ ಮಳಿಗೆಯಲ್ಲಿ ಬಂಪ‌ರ್ ಬಹುಮಾನವಾದ ಸ್ಕೂಟಿ ಡ್ರಾ Read More »

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪತಿಷ್ಠೆ| ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ವಿಶೇಷ ಪೂಜೆ, ರಾಮತಾರಕ ಯಜ್ಞ, ಮಕ್ಕಳಿಂದ ಭಜನಾ ಸಂಕೀರ್ತನೆ

ಸಮಗ್ರ ನ್ಯೂಸ್:ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ರಾಮಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠೆಯು ಜ.22 ಸೋಮವಾರದಂದು ವಿಜೃಂಭಣೆಯಿಂದ ನಡೆಯಿತು. ಈ ಸುಮಧುರ ಕ್ಷಣವನ್ನು ಭಾರತದ ಹಿಂದೂ ಬಂಧುಗಳು ದೇವಸ್ಥಾನ, ದೈವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಮಾಡುವುದರ ಮೂಲಕ ವಿಶ್ವದಾದ್ಯಂತ ಸಂಭ್ರಮಿಸಿದರು. ಅದರಂತೆಯೇ ಜಯನಗರದ ಕೊರಂಬಡ್ಕದಲ್ಲಿರುವ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಜಯನಗರ ಘಟಕ ಇವುಗಳ ಆಶ್ರಯದಲ್ಲಿ ಶ್ರೀ ರಾಮತಾರಕ ಯಜ್ಞ ಮತ್ತು ಭಜನಾ ಸಂಕೀರ್ತನೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ 7 ಗಂಟೆಗೆ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪತಿಷ್ಠೆ| ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ವಿಶೇಷ ಪೂಜೆ, ರಾಮತಾರಕ ಯಜ್ಞ, ಮಕ್ಕಳಿಂದ ಭಜನಾ ಸಂಕೀರ್ತನೆ Read More »

ಸುಳ್ಯ: ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮಗ್ರ ನ್ಯೂಸ್: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ,ಗುಳಿಗ ದೈವ,ಕೊರಗಜ್ಜ ದೈವಸ್ಥಾನ ವ್ಯವಸ್ಥಾಪನ ಆಡಳಿತ ಕಾರ್ಯಸೇವಾ ಸಮಿತಿ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಕೊರಂಬಡ್ಕ ಜಯನಗರ ವತಿಯಿಂದ ಎ.6 ಮತ್ತು ಎ.7 ರಂದು ನಡೆಯುವ ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಕ್ತರ ಸಮ್ಮುಖದಲ್ಲಿ ಜ.22 ರಂದು ಅಯೋಧ್ಯೆ ಶ್ರೀ ರಾಮಲಲ್ಲಾ ಪ್ರಾಣಪತಿಷ್ಠೆಯ ಶುಭಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು ಕೇಶವ ಹೊಸಗದ್ದೆ, ಕಾರ್ಯದರ್ಶಿ ಸುಂದರ ಕುದ್ಪಾಜೆ, ಸಂಚಾಲಕ ಜಗನ್ನಾಥ ಜಿ

ಸುಳ್ಯ: ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಪುತ್ತೂರಿನ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ- ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಜ. 24ರಂದು ನಡೆಯಲಿದ್ದು ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ಕಲ್ಲೇಗ ದೇವಸ್ಥಾನ ತಲುಪುವ ಅಂದಾಜು ಸಮಯ ರಾತ್ರಿ 7.45ರಿಂದ 9.15 ಗಂಟೆ ವರೆಗೆ ಮಾಣಿ-ಮೈಸೂರು ರಾ.ಹೆ.ಯಲ್ಲಿ ಸಂಚಾರ ಸುಗಮಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಮಂಜಲ್ಪಡ್ಪು ಕೊಡಿಪ್ಪಾಡಿ ಕಬಕ ಮೂಲಕ ಮಂಗಳೂರಿಗೆ ತೆರಳುವುದು. ಮಂಗಳೂರಿನಿಂದ ಪುತ್ತೂರು, ಮೈಸೂರು ಕಡೆಗೆ ತೆರಳುವ ವಾಹನ ಗಳು ಮುರದಿಂದ ರೈಲ್ವೇ

ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ Read More »

ಸುಳ್ಯದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ| ರಾಮರಾಜ್ಯದ ಕಲ್ಪನೆಯೊಂದಿಗೆ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ನಿನ್ನೆ ಶ್ರೀರಾಮ ಕ್ಷೇತ್ರದ ಉದ್ಘಾಟನೆ ಆಗಿದೆ. ರಾಮರಾಜ್ಯದ ಕಲ್ಪನೆಯೊಂದಿಗೆ ರಾಜ್ಯ ಸರಕಾರ ಕೆಲಸ ಮಾಡುತಿದೆ. ಎಲ್ಲರ ರಕ್ಚಣೆ, ಪ್ರೀತಿ, ವಿಶ್ವಾಸ, ನ್ಯಾಯ ನೀಡುವುದು ರಾಮರಾಜ್ಯದ ಕಲ್ಪನೆ, ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ‌‌ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ. ಆಡಳಿತ

ಸುಳ್ಯದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ| ರಾಮರಾಜ್ಯದ ಕಲ್ಪನೆಯೊಂದಿಗೆ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ – ದಿನೇಶ್ ಗುಂಡೂರಾವ್ Read More »

ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ

ಸಮಗ್ರ ನ್ಯೂಸ್: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳವಾರ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಲಾಖಾವಾರು

ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ Read More »

ಸುಬ್ರಹ್ಮಣ್ಯ: ಕೈಕಂಬ ವೃತ್ತದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದೀಪೋತ್ಸವ

ಸಮಗ್ರ ನ್ಯೂಸ್: ಯುವಕ ಮಂಡಲ ಕೈಕಂಬ ವತಿಯಿಂದ ಕೈಕಂಬ ವೃತ್ತದಲ್ಲಿ ಅಯೋಧ್ಯೆ ಶ್ರೀ ರಾಮ ನ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ಸಂಜೆ 7 ಗಂಟೆಗೆ ದೀಪೋತ್ಸವ ಹಾಗೂ ರಾಮತಾರಕ ಜಪದೊಂದಿಗೆ ಮಹಾ ಮಂಗಳಾರತಿ ನಡೆಯಿತು. ಈ ಸಂದರ್ಭದಲ್ಲಿ ಶಿವಪ್ರಸಾದ್ ನಡುತೋಟ ಹಾಗೂ ಪ್ರದೀಪ್ ಕಳಿಗೆ ಅವರು ನೆರೆದಿದ್ದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು. ನೆರೆದಿದ್ದ ಭಕ್ತರಿಗೆ ಸಿಹಿ ತಿಂಡಿ ಹಂಚಿ ನಂತರ ಸಿಡಿಮದ್ದು ಸಿಡಿಸಿ ಸಂಭ್ರಮಾಚರಿಸಲಾಯಿತು.

ಸುಬ್ರಹ್ಮಣ್ಯ: ಕೈಕಂಬ ವೃತ್ತದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದೀಪೋತ್ಸವ Read More »