ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ| ವೆಂಕಟ್ ವಳಲಂಬೆ ನೇಮಕಕ್ಕೆ ವಿರೋಧ| ಪಕ್ಷದ ಚಟುವಟಿಕೆ ಸ್ಥಗಿತಕ್ಕೆ ನಿರ್ಧಾರ
ಸಮಗ್ರ ನ್ಯೂಸ್: ಬಿಜೆಪಿಯ ಸುಳ್ಯ ಮಂಡಲ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆಯವರನ್ನು ನೇಮಕ ಮಾಡಿದ ರೀತಿಯನ್ನು ವಿರೋಧಿಸಿರುವ ಸುಳ್ಯ ಮಂಡಲ ಬಿಜೆಪಿಯ ಈ ವ್ಯವಸ್ಥೆಯನ್ನು ಜಿಲ್ಲಾ ಸಮಿತಿಯವರು ಸರಿಪಡಿಸುವವರೆಗೆ ಪಕ್ಷದ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಸುಳ್ಯ ಮಂಡಲ ಸಮಿತಿಯು ವಿನಯಕುಮಾರ್ ಮುಳುಗಾಡು ಅವರ ಹೆಸರನ್ನು ಮಂಡಲ ಅಧ್ಯಕ್ಷತೆಗೆ ಸೂಚಿಸಿ ಜಿಲ್ಲಾ ಕಮಿಟಿಗೆ ಶಿಫಾರಸ್ಸು ಕಳುಹಿಸಿತ್ತು. ಈ ಶಿಫಾರಸ್ಸನ್ನು ಹೊರತುಪಡಿಸಿ ಬೇರೆಯವರನ್ನು ನೇಮಕ ಮಾಡುವಾಗ ಮಂಡಲ ಸಮಿತಿಯನ್ನು ಸಂಪರ್ಕಿಸದೆ ತಮ್ಮ ಇಚ್ಛೆಯಂತೆ ನೇಮಕ ಮಾಡಿರುವುದು ಸರಿಯಲ್ಲ. ಈ ರೀತಿ










