ಕರಾವಳಿ

ವನ್ಯಜೀವಿಗಳಿಗೆ ಅಕ್ರಮ ಆಹಾರ| ಅರಣ್ಯ ಇಲಾಖೆಗೆ ದೂರು

ಸಮಗ್ರ ವಾರ್ತೆ: ವ್ಯಕ್ತಿಯೊಬ್ಬರು ವನ್ಯಜೀವಿಗಳಿಗೆ ಅಕ್ರಮ ಆಹಾರ ನೀಡಿದಲ್ಲದೇ ತಿಳಿಹೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ಬೈದ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ. ಬಿಳಿನೆಲೆ ಗ್ರಾಮದ ಭುವನೇಶ್ ಎಂಬವರು ದೂರು ನೀಡಿದ್ದಾರೆ. ವನ್ಯಜೀವಿಗಳ ಅಧ್ಯಯನ ಹಾಗೂ ಸಂರಕ್ಷಣಾ ವಿಷಯದಲ್ಲಿ ಸುಬ್ರಹ್ಮಣ್ಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಭುವನೇಶ್ ಅವರು ಸುಬ್ರಹ್ಮಣ್ಯದತ್ತ ತೆರಳುವ ವೇಳೆ ಸುಬ್ರಹ್ಮಣ್ಯದ ವಲಯ ಅರಣ್ಯ ಇಲಾಖಾ ಕಛೇರಿ ಬಳಿ ವ್ಯಕ್ತಿಯೊಬ್ಬರು ಕಾರಿನಲ್ಲಿ ಬಂದು ರಸ್ತೆಯಲ್ಲಿ ನಿಲ್ಲಿಸಿ ಕೋತಿಗಳಿಗೆ ಬಿಸ್ಕತ್ತು ಹಾಕುತ್ತಿರುವುದನ್ನು ಗಮನಿಸಿದ್ದು, ಈ ಬಗ್ಗೆ […]

ವನ್ಯಜೀವಿಗಳಿಗೆ ಅಕ್ರಮ ಆಹಾರ| ಅರಣ್ಯ ಇಲಾಖೆಗೆ ದೂರು Read More »

ಉಡುಪಿ:ಖಾಸಗಿ ಬಸ್ ಚಾಲಕರಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡವೊಂದು ಚೂರಿ ಇಂದ ಇರಿದ ಘಟನೆ ಜ. 18ರಂದು ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಈ ಕಾರಣಕ್ಕೆ ಈ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಜೆಎಮ್‌ಟಿ ಬಸ್‌ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿ

ಉಡುಪಿ:ಖಾಸಗಿ ಬಸ್ ಚಾಲಕರಿಗೆ ಚೂರಿ ಇರಿತ Read More »

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ 2024ನೇ ಸಾಲಿನ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ 2024ನೇ ಸಾಲಿನ ವಾರ್ಷಿಕೋತ್ಸವವು ಇಂದು (ಜ. 20) ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಅಂಜಲಿ ಮಾಂಟೆಸ್ಸರಿ ಶಾಲೆಯ ಅಧ್ಯಕ್ಷ ಶುಭಕರ ಬಿ.ಸಿ. ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಮಾನಸಿಕ ಆರೋಗ್ಯ Your DOST, ಬೆಂಗಳೂರು ಇದರ ಮನಶಾಸ್ತ್ರಜ್ಞೆ ಮತ್ತು ನಿರ್ದೇಶಕರು ಆದ ಡಾ. ಶೈಲಜಾ ಶಾಸ್ತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರ ಲ|ವೀರಪ್ಪ ಗೌಡ ಕಂಕಲ್,

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ 2024ನೇ ಸಾಲಿನ ವಾರ್ಷಿಕೋತ್ಸವ Read More »

ಸುಳ್ಯ: “ರಸ್ತೆ ಮೊದಲು ತೆರಿಗೆ ನಂತರ” ಅಸಹಕಾರ ಚಳುವಳಿಗೆ ಕರೆ|ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಈ ರಸ್ತೆ ಕೂಡಲೇ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಐವರ್ನಾಡು ಗ್ರಾ.ಪಂ. ಮುಂಭಾಗ ಇಂದು (ಜ.20) ಬೃಹತ್ ಪ್ರತಿಭಟನೆ ನಡೆಯಿತು. ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದ್ವಾರದಿಂದ ಪ್ರತಿಭಟನೆ ನಡೆಸುತ್ತಾ ಬಂದ ಪ್ರತಿಭಟನಕಾರರು ಜನಪ್ರತಿನಿಧಿಗಳಿಗೆ ಧಿಕ್ಕಾರ ಕೂಗಿದರು. ಬಳಿಕ ಗ್ರಾ.ಪಂ. ಎದುರುಗಡೆ ಪ್ರತಿಭಟನೆಯನ್ನುದ್ದೇಶಿಸಿ ಅಜಿತ್‌ ಐವರ್ನಾಡು, ಅಶೋಕ್ ಎಡಮಲೆ, ನೆಕ್ರೆಪ್ಪಾಡಿ ಕೃಷ್ಣಪ್ಪ ಗೌಡರು ಮಾತನಾಡಿ ಧಾರ್ಮಿಕ ಸ್ಥಳಕ್ಕೆ ಹೋಗುವ ರಸ್ತೆ ತೀರಾ

ಸುಳ್ಯ: “ರಸ್ತೆ ಮೊದಲು ತೆರಿಗೆ ನಂತರ” ಅಸಹಕಾರ ಚಳುವಳಿಗೆ ಕರೆ|ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ Read More »

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಸಿಕ್ಕಿಬಿದ್ದ ನರ್ಸಿಂಗ್ ಕಾಲೇಜು ಜೋಡಿ| ನೈತಿಕ ಪೊಲೀಸ್ ಗಿರಿ ಹಿನ್ನಲೆ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿ ಜೋಡಿ ಮೇಲೆ ಯುವಕರ ತಂಡವೊಂದು ಕದ್ರಿ ಪಾರ್ಕ್ ಬಳಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ನಿತಿನ್ (18), ಹರ್ಷಾ (18) ಮತ್ತು ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಮತ್ತು ದೇರಳಕಟ್ಟೆಯ ನರ್ಸಿಂಗ್ ಕಾಲೇಜೊಂದರಲ್ಲಿ ಕಲಿಯುತ್ತಿದ್ದ

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಸಿಕ್ಕಿಬಿದ್ದ ನರ್ಸಿಂಗ್ ಕಾಲೇಜು ಜೋಡಿ| ನೈತಿಕ ಪೊಲೀಸ್ ಗಿರಿ ಹಿನ್ನಲೆ ಮೂವರು ಅರೆಸ್ಟ್ Read More »

ಜ.21ರಂದು ಕೊಲ್ಲಮೊಗ್ರು ಹರಿಹರ ಗ್ರಾಮವಾಸ್ತವ್ಯ ಕುರಿತು ಪೂರ್ವಭಾವಿ ಸಭೆ

ಸಮಗ್ರ ಸಮಾಚಾರ; ದ.ಕ. ಜಿಲ್ಲೆ ಮತ್ತು ಕೊಡಗು ಜಿಲ್ಲೆ ಗಡಿಭಾಗ ಪುಷ್ಪಗಿರಿ ವನ್ಯಧಾಮದ ತಟದ ಗ್ರಾಮಗಳಾದ ಕೊಲ್ಲಮೊಗ್ರು ಹರಿಹರ ಅವಳಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರಸ್ ಕ್ಲಬ್ ಆಶ್ರಯದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಜಿಲ್ಲಾಡಳಿತ, ತಾಲೂಕು ಆಡಳಿತ ಊರವರ ಸಹಕಾರದಲ್ಲಿ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.ಈ ಹಿನ್ನಲೆಯಲ್ಲಿ ಕೊಲ್ಲಮೊಗ್ರು ಹರಿಹರ ಗ್ರಾಮ ಪಂಚಾಯತು ವ್ಯಾಪ್ತಿಯ ಪ್ರಮುಖ ನಾಗರಿಕರ ಪೂರ್ವಭಾವಿ ಸಭೆ ಜ.21 ರಂದು

ಜ.21ರಂದು ಕೊಲ್ಲಮೊಗ್ರು ಹರಿಹರ ಗ್ರಾಮವಾಸ್ತವ್ಯ ಕುರಿತು ಪೂರ್ವಭಾವಿ ಸಭೆ Read More »

ಸುಳ್ಯ: ಜ. 19 ರಿಂದ ಜ.23, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರ ಕಮಿಲ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವವು ಜ. 19 ರಿಂದ ಜ.23ರ ತನಕ ನಡೆಯಲಿದೆ ಜ. 19ರಂದು ರಾತ್ರಿ ಗಂಟೆ 8-00ಕ್ಕೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಹೊರಡುವುದು, ರಾತ್ರಿ ಗಂಟೆ 9-00ಕ್ಕೆ – ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಮಿಲ-ಮೊಗ್ರ-ಬಳ್ಳಕ ಒಕ್ಕೂಟ ಇವರ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನೆ (ತರಬೇತುದಾರರು: ಶ್ರೀ ರಮೇಶ್ ಮೆಟ್ಟಿನಡ್ಕ), ಶ್ರೀ ದುರ್ಗಾ ಭಜನಾ ಮಂಡಳಿ

ಸುಳ್ಯ: ಜ. 19 ರಿಂದ ಜ.23, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವ Read More »

ಜ. 21: ಕಡಬದ ಆಲಂಕಾರಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ 23ನೇ ನೂತನ ಶಾಖೆ ಲೋಕಾರ್ಪಣೆ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ನೂತನ ಶಾಖೆ ಕಡಬ ತಾಲೂಕಿನ ಆಲಂಕಾರಿನಲ್ಲಿ ಜ. 21ರಂದು ಲೋಕಾರ್ಪಣೆಗೊಳ್ಳಲಿದೆ. ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರ ಅಧ್ಯಕ್ಷತೆಯಲ್ಲಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಖಾ ಕಚೇರಿಯನ್ನು ಉದ್ಘಾಟಿಸಲಿದ್ದು, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಜಿ. ಕೃಷ್ಣಪ್ಪ ರಾಮಕುಂಜ ಅವರು ಗಣಕೀಕರಣ ವ್ಯವಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಆಲಂಕಾರು ಗ್ರಾ.ಪಂ.

ಜ. 21: ಕಡಬದ ಆಲಂಕಾರಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ 23ನೇ ನೂತನ ಶಾಖೆ ಲೋಕಾರ್ಪಣೆ Read More »

ಅಯೋಧ್ಯೆ ಶ್ರಿರಾಮ ಪ್ರಾಣಪ್ರತಿಷ್ಠೆಗೆ ತುಳುನಾಡಿನ ಪುರೋಹಿತ|ಅಪೂರ್ವ ಅವಕಾಶ ಪಡೆದ ಸುಳ್ಯದ ಡಾ.ಕೆ.ಗಣಪತಿ ಭಟ್

ಸಮಗ್ರ ನ್ಯೂಸ್: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಗೆ ತುಳುನಾಡಿನ ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರೊಬ್ಬರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕೆಮನಬಳ್ಳಿಯ ಶಾರದಾ ಮತ್ತು ಗೋಪಾಲಕೃಷ್ಣ ಭಟ್ ಅವರ ಪುತ್ರ ಪ್ರಸ್ತುತ ತಿರುಪತಿಯ ರಾಷ್ಟ್ರೀಯ ಸಂಸ್ಕ್ರತ ವಿ.ವಿಯ ಪರಮಚಾರ್ಯ ಗುರುಕುಲದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಕೆ. ಗಣಪತಿ ಭಟ್ ಅವಕಾಶ ಪಡೆದುಕೊಂಡವರು. ಜ. 22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಧಾರ್ಮಿಕ ವಿಧಿ ವಿಧಾನಗಳು

ಅಯೋಧ್ಯೆ ಶ್ರಿರಾಮ ಪ್ರಾಣಪ್ರತಿಷ್ಠೆಗೆ ತುಳುನಾಡಿನ ಪುರೋಹಿತ|ಅಪೂರ್ವ ಅವಕಾಶ ಪಡೆದ ಸುಳ್ಯದ ಡಾ.ಕೆ.ಗಣಪತಿ ಭಟ್ Read More »

ಸುಳ್ಯ: ಗುಂಪಿನಿಂದ ಬೇರ್ಪಟ್ಟು ಒಂಟಿಯಾದ ಮರಿಯಾನೆ

ಸಮಗ್ರ ನ್ಯೂಸ್: ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾದ ಘಟನೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ನಡೆದಿದೆ. ಇಂದು ಬೆಳಗ್ಗೆ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡುಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿದ್ದಾರೆ. ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ ಗುಂಪಿನಿಂದ ಮರಿಯಾನೆ ತಪ್ಪಿಸಿಕೊಂಡು ಬೇರ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸಲು ಪ್ರಯತ್ನ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಸುಳ್ಯ: ಗುಂಪಿನಿಂದ ಬೇರ್ಪಟ್ಟು ಒಂಟಿಯಾದ ಮರಿಯಾನೆ Read More »