ಕರಾವಳಿ

ಬೆಳ್ತಂಗಡಿ: ಉದ್ಯಮಿ ಪತ್ನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಉದ್ಯಮಿಯೋರ್ವರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ. ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಅಪರಾಹ್ನ ಈ ಘಟನೆ ನಡೆದಿದೆ. ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವೇಣೂರು ಠಾಣೆಯಲ್ಲಿ‌ […]

ಬೆಳ್ತಂಗಡಿ: ಉದ್ಯಮಿ ಪತ್ನಿ ಆತ್ಮಹತ್ಯೆಗೆ ಶರಣು Read More »

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ಇಲ್ಲಿನ ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ . ಕೂಡಲೇ ಸ್ಥಳೀಯ ಮುಳುಗು ತಜ್ಞರು ನೀರಿಗೆ ಹಾರಿ ಬಾಲಕನನ್ನು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕ ಸಾವು Read More »

ಸುಳ್ಯ: ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಜ.20 ರಂದು ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಐವರ್ನಾಡು ದೇರಾಜೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬುದಾಗಿ ಜ.20 ರಂದು ಐವರ್ನಾಡು ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿದುಬಂದಿದೆ. ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಲು ಐವರ್ನಾಡು ಗ್ರಾಮಸ್ಥರು ಹಾಗೂ ನಾಗರಿಕ ಸೇವಾ ಸಮಿತಿಯವರು ಸಿದ್ಧತೆ ನಡೆಸುತ್ತಿದ್ದಾರೆ. ಇತ್ತೀಚೆಗೆ ರಸ್ತೆಗೆ ಆಗ್ರಹಿಸಿ ಮುಖ್ಯ ರಸ್ತೆಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರಿಗೆ,

ಸುಳ್ಯ: ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಜ.20 ರಂದು ಬೃಹತ್ ಪ್ರತಿಭಟನೆ Read More »

ಜ. 23: ಸುಳ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಜ. 23ರಂದು ಸಮಯ 11:00 ರಿಂದ 03:00 ರವರೆಗೆ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ಈ ಕುರಿತಂತೆ ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೆ.ಎ ಹಿದಾಯತುಲ್ಲರವರು ಪ್ರಕಟಣೆ ಹೊರಡಿಸಿದ್ದು, ಜನತಾ ದರ್ಶನ ಕಾರ್ಯಕ್ರಮದ ಬಗ್ಗೆ ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದ್ದಾರೆ. ಈ ಜನತಾ ದರ್ಶನ

ಜ. 23: ಸುಳ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ Read More »

ಸುಳ್ಯ: ಫೆ.1- 4ರಂಗಮನೆಯಲ್ಲಿ ‘ರಂಗ ಸಂಭ್ರಮ’|ನಾಟಕ ಸಂಗೀತ ನೃತ್ಯ ಸಂಗಮದ ಸಾಂಸ್ಕೃತಿಕ ಉತ್ಸವ

ಸಮಗ್ರ ನ್ಯೂಸ್: ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಲ್ಲಿ ಫೆ. 1ರಿಂದ 4ರವರೆಗೆ ನಾಲ್ಕು ದಿನಗಳ ‘ರಂಗ ಸಂಭ್ರಮ- 2024’ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವ ನಡೆಯಲಿದೆ. *ಫೆ. 1ನೇ ಗುರುವಾರ ಮೂಡುಬಿದ್ರೆಯ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರಿಂದ ವೈದೇಹಿ ರಚನೆಯ, ಡಾ.ಜೀವನ್ ರಾಂ ಸುಳ್ಯ ನಿರ್ದೇಶನದ ಪ್ರಸಿದ್ಧ ಮಕ್ಕಳ ಪ್ರಯೋಗ ‘ನಾಯಿಮರಿ ನಾಟಕ’ ಪ್ರದರ್ಶನ. *ಫೆ. 2ನೇ ಶುಕ್ರವಾರ ಮಂಡ್ಯ ರಮೇಶ್ ನೇತೃತ್ವದ

ಸುಳ್ಯ: ಫೆ.1- 4ರಂಗಮನೆಯಲ್ಲಿ ‘ರಂಗ ಸಂಭ್ರಮ’|ನಾಟಕ ಸಂಗೀತ ನೃತ್ಯ ಸಂಗಮದ ಸಾಂಸ್ಕೃತಿಕ ಉತ್ಸವ Read More »

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಕೆ.ಎಲ್.ರಾಹುಲ್ ಭೇಟಿ

ಸಮಗ್ರ ನ್ಯೂಸ್:ಜ.17, ಕ್ರಿಕೆಟಿಗ ಮಂಗಳೂರು ಮೂಲದ ಕೆ.ಎಲ್. ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಕೆ.ಎಲ್.ರಾಹುಲ್ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಗೌರವಿಸಲಾಯಿತು. ಸ್ನೇಹಿತರ ಜೊತೆಗೆ ಕೆ.ಎಲ್.ರಾಹುಲ್ ಕುಕ್ಕೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿಗಳು, ದೇವಳದವರು, ಸ್ನೇಹಿತರು ಜತೆಗಿದ್ದರು. ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಕೆ.ಎಲ್.ರಾಹುಲ್ ಭೇಟಿ Read More »

ಕುಕ್ಕೆ ಸುಬ್ರಹ್ಮಣ್ಯ: ಬಿದ್ದು ಸಿಕ್ಕಿದ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಐದರ ಬಾಲೆ

ಸಮಗ್ರ ನ್ಯೂಸ್: ಭಕ್ತರೊಬ್ಬರು ಕಳೆದುಕೊಂಡ ಹಣದ ಬಂಡಲನ್ನು ಐದರ ಹರೆಯದ ಬಾಲಕಿಯೊಬ್ಬಳ ಪ್ರಾಮಾಣಿಕತೆಯಿಂದ ವಾರಿಸುದಾರರ ಕೈ ಸೇರುವಂತಾದ ಘಟನೆ ದಕ್ಷಿಣ ಕನ್ನಡದ ಪುರಾಣ ಪ್ರಸಿದ್ದ ಕ್ಷೇತ್ರ ಕುಕ್ಕೆಸುಬ್ರಹ್ಮಣ್ಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ ಎಂಬವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಕೆ ತೀರಿಸಲು ಬಂದಿದ್ದರು.ಈ ಸಂದರ್ಭ ತಮ್ಮ ಬ್ಯಾಗ್ ನಲ್ಲಿದ್ದ ಸುಮಾರು ಐವತ್ತು ಸಾವಿರ ನೋಟಿನ ಕಂತೆ ಆಕಸ್ಮಿಕವಾಗಿ ಬಿದ್ದು ಹೋಗಿತ್ತು. ದೇಗುಲದ ಜಮಾ ಉಗ್ರಾಣ ಬಳಿ ಇರುವ ಹಣ್ಣು ಕಾಯಿ ಅಂಗಡಿ ಬಳಿಯಲ್ಲಿ ಬಿದ್ದಿದ್ದ ಈ ನೋಟಿನ ಕಂತೆ

ಕುಕ್ಕೆ ಸುಬ್ರಹ್ಮಣ್ಯ: ಬಿದ್ದು ಸಿಕ್ಕಿದ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಐದರ ಬಾಲೆ Read More »

ಪುತ್ತೂರು: ಕೇವಲ ಕೇಸರಿ ಶಾಲು ಹಾಕಿದರೆ ಹಿಂದುತ್ವ ಆಗುತ್ತಾ..? ಪುತ್ತಿಲ ಪರಿವಾರದಿಂದ ಜೀವಕ್ಕೇ ಅಪಾಯವಿದೆ”| ಪುತ್ತಿಲ ಪರಿವಾರ ವಿರುದ್ಧ ಸಂತೋಷ್ ಕುಟುಂಬ ವಾಗ್ದಾಳಿ

ಸಮಗ್ರ ನ್ಯೂಸ್: ಮಂತ್ರಾಕ್ಷತೆ ಹಂಚುವ ವಿಚಾರದಲ್ಲೇ ಪುತ್ತಿಲ ಪರಿವಾರದ ಸದಸ್ಯರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ ನಮಗೆ ಬದುಕಲು ಬಿಡುತ್ತಿಲ್ಲ ನಮ್ಮ ಜೀವಕ್ಕೆ ಅಪಾಯವಿದೆ ಎಂದು ಜ. 16ರಂದು ನಡೆದ ಸುದ್ದಿಗೋಷ್ಟಿಯಲ್ಲಿ ಹಲ್ಲೆಗೊಳಗಾದ ಸಂತೋಷ್ ಅಳಲು ತೋಡಿಕೊಂಡಿದ್ದಾರೆ. ತಮ್ಮ ಕುಟುಂಬದ ಜೊತೆ ಸೇರಿ ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂತೋಷ್, ಹಲ್ಲೆ ಮಾಡಿದವರು ಮತ್ತು ನಮ್ಮ ನಡುವೆ ಕಳೆದ ಮೂರು ವರ್ಷಗಳಿಂದ ದಾರಿ ವಿವಾದವಿದೆ. ಆದರೂ ನಾವು ಯಾವತ್ತೂ ಅವರ ಜೊತೆಗೆ ತಕರಾರು ಎತ್ತಲು ಹೋಗಿಲ್ಲ. ಆದರೆ ರಾಮಮಂದಿರದ

ಪುತ್ತೂರು: ಕೇವಲ ಕೇಸರಿ ಶಾಲು ಹಾಕಿದರೆ ಹಿಂದುತ್ವ ಆಗುತ್ತಾ..? ಪುತ್ತಿಲ ಪರಿವಾರದಿಂದ ಜೀವಕ್ಕೇ ಅಪಾಯವಿದೆ”| ಪುತ್ತಿಲ ಪರಿವಾರ ವಿರುದ್ಧ ಸಂತೋಷ್ ಕುಟುಂಬ ವಾಗ್ದಾಳಿ Read More »

ಉಡುಪಿ ಪರ್ಯಾಯ ಮಹೋತ್ಸವಕ್ಕೆ 10 ಕೋಟಿ ಬಿಡುಗಡೆಗೆ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ

ಉಡುಪಿ ಪರ್ಯಾಯ ಮಹೋತ್ಸವಕ್ಕೆ 10 ಕೋಟಿ ಬಿಡುಗಡೆಗೆ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಸುಳ್ಯ: ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ದಿಯಾ ಡಿ.ಎಸ್. ಪ್ರಥಮ

ಸಮಗ್ರ ನ್ಯೂಸ್: ಯಾಮೊಟೋ ಶೋಟೋಕಾನ್ ಕರಾಟೆ ಅಸೋಸಿಯನ್ನ್ ಟ್ರಸ್ಟ್ ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೊಟೊ ಹಿಲ್ಸ್ ಬಂಟ್ವಾಳ, ರೋಟರಿ ಕ್ಲಬ್ ಸಿದ್ದಕಟ್ಟೆ, ಪಲ್ಗುಣಿ ರೋಟರಿ ಕ್ಲಬ್, ಬಿ.ಸಿ ರೋಡು ಸಿಟಿ ವತಿಯಿಂದ ಬಿ.ಸಿ ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಜ. 14ರಂದು ನಡೆದ ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ ಶಿಪ್ 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ದಿಯಾ ಡಿ.ಎಸ್. ಪ್ರಥಮ ಸ್ಥಾನ‌ ಪಡೆದಿದ್ದಾರೆ. ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಪ್ ಮಾರ್ಷಲ್ ಆಟ್ಸ್ ವತಿಯಿಂದ ಮಂಗಳೂರಿನ

ಸುಳ್ಯ: ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ದಿಯಾ ಡಿ.ಎಸ್. ಪ್ರಥಮ Read More »