ಕರಾವಳಿ

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ: ಶ್ರೀ ದಿನೇಶ್ ಕುಮಾರ್

ಸಮಗ್ರ ನ್ಯೂಸ್: ನೈಸರ್ಗಿಕ ಕಾರಣಗಳನ್ನು ಹೊರತುಪಡಿಸಿ ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳು ಉಂಟಾಗುತ್ತದೆ. ದೇಶಾದ್ಯಂತ ಲಕ್ಷಾಂತರ ಜನ ರಸ್ತೆ ಅಫಘಾತಗಳಲ್ಲಿ ಸಾವನ್ನಪ್ಪುತ್ತಾರೆ. ಮಂಗಳೂರು ನಗರದಲ್ಲಿ ಪ್ರತೀ ವರ್ಷ ಸುಮಾರು 800 ರಿಂದ 900 ಅಪಘಾತ ಪ್ರಕರಣಗಳು ವರದಿಯಾಗುತ್ತದೆ. 900 ರಿಂದ 1000 ಜನ ನೋವನ್ನು ಅನುಭವಿಸುತ್ತಾರೆ ಮತ್ತು ಮತ್ತು ಹಲವರು ಗಾಯಾಳುಗಳಾಗುತ್ತಾರೆ. ಅದರಲ್ಲಿ 100 ರಿಂದ 125 ರಷ್ಟು ಜನ ಪ್ರಾಣವನ್ನು ಕಳಕೊಳ್ಳುತ್ತಾರೆ. ರಸ್ತೆ ಅಪಘಾತಗಳನ್ನು ಕಡಿಮೆ ಮಾಡಬೇಕನ್ನುವಂತಹ ಕಾರಣದಿಂದ ಮಿನಿಷ್ಟ್ರಿ ಆಫ್ ರೋಡ್ […]

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ: ಶ್ರೀ ದಿನೇಶ್ ಕುಮಾರ್ Read More »

ಸುಳ್ಯ: ಮೊಗ್ರ ಜಾತ್ರೆಗೆ ಗೊನೆ ಮುಹೂರ್ತ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಜ. 19 ರಿಂದ 23ರವರೆಗೆ ನಡೆಯುವ ಕಾಲಾವಧಿ ಜಾತ್ರಾ ಉತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಮ್.ಎನ್ ವೆಂಕಟ್ರಮಣ ಮೊಗ್ರ, ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಕಾರ್ಯನಿರ್ವಹಣಾ ಮೊಕ್ತೇಸರ ಚೆನ್ನಕೇಶವ ಗೌಡ ಕಮಿಲ, ಉಮೇಶ ಗೌಡ ಮಕ್ಕಿ , ಹೆಬ್ಬಾರರಾದ ಕೇಶವ ಗೌಡ ಬಳ್ಳಕ್ಕ,ಪೂಜಾರಿ ವರ್ಗ, ಸೇವಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸುಳ್ಯ: ಮೊಗ್ರ ಜಾತ್ರೆಗೆ ಗೊನೆ ಮುಹೂರ್ತ Read More »

ಪುತ್ತೂರು: ಅಕ್ಷತೆ ಹಂಚುತ್ತಿದ್ದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ರಾ‌ ಪುತ್ತಿಲ ಪರಿವಾರ? ನಿಜಕ್ಕೂ ಅಲ್ಲಿ ಆಗಿದ್ದೇನು? ಎಸ್ಪಿ ರಿಷ್ಯಂತ್ ನೀಡಿದ ಎಚ್ಚರಿಕೆ ಏನು?

ಸಮಗ್ರ ನ್ಯೂಸ್: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನಲೆ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ಸಿ.ಬಿ ಸ್ಪಷ್ಟನೆ ನೀಡಿದ್ದಾರೆ. ಘಟನೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದ್ದು, ಸಂತೋಷ್ ಎಂಬಾತ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ. ಈತ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತೋಷ್ ಮುಂಡೂರು ಗ್ರಾಮದಲ್ಲಿ ರಾಮಮಂದಿರದ ಅಕ್ಷತೆ ಹಂಚುವ

ಪುತ್ತೂರು: ಅಕ್ಷತೆ ಹಂಚುತ್ತಿದ್ದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ರಾ‌ ಪುತ್ತಿಲ ಪರಿವಾರ? ನಿಜಕ್ಕೂ ಅಲ್ಲಿ ಆಗಿದ್ದೇನು? ಎಸ್ಪಿ ರಿಷ್ಯಂತ್ ನೀಡಿದ ಎಚ್ಚರಿಕೆ ಏನು? Read More »

ಧರ್ಮಸ್ಥಳ: ನೈತಿಕ ಪೊಲೀಸ್ ಗಿರಿ| ಭಿನ್ನಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್ : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿಯ ಘಟನೆ ಮರುಕಳಿಸಿದೆ. ಕ್ಷೇತ್ರಕ್ಕೆ ಮುಸ್ಲಿಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಮೂಲದ ಈ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಂಶಯಗೊಂಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದಾರೆ. ಆಗ ಯುವಕ ಮುಸ್ಲಿಂ ಧರ್ಮದವನಾಗಿದ್ದು ಯುವತಿ ಹಿಂದೂ ಎಂದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ

ಧರ್ಮಸ್ಥಳ: ನೈತಿಕ ಪೊಲೀಸ್ ಗಿರಿ| ಭಿನ್ನಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು Read More »

ಬೆಳ್ತಂಗಡಿ: ಕಾಲುಜಾರಿ ಬಾವಿಗೆ ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಮಕ್ಕಳ ಜೊತೆ ಆಟವಾಡುತ್ತಿರುವ ವೇಳೆ ತೆರೆದ ಬಾವಿಗೆ ಕಾಲು ಜಾರಿ ಬಿದ್ದು 7 ವರ್ಷದ ಬಾಲಕ ಸಾವನಪ್ಪಿರುವ ಘಟನೆ ಬೆಳ್ತಂಗಡಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ. ಮೃತ ಬಾಲಕ ಪಣಕಜೆ ನಿವಾಸಿ ಮಹಮ್ಮದ ಹನೀಫ್ ಅವರ ಪುತ್ರ ಮಹಮ್ಮದ್ ಅನಾನ್(7) ಜ. 15ರಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ

ಬೆಳ್ತಂಗಡಿ: ಕಾಲುಜಾರಿ ಬಾವಿಗೆ ಬಿದ್ದು ಬಾಲಕ ಸಾವು Read More »

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ

ಸಮಗ್ರ ನ್ಯೂಸ್:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದರು, ಇದೀಗ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿ 50 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರ ಚಲನವಲನಗಳ ಮೇಲೆ ಅನುಮಾನ ಮೂಡಿದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ತಪಾಸಣೆ ನಡೆಸಿದ್ದಾರೆ. ಈ ವೇಳೆ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ Read More »

ಕಡಬ: ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶದ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಜ. 21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶಕ್ಕೆ ರಾಷ್ಟ್ರಿಯ ಅಧಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸುತ್ತಿದ್ದು, ಇದರ ಕುರಿತು ಪೂರ್ವಭಾವಿ ಸಭೆಯು ಜ. 15ರಂದು ಕಡಬ ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿನಯ್ ಕುಮಾರ್ ಸೊರಕೆಯವರು ಮಾತನಾಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಮಾಜಿ ಸಚಿವ ರಮಾನಾಥ ರೈಯವರು ಮಾತನಾಡಿ, ಪಕ್ಷ ಸಂಘಟನೆ ಗೆ

ಕಡಬ: ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶದ ಪೂರ್ವಭಾವಿ ಸಭೆ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನಲ್ಲಿ ನೂತನವಾಗಿ ಹಳೆ ವಿದ್ಯಾರ್ಥಿ ಸಂಘದ ರಚನೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವನ್ನು ನೂತನವಾಗಿ ಜ. 15ರಂದು ರಚಿಸಲಾಯಿತು. ಅಧ್ಯಕ್ಷರಾಗಿ ಕಾಲೇಜಿನ ಸಂಚಾಲಕ ಗಣೇಶ್ ಪ್ರಸಾದ್ ನಾಯರ್, ಉಪಾಧ್ಯಕ್ಷರಾಗಿ ದೀಪಕ್ ನಂಬಿಯಾರ್ ಮತ್ತು ಭಾರತಿ ಬಿ.ಡಿ., ಕಾರ್ಯದರ್ಶಿಯಾಗಿ ತೇಜಸ್ ಕಳಿಗೆ, ಜತೆ ಕಾರ್ಯದರ್ಶಿಯಾಗಿ ಪವನ್ ಎಂ.ಡಿ. ಮತ್ತು ದಯಾನಂದ್ ಉಂಡಿಲ, ಖಜಾಂಜಿಯಾಗಿ ನಿತಿನ್ ಭಟ್ ಆಯ್ಕೆಯಾದರು. ನಿರ್ದೇಶಕರುಳಾಗಿ ನಾರಾಯಣ ಅಗ್ರಹಾರ, ಪದ್ಮಕುಮಾರ್ ಗುಂಡಡ್ಕ, ಪ್ರದೀಪ್ ಕಳಿಗೆ, ಲೋಕೇಶ್ ಬಿ.ಎಸ್., ಚಂದ್ರಶೇಖರ ಜಿ.ಎನ್., ದಿನೇಶ್ ಮಲ್ಲಿಗೆಮಜಲು, ಮನೋಜ್ ಮರ್ದಾಳ, ಸುಹಾಸ್ ಎನ್.ಎಸ್.,

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನಲ್ಲಿ ನೂತನವಾಗಿ ಹಳೆ ವಿದ್ಯಾರ್ಥಿ ಸಂಘದ ರಚನೆ Read More »

ಜ.22,ಅಯೋಧ್ಯಾ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ|ಗುತ್ತಿಗಾರಿನ ಶ್ರಿಕೃಷ್ಣಾ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ

ಸಮಗ್ರ ನ್ಯೂಸ್:ಅಯೋಧ್ಯಾ ಶ್ರೀರಾಮ ಜನ್ಮಸ್ಥಾನದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಮಂದಿರದಲ್ಲಿ ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ. 22ರಂದು ನೆರವೇರಲಿದೆ. ಆ ಪ್ರಯುಕ್ತ ಶ್ರಿಕೃಷ್ಣಾ ಭಜನಾ ಮಂದಿರ ಗುತ್ತಿಗಾರಿನಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1ರ ತನಕ ಭಜನಾ ಕಾರ್ಯಕ್ರಮ ನಡೆಯಲಿದೆ. ಈ ಸಮಯದಲ್ಲಿ ಎಲ್ಲಾ ಹಿರಿಯರು ಕಿರಿಯರು, ಯುವಕರು, ಯುವತಿಯರು, ಮಾತೆಯರು, ಮಕ್ಕಳು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಗುತ್ತಿಗಾರು ಶ್ರೀ ಕೃಷ್ಣಾಭಜನಾ ಮಂದಿರ ಅಧ್ಯಕ್ಷರು ಮತ್ತು ಸರ್ವಸದಸ್ಯರು ತಿಳಿಸಿದ್ದಾರೆ.

ಜ.22,ಅಯೋಧ್ಯಾ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ|ಗುತ್ತಿಗಾರಿನ ಶ್ರಿಕೃಷ್ಣಾ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ Read More »

ಮಂಗಳೂರು: ಬೈಕಂಪಾಡಿ ಕಾರ್ಖಾನೆಯಲ್ಲಿ ಬೆಂಕಿ ಸ್ಪೋಟ| ಓರ್ವ ಮೃತ್ಯು| 6 ಮಂದಿಗೆ ಗಾಯ

ಸಮಗ್ರ ನ್ಯೂಸ್: ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ನಡೆದ ಬೆಂಕಿ ಅನಾಹುತಕ್ಕೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿ, ಇತರ ಆರು ಮಂದಿ ಗಾಯಗೊಂಡ ಘಟನೆ ಜ.13ರಂದು ಸಂಭವಿಸಿದೆ. ಮೃತ ಕಾರ್ಮಿಕ ರೊನಾಲ್ಡ್ ಪೌಲ್ ಮತ್ತು ಇತರ ಆರು ಮಂದಿ ಖಾಲಿ ತೈಲ ಟ್ಯಾಂಕ್‌ನ ದುರಸ್ಥಿ ಕಾರ್ಯ ಮಾಡುತ್ತಿದ್ದರು. ಮೇಲ್ಭಾಗದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಸ್ಥಳದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರೊನಾಲ್ಡ್ ಅವರಿಗೆ ಬೆಂಕಿ ತಗುಲಿದೆ. ರೊನಾಲ್ಡ್ ಅವರು

ಮಂಗಳೂರು: ಬೈಕಂಪಾಡಿ ಕಾರ್ಖಾನೆಯಲ್ಲಿ ಬೆಂಕಿ ಸ್ಪೋಟ| ಓರ್ವ ಮೃತ್ಯು| 6 ಮಂದಿಗೆ ಗಾಯ Read More »