ಕರಾವಳಿ

ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಗೆ ಕಾರು ಡಿಕ್ಕಿ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ತೆಂಕ ಎಡಪದವು ಬಳಿ ನಡೆದಿದೆ. ಇಂದು ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದಾಗ ರಾಜೇಶ್ ನಾಯ್ಕ್​ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ರಾಜೇಶ್ ನಾಯ್ಕ್​ಗೆ ಗಾಯವಾಗಿದೆ. ಸಂಕ್ರಮಣದ ಅಂಗವಾಗಿ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವಾಗ ಮೂಡಬಿದ್ರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ […]

ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಗೆ ಕಾರು ಡಿಕ್ಕಿ| ಆಸ್ಪತ್ರೆಗೆ ದಾಖಲು Read More »

ಕಡಬ: ಜ.15ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಪೂರ್ವಬಾವಿ ಸಭೆ

ಸಮಗ್ರ ನ್ಯೂಸ್: ಜ. 21ರಂದು ರಾಷ್ಟ್ರಿಯ ಕಾಂಗ್ರೆಸ್ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳೂರಿಗೆ ಭೇಟಿ ನೀಡುವವರಿದ್ದು. ಇದರ ಕುರಿತು ಜ. 15ರಂದು ಸಂಜೆ 3ಗಂಟೆಗೆ ಸರಿಯಾಗಿ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು, ಮಾಜಿ ಸಚಿವ ರಮನಾಥ ರೈ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸುಳ್ಯ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಮಮತಾ ಗಟ್ಟಿಯವರು ಹಾಗೂ ಡಿಸಿಸಿ ಉಸ್ತುವಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ

ಕಡಬ: ಜ.15ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಪೂರ್ವಬಾವಿ ಸಭೆ Read More »

ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ ನಿಂದ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು ಪ್ರಗತಿ ಬಂಧು-ಸ್ವ ಸಹಾಯ ಸಂಘಗಳ ಒಕ್ಕೂಟ ಐವರ್ನಾಡು, ಪಾಲೆಪ್ಪಾಡಿ, ದೇವರಕಾನ ಹಾಗೂ ಊರವರ ಸಹಕಾರದೊಂದಿಗೆ ಪರಮಪೂಜ್ಯ ರಾಜಶ್ರೀ ಡಾ| ಡಿ. ವೀರೇಂದ್ರ ಹೆಗ್ಗಡೆ ರವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹದಿನಾರನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು 50 ಮಂದಿ ವ್ರತದಾರಿಗಳ ಪಾಲ್ಗೊಳ್ಳುವಿಕೆಯಿಂದ ಜ.14ರಂದು ಐವರ್ನಾಡು ಶ್ರೀ

ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ ನಿಂದ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಸುಳ್ಯ: ಮತ್ತೊಂದು ರಾಮಮಂದಿರ ಶುಭಾಶಯ ಬ್ಯಾನರ್ ವಿರೂಪ

ಸಮಗ್ರ ನ್ಯೂಸ್: ರಾಮಮಂದಿರ ಲೋಕಾರ್ಪಣೆ ಕುರಿತು ಸುಳ್ಯ ಸಮೀಪದ ಸೋಣಂಗೇರಿಯಲ್ಲಿ ಅಳವಡಿಸಲಾದ ಬ್ಯಾನರ್ ಅನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ವಾರವಷ್ಟೇ ಸುಳ್ಯ ನಗರದಲ್ಲಿ ಅಳವಡಿಸಲಾದ ಬ್ಯಾನರ್ ಅನ್ನು ಹರಿದು ಹಾಕಲಾಗಿತ್ತು. ಈ ಕುರಿತಂತೆ ಪಕ್ಷಾತೀತ ಖಂಡನೆ ವ್ಯಕ್ತವಾಗಿ, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಇಂತಹುದೇ ಮತ್ತೊಂದು ಘಟನೆ ನಡೆದಿದ್ದು, ಬ್ಯಾನರ್ ನಲ್ಲಿ ಶುಭಾಶಯ ಕೋರಿದ ವ್ಯಕ್ತಿಗಳ ಹೆಸರನ್ನು ಅಳಿಸಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸುಳ್ಯ: ಮತ್ತೊಂದು ರಾಮಮಂದಿರ ಶುಭಾಶಯ ಬ್ಯಾನರ್ ವಿರೂಪ Read More »

ಕರಾವಳಿ ಜಿಲ್ಲೆಗಳಲ್ಲಿ ಕೋಳಿಅಂಕಕ್ಕೆ ಅನುಮತಿ ನೀಡಲು ಹರೀಶ್ ಪೂಂಜಾ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಳಿ ಅಂಕ ನಡೆಸಲು ಅನುಮತಿ ನೀಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆದಿದ್ದು, ಇದರಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈವ – ದೇವಸ್ಥಾನಗಳಲ್ಲಿ ನೇಮ, ಕೋಲ ಉತ್ಸವಗಳ ಸಲುವಾಗಿ ಕೋಳಿ ಅಂಕ ನಡೆಯುತ್ತದೆ. ಕೋಳಿ ಅಂಕಗಳಿಗೆ ಪೊಲೀಸರು ದಾಳಿ ಮಾಡುವ ಪ್ರಕರಣಗಳು ನಡೆಯುತ್ತಿದ್ದು, ಹೀಗಾಗಿ ಜಿಲ್ಲೆಯಲ್ಲಿ ದೈವಸ್ಥಾನ ದೇವಸ್ಥಾನಗಳಲ್ಲಿ

ಕರಾವಳಿ ಜಿಲ್ಲೆಗಳಲ್ಲಿ ಕೋಳಿಅಂಕಕ್ಕೆ ಅನುಮತಿ ನೀಡಲು ಹರೀಶ್ ಪೂಂಜಾ ಆಗ್ರಹ Read More »

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ

ಸಮಗ್ರ ನ್ಯೂಸ್: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲೆಂದು ಆಗಮಿಸಿದ್ದ ಪ್ರವಾಸಿಗನೊಬ್ಬ ಆಯತಪ್ಪಿ ಅಲ್ಲಿನ ಬಾವಿಗೆ ಬಿದ್ದ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಮಠದ ಸಮೀಪದ ಶಿರಬೀಡು ಬಳಿ ಇರುವ ಬಾವಿ ಮೇಲೆ ಕುಳಿತುಕೊಂಡಿದ್ದಾಗ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾನೆ. ನೀರು ಕಡಿಮೆ ಇದ್ದಿದ್ದರಿಂದ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯರು ಹಗ್ಗದ ಸಹಾಯದಿಂದ ಸಂತೋಷ್​ನನ್ನು ಮೇಲಕ್ಕೆತ್ತಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ Read More »

ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಘೋಷಿಸಿರುವ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ಜ. 21ರಂದು ಕಾಂಗ್ರೆಸ್‌ನ ಎಲ್ಲಾ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳನ್ನು ಸೇರಿಸುವ ಬೃಹತ್ ಸಮಾವೇಶ ಜ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಹೇಳಿದರು. ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಜ. 12ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ನಾಯಕರು ಪಾಲ್ಗೊಳ್ಳಲಿದ್ದಾರೆ. ಸುಳ್ಯ

ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್ Read More »

ಸುಳ್ಯ: ಶ್ರೀ ನಾಗಬ್ರಹ್ಮ ಸನ್ನಿಧಿಯ 27 ನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಬಿ ಸೇವೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿನ ಸಾರಕೂಟೇಲಿನಲ್ಲಿರುವ ಶ್ರೀ ನಾಗಬ್ರಹ್ಮರ ಸನ್ನಿಧಿಯಲ್ಲಿ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮವು ಜ.13 ರಂದು  ಸಾರಕೂಟೇಲಿನಲ್ಲಿ ನಡೆಯಿತು. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಹಾಗೂ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ತಾಂತ್ರಿಕ ಕಾರ್ಯಕ್ರಮಗಳು ನಡೆದವು. ಮುಂಜಾನೆ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ಗಣಪತಿ ಹೋಮ ನಂತರ ಶ್ರೀ ಆತ್ಮರಾಮ ಭಜನಾಮಂದಿರ ಇವರಿಂದ ಭಜನಾ ಕಾರ್ಯಕ್ರಮ, ಆಶ್ಲೇಷ ಬಲಿ, ಶ್ರೀ ಸತ್ಯನಾರಾಯಣ

ಸುಳ್ಯ: ಶ್ರೀ ನಾಗಬ್ರಹ್ಮ ಸನ್ನಿಧಿಯ 27 ನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಬಿ ಸೇವೆ Read More »

ಪೆರುವಾಜೆ: ರಥೋತ್ಸವ ದಿನ ವಿಶೇಷ ಸಾರಿಗೆ ಬಸ್ಸಿಗೆ ಮನವಿ|ಕೆ.ಎಸ್.ಆರ್.ಟಿ.ಸಿ. ಅಧಿಕಾರಿಯಿಂದ ಭರವಸೆ

ಸಮಗ್ರ ನ್ಯೂಸ್: ಪೆರುವಾಜೆ ಶ್ರೀ ಉದ್ಭವ ಜಲದುರ್ಗಾ ದೇವಿ ದೇವಸ್ಥಾನದ ನೂತನ ರಥೋತ್ಸವ ಜ. 19ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಆಗಲು ಸಾರಿಗೆ ಬಸ್ ವ್ಯವಸ್ಥೆಗೆ ಕಲ್ಪಿಸಲು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಅವರು ಮನವಿ ಮಾಡಿಕೊಂಡರು. ಈ ಸಮಯದಲ್ಲಿ ಮಾಡಾವು, ಕಾಣಿಯೂರು, ಸವಣೂರು, ಕಲ್ಮಡ್ಕ, ಬಾಳಿಲ, ಪೆರ್ಲಂಪಾಡಿ, ಐವರ್ನಾಡು ಈ ಸ್ಥಳಗಳಿಂದ ಸಂಜೆ ಮತ್ತು ರಾತ್ರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡುವಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ

ಪೆರುವಾಜೆ: ರಥೋತ್ಸವ ದಿನ ವಿಶೇಷ ಸಾರಿಗೆ ಬಸ್ಸಿಗೆ ಮನವಿ|ಕೆ.ಎಸ್.ಆರ್.ಟಿ.ಸಿ. ಅಧಿಕಾರಿಯಿಂದ ಭರವಸೆ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಪುತ್ತೂರಿನ ಮಕ್ಕಳ ಮಂಟಪ ವೇದಿಕೆಯಲ್ಲಿ ಉಪತಹಸೀಲ್ದಾರ್ ಮತ್ತು ಕವಯತ್ರಿಯಾದ ಸುಲೋಚನಾ ಪಿ.ಕೆ. ಅವರ ಜೋಡಿ ಸಾಹಿತ್ಯ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕ ಎಚ್.ಭೀಮರಾವ್ ವಾಷ್ಠರ್ ಅವರನ್ನು ವೇದಿಕೆಯ ಗಣ್ಯರ ಜೊತೆ ಭಾಗವಹಿಸಿದ ಎಲ್ಲಾ ಕವಿಗಳು ಜೊತೆಯಾಗಿ ಸಮ್ಮಾನಿಸಿ ಗೌರವಿಸಿದರು. ಸಮಾರಂಭದ ವೇದಿಕೆಯಲ್ಲಿ ಹಿರಿಯರಾದ ಸುಕುಮಾರ ಗೌಡ, ತಹಸೀಲ್ದಾರರಾದ ಶಿವಶಂಕರ್, ಶಿಕ್ಷಣ ಚಿಂತಕ ಗೋಪಾಡ್ಕರ್, ಕಸಾಪ ಪುತ್ತೂರು ತಾಲೂಕು ಘಟಕದ ಉಮೇಶ್ ನಾಯಕ್, ಲೇಖಕಿ ಸುಲೋಚನಾ

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ Read More »