ಕರಾವಳಿ

ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಸಿಎಂ ಗೆ ಬಿಜೆಪಿ ನಿಯೋಗದಿಂದ ಮನವಿ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳಿನ ಸಮಸ್ಯೆಗಳ ಪರಿಹಾರಕ್ಕೆ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ […]

ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಸಿಎಂ ಗೆ ಬಿಜೆಪಿ ನಿಯೋಗದಿಂದ ಮನವಿ Read More »

ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ| ವಿಶ್ವ ದಾಖಲೆ ಬರೆದ ಮಂಗಳೂರಿನ ರೆಮೋನಾ ಪಿರೇರಾ

ಸಮಗ್ರ ನ್ಯೂಸ್: ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ‌ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ. ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್​​ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ ಭರತನಾಟ್ಯ ಪ್ರದರ್ಶನ ಮಾಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ

ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ| ವಿಶ್ವ ದಾಖಲೆ ಬರೆದ ಮಂಗಳೂರಿನ ರೆಮೋನಾ ಪಿರೇರಾ Read More »

ಜು.25ರಂದು ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55 ಮಂಗಳೂರು ವಿಮಾನ ನಿಲ್ದಾಣ ಆಗಮನ, 8- ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 – ದಕ್ಷಿಣ

ಜು.25ರಂದು ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸ Read More »

ಭಾರೀ ಮಳೆ ಹಿನ್ನೆಲೆ| ಇಂದು(ಜು.24) ಕಡಬ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಮುಂಜಾಗ್ರತಾ ಕ್ರಮವಾಗಿ ಕಡಬ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24ಕ್ಕೆ ರಜೆ ಘೋಷಣೆ ಮಾಡಿ ಕಡಬ ತಹಸೀಲ್ದಾ‌ರ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಮಂಗಳೂರು, ಮೂಲ್ಕಿ ತಾಲೂಕಿನಲ್ಲೂ ರಜೆ ನೀಡಲಾಗಿದೆ.

ಭಾರೀ ಮಳೆ ಹಿನ್ನೆಲೆ| ಇಂದು(ಜು.24) ಕಡಬ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಜು.25ರಂದು ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪಿಯು ಕಾಲೇಜುಗಳಿಗೆ ಜು 25ರಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಭಾರೀ ಮಳೆ‌ ಹಾಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಜು.25ರಂದು ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ

ಸಮಗ್ರ ನ್ಯೂಸ್: ಇಂದು ಆಷಾಢ ಮಾಸದ ಅಮಾವಾಸ್ಯೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ರಾಜ್ಯಾದ್ಯಂತ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ, ಪುಣ್ಯ ಸ್ನಾನಗಳು ನಡೆಯುತ್ತಿದೆ. ಕರಾವಳಿಯ ಕಾರಿಂಜೇಶ್ವರ ದೇಗುಲ, ನರಹರಿ ಪರ್ವತ, ಧರ್ಮಸ್ಥಳ ಮುಂತಾದೆಡೆ ಭಕ್ತರು ಮುಂಜಾನೆಯಿಂದಲೇ ಹರಿದು ಬರುತ್ತಿದ್ದಾರೆ. ಪ್ರಸ್ತುತ ಆಟಿ ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ. ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ ಕ್ರಮ ಇದೆ . ಆದರೆ ಅಟಿ

ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ Read More »

ಭಾರೀ ಮಳೆ ಹಿನ್ನಲೆ| ಇಂದು(ಜು.24) ಉಡುಪಿ ಜಿಲ್ಲೆ ಹಾಗೂ ದ.ಕ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ 24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ. ದ.ಕ

ಭಾರೀ ಮಳೆ ಹಿನ್ನಲೆ| ಇಂದು(ಜು.24) ಉಡುಪಿ ಜಿಲ್ಲೆ ಹಾಗೂ ದ.ಕ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ| ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್‌ ಆದೇಶಿಸಿದ್ದಾರೆ. ಮಂಗಳೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು,

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ| ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ Read More »

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಆನೆ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕದ ಗುಂಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ. ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡುಬಂದಿದೆ. ಸ್ಥಳಕ್ಕೆ

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು Read More »

ಏಕಾಏಕಿ ಧುಮ್ಮಿಕ್ಕಿ ಹರಿದ ಅರೆಬೈಲ್ ಫಾಲ್ಸ್| ನಡುವೆ ಸಿಲುಕಿದ ಪ್ರವಾಸಿಗರ ರಕ್ಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟ ಭಾಗದ ಅರೆಬೈಲ್ ಜಲಪಾತದಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾಗಿ ಜಲಪಾತ ವೀಕ್ಷಿಸಲು ಆಗಮಿಸಿದ್ದ ಪ್ರವಾಸಿಗರು ನಡುವೆ ಸಿಲುಕಿದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಖಾಸಗಿ ಮೆಡಿಕಲ್‌ ಕಾಲೇಜಿನ ಐವರು ವಿದ್ಯಾರ್ಥಿಗಳು ಅರೆಬೈಲ್ ಘಟ್ಟದ ಕಾಡಿನ ಮಧ್ಯದಲ್ಲಿ ಇರುವ ಅರೆಬೈಲ್ ಜಲಪಾತಕ್ಕೆ ಆಗಮಿಸಿದ್ದರು. ಜಲಪಾತ ವೀಕ್ಷಣೆ ವೇಳೆ ಅವರು ಚಿಕ್ಕ ಹಳ್ಳವನ್ನು ದಾಟಲು ಮುಂದಾಗಿದ್ದರು. ಆಗ ಏಕಾಏಕಿ ನೀರಿನ ಹರಿವು ಹೆಚ್ಚಳವಾಗಿದೆ. ಜಲಪಾತದಲ್ಲಿ ನೀರು ಧುಮ್ಮಿಕ್ಕಲು ಪ್ರಾರಂಭಿಸಿದಂತೆ

ಏಕಾಏಕಿ ಧುಮ್ಮಿಕ್ಕಿ ಹರಿದ ಅರೆಬೈಲ್ ಫಾಲ್ಸ್| ನಡುವೆ ಸಿಲುಕಿದ ಪ್ರವಾಸಿಗರ ರಕ್ಷಣೆ Read More »