ಕರಾವಳಿ

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಹಲವೆಡೆ ಬಿರುಸಿನ ಗಾಳಿ-ಮಳೆ ಮುಂದುವರೆದಿದ್ದು, ಮೇ 26ರ ಸೋಮವಾರ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ತೀವ್ರ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ. ಗಾಳಿ-ಮಳೆ ಹೆಚ್ಚಿರುವ ಕಾರಣ ಜಾಗೃತೆ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯಲ್ಲಿರುವ ಎಲ್ಲ ಮದರಸಗಳ ಆಡಳಿತ ಮಂಡಳಿಗಳು ಹಾಗೂ ಸದರ್ ಉಸ್ತಾದರು ಮೇ 26ರಂದು ಮದ್ರಸಗಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲು ದ.ಕ.ಜಿಲ್ಲಾ ವಕ್ಫ್ ಸಲಹಾ […]

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ Read More »

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ| ಗ್ರಾಹಕರಿಂದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಗ್ರಾಹಕರು ಠೇವಣಿ ಇಟ್ಟಿದ್ದ 40 ಕೋಟಿ ಹಣ ವಾಪಾಸ್ ನೀಡದೆ ವಂಚನೆ ಮಾಡಿದ ಆರೋಪದ ಮೇಲೆ ಶ್ರೀ ರಾಮ ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯ ವಿರುದ್ದ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೆಳ್ತಂಗಡಿ ನಗರದ ಜೂನಿಯರ್‌ ಕಾಲೇಜ್‌ ರಸ್ತೆಯಲ್ಲಿರುವ ರಾಮನಗರದ ವಿ.ಆರ್‌. ನಾಯಕ್‌ ಕಾಂಪೌಂಡ್‌ನಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ| ಗ್ರಾಹಕರಿಂದ ಪ್ರಕರಣ ದಾಖಲು Read More »

ವಿಟ್ಲ: ಪತ್ನಿಯ ಸೀಮಂತದ ವೇಳೆ ಕುಸಿದು ಬಿದ್ದು ಪತಿ ಸಾವು| ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಸಮಗ್ರ ನ್ಯೂಸ್: ಪತ್ನಿಯ ಸೀಮಂತ ಕಾರ್ಯಕ್ರಮ ನಡೆಯುತ್ತಿದ್ದ ಶುಭ ದಿನದಂದೇ ಪತಿ ಅನಿರೀಕ್ಷಿತವಾಗಿ ನಿಧನರಾದ ಅತ್ಯಂತ ವಿಷಾದನೀಯ ಘಟನೆ ಕನ್ಯಾನ ಗ್ರಾಮದ ಮಿತ್ತನಡ್ಕ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿ ಹಾಗೂ ಪಿಕಪ್ ವಾಹನ ಚಾಲಕರಾದ ಸತೀಶ್ (33 ವ) ಮೃತರಾದವರು. ತಮ್ಮ ಪತ್ನಿಯ ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಸತೀಶ್ ಅವರು ಹಠಾತ್ತನೆ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಹಾಗೂ ತದನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ, ಚಿಕಿತ್ಸಾ

ವಿಟ್ಲ: ಪತ್ನಿಯ ಸೀಮಂತದ ವೇಳೆ ಕುಸಿದು ಬಿದ್ದು ಪತಿ ಸಾವು| ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ Read More »

ಮಂಗಳೂರು: ಮದುವೆ ವಿಚಾರದಲ್ಲಿ ಗಲಾಟೆ| ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ| ಮತ್ತಿಬ್ಬರ ಮೇಲೂ ಹಲ್ಲೆ

ಸಮಗ್ರ ನ್ಯೂಸ್: ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸಲ್ಮಾನ್(50) ಎಂಬಾತನನ್ನು ಸಂಬಂಧಿ ಮುಸ್ತಾಫನಿಂದ ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಸಲ್ಮಾನ್​ನ ಇಬ್ಬರ ಪುತ್ರರಾದ ರಿಯಾಬ್​, ಸಿಯಾಬ್​​ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿ ಆಗಿದ್ದಾನೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಂಬಂಧಿ ಮುಸ್ತಫ ಎಂಬವರ ಮದುವೆಯನ್ನು ಸಲ್ಮಾನ್ ನೆರವೇರಿಸಿದ್ದ. ಇವರಿಬ್ಬರ ನಡುವೆ ಮದುವೆ ಸಂದರ್ಭದಲ್ಲಿ

ಮಂಗಳೂರು: ಮದುವೆ ವಿಚಾರದಲ್ಲಿ ಗಲಾಟೆ| ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ| ಮತ್ತಿಬ್ಬರ ಮೇಲೂ ಹಲ್ಲೆ Read More »

ಮಳೆ‌ ಅವಾಂತರಕ್ಕೆ ಮಣಿಪಾಲದಲ್ಲಿ‌ ನದಿಯಂತಾದ ರಸ್ತೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ ರಸ್ತೆ ಸಂಪೂರ್ಣವಾಗಿ ಮುಳುಗಿ, ನದಿಯಂತೆ ನೀರು ಹರಿದಿದ್ದು, ನೀರಿನ ಜೊತೆಗೆ ಕಲ್ಲು ಮಣ್ಣುಗಳು ರಸ್ತೆ ಮೇಲೆ ಹರಿದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ. ಉಡುಪಿಯ ಪ್ರಮುಖ ರಸ್ತೆಯಾಗಿರುವ ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ

ಮಳೆ‌ ಅವಾಂತರಕ್ಕೆ ಮಣಿಪಾಲದಲ್ಲಿ‌ ನದಿಯಂತಾದ ರಸ್ತೆ Read More »

ಉಪ್ಪಿನಂಗಡಿ ದೇವಸ್ಥಾನದ ಬಸವ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಾಲಯದ ಉತ್ಸವಗಳಲ್ಲಿ ಭಾಗವಹಿಸುತ್ತಿದ್ದ, ಲವಲವಿಕೆಯಲ್ಲಿದ್ದ ಬಸವ ಶನಿವಾರ(ಮೇ.17) ಸಂಜೆ ಹೃದಯಾಘಾತದಿಂದ ಮೃತಪಟ್ಟಿದೆ. ದೇವಾಲಯದ ಉತ್ಸವಗಳಲ್ಲಿ ಬೆಳ್ಳಿ ಆಭರಣಗಳನ್ನು ಧರಿಸಿ ದೇವರ ಮುಂದೆ ಸಾಗುತ್ತ ಭಕ್ತರ ಆಕರ್ಷಣೆಗೆ ಒಳಗಾಗಿತ್ತು. ಬಸವನ ಮೃತ ದೇಹವನ್ನು ಕ್ರೇನ್ ಸಹಾಯದಿಂದ ಸ್ಥಳಾಂತರಿಸಿ ಅಂತ್ಯ ಸಂಸ್ಕಾರ ಮಾಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತರು ಅಂತಿಮ ವಿಧಿಯನ್ನು ನೆರವೇರಿಸಿದರು.

ಉಪ್ಪಿನಂಗಡಿ ದೇವಸ್ಥಾನದ ಬಸವ ಹೃದಯಾಘಾತದಿಂದ ಸಾವು Read More »

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು 20, 21 ರಂದು ರೆಡ್ ಅಲರ್ಟ್, ಮೇ 22 ರಿಂದ 25 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಿಡಿಲು ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ Read More »

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ| ಹಲವು ಬಿಜೆಪಿ ಕಾರ್ಯಕರ್ತರ ಬಂಧನ

ಸಮಗ್ರ ನ್ಯೂಸ್: ನೂತನ ಜಿಲ್ಲಾಡಳಿತ ಕೇಂದ್ರ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದ್ದು, ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಡೀಲ್‌ನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಯೆಯ್ಯಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲು ಆರಂಭಿಸಿದರು. ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ| ಹಲವು ಬಿಜೆಪಿ ಕಾರ್ಯಕರ್ತರ ಬಂಧನ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ರೌಡಿಶೀಟರ್ ಯಾಕೆ ಅಧ್ಯಕ್ಷನಾಗಬಾರದು? ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಟ್ರಸ್ಟ್ ಗೆ ಮಾಜಿ ರೌಡಿ ಶೀಟರ್, ಕಾಂಗ್ರೆಸ್ ನಾಯಕ ಹರೀಶ್ ಗೌಡರನ್ನು ಆಯ್ಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ದಿನೇಶ್ ಗುಂಡೂರಾವ್ ಯಾಕೆ ಆಗಬಾರದು ಎಂದಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹರೀಶ್ ಗೌಡ ಈಗ ರೌಡಿ ಶೀಟರ್ ಅಲ್ಲ. ಮಾಜಿ ರೌಡಿ ಶೀಟರ್. ರೌಡಿ ಶೀಟರ್ ಗಳು ಸುಧಾರಣೆಯಾಗಬಾರದಾ? ಅವರು ಈಗ ಹಾಗಿಲ್ಲ. ಹಾಗಾಗಿ ಅವರು

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ರೌಡಿಶೀಟರ್ ಯಾಕೆ ಅಧ್ಯಕ್ಷನಾಗಬಾರದು? ಸಚಿವ ದಿನೇಶ್ ಗುಂಡೂರಾವ್ Read More »

ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಉದ್ಘಾಟನೆ| ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಹುಕಾಲದ ಬೇಡಿಕೆಯಾಗಿದ್ದ ಪಡೀಲ್‌ನಲ್ಲಿ ನಿರ್ಮಿಸಿರುವ ಸುಸಜ್ಜಿತ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ “ಪ್ರಜಾ ಸೌಧ’ದ ಉದ್ಘಾಟನೆಯನ್ನು ಇಂದು ಮೇ 16 ರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಎಲ್ಲ ಇಲಾಖೆಗಳು ಈ ನೂತನ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿವೆ. ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ. ಆಧುನಿಕ ವ್ಯವಸ್ಥೆ ಯೊಂದಿಗೆ ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ಕಟ್ಟಡ ನಿರ್ಮಾಣವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮೇ 16ರಂದು ಮಧ್ಯಾಹ್ನ 3.20ಕ್ಕೆ

ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಉದ್ಘಾಟನೆ| ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ Read More »