ಕರಾವಳಿ

ಸುಳ್ಯ: ಜ. 19 ರಿಂದ ಜ.23, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರ ಕಮಿಲ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವವು ಜ. 19 ರಿಂದ ಜ.23ರ ತನಕ ನಡೆಯಲಿದೆ ಜ. 19ರಂದು ರಾತ್ರಿ ಗಂಟೆ 8-00ಕ್ಕೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಹೊರಡುವುದು, ರಾತ್ರಿ ಗಂಟೆ 9-00ಕ್ಕೆ – ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಮಿಲ-ಮೊಗ್ರ-ಬಳ್ಳಕ ಒಕ್ಕೂಟ ಇವರ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನೆ (ತರಬೇತುದಾರರು: ಶ್ರೀ ರಮೇಶ್ ಮೆಟ್ಟಿನಡ್ಕ), ಶ್ರೀ ದುರ್ಗಾ ಭಜನಾ ಮಂಡಳಿ

ಸುಳ್ಯ: ಜ. 19 ರಿಂದ ಜ.23, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವ Read More »

ಜ. 21: ಕಡಬದ ಆಲಂಕಾರಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ 23ನೇ ನೂತನ ಶಾಖೆ ಲೋಕಾರ್ಪಣೆ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ನೂತನ ಶಾಖೆ ಕಡಬ ತಾಲೂಕಿನ ಆಲಂಕಾರಿನಲ್ಲಿ ಜ. 21ರಂದು ಲೋಕಾರ್ಪಣೆಗೊಳ್ಳಲಿದೆ. ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರ ಅಧ್ಯಕ್ಷತೆಯಲ್ಲಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಖಾ ಕಚೇರಿಯನ್ನು ಉದ್ಘಾಟಿಸಲಿದ್ದು, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಜಿ. ಕೃಷ್ಣಪ್ಪ ರಾಮಕುಂಜ ಅವರು ಗಣಕೀಕರಣ ವ್ಯವಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಆಲಂಕಾರು ಗ್ರಾ.ಪಂ.

ಜ. 21: ಕಡಬದ ಆಲಂಕಾರಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ 23ನೇ ನೂತನ ಶಾಖೆ ಲೋಕಾರ್ಪಣೆ Read More »

ಅಯೋಧ್ಯೆ ಶ್ರಿರಾಮ ಪ್ರಾಣಪ್ರತಿಷ್ಠೆಗೆ ತುಳುನಾಡಿನ ಪುರೋಹಿತ|ಅಪೂರ್ವ ಅವಕಾಶ ಪಡೆದ ಸುಳ್ಯದ ಡಾ.ಕೆ.ಗಣಪತಿ ಭಟ್

ಸಮಗ್ರ ನ್ಯೂಸ್: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಗೆ ತುಳುನಾಡಿನ ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರೊಬ್ಬರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕೆಮನಬಳ್ಳಿಯ ಶಾರದಾ ಮತ್ತು ಗೋಪಾಲಕೃಷ್ಣ ಭಟ್ ಅವರ ಪುತ್ರ ಪ್ರಸ್ತುತ ತಿರುಪತಿಯ ರಾಷ್ಟ್ರೀಯ ಸಂಸ್ಕ್ರತ ವಿ.ವಿಯ ಪರಮಚಾರ್ಯ ಗುರುಕುಲದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಕೆ. ಗಣಪತಿ ಭಟ್ ಅವಕಾಶ ಪಡೆದುಕೊಂಡವರು. ಜ. 22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಧಾರ್ಮಿಕ ವಿಧಿ ವಿಧಾನಗಳು

ಅಯೋಧ್ಯೆ ಶ್ರಿರಾಮ ಪ್ರಾಣಪ್ರತಿಷ್ಠೆಗೆ ತುಳುನಾಡಿನ ಪುರೋಹಿತ|ಅಪೂರ್ವ ಅವಕಾಶ ಪಡೆದ ಸುಳ್ಯದ ಡಾ.ಕೆ.ಗಣಪತಿ ಭಟ್ Read More »

ಸುಳ್ಯ: ಗುಂಪಿನಿಂದ ಬೇರ್ಪಟ್ಟು ಒಂಟಿಯಾದ ಮರಿಯಾನೆ

ಸಮಗ್ರ ನ್ಯೂಸ್: ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾದ ಘಟನೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ನಡೆದಿದೆ. ಇಂದು ಬೆಳಗ್ಗೆ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡುಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿದ್ದಾರೆ. ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ ಗುಂಪಿನಿಂದ ಮರಿಯಾನೆ ತಪ್ಪಿಸಿಕೊಂಡು ಬೇರ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸಲು ಪ್ರಯತ್ನ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಸುಳ್ಯ: ಗುಂಪಿನಿಂದ ಬೇರ್ಪಟ್ಟು ಒಂಟಿಯಾದ ಮರಿಯಾನೆ Read More »

ಬೆಳ್ತಂಗಡಿ: ಉದ್ಯಮಿ ಪತ್ನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಉದ್ಯಮಿಯೋರ್ವರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ. ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಅಪರಾಹ್ನ ಈ ಘಟನೆ ನಡೆದಿದೆ. ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವೇಣೂರು ಠಾಣೆಯಲ್ಲಿ‌

ಬೆಳ್ತಂಗಡಿ: ಉದ್ಯಮಿ ಪತ್ನಿ ಆತ್ಮಹತ್ಯೆಗೆ ಶರಣು Read More »

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ಇಲ್ಲಿನ ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ . ಕೂಡಲೇ ಸ್ಥಳೀಯ ಮುಳುಗು ತಜ್ಞರು ನೀರಿಗೆ ಹಾರಿ ಬಾಲಕನನ್ನು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕ ಸಾವು Read More »

ಸುಳ್ಯ: ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಜ.20 ರಂದು ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಐವರ್ನಾಡು ದೇರಾಜೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬುದಾಗಿ ಜ.20 ರಂದು ಐವರ್ನಾಡು ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿದುಬಂದಿದೆ. ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಲು ಐವರ್ನಾಡು ಗ್ರಾಮಸ್ಥರು ಹಾಗೂ ನಾಗರಿಕ ಸೇವಾ ಸಮಿತಿಯವರು ಸಿದ್ಧತೆ ನಡೆಸುತ್ತಿದ್ದಾರೆ. ಇತ್ತೀಚೆಗೆ ರಸ್ತೆಗೆ ಆಗ್ರಹಿಸಿ ಮುಖ್ಯ ರಸ್ತೆಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರಿಗೆ,

ಸುಳ್ಯ: ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಜ.20 ರಂದು ಬೃಹತ್ ಪ್ರತಿಭಟನೆ Read More »

ಜ. 23: ಸುಳ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಜ. 23ರಂದು ಸಮಯ 11:00 ರಿಂದ 03:00 ರವರೆಗೆ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ಈ ಕುರಿತಂತೆ ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೆ.ಎ ಹಿದಾಯತುಲ್ಲರವರು ಪ್ರಕಟಣೆ ಹೊರಡಿಸಿದ್ದು, ಜನತಾ ದರ್ಶನ ಕಾರ್ಯಕ್ರಮದ ಬಗ್ಗೆ ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದ್ದಾರೆ. ಈ ಜನತಾ ದರ್ಶನ

ಜ. 23: ಸುಳ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ Read More »

ಸುಳ್ಯ: ಫೆ.1- 4ರಂಗಮನೆಯಲ್ಲಿ ‘ರಂಗ ಸಂಭ್ರಮ’|ನಾಟಕ ಸಂಗೀತ ನೃತ್ಯ ಸಂಗಮದ ಸಾಂಸ್ಕೃತಿಕ ಉತ್ಸವ

ಸಮಗ್ರ ನ್ಯೂಸ್: ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಲ್ಲಿ ಫೆ. 1ರಿಂದ 4ರವರೆಗೆ ನಾಲ್ಕು ದಿನಗಳ ‘ರಂಗ ಸಂಭ್ರಮ- 2024’ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವ ನಡೆಯಲಿದೆ. *ಫೆ. 1ನೇ ಗುರುವಾರ ಮೂಡುಬಿದ್ರೆಯ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರಿಂದ ವೈದೇಹಿ ರಚನೆಯ, ಡಾ.ಜೀವನ್ ರಾಂ ಸುಳ್ಯ ನಿರ್ದೇಶನದ ಪ್ರಸಿದ್ಧ ಮಕ್ಕಳ ಪ್ರಯೋಗ ‘ನಾಯಿಮರಿ ನಾಟಕ’ ಪ್ರದರ್ಶನ. *ಫೆ. 2ನೇ ಶುಕ್ರವಾರ ಮಂಡ್ಯ ರಮೇಶ್ ನೇತೃತ್ವದ

ಸುಳ್ಯ: ಫೆ.1- 4ರಂಗಮನೆಯಲ್ಲಿ ‘ರಂಗ ಸಂಭ್ರಮ’|ನಾಟಕ ಸಂಗೀತ ನೃತ್ಯ ಸಂಗಮದ ಸಾಂಸ್ಕೃತಿಕ ಉತ್ಸವ Read More »

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಕೆ.ಎಲ್.ರಾಹುಲ್ ಭೇಟಿ

ಸಮಗ್ರ ನ್ಯೂಸ್:ಜ.17, ಕ್ರಿಕೆಟಿಗ ಮಂಗಳೂರು ಮೂಲದ ಕೆ.ಎಲ್. ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಕೆ.ಎಲ್.ರಾಹುಲ್ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಗೌರವಿಸಲಾಯಿತು. ಸ್ನೇಹಿತರ ಜೊತೆಗೆ ಕೆ.ಎಲ್.ರಾಹುಲ್ ಕುಕ್ಕೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿಗಳು, ದೇವಳದವರು, ಸ್ನೇಹಿತರು ಜತೆಗಿದ್ದರು. ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಕೆ.ಎಲ್.ರಾಹುಲ್ ಭೇಟಿ Read More »