ಕರಾವಳಿ

ಸುಳ್ಯ: ಬ್ಯಾನರ್ ಹರಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಸಮಗ್ರ ನ್ಯೂಸ್: ಅಯೋಧ್ಯೆ ಪ್ರತಿಷ್ಠೆ ಸಲುವಾಗಿ ಸುಳ್ಯ ನಗರದ ರಸ್ತೆ ಬದಿ ಹಾಕಿದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂದಿಸಲು ವಿಫಲವಾದ ಪೊಲೀಸ್ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಸುಳ್ಯ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಆದಿತ್ಯವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ರಾಮನ ಭಕ್ತರು ಹಾಕಿದ ಬ್ಯಾನರನ್ನು ಹರಿದಿರುವ ಕೃತ್ಯದ ಹಿಂದಿರುವವರ ಬಗ್ಗೆ ಸೂಕ್ತ ತನಿಖೆ ನಡೆಸಿ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಶಾಂತಿ ಸುವ್ಯವಸ್ಥೆಗೆ ಕೈಜೋಡಿಸಬೇಕು. ಪೊಲೀಸ್ ಇಲಾಖೆ […]

ಸುಳ್ಯ: ಬ್ಯಾನರ್ ಹರಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ Read More »

ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ‌ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ(89) ಅವರು ಶನಿವಾರ(ಜ.6) ಬೆಳಿಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿದ್ದ ಇವರು, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿದ್ದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು.

ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ‌ಇನ್ನಿಲ್ಲ Read More »

ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ

ಸಮಗ್ರ ನ್ಯೂಸ್: ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ. ರಾಮದೂತಾಸನದಲ್ಲಿ 1ಗಂಟೆ 1ನಿಮಿಷ 20ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಪಲ್ಲೋಡಿ(ಪಂಜ) ಜಗನ್ನಾಥ ಶೆಟ್ಟಿ ಮತ್ತು ಜಯಲಕ್ಷ್ಮಿ ಜೆ. ಶೆಟ್ಟಿ ಅವರ ಪುತ್ರಿ.

ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ Read More »

ಮದುವೆ ನಡೆಯುತ್ತಿರುವಾಗಲೇ ಮಾಜಿ ಪ್ರೇಯಸಿಯ ಹೈಡ್ರಾಮ| ಬೇರೊಬ್ಬಳಿಗೆ ತಾಳಿ ಕಟ್ಟಿ ವರ ಎಸ್ಕೇಪ್

ಸಮಗ್ರ ನ್ಯೂಸ್: ತನ್ನಗೆ ಮೋಸ ಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟ ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಬೀರಿ ಬಳಿ ನಡೆದಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ

ಮದುವೆ ನಡೆಯುತ್ತಿರುವಾಗಲೇ ಮಾಜಿ ಪ್ರೇಯಸಿಯ ಹೈಡ್ರಾಮ| ಬೇರೊಬ್ಬಳಿಗೆ ತಾಳಿ ಕಟ್ಟಿ ವರ ಎಸ್ಕೇಪ್ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಪುತ್ತೂರಿನ ಮಕ್ಕಳ ಮಂಟಪ ವೇದಿಕೆಯಲ್ಲಿ ಉಪತಹಸೀಲ್ದಾರ್ ಮತ್ತು ಕವಯತ್ರಿ ಸುಲೋಚನಾ ಪಿ.ಕೆ. ಅವರ ಜೋಡಿ ಸಾಹಿತ್ಯ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ಅವರನ್ನು ವೇದಿಕೆಯ ಗಣ್ಯರ ಜೊತೆ ಭಾಗವಹಿಸಿದ ಎಲ್ಲಾ ಕವಿಗಳು ಜೊತೆಯಾಗಿ ಸಮ್ಮಾನಿಸಿ ಗೌರವಿಸಿದರು. ಸಮಾರಂಭದ ವೇದಿಕೆಯಲ್ಲಿ ಹಿರಿಯರಾದ ಸುಕುಮಾರ ಗೌಡ, ತಹಸೀಲ್ದಾರ್ ಶಿವಶಂಕರ್, ಶಿಕ್ಷಣ ಚಿಂತಕ ಗೋಪಾಡ್ಕರ್, ಕಸಾಪ ಪುತ್ತೂರು ತಾಲೂಕು ಘಟಕದ ಉಮೇಶ್ ನಾಯಕ್, ಲೇಖಕಿ

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ Read More »

ಸುಳ್ಯ: ಅಡಿಕೆಗೆ ಹಳದಿ ರೋಗ| ಮನನೊಂದು ಕೃಷಿಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿ ಬರದ ಹಿನ್ನಲೆಯಲ್ಲಿ ಮನೆಯವರು ಜ.4ರಂದು ರಂದು ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರು ಮರವೊಂದಕ್ಕೆ ನೇಣು

ಸುಳ್ಯ: ಅಡಿಕೆಗೆ ಹಳದಿ ರೋಗ| ಮನನೊಂದು ಕೃಷಿಕ ಆತ್ಮಹತ್ಯೆ Read More »

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗದು ದೋಚಿ ಪರಾರಿ

ಸಮಗ್ರ ನ್ಯೂಸ್: ಮನೆಗೆ ಬೀಗ ಹಾಕಿ ಮನೆ ಮಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯ ಬೀಗ ಮುರಿದ ಕಳ್ಳರು ನಗದನ್ನು ದೋಚಿದ್ದಾರೆ. ಇನ್ನು ಪಕ್ಕದಲ್ಲಿರುವ ಮನೆಯೊಂದರ ಬೀಗ‌ ಮುರಿಯುವ ವೇಳೆ ಆಟೋ ರಿಕ್ಷಾ ಆಗಮಿಸುವುದನ್ನು ನೋಡಿದ ಕಳ್ಳರು

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗದು ದೋಚಿ ಪರಾರಿ Read More »

ಸುಳ್ಯ:ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವತಿಯಿಂದ First Aid Box ಹಸ್ತಾಂತರ

ಸಮಗ್ರ ನ್ಯೂಸ್: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವತಿಯಿಂದ First Aid Boxಗಳನ್ನು, ಸಭಾಪತಿ ಸುಧಾಕರ್ ರೈ ಇವರು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ. ಇವರಿಗೆ ಹಸ್ತಾಂತರಿಸಿದರು. ಸುಳ್ಯ ತಾಲೂಕಿನ ಆಯ್ದ ಶಾಲೆಗಳಿಗೆ ಈ ಕಿಟ್ ವಿತರಿಸಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಮತ್ತು ಭಾ.ರೆ.ಕ್ರಾ. ನಿರ್ದೇಶಕ ಪೃಥ್ವಿ ಕುಮಾರ್ ಟಿ., ಭಾ.ರೆ.ಕ್ರಾ. ನಿರ್ದೇಶಕ ಶಿವಪ್ರಸಾದ್ ಕೆ.ವಿ., ಪದ್ಮ, ಕಾರ್ಯದರ್ಶಿ ತಿಪ್ಪೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ

ಸುಳ್ಯ:ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವತಿಯಿಂದ First Aid Box ಹಸ್ತಾಂತರ Read More »

ಪುತ್ತೂರು: ಜ.14ರಿಂದ ಜ. 19ರವರೆಗೆ ಪಡುಮಲೆ ಶ್ರೀ ಉಳ್ಳಾಕುಲು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಶ್ರೀ ದೈವಗಳ ನೇಮೊತ್ಸವ

ಸಮಗ್ರ ನ್ಯೂಸ್: ಪಡುಮಲೆ ಶ್ರೀ ಉಳ್ಳಾಕುಲು ವ್ಯಾಘ್ರಚಾಮುಂಡಿ ದೈವಸ್ಥಾನ ಪಡುಮಲೆ ಇಲ್ಲಿನ ವಾರ್ಷಿಕ ನೇಮೊತ್ಸವ ಜ.14ರಿಂದ 19ರ ವರೆಗೆ ನಡೆಯಲಿರುವುದು. ಜ.14ನೇ ಆದಿತ್ಯವಾರ ಭಂಡಾರ ತೆಗೆಯುವುದು, ಧ್ವಜಾರೋಹಣ, ಬೀರತಂಬಿಲ. 15ರಂದು ರಾತ್ರಿ ಪೂ. ಗಂಟೆ 6-00ರಿಂದ 48 ಕಾಯಿ ಗಣಪತಿ ಹೋಮ, ಪೂ. ಗಂಟೆ 9-00ರಿಂದ ಆನೆ ಚಪ್ಪರ ಏರಿಸುವುದು, ಬಳಿಕ ಮಕರ ತೋರಣ ಏರಿಸುವುದು, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಗಂಟೆ 8ರಿಂದ ಪಾಲಕ್ಕಿ ಉತ್ಸವ, ಬೀರತಂಬಿಲ. 16ರಂದು ಪೂ. ಗಂಟೆ 11-00ರಿಂದ ಕಿನ್ನಿಮಾಣಿ ದೈವದ

ಪುತ್ತೂರು: ಜ.14ರಿಂದ ಜ. 19ರವರೆಗೆ ಪಡುಮಲೆ ಶ್ರೀ ಉಳ್ಳಾಕುಲು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಶ್ರೀ ದೈವಗಳ ನೇಮೊತ್ಸವ Read More »

ಪುತ್ತೂರು: ಜ.12 ರಿಂದ 14ರ ವರೆಗೆ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಸಮಗ್ರ ನ್ಯೂಸ್:ಜ.12ನೇ ಶುಕ್ರವಾರ ಮೊದಲ್ಗೊಂಡು ಜ. 14ನೇ ಭಾನುವಾರದ ತನಕ ಶ್ರೀ ಕ್ಷೇತ್ರ ಪಡುಮಲೆ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಪೂರ್ವ ಸಂಪ್ರದಾಯದಂತೆ ಜರಗಲಿರುವುದು. ಜ.12ನೇ ಶುಕ್ರವಾರ ಬಲಿವಾಡು ಶೇಖರಣೆ, ಹಸಿರುವಾಣಿ ಹೊರಕಾಣಿಕೆ ಸಂಗ್ರಹಿಸುವುದು. ಸಂಜೆ ಗಂಟೆ 6.00ರಿಂದ ಉಗ್ರಾಣ ತುಂಬಿಸುವುದು, ರಾತ್ರಿ ಗಂಟೆ 7.00ರಿಂದ ಬಿರಮೂಲೆ ರಾಮ ಭಟ್, ನಾರಾಯಣ ಭಟ್, ಪಟ್ಟೆ ಕೃಷ್ಣ ರೈ ಕುದ್ಕಾಡಿ ಅವರ ಸಾರಥ್ಯದಲ್ಲಿ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಸಂಜೆ 6 ಗಂಟೆಯಿಂದ

ಪುತ್ತೂರು: ಜ.12 ರಿಂದ 14ರ ವರೆಗೆ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ Read More »