ಕರಾವಳಿ

ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಘೋಷಿಸಿರುವ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ಜ. 21ರಂದು ಕಾಂಗ್ರೆಸ್‌ನ ಎಲ್ಲಾ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳನ್ನು ಸೇರಿಸುವ ಬೃಹತ್ ಸಮಾವೇಶ ಜ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಹೇಳಿದರು. ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಜ. 12ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ನಾಯಕರು ಪಾಲ್ಗೊಳ್ಳಲಿದ್ದಾರೆ. ಸುಳ್ಯ

ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್ Read More »

ಸುಳ್ಯ: ಶ್ರೀ ನಾಗಬ್ರಹ್ಮ ಸನ್ನಿಧಿಯ 27 ನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಬಿ ಸೇವೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿನ ಸಾರಕೂಟೇಲಿನಲ್ಲಿರುವ ಶ್ರೀ ನಾಗಬ್ರಹ್ಮರ ಸನ್ನಿಧಿಯಲ್ಲಿ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮವು ಜ.13 ರಂದು  ಸಾರಕೂಟೇಲಿನಲ್ಲಿ ನಡೆಯಿತು. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಹಾಗೂ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ತಾಂತ್ರಿಕ ಕಾರ್ಯಕ್ರಮಗಳು ನಡೆದವು. ಮುಂಜಾನೆ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ಗಣಪತಿ ಹೋಮ ನಂತರ ಶ್ರೀ ಆತ್ಮರಾಮ ಭಜನಾಮಂದಿರ ಇವರಿಂದ ಭಜನಾ ಕಾರ್ಯಕ್ರಮ, ಆಶ್ಲೇಷ ಬಲಿ, ಶ್ರೀ ಸತ್ಯನಾರಾಯಣ

ಸುಳ್ಯ: ಶ್ರೀ ನಾಗಬ್ರಹ್ಮ ಸನ್ನಿಧಿಯ 27 ನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಪರಿವಾರ ದೈವಗಳ ತಂಬಿಬಿ ಸೇವೆ Read More »

ಪೆರುವಾಜೆ: ರಥೋತ್ಸವ ದಿನ ವಿಶೇಷ ಸಾರಿಗೆ ಬಸ್ಸಿಗೆ ಮನವಿ|ಕೆ.ಎಸ್.ಆರ್.ಟಿ.ಸಿ. ಅಧಿಕಾರಿಯಿಂದ ಭರವಸೆ

ಸಮಗ್ರ ನ್ಯೂಸ್: ಪೆರುವಾಜೆ ಶ್ರೀ ಉದ್ಭವ ಜಲದುರ್ಗಾ ದೇವಿ ದೇವಸ್ಥಾನದ ನೂತನ ರಥೋತ್ಸವ ಜ. 19ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಆಗಲು ಸಾರಿಗೆ ಬಸ್ ವ್ಯವಸ್ಥೆಗೆ ಕಲ್ಪಿಸಲು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಅವರು ಮನವಿ ಮಾಡಿಕೊಂಡರು. ಈ ಸಮಯದಲ್ಲಿ ಮಾಡಾವು, ಕಾಣಿಯೂರು, ಸವಣೂರು, ಕಲ್ಮಡ್ಕ, ಬಾಳಿಲ, ಪೆರ್ಲಂಪಾಡಿ, ಐವರ್ನಾಡು ಈ ಸ್ಥಳಗಳಿಂದ ಸಂಜೆ ಮತ್ತು ರಾತ್ರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡುವಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ

ಪೆರುವಾಜೆ: ರಥೋತ್ಸವ ದಿನ ವಿಶೇಷ ಸಾರಿಗೆ ಬಸ್ಸಿಗೆ ಮನವಿ|ಕೆ.ಎಸ್.ಆರ್.ಟಿ.ಸಿ. ಅಧಿಕಾರಿಯಿಂದ ಭರವಸೆ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಪುತ್ತೂರಿನ ಮಕ್ಕಳ ಮಂಟಪ ವೇದಿಕೆಯಲ್ಲಿ ಉಪತಹಸೀಲ್ದಾರ್ ಮತ್ತು ಕವಯತ್ರಿಯಾದ ಸುಲೋಚನಾ ಪಿ.ಕೆ. ಅವರ ಜೋಡಿ ಸಾಹಿತ್ಯ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕ ಎಚ್.ಭೀಮರಾವ್ ವಾಷ್ಠರ್ ಅವರನ್ನು ವೇದಿಕೆಯ ಗಣ್ಯರ ಜೊತೆ ಭಾಗವಹಿಸಿದ ಎಲ್ಲಾ ಕವಿಗಳು ಜೊತೆಯಾಗಿ ಸಮ್ಮಾನಿಸಿ ಗೌರವಿಸಿದರು. ಸಮಾರಂಭದ ವೇದಿಕೆಯಲ್ಲಿ ಹಿರಿಯರಾದ ಸುಕುಮಾರ ಗೌಡ, ತಹಸೀಲ್ದಾರರಾದ ಶಿವಶಂಕರ್, ಶಿಕ್ಷಣ ಚಿಂತಕ ಗೋಪಾಡ್ಕರ್, ಕಸಾಪ ಪುತ್ತೂರು ತಾಲೂಕು ಘಟಕದ ಉಮೇಶ್ ನಾಯಕ್, ಲೇಖಕಿ ಸುಲೋಚನಾ

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ Read More »

ಆದರ್ಶ ಗ್ರಾಮ ಬಳ್ಪದ ಅಭಿವೃದ್ಧಿ ದೇಶಕ್ಕೆ ಮಾದರಿ| ಕೇಂದ್ರ ಸಚಿವ ಭಗವಂತ ಖೂಬಾ ಶ್ಲಾಘನೆ

ಸಮಗ್ರ ನ್ಯೂಸ್: ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,‌ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಭಗವಂತ ಖೂಬ ಶ್ಲಾಘಿಸಿದರು. ಅವರು ಬುಧವಾರ ಕಡಬ ತಾಲೂಕಿನ ಬಳ್ಪ-ಕೇನ್ಯದ ಗ್ರಾಮ ಉತ್ಸವ ಸಮಿತಿ ಆಶ್ರಯ ದಲ್ಲಿ ಹಮ್ಮಿಕೊಂಡಿದ್ದ ಸಂಸದರ ಆದರ್ಶ ಗ್ರಾಮದ ಗ್ರಾಮೋತ್ಸವ -2024 ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕುಗ್ರಾಮದಲ್ಲೂ ಕಡುಬಡವರ ಅಭಿವೃದ್ಧಿಗಾಗಿ ಸಂಸದರ ಆದರ್ಶ

ಆದರ್ಶ ಗ್ರಾಮ ಬಳ್ಪದ ಅಭಿವೃದ್ಧಿ ದೇಶಕ್ಕೆ ಮಾದರಿ| ಕೇಂದ್ರ ಸಚಿವ ಭಗವಂತ ಖೂಬಾ ಶ್ಲಾಘನೆ Read More »

ಕುಕ್ಕೆ ಸುಬ್ರಹ್ಮಣ್ಯ: ಜ.12ರಿಂದ ಕಿರುಷಷ್ಟಿ ಮಹೋತ್ಸವ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವ ಸ್ಥಾನ ದಲ್ಲಿ ಜ. 16ರ ವರೆಗೆ ಕಿರುಷಷ್ಠಿ ಮಹೋತ್ಸವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.12ರಂದು ಸಾಯಂಕಾಲ 5ಕ್ಕೆ ಶ್ರೀ ಕಾರ್ತಿಕ ವೇದಿಕೆಯಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಮ ಎಸ್‌. ಸುಳ್ಳಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಜ. 16ರಂದು ಪೂರ್ವಾಹ್ನ ದೇವಾಲಯ ಆಡಳಿತ ದರ್ಮದರ್ಶಿಗಳ ಚಿಂತನ ಸಭೆ ಗುಡಿ-ಜನರ ಜೀವನಾಡಿ ಶ್ರೀ ಕಾರ್ತಿಕ ವೇದಿಕೆಯಲ್ಲಿ ನಡೆಯಲಿದೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ: ಜ.12ರಿಂದ ಕಿರುಷಷ್ಟಿ ಮಹೋತ್ಸವ Read More »

ಕಾಪು: ಮಳೆಗಾಲ ಕೆಸರು, ಬೇಸಿಗೆಯಲ್ಲಿ ಧೂಳು| ಇದು ರಸ್ತೆ ಪ್ರಯಾಣಿಕರ ಪಾಡು

ಸಮಗ್ರ ನ್ಯೂಸ್: ವರ್ಷವಿಡಿ ಧೂಳು ಇಲ್ಲವೇ ಕೆಸರಿನಿಂದ ತುಂಬಿದ ರಸ್ತೆಯಲ್ಲಿ ಸಾರ್ವಜನಿಕರು ಓಡಾಡಲು ಸಂಕಷ್ಟಪಡಬೇಕಾದ ದುಸ್ಥಿತಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುತ್ಯಾರು ಗ್ರಾಮದ ಅಗರ್ ದಂಡೆ ಕೇಂಜಿಬೈಲು ರಸ್ತೆ ಪ್ರಯಾಣಿಕರಿಗೆ ಎದುರಾಗಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಮಳೆಗಾಲದಲ್ಲಿ ಕೆಸರುಮಯ ರಸ್ತೆಯಾದರೆ ಬೇಸಿಗೆಯಲ್ಲಿ ಧೂಳುಮಯ ರಸ್ತೆಯಿಂದಾಗಿ ಇಲ್ಲಿನ ಜನ ವರ್ಷವಿಡೀ ಸಂಕಷ್ಟ ಪಡುವಂತ ಸ್ಥಿತಿ ಎದುರಾಗಿದೆ. ಸುಮಾರು 500 ಮೀಟರ್ ಉದ್ದದ ರಸ್ತೆ ಇದಾಗಿದ್ದು 100 ಮೀಟರ್ ಮಾತ್ರ ಕಾಂಕ್ರೀಟ್ ರಸ್ತೆಯಾಗಿದೆ. ವಯಸ್ಸಾದವರನ್ನು ಇಲ್ಲವೇ ಅನಾರೋಗ್ಯಕ್ಕೆ ಒಳಗಾದವರನ್ನು

ಕಾಪು: ಮಳೆಗಾಲ ಕೆಸರು, ಬೇಸಿಗೆಯಲ್ಲಿ ಧೂಳು| ಇದು ರಸ್ತೆ ಪ್ರಯಾಣಿಕರ ಪಾಡು Read More »

ಕಡಬ: ಅಸ್ತಿ ಪಂಜರ ಪತ್ತೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಅಸ್ತಿ ಪಂಜರ ಪತ್ತೆಯಾಗಿದೆ. ಸ್ಥಳೀಯ ಮನೆಯ ಕೆಲಸದ ಆಳುಗಳು ಸೊಪ್ಪು ತರಲು ಹೋದಾಗ ಮನುಷ್ಯನ ಅಸ್ತಿ ಪಂಜರ ಕಂಡು ವಿಷಯ ತಿಳಿಸಿದರೆನ್ನಲಾಗಿದೆ. ವಿಷಯ ತಿಳಿದ ಮನೆಯವರು ಬೆಳ್ಳಾರೆ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪೋಲೀಸರು ಸ್ಥಳಕ್ಕೆ ಆಗಮಿಸಿ ಅನಾಥ ಅಸ್ತಿ ಪಂಜರ ತನಿಖೆ ನಡೆಸುತ್ತಿದ್ದಾರೆ. ಮರದಲ್ಲಿ ಕತ್ತಿ ಕಂಡುಬಂದಿದ್ದು, ಸುಮಾರು 6 ತಿಂಗಳ ಹಿಂದೆ ಮರಕೆಸು ಕೊಯ್ಯಲು ಹೋದ ವ್ಯಕ್ತಿ ಮೃತಪಟ್ಟಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಡಬ: ಅಸ್ತಿ ಪಂಜರ ಪತ್ತೆ Read More »

ಬಿಳಿನೆಲೆ: ಅಂಗಡಿ, ಟಾಟಾ ಸುಮೋ ಮೇಲೆ ಉರುಳಿದ ಬೃಹದಾಕಾರದ ಮರ| ಮರ ಕಡಿಯದಂತೆ ಗ್ರಾಮಸ್ಥರಿಂದ ಪ್ರತಿಭಟನೆ| ಅಧಿಕಾರಿಗಳಿಂದ ಪರಿಹಾರ ದೊರಕಿಸಲು ಮನವಿ

ಸಮಗ್ರ ನ್ಯೂಸ್: ಬಿಳಿನೆಲೆ ಕೈಕಂಬದಲ್ಲಿ ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹದಾಕಾರದ ಮರವನ್ನು ಕಡಿಯದಂತೆ ಗ್ರಾಮಸ್ಥರು ಜ. 8ರಂದು ಪ್ರತಿಭಟನೆ ನಡೆಸಿದರು. ಪರಿಹಾರದ ಭರವಸೆ ನೀಡುವ ತನಕ ಕಡಿಯದಂತೆ ತಡೆದು, ಅಧಿಕಾರಿಗಳೊಂದಿಗೆ ಪರಿಹಾರದ ಭರವಸೆಯನ್ನು ತೆಗೆದುಕೊಂಡರು. ಮತ್ತು ಸ್ಥಳ ಮಹಜರಿಗೆ ಒತ್ತಾಯಿಸಿ ಮೇಲಾಧಿಕರಿಗಳಿಂದ ಆದಷ್ಟು ಬೇಗ ಪರಹಾರ ದೊರಕಿಸಿಕೊಡುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶಾರದ ದಿನೇಶ್ ಬಿಳಿನೆಲೆ, ಉಪಾಧ್ಯಕ್ಷ ಶಿವಶಂಕರ್ ಬಿಳಿನೆಲೆ, ಪಂಚಾಯತ್ ಸದಸ್ಯೆ ಭವ್ಯಶ್ರೀ ಕುಕ್ಕಾಜೆ, ಕಂದಾಯ ಇಲಾಖೆಯ ತಹಶೀಲ್ದಾರ್,

ಬಿಳಿನೆಲೆ: ಅಂಗಡಿ, ಟಾಟಾ ಸುಮೋ ಮೇಲೆ ಉರುಳಿದ ಬೃಹದಾಕಾರದ ಮರ| ಮರ ಕಡಿಯದಂತೆ ಗ್ರಾಮಸ್ಥರಿಂದ ಪ್ರತಿಭಟನೆ| ಅಧಿಕಾರಿಗಳಿಂದ ಪರಿಹಾರ ದೊರಕಿಸಲು ಮನವಿ Read More »

ಸುಳ್ಯ: ರಾಮಕೃಷ್ಣ ಕೊಲೆ ಪ್ರಕರಣ| ಡಾ|ಕೆ.ವಿ.ರೇಣುಕಾ ಪ್ರಸಾದ್ ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿಯಾಗಿದ್ದ ಡಾ. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಡಾ.ಕೆ.ವಿ.ರೇಣುಕಾಪ್ರಸಾದ್ ಹಾಗೂ ಇತರ 4 ಮಂದಿಗೆ ಕರ್ನಾಟಕ ಹೈಕೋರ್ಟ್ ಕಳೆದ ಅ.5ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ಡಾ.ರೇಣುಕಾ ಪ್ರಸಾದ್ ಹಾಗೂ ಇತರ ಆರೋಪಿಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ

ಸುಳ್ಯ: ರಾಮಕೃಷ್ಣ ಕೊಲೆ ಪ್ರಕರಣ| ಡಾ|ಕೆ.ವಿ.ರೇಣುಕಾ ಪ್ರಸಾದ್ ಗೆ ಜಾಮೀನು ಮಂಜೂರು Read More »