ಕರಾವಳಿ

ಪುತ್ತೂರು ನಗರಸಭೆ ಉಪಚುನಾವಣೆ| ಕಾಂಗ್ರೆಸ್ ಬಿಜೆಪಿಗೆ ತಲಾ ಒಂದು ಸ್ಥಾನ| ಸೋಲುಂಡ ಪುತ್ತಿಲ ಪರಿವಾರ

ಸಮಗ್ರ ನ್ಯೂಸ್: ಪುತ್ತೂರು ನಗರಸಭೆಯ ಎರಡು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪುತ್ತಿಲ ಪರಿವಾರದ ಅಭ್ಯರ್ಥಿಗಳು ಎರಡೂ ಕಡೆ ಸೋಲು ಕಂಡಿದ್ದಾರೆ. ವಾರ್ಡ್ 1ರಲ್ಲಿ ಕಾಂಗ್ರೆಸ್‌ನ ದಿನೇಶ ಶೇವಿರೆ 427 ಮತಗಳನ್ನು ಪಡೆಯುವ ಮೂಲಕ ಪುತ್ತಿಲ ಪರಿವಾರದ ಅನ್ನಪೂರ್ಣ (308 ಮತ) ವಿರುದ್ದ ಗೆಲುವಿನ ನಗೆ ಬೀರಿದರು. ಬಿಜೆಪಿ ಯ ಸುನೀತಾ 219 ಮತ ಗಳಿಸಿ ಮೂರನೇ‌ ಸ್ಥಾನಕ್ಕೆ ತೃಪ್ತಿ ಪಟ್ಟರು. ನೋಟಾಕ್ಕೆ‌ ನಾಲ್ಕು ಮತಗಳು […]

ಪುತ್ತೂರು ನಗರಸಭೆ ಉಪಚುನಾವಣೆ| ಕಾಂಗ್ರೆಸ್ ಬಿಜೆಪಿಗೆ ತಲಾ ಒಂದು ಸ್ಥಾನ| ಸೋಲುಂಡ ಪುತ್ತಿಲ ಪರಿವಾರ Read More »

ಉಡುಪಿ: ನೇಜಾರು ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಚೌಗಲೆ ಜಾಮೀನು ಅರ್ಜಿ ತಿರಸ್ಕೃತ

ಸಮಗ್ರ ನ್ಯೂಸ್: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು(ಡಿ.30) ಆದೇಶ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ಅರ್ಜಿಯನ್ನು ವಕೀಲ ಕೆ.ಎಸ್.ಎನ್.ರಾಜೇಶ್ ಮೂಲಕ ಸಲ್ಲಿಸಿದ್ದ. ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್

ಉಡುಪಿ: ನೇಜಾರು ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಚೌಗಲೆ ಜಾಮೀನು ಅರ್ಜಿ ತಿರಸ್ಕೃತ Read More »

ಸಾಹಿತಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರು ವೀರಶೈವ ಸಭಾ ಭವನದ ದಿವ್ಯ ಸಭಾಂಗಣದಲ್ಲಿ ಜರುಗಿದ, ರಾಜ್ಯಮಟ್ಟದ ಬೆಳಕು ಸಾಹಿತ್ಯ ಸಮಾರಂಭದ ಭವ್ಯ ವೇದಿಕೆಯಲ್ಲಿ ಸುಳ್ಯದ ಖ್ಯಾತ ಸಾಹಿತಿ ಮತ್ತು ಜ್ಯೋತಿಷಿ ಶ್ರೀ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ 2023 ನೇ ಸಾಲಿನ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿಯನ್ನು ಗಣ್ಯರ ಸಮಾಕ್ಷಮ ನೀಡಿ ಗೌರವಿಸಲಾಯಿತು. ಅವರ ಜ್ಯೋತಿಷ್ಯ, ಸಾಹಿತ್ಯ, ಸಂಘಟನಾ ಕ್ಷೇತ್ರದಲ್ಲಿ ಮಾಡುತ್ತಿರುವ ಅಪಾರ ಸಾಧನೆಗಾಗಿ ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿ

ಸಾಹಿತಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿ ಪ್ರದಾನ Read More »

ಪೆರುವಾಜೆ: ಕೊಲ್ಯ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವ| ಇಂದು (ಡಿ. 30) ಹರಕೆಯ ಕೊರಗಜ್ಜನ ನೇಮೋತ್ಸವ

ಸಮಗ್ರ ನ್ಯೂಸ್: ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವ ಡಿ. 29ರಂದು ನಡೆಯಲಿದೆ. ಬೆಳಿಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ವರ್ಷಾವಧಿ ಅನ್ನಸಂತರ್ಪಣೆ ಬಳಿಕ ರಾತ್ರಿ ಶ್ರೀ ಕೊರಗ ತನಿಯ ನೇಮೋತ್ಸವ ನಡೆಯಿತು. ಇಂದು (ಡಿ. 30ರಂದು) ರಾತ್ರಿ ಗಂಟೆ 8-00 ರಿಂದ ಸುಳ್ಯದ ಐವರ್ನಾಡು ಗ್ರಾಮದ ದೇವರಕಾನ ಮನೆಯ ಕೆ.ಬಿ. ಪ್ರಸಾದ್ ನಿತ್ಯ ಚಿಕನ್ ಸೆಂಟರ್ ಬೆಳ್ಳಾರೆ ಹಾಗೂ ಮನೆಯವರ ಹರಕೆಯ ನೇಮೋತ್ಸವ ನಡೆಯಲಿದೆ. ಆ ಪ್ರಯುಕ್ತ ಕುಟುಂಬದವರೆಲ್ಲಾ ಆಗಮಿಸಿ, ದೈವದ ಪ್ರಸಾದ

ಪೆರುವಾಜೆ: ಕೊಲ್ಯ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವ| ಇಂದು (ಡಿ. 30) ಹರಕೆಯ ಕೊರಗಜ್ಜನ ನೇಮೋತ್ಸವ Read More »

ಸುಳ್ಯ: ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆ| ಹಲವು ಕಡೆಗಳಲ್ಲಿ ಕಳ್ಳರ ಕೈಚಳಕ| ಸುಳ್ಯ ಪೊಲೀಸರು ಏನ್ಮಾಡ್ತಿದ್ದಾರೆ?

ಸಮಗ್ರ ನ್ಯೂಸ್: ಸುಳ್ಯ ತಾಲ್ಲೂಕಿನ ಹಲವೆಡೆ ಅಪರಾಧ ಪ್ರಕರಣಗಳು ದಿನೇದಿನೇ ಏರಿಕೆಯಾಗುತ್ತಿದ್ದು ಕಾನೂನು ಕ್ರಮ ಕೈಗೊಳ್ಳಬೇಕಾದ ಪೊಲೀಸರು ನಿಷ್ಕ್ರಿಯವಾಗಿರುವುದು ಆತಂಕ ಸೃಷ್ಟಿಸುತ್ತಿದೆ. ತಾಲೂಕಿನ ಹಲವೆಡೆ ದಿನಂಪ್ರತಿ ಕಳ್ಳತನಗಳು ನಡೆಯುತ್ತಿದ್ದು, ತನಿಖೆಗಳು ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಪೊಲೀಸರು ನೆಪಮಾತ್ರಕ್ಕೆ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದು, ಇದುವರೆಗೆ ಹಲವು ಪ್ರಕರಣಗಳು ಕೊಳೆತು ಹೋಗಿವೆ. ಕಳೆದ ಒಂದೆರಡು ತಿಂಗಳಲ್ಲಿ ಸುಳ್ಯ‌ ಠಾಣಾ ವ್ಯಾಪ್ತಿಯ ಜಾಲ್ಸೂರು, ಕನಕಮಜಲುಗಳಲ್ಲಿ ಹಲವಾರು ಮನೆ, ಅಂಗಡಿಗಳ ಒಳನುಗ್ಗಿರುವ ಕಳ್ಳರು ನಗ-ನಗದು ದೋಚಿದ್ದಾರೆ. ಅದಾದ ಬಳಿಕ ಸಂಪಾಜೆ, ಕಲ್ಲುಗುಂಡಿ ಪರಿಸರದಲ್ಲೂ ಕಳ್ಳತನ

ಸುಳ್ಯ: ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆ| ಹಲವು ಕಡೆಗಳಲ್ಲಿ ಕಳ್ಳರ ಕೈಚಳಕ| ಸುಳ್ಯ ಪೊಲೀಸರು ಏನ್ಮಾಡ್ತಿದ್ದಾರೆ? Read More »

ಉಪ್ಪಿನಂಗಡಿ: ಲಾರಿಯೊಳಗೆ ಸಾವನ್ನಪ್ಪಿದ ಚಾಲಕ| ಎರಡು ದಿನ ಕಳೆದ ಬಳಿಕ ಬೆಳಕಿಗೆ ಬಂತು ಪ್ರಕರಣ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕ ಹೃದಯಾಘಾತದಿಂದ ಲಾರಿಯಲ್ಲೇ ಮೃತಪಟ್ಟಿದ್ದು, ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಚನ್ನಪಟ್ಟಣದ ಖಲೀಲ್ ಖಾನ್ ಮೃತ ಚಾಲಕ. ಮೈಸೂರಿನಿಂದ ಬಿ.ಸಿ. ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಅವರು ಅದನ್ನು ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ. ಮೃತ ಖಲೀಲ್‌ ಖಾನ್‌

ಉಪ್ಪಿನಂಗಡಿ: ಲಾರಿಯೊಳಗೆ ಸಾವನ್ನಪ್ಪಿದ ಚಾಲಕ| ಎರಡು ದಿನ ಕಳೆದ ಬಳಿಕ ಬೆಳಕಿಗೆ ಬಂತು ಪ್ರಕರಣ Read More »

ತುಳುನಾಡು ಪಂಚಾಂಗ ಕ್ಯಾಲೆಂಡರ್ 2024 ಬಿಡುಗಡೆ

ಸಮಗ್ರ ನ್ಯೂಸ್: ಗ್ಲೋಬಲ್ ಮೀಡಿಯಾದ 2024ರ ತುಳುನಾಡು ಪಂಚಾಂಗ ಕ್ಯಾಲೆಂಡರ್‌ನ್ನು ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದ ಶ್ರೀ ಡಾ. ಸುದೇಶ ಶಾಸ್ತ್ರಿ ಅವರು ಬಿಡುಗಡೆ ಮಾಡಿದರು. ಕರ್ನಾಟಕ ರಾಜ್ಯದ ತುಳುನಾಡು ಎಂದು ಕರೆಯಲ್ಪಡುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರವಾಗಿದ್ದು ಅನೇಕ ಇತಿಹಾಸ ಪ್ರಸಿದ್ಧ ಪೌರಾಣಿಕ ಶ್ರದ್ಧಾಕೇಂದ್ರಗಳಾಗಿವೆ. 2024ರ ಕ್ಯಾಲೆಂಡರನ್ನು ಶಿವನ ದೇವಸ್ಥಾನಗಳಾದಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕರ್ಜೆ, ಉಡುಪಿ, ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನ, ಪಾಣೆಮಂಗಳೂರು, ಬಂಟ್ವಾಳ, ಶ್ರೀ

ತುಳುನಾಡು ಪಂಚಾಂಗ ಕ್ಯಾಲೆಂಡರ್ 2024 ಬಿಡುಗಡೆ Read More »

ಸುಳ್ಯ: ಸಪ್ತಪದಿ ತುಳಿದ ಮಜಾಭಾರತ ಖ್ಯಾತಿಯ ಪ್ರಿಯಾಂಕಾ ಕಾಮತ್

ಸಮಗ್ರ ನ್ಯೂಸ್: ಮಜಾಭಾರತ’ ರಿಯಾಲಿಟಿ ಶೋ ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ ಪ್ರಿಯಾಂಕಾ ಕಾಮತ್ ಸಿಹಿ ಸುದ್ದಿಯನ್ನು ನೀಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅಮಿತ್ ನಾಯಕ್ ಅವರೊಂದಿಗೆ ಪ್ರಿಯಾಂಕಾ ಕಾಮತ್ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಪ್ರಿಯಾಂಕಾ ಹಾಗೂ ಅಮಿತ್ ಅವರ ವಿವಾಹ ಅದ್ಧೂರಿಯಾಗಿ ನಡೆದಿದೆ. ಮದುವೆಯ ಫೋಟೋಗಳನ್ನು ಪ್ರಿಯಾಂಕಾ ಕಾಮತ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಕಾಮತ್ ಅವರ ಮದುವೆಯ ಫೋಟೋವನ್ನು ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದು ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸುಳ್ಯದವರಾದ ಪ್ರಿಯಾಂಕ ಇಲ್ಲೇ ಹಸೆಮಣೆ ಏರಿದರು.

ಸುಳ್ಯ: ಸಪ್ತಪದಿ ತುಳಿದ ಮಜಾಭಾರತ ಖ್ಯಾತಿಯ ಪ್ರಿಯಾಂಕಾ ಕಾಮತ್ Read More »

ಮಂಗಳೂರು: ಇಬ್ಬರು ದನಗಳ್ಳರ ಸೆರೆ

ಸಮಗ್ರ ನ್ಯೂಸ್: ಕಾರುಗಳಲ್ಲಿ ತೆರಳಿ ಮಂಗಳೂರಿನ ವಿವಿಧ ಕಡೆಗಳಿಂದ ದನಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಪಡುಕೊಣಾಜೆ ಗ್ರಾಮದ ನೀರಳಿಕೆ ಹೌಸ್‌ನ ಇಮ್ರಾನ್‌ ಇಬ್ರಾಹಿಂ (24) ಮತ್ತು ಕಲ್ಲಬೆಟ್ಟು ಗ್ರಾಮದ ಗಂಟಲಕಟ್ಟೆ ಮಸೀದಿಯ ಬಳಿಯ ನಾಸಿರ್‌ ಯಾನೆ ನಾಚಿ (26) ಅವರನ್ನು ಬೆಳಗಿನ ಜಾವ ಸುಮಾರು 3.30ಕ್ಕೆ ಬಜಪೆ ಎಸ್‌ಐ ಕುಮಾರೇಶನ್‌ ನೇತೃತ್ವದ ತಂಡ ತೆಂಕ ಎಡಪದವು ಗ್ರಾಮದ ದಡ್ಡಿ ಚೆಕ್‌ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ದನ ಕಳವು ಮಾಡಲು ಬಳಸಿರುವ

ಮಂಗಳೂರು: ಇಬ್ಬರು ದನಗಳ್ಳರ ಸೆರೆ Read More »

ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಬೆದರಿಕೆ ಸಂದೇಶ…! FIR ದಾಖಲು

ಸಮಗ್ರ ನ್ಯೂಸ್: ಡಿಸೆಂಬರ್ 26ರಂದು ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ [email protected] ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಅದಾನಿ ಆಡಳಿತದ ಮಂಗಳೂರು ಏರ್ಪೋರ್ಟ್ ಸಂಸ್ಥೆ ಬಜಪೆ ಠಾಣೆಗೆ ದೂರು ನೀಡಿತ್ತು. ಇದೀಗ ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ, ನ್ಯಾಯಾಲಯದ ಅನುಮತಿ ಪಡೆದುಕೊಂಡು ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದೆ. ‘FUNING’ ಎಂಬ ಉಗ್ರಗಾಮಿ ಸಂಘಟನೆ ಎಂದು ಘೋಷಿಸಿಕೊಂಡು ಬೆದರಿಕೆ ಹಾಕಲಾಗಿತ್ತು. ಆದ್ರೆ, ಮಂಗಳೂರು ಏರ್​​ಪೋರ್ಟ್ ಆಡಳಿತ ಮಂಡಳಿ

ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಬೆದರಿಕೆ ಸಂದೇಶ…! FIR ದಾಖಲು Read More »