ಕರಾವಳಿ

ಬಿಳಿನೆಲೆ: ಅಂಗಡಿ, ಟಾಟಾ ಸುಮೋ ಮೇಲೆ ಉರುಳಿದ ಮರ

ಸಮಗ್ರ ನ್ಯೂಸ್: ಬಿಳಿನೆಲೆ ಕೈಕಂಬದಲ್ಲಿ ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಮರ ಬಿದ್ದು ಚಾಲಕ ಹಾಗೂ ಪಾದಾಚಾರಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಜ.8ರಂದು ಸಂಭವಿಸಿದೆ. ನೆಟ್ಟಣದ ಟಾಟಾ ಸುಮೋದ ಮೇಲೆ ಮರ ಬಿದ್ದ ಪರಿಣಾಮ ಅದರ ಚಾಲಕ ಶೇಖರ್ ಮತ್ತು ಪಾದಾಚಾರಿ ವ್ಯಕ್ತಿಯೋರ್ವರಿಗೆ ಗಾಯವಾಗಿದೆ. ಅಲ್ಲದೆ ಅಂಗಡಿಯ ಮೇಲೆಯೂ ಮರ ಬಿದ್ದ ಪರಿಣಾಮ ಅಂಗಡಿಗೂ ಹಾನಿಯಾಗಿದೆ.

ಬಿಳಿನೆಲೆ: ಅಂಗಡಿ, ಟಾಟಾ ಸುಮೋ ಮೇಲೆ ಉರುಳಿದ ಮರ Read More »

ಪುತ್ತೂರು:ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವಿನ ಕನ್ನಡ್ಕದಲ್ಲಿ ಜ. 7ರಂದು ನಡೆದಿದೆ. ಪಡುವನ್ನೂರು ಗ್ರಾಮದ ಕನ್ನಡ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡರ ಮಗಳು ದೀಕ್ಷಾ (16) ಇಂದು(ಜ.7) ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು. ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು

ಪುತ್ತೂರು:ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಪ್ರಾಮಾಣಿಕತೆ ಮೆರೆದ ಪುತ್ತೂರು ಶಾಸಕರ ಸಾರಥಿ| ಕಳೆದುಕೊಂಡ ಐಫೋನ್ ಹಿಂತಿರುಗಿಸಿ ಪ್ರಾಮಾಣಿಕತೆಗೆ ಪಾತ್ರರಾದರು

ಸಮಗ್ರ ನ್ಯೂಸ್: ಪುತ್ತೂರು ಶಾಸಕರ ಕಚೇರಿಗೆ ಆಗಮಿಸಿದ ಆಶಿಕ್ ಎಂಬವರು ಹಿಂದಿರುಗುವ ಸಮಯ ಕಚೇರಿ ಹೊರಾಂಗಣದಲ್ಲಿ ಕಳೆದುಕೊಂಡಿದ್ದ ಲಕ್ಷಾಂತರ ಮೌಲ್ಯದ ಫೋನನ್ನು ಶಾಸಕರ ಕಾರು ಚಾಲಕ ಜಯಾನಂದ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ. ಆಶಿಕ್ ಅವರು ಶಾಸಕರ ಜೊತೆ ಮಾತನಾಡಿ ಹಿಂದಿರುಗುವ ವೇಳೆ ಮೊಬೈಲ್ ಫೋನ್ ಕಳೆದುಕೊಂಡಿದ್ದರು. ಮೊಬೈಲ್ ಹುಡುಕಾಟ ಮಾಡಿದಾಗ, ಶಾಸಕರ ಕಾರು ಚಾಲಕ ಜಯಾನಂದ ಗೌಡ ಅವರು ಕಚೇರಿ ಆವರಣದಲ್ಲಿ ಬಿದ್ದಿದ್ದ ಮೊಬೈಲ್ ಅನ್ನು ಗಮನಿಸಿ ಆಶೀಕ್ ಅವರಿಗೆ ನೀಡಿದ್ದಾರೆ.

ಪ್ರಾಮಾಣಿಕತೆ ಮೆರೆದ ಪುತ್ತೂರು ಶಾಸಕರ ಸಾರಥಿ| ಕಳೆದುಕೊಂಡ ಐಫೋನ್ ಹಿಂತಿರುಗಿಸಿ ಪ್ರಾಮಾಣಿಕತೆಗೆ ಪಾತ್ರರಾದರು Read More »

ಸುಳ್ಯ: ಬ್ಯಾನರ್ ಹರಿದ ಪ್ರಕರಣ| 24 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು| ಬ್ಯಾನರ್ ಹರಿದವರಾರು ಗೊತ್ತೇ?

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಸಂಚಲನ ಸೃಷ್ಟಿಸಿದ್ದ ಆಯೋದ್ಯೆ ಹಾಗೂ ರಾಮನ ಚಿತ್ರವಿರುವ ಬ್ಯಾನರ್‌ ಹರಿದ ಪ್ರಕರಣವನ್ನು ಕೇವಲ 24 ಗಂಟೆಯೊಳಗಡೆ ಪೊಲೀಸರು ಬೇಧಿಸಿದ್ದಾರೆ. ಸುಳ್ಯ ಪೇಟೆಯಲ್ಲಿರುವ ಸುಮಾರು 40 ಸಿಸಿ ಕ್ಯಾಮೇರಾ ಪೋಟೊಗಳನ್ನು ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣದ ಹಿಂದಿನ ನಿಗೂಢತೆಯನ್ನು ಬಯಲು ಮಾಡಿದ್ದಾರೆ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಜ 22 ರಂದು‌ ನಡೆಯಲಿರುವ ರಾಮಲಲ್ಲಾನ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದ ಪ್ರಚಾರರ್ಥ ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ

ಸುಳ್ಯ: ಬ್ಯಾನರ್ ಹರಿದ ಪ್ರಕರಣ| 24 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು| ಬ್ಯಾನರ್ ಹರಿದವರಾರು ಗೊತ್ತೇ? Read More »

ಸುಳ್ಯ: ಬ್ಯಾನರ್ ಹರಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಸಮಗ್ರ ನ್ಯೂಸ್: ಅಯೋಧ್ಯೆ ಪ್ರತಿಷ್ಠೆ ಸಲುವಾಗಿ ಸುಳ್ಯ ನಗರದ ರಸ್ತೆ ಬದಿ ಹಾಕಿದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂದಿಸಲು ವಿಫಲವಾದ ಪೊಲೀಸ್ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಸುಳ್ಯ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಆದಿತ್ಯವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ರಾಮನ ಭಕ್ತರು ಹಾಕಿದ ಬ್ಯಾನರನ್ನು ಹರಿದಿರುವ ಕೃತ್ಯದ ಹಿಂದಿರುವವರ ಬಗ್ಗೆ ಸೂಕ್ತ ತನಿಖೆ ನಡೆಸಿ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಶಾಂತಿ ಸುವ್ಯವಸ್ಥೆಗೆ ಕೈಜೋಡಿಸಬೇಕು. ಪೊಲೀಸ್ ಇಲಾಖೆ

ಸುಳ್ಯ: ಬ್ಯಾನರ್ ಹರಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ Read More »

ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ‌ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ(89) ಅವರು ಶನಿವಾರ(ಜ.6) ಬೆಳಿಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿದ್ದ ಇವರು, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿದ್ದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು.

ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ‌ಇನ್ನಿಲ್ಲ Read More »

ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ

ಸಮಗ್ರ ನ್ಯೂಸ್: ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ. ರಾಮದೂತಾಸನದಲ್ಲಿ 1ಗಂಟೆ 1ನಿಮಿಷ 20ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಪಲ್ಲೋಡಿ(ಪಂಜ) ಜಗನ್ನಾಥ ಶೆಟ್ಟಿ ಮತ್ತು ಜಯಲಕ್ಷ್ಮಿ ಜೆ. ಶೆಟ್ಟಿ ಅವರ ಪುತ್ರಿ.

ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ Read More »

ಮದುವೆ ನಡೆಯುತ್ತಿರುವಾಗಲೇ ಮಾಜಿ ಪ್ರೇಯಸಿಯ ಹೈಡ್ರಾಮ| ಬೇರೊಬ್ಬಳಿಗೆ ತಾಳಿ ಕಟ್ಟಿ ವರ ಎಸ್ಕೇಪ್

ಸಮಗ್ರ ನ್ಯೂಸ್: ತನ್ನಗೆ ಮೋಸ ಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟ ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಬೀರಿ ಬಳಿ ನಡೆದಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ

ಮದುವೆ ನಡೆಯುತ್ತಿರುವಾಗಲೇ ಮಾಜಿ ಪ್ರೇಯಸಿಯ ಹೈಡ್ರಾಮ| ಬೇರೊಬ್ಬಳಿಗೆ ತಾಳಿ ಕಟ್ಟಿ ವರ ಎಸ್ಕೇಪ್ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಪುತ್ತೂರಿನ ಮಕ್ಕಳ ಮಂಟಪ ವೇದಿಕೆಯಲ್ಲಿ ಉಪತಹಸೀಲ್ದಾರ್ ಮತ್ತು ಕವಯತ್ರಿ ಸುಲೋಚನಾ ಪಿ.ಕೆ. ಅವರ ಜೋಡಿ ಸಾಹಿತ್ಯ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ಅವರನ್ನು ವೇದಿಕೆಯ ಗಣ್ಯರ ಜೊತೆ ಭಾಗವಹಿಸಿದ ಎಲ್ಲಾ ಕವಿಗಳು ಜೊತೆಯಾಗಿ ಸಮ್ಮಾನಿಸಿ ಗೌರವಿಸಿದರು. ಸಮಾರಂಭದ ವೇದಿಕೆಯಲ್ಲಿ ಹಿರಿಯರಾದ ಸುಕುಮಾರ ಗೌಡ, ತಹಸೀಲ್ದಾರ್ ಶಿವಶಂಕರ್, ಶಿಕ್ಷಣ ಚಿಂತಕ ಗೋಪಾಡ್ಕರ್, ಕಸಾಪ ಪುತ್ತೂರು ತಾಲೂಕು ಘಟಕದ ಉಮೇಶ್ ನಾಯಕ್, ಲೇಖಕಿ

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ Read More »

ಸುಳ್ಯ: ಅಡಿಕೆಗೆ ಹಳದಿ ರೋಗ| ಮನನೊಂದು ಕೃಷಿಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿ ಬರದ ಹಿನ್ನಲೆಯಲ್ಲಿ ಮನೆಯವರು ಜ.4ರಂದು ರಂದು ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರು ಮರವೊಂದಕ್ಕೆ ನೇಣು

ಸುಳ್ಯ: ಅಡಿಕೆಗೆ ಹಳದಿ ರೋಗ| ಮನನೊಂದು ಕೃಷಿಕ ಆತ್ಮಹತ್ಯೆ Read More »