ಕರಾವಳಿ

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗದು ದೋಚಿ ಪರಾರಿ

ಸಮಗ್ರ ನ್ಯೂಸ್: ಮನೆಗೆ ಬೀಗ ಹಾಕಿ ಮನೆ ಮಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯ ಬೀಗ ಮುರಿದ ಕಳ್ಳರು ನಗದನ್ನು ದೋಚಿದ್ದಾರೆ. ಇನ್ನು ಪಕ್ಕದಲ್ಲಿರುವ ಮನೆಯೊಂದರ ಬೀಗ‌ ಮುರಿಯುವ ವೇಳೆ ಆಟೋ ರಿಕ್ಷಾ ಆಗಮಿಸುವುದನ್ನು ನೋಡಿದ ಕಳ್ಳರು

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗದು ದೋಚಿ ಪರಾರಿ Read More »

ಸುಳ್ಯ:ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವತಿಯಿಂದ First Aid Box ಹಸ್ತಾಂತರ

ಸಮಗ್ರ ನ್ಯೂಸ್: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವತಿಯಿಂದ First Aid Boxಗಳನ್ನು, ಸಭಾಪತಿ ಸುಧಾಕರ್ ರೈ ಇವರು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ. ಇವರಿಗೆ ಹಸ್ತಾಂತರಿಸಿದರು. ಸುಳ್ಯ ತಾಲೂಕಿನ ಆಯ್ದ ಶಾಲೆಗಳಿಗೆ ಈ ಕಿಟ್ ವಿತರಿಸಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಮತ್ತು ಭಾ.ರೆ.ಕ್ರಾ. ನಿರ್ದೇಶಕ ಪೃಥ್ವಿ ಕುಮಾರ್ ಟಿ., ಭಾ.ರೆ.ಕ್ರಾ. ನಿರ್ದೇಶಕ ಶಿವಪ್ರಸಾದ್ ಕೆ.ವಿ., ಪದ್ಮ, ಕಾರ್ಯದರ್ಶಿ ತಿಪ್ಪೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ

ಸುಳ್ಯ:ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವತಿಯಿಂದ First Aid Box ಹಸ್ತಾಂತರ Read More »

ಪುತ್ತೂರು: ಜ.14ರಿಂದ ಜ. 19ರವರೆಗೆ ಪಡುಮಲೆ ಶ್ರೀ ಉಳ್ಳಾಕುಲು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಶ್ರೀ ದೈವಗಳ ನೇಮೊತ್ಸವ

ಸಮಗ್ರ ನ್ಯೂಸ್: ಪಡುಮಲೆ ಶ್ರೀ ಉಳ್ಳಾಕುಲು ವ್ಯಾಘ್ರಚಾಮುಂಡಿ ದೈವಸ್ಥಾನ ಪಡುಮಲೆ ಇಲ್ಲಿನ ವಾರ್ಷಿಕ ನೇಮೊತ್ಸವ ಜ.14ರಿಂದ 19ರ ವರೆಗೆ ನಡೆಯಲಿರುವುದು. ಜ.14ನೇ ಆದಿತ್ಯವಾರ ಭಂಡಾರ ತೆಗೆಯುವುದು, ಧ್ವಜಾರೋಹಣ, ಬೀರತಂಬಿಲ. 15ರಂದು ರಾತ್ರಿ ಪೂ. ಗಂಟೆ 6-00ರಿಂದ 48 ಕಾಯಿ ಗಣಪತಿ ಹೋಮ, ಪೂ. ಗಂಟೆ 9-00ರಿಂದ ಆನೆ ಚಪ್ಪರ ಏರಿಸುವುದು, ಬಳಿಕ ಮಕರ ತೋರಣ ಏರಿಸುವುದು, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಗಂಟೆ 8ರಿಂದ ಪಾಲಕ್ಕಿ ಉತ್ಸವ, ಬೀರತಂಬಿಲ. 16ರಂದು ಪೂ. ಗಂಟೆ 11-00ರಿಂದ ಕಿನ್ನಿಮಾಣಿ ದೈವದ

ಪುತ್ತೂರು: ಜ.14ರಿಂದ ಜ. 19ರವರೆಗೆ ಪಡುಮಲೆ ಶ್ರೀ ಉಳ್ಳಾಕುಲು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಶ್ರೀ ದೈವಗಳ ನೇಮೊತ್ಸವ Read More »

ಪುತ್ತೂರು: ಜ.12 ರಿಂದ 14ರ ವರೆಗೆ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಸಮಗ್ರ ನ್ಯೂಸ್:ಜ.12ನೇ ಶುಕ್ರವಾರ ಮೊದಲ್ಗೊಂಡು ಜ. 14ನೇ ಭಾನುವಾರದ ತನಕ ಶ್ರೀ ಕ್ಷೇತ್ರ ಪಡುಮಲೆ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಪೂರ್ವ ಸಂಪ್ರದಾಯದಂತೆ ಜರಗಲಿರುವುದು. ಜ.12ನೇ ಶುಕ್ರವಾರ ಬಲಿವಾಡು ಶೇಖರಣೆ, ಹಸಿರುವಾಣಿ ಹೊರಕಾಣಿಕೆ ಸಂಗ್ರಹಿಸುವುದು. ಸಂಜೆ ಗಂಟೆ 6.00ರಿಂದ ಉಗ್ರಾಣ ತುಂಬಿಸುವುದು, ರಾತ್ರಿ ಗಂಟೆ 7.00ರಿಂದ ಬಿರಮೂಲೆ ರಾಮ ಭಟ್, ನಾರಾಯಣ ಭಟ್, ಪಟ್ಟೆ ಕೃಷ್ಣ ರೈ ಕುದ್ಕಾಡಿ ಅವರ ಸಾರಥ್ಯದಲ್ಲಿ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಸಂಜೆ 6 ಗಂಟೆಯಿಂದ

ಪುತ್ತೂರು: ಜ.12 ರಿಂದ 14ರ ವರೆಗೆ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ Read More »

ಸುಳ್ಯ: ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಧ್ವಜಾರೋಹಣ

ಸಮಗ್ರ ನ್ಯೂಸ್: ಜ.11 ರಂದು ನಡೆಯುವ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವಕ್ಕೆ ಜ. 03ರಂದು ರಾತ್ರಿ ಇತಿಹಾಸ ಪ್ರಸಿದ್ಧ ಕುಕ್ಕನ್ನೂರು ಕಿನ್ನಿಮಾನಿ ಪೂಮಾಣಿ ದೈವಗಳ ಭಂಡಾರ ಬಂದು, ಬಳಿಕ ಧ್ವಜಾರೋಹಣ ಮಾಡುವುದರ ಮೂಲಕ ಜಾತ್ರಾಮಹೋತ್ಸವಕ್ಕೆ ಚಾಲನೆ ದೊರೆಯಿತು.

ಸುಳ್ಯ: ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಧ್ವಜಾರೋಹಣ Read More »

ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ| ಬಾಬರಿ ಮಸೀದಿಯನ್ನು ಕೆಡವಿ ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು ಸಿದ್ಧರಾಮಯ್ಯ ಸ್ವಾಗತಿಸುತ್ತಿದ್ದಾರೆ:ಅನ್ವರ್ ಸಾದತ್

ಸಮಗ್ರ ನ್ಯೂಸ್:ಜ 03: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದ.ಕ. ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯು ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ರವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಜಾತ್ಯತೀತ ಮುಖವಾಡ ಹೊತ್ತು 85 ಶೇಕಡಾ ಮುಸ್ಲಿಮರ ಮತ ಪಡೆದು ಸರಕಾರ ಕಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಸ್ಲಿಮರ ಆರಾಧನ ಕೇಂದ್ರವಾದಂತಹ ಬಾಬರಿ ಮಸೀದಿಯನ್ನು ಕೆಡವಿ ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು ಸ್ವಾಗತಿಸುತ್ತಿದ್ದಾರೆ, ಹಾಗೂ ಮುಸ್ಲಿಂ

ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ| ಬಾಬರಿ ಮಸೀದಿಯನ್ನು ಕೆಡವಿ ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು ಸಿದ್ಧರಾಮಯ್ಯ ಸ್ವಾಗತಿಸುತ್ತಿದ್ದಾರೆ:ಅನ್ವರ್ ಸಾದತ್ Read More »

ಪೆರ್ನಾಜೆ: ಮತ್ತೆ ಒಂಟಿ ಸಲಗ ಪುಂಡಾಟ| ಬಾಳೆ ಗಿಡ ಬಾಳೆ ದಿಗುಜ್ಜೆ ಗಿಡಗಳ ಮೇಲೆ ದಾಳಿ-ಹಾನಿ

ಸಮಗ್ರ ನ್ಯೂಸ್: ಪುತ್ತೂರು ಸುಳ್ಯ ಕೇರಳ ಗಡಿಭಾಗ ಆನೆಗುಂಡಿ ರಕ್ಷಿತಾರಣ್ಯದಿಂದ ಒಂಟಿ ಸಲಗವು ಜ.3ರಂದು ಮುಂಜಾನೆ ಕುಮಾರ್ ಪೆರ್ನಾಜೆ ಯವರ ತೋಟಕ್ಕೆ ನುಗ್ಗಿ ಹತ್ತು ಬಾಳೆ ನಾಲ್ಕು ದೀವಿ ಹಲಸು ಮರದ ಸಿಪ್ಪೆಗಳನ್ನೆಬ್ಬಿಸಿ, ಕೊಂಬೆಗಳನ್ನು ಮುರಿದು ತಿಂದಿದೆ. ಈಗಾಗಲೇ ಮಂಡೆಕೋಲು ಮೂರೂರು ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ ಒಂಟಿ ಸಲಗ ಒಂದು ಗುಂಪಿನಿಂದ ಬೇರ್ಪಟ್ಟು ಕನಕಮಜಲು ಮುಗೇರಿನಿಂದ ಪೆರ್ನಾಜೆಗೆ ಬಂದು ಹಾನಿಗೊಳಿಸಿ ಪುನಃ ಮುಗೇರಿನ ಕಡೆಗೆ ತೆರಳಿದೆ. ಈಗಾಗಲೇ, ಈ ಆನೆಯನ್ನು

ಪೆರ್ನಾಜೆ: ಮತ್ತೆ ಒಂಟಿ ಸಲಗ ಪುಂಡಾಟ| ಬಾಳೆ ಗಿಡ ಬಾಳೆ ದಿಗುಜ್ಜೆ ಗಿಡಗಳ ಮೇಲೆ ದಾಳಿ-ಹಾನಿ Read More »

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ

ಸಮಗ್ರ ನ್ಯೂಸ್: ಸವಣೂರು,ಜ.2, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಸವಣೂರಿನ ಅಂಬೇಡ್ಕರ್ ಭವನದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲಾಯಿತು. ಸುಳ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕರ್ತರ ಸಮಾವೇಶದ ಯಶಸ್ಸಿನ ಬಗ್ಗೆ ಅವಲೋಕನವು ಕೂಡ ನಡೆಸಲಾಯಿತು. ಹಾಗೂ ಜನವರಿ ತಿಂಗಳಲ್ಲಿ ನಡೆಯುವ ಪಕ್ಷದ ಸದಸ್ಯತ್ವ

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ Read More »

ಕರಾವಳಿಯಲ್ಲಿ ಅಕಾಲಿಕ‌‌ ಮಳೆ| ಮೋಡ‌ ಕವಿದ ವಾತಾವರಣ

ಸಮಗ್ರ ನ್ಯೂಸ್: ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಇಂದು(ಜ.3) ನಸುಕಿನ ವೇಳೆ ಮಳೆ ಸುರಿದಿರುವುದು ವರದಿಯಾಗಿದೆ. ದ.ಕ. ಜಿಲ್ಲೆಯಲ್ಲಿ ಮಂಗಳವಾರ ಮುಸ್ಸಂಜೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಕೆಲವೆಡೆ ರಾತ್ರಿಯಿಂದಲೇ ತುಂತುರು ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ ಗುಡುಗು ಸಹಿತ ತುಂತುರು ಮಳೆಯಾಗಿದೆ. ನಗರ ಹೊರವಲಯದ ಉಳ್ಳಾಲ, ಕೊಣಾಜೆ, ಮುಡಿಪು, ಮಂಜನಾಡಿ ಸೇರಿದಂತೆ ಹಲವೆಡೆ ಇಂದು ಬೆಳಗ್ಗೆ ಉತ್ತಮ ಮಳೆಯಾಗಿರುವುದು ವರದಿಯಾಗಿದೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನಾದ್ಯಂತ ತುಂತುರು ಮಳೆ ಸುರಿದಿದೆ.

ಕರಾವಳಿಯಲ್ಲಿ ಅಕಾಲಿಕ‌‌ ಮಳೆ| ಮೋಡ‌ ಕವಿದ ವಾತಾವರಣ Read More »

ನಮ್ಮದು ಒಕ್ಕೂಟ ವ್ಯವಸ್ಥೆಯ ಸರಕಾರಗಳು ಇರುವುದು ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ: ಎಂ ವೆಂಕಪ್ಪ ಗೌಡ

ಸಮಗ್ರ ನ್ಯೂಸ್: ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಜ. 2ರಂದು ಸುಳ್ಯ ನಗರ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪ ಗೌಡರು ಈ ಯಾತ್ರೆ ಒಂದು ಒಳ್ಳೆಯ ಕಾರ್ಯಕ್ರಮ ಆದರೆ, ಕೇಂದ್ರ ಮತ್ತು ರಾಜ್ಯ ಎರಡೂ ಸರಕಾರಗಳ ಯೋಜನೆಯನ್ನು ಸಹ ಜನತೆಗೆ ತಲುಪಿಸಬೇಕು. ಕೇವಲ ಕೇಂದ್ರ ಸರಕಾರದ ಯೋಜನೆ ಎಂದರೆ ತಪ್ಪಾಗುತ್ತದೆ ಎಂದು ಹೇಳಿದರು. ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಫಸಲ್ ಭೀಮಾ,

ನಮ್ಮದು ಒಕ್ಕೂಟ ವ್ಯವಸ್ಥೆಯ ಸರಕಾರಗಳು ಇರುವುದು ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ: ಎಂ ವೆಂಕಪ್ಪ ಗೌಡ Read More »