ಸುಳ್ಯ: ಕೆಎಸ್ಆರ್ ಟಿಸಿ ಗುತ್ತಿಗೆ ಚಾಲಕರ ದಿಢೀರ್ ಮುಷ್ಕರ| ಗ್ರಾಮೀಣ ರೂಟ್ ಗಳು ಬಂದ್| ಸಂಕಷ್ಟದಲ್ಲಿ ಪ್ರಯಾಣಿಕರು
ಸಮಗ್ರ ನ್ಯೂಸ್: ಕೆಎಸ್ಆರ್ ಟಿಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅತಂತ್ರವಾಗಿರುವ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಕೆಲಸ ನಿಲ್ಲಿಸಿದ್ದು, ಸುಳ್ಯ ತಾಲೂಕಿನ ಗ್ರಾಮೀಣ ಬಸ್ ರೂಟ್ ಗಳು ಸ್ಥಗಿತಗೊಂಡು ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ಓಡಾಡುವ ಬಸ್ ರೂಟ್ ಗಳಿಗೆ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕ ಮಾಡಲಾಗಿತ್ತು. ಈ ನೇಮಕದ ಅವಧಿ










