ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ| ಬಿಜೆಪಿಗೆ ಗುಡ್ ಬಾಯ್ ಹೇಳಿದ ರಾಧಾಕೃಷ್ಣ ಬೊಳ್ಳೂರು
ಸಮಗ್ರ ನ್ಯೂಸ್: ದ.ಕ. ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾಗಿರುವ ರಾಧಾಕೃಷ್ಣ ಬೊಳ್ಳೂರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಡಿ.21ರಂದು ಸುಳ್ಯದ ಪ್ರೆಸ್ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುಳ್ಯ ಮಂಡಲದ ಬಿಜೆಪಿ ಪದಾಧಿಕಾರಿಗಳು ಮತ್ತು ಕೋರ್ ಕಮಿಟಿಯ ವರ್ತನೆಯ ಬಗ್ಗೆ ಬೇಸರ ವ್ಯಕ್ತಪಡಿಸಿ, ಕಾರ್ಯಕರ್ತರ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ. 9-10 ಜನರ ಕೋರ್ ಕಮಿಟಿಯೇ ಬಿಜೆಪಿ ಎಂಬಂತಾಗಿದೆ. ಈ ರೀತಿಯ ವರ್ತನೆಯಿಂದಾಗಿ ಪಕ್ಷದಲ್ಲಿ ಗುಂಪುಗಳು ನಿರ್ಮಾಣವಾಗಿ ಅದು ಪಂಚಾಯತ್ ಚುನಾವಣೆ, ಸಹಕಾರಿ









