ಕರಾವಳಿ

ಸುಳ್ಯದ ಖ್ಯಾತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಬೆಂಗಳೂರಲ್ಲಿ ನವಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ವಿಶ್ವ ಚೇತನ ಬಳಗ ಬೆಂಗಳೂರು ವತಿಯಿಂದ ಜರುಗಿದ 3ನೇ ಕಲಾ ಸಾಂಸ್ಕೃತಿಕ ಮಹಾ ಸಮ್ಮೇಳನದಲ್ಲಿ ಸುಳ್ಯದ ಖ್ಯಾತ ಸಾಹಿತಿ, ಜ್ಯೋತಿಷಿ, ಸಂಘಟಕ ಮತ್ತು ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಅವರಿಗೆ ಇವರ 25 ವರ್ಷಗಳ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ 2023 ನೇ ಸಾಲಿನ ನವ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ ಯನ್ನು ವಿಶ್ವ ಚೇತನ ಬಳಗ ಇದರ ಅಧ್ಯಕ್ಷ ಶಿವಸ್ವಾಮಿ ಅವರು ನೀಡಿ ಸನ್ಮಾನಿಸಿ ಗೌರವಿಸಿದ್ದಾರೆ. ಎಚ್. ಭೀಮರಾವ್ […]

ಸುಳ್ಯದ ಖ್ಯಾತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಬೆಂಗಳೂರಲ್ಲಿ ನವಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ Read More »

ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

ಸಮಗ್ರ ನ್ಯೂಸ್: ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೀಟರ್ ಬಡ್ಡಿ ವಸೂಲಿಗಾರ ಸುಮಿತ್ ಆಳ್ವ ಅಲಿಯಾಸ್ ಸುಮ್ಮಿ, ಮಹಮ್ಮದ್ ಜುನೈದ್, ಸೀಯಾನ್ ಮತ್ತು ಮಹಮ್ಮದ್ ತೌಫೀಕ್ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಂಗ ಬಂಧನ

ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…! Read More »

ಸುಳ್ಯ: ಹಲ್ಲೆ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. 2018ರ ನವೆಂಬರ್ 11 ರಂದು ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಪೇರಾಲ್ ಎಂಬಲ್ಲಿ ಮಾಜಿ ಸೈನಿಕರಾದ ಅಡ್ಡಂತಡ್ಕ ದೇರಣ್ಣ ಗೌಡರು ಪೇರಾಲು ಅಂಚೆ ಕಚೇರಿಯ ಬಳಿ ರಸ್ತೆಯಲ್ಲಿ ನಿಂತುಕೊಂಡಿದ್ದ ಸಮಯ ಆರೋಪಿ ನಾಗೇಶನು ಹಿಂಬದಿಯಿಂದ ಬಂದು ಏಕಾಏಕಿ ಅವ್ಯಾಚ್ಯ ಶಬ್ದಗಳಿಂದ ಬೈದು ಮರದ ದೊಣ್ಣೆಯಿಂದ ಅವರಿಗೆ ತಲೆಗೆ ಹೊಡೆದು ನಿನ್ನನ್ನು ಜೀವ ಸಹಿತ ಬಿಡುವುದಿಲ್ಲವೆಂದು ಜೀವ ಬೆದರಿಕೆ

ಸುಳ್ಯ: ಹಲ್ಲೆ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ Read More »

ಮದುವೆಯಾದ ಭಿನ್ನಕೋಮಿನ ಜೋಡಿ ಸುರತ್ಕಲ್ ಠಾಣೆಗೆ ಹಾಜರ್

ಸಮಗ್ರ ನ್ಯೂಸ್: ಸುರತ್ಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ 7ನೇ ಬ್ಲಾಕ್‌ ಕಾಟಿಪಳ್ಳ ಯುವಕ ಪ್ರಶಾಂತ್‌ ಭಂಡಾರಿ (31) ಮತ್ತು 3ನೇ ಬ್ಲಾಕ್‌ ಆಶ್ರಯ ಕಾಲನಿಯ ನಿವಾಸಿ ಆಯೇಷಾ ಮದುವೆಯಾಗಿ ಶುಕ್ರವಾರ ಸಂಜೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸಿದರು. 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಅನ್ಯ ಧರ್ಮಿàಯರಾದ ಕಾರಣ ಒಪ್ಪಿಗೆ ದೊರೆಯುವ ಅನುಮಾನ ಬಂದ ಮೇರೆಗೆ ಜತೆಯಾಗಿ ಡಿ. 1ರಂದು ನಾಪತ್ತೆಯಾಗಿದ್ದರು. ಇದೀಗ ವಿವಾಹವಾಗಿ ಪತ್ತೆಯಾಗಿದ್ದಾರೆ. ಆಯೆಷಾ ತನ್ನ ಹೆಸರನ್ನು ಅಕ್ಷತಾ ಎಂದು

ಮದುವೆಯಾದ ಭಿನ್ನಕೋಮಿನ ಜೋಡಿ ಸುರತ್ಕಲ್ ಠಾಣೆಗೆ ಹಾಜರ್ Read More »

ಮಂಗಳೂರು: ಬಸ್‌ ಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನಕ್ಕೆ ಹಲವರ ವಿರೋಧ

ಸಮಗ್ರ ನ್ಯೂಸ್: ನಗರದಲ್ಲಿ ಖಾಸಗಿ ಬಸ್ ರೂಟ್ ಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ನಡೆದಿತ್ತು. ಆದರೆ ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಡಿ. 10 ರಿಂದ ಪೂರ್ಣ ಪ್ರಮಾಣದಲ್ಲಿ ಈ ಅಭಿಯಾನ ಆರಂಭಿಸಲು ಕನ್ನಡಪರ ಸಂಘಟನೆಗಳು ಸಿದ್ಧತೆ ನಡೆಸುತ್ತಿವೆ. ಇದರ ನಡುವೆ ಕನ್ನಡ ಸ್ಟಿಕರ್ ಅಭಿಯಾನಕ್ಕೆ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬಸ್ ಗಳಿಗೆ ಸ್ಟಿಕರ್ ಅಂಟಿಸಿ ಸ್ಥಳದಲ್ಲಿಯೇ ಬಸ್ ಸಿಬ್ಬಂದಿಯಿಂದ ಸ್ಟಿಕರ್ ನ ಬಾಬ್ತು ಹಣವನ್ನು ವಸೂಲಿ ಮಾಡಲಾಗಿದೆ. ಆದರೆ ಯಾವುದೇ ರಶೀದಿ ನೀಡದೇ

ಮಂಗಳೂರು: ಬಸ್‌ ಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನಕ್ಕೆ ಹಲವರ ವಿರೋಧ Read More »

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್…

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನಲಾದ ಪೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು. ಇದೀಗ ಈ ಜೋಡಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಪ್ರಕರಣಕ್ಕೆ ಪುಷ್ಠಿ ಎಂಬಂತೆ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್… Read More »

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಸಮಗ್ರ ನ್ಯೂಸ್: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ. ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ Read More »

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: ದೇಶಾದ್ಯಂತ ಹೃದಯಾಘಾತ ಪ್ರಕರಣ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ. ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು. ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆ ಹೃದಯಾಘಾತಕ್ಕೆ ಬಲಿ Read More »

ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್| ಕುಡುಪು ಷಷ್ಠಿ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ ದಂಗಲ್ ಮುಂದುವರಿದಿದೆ. ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಮಾಡಿದ ಆರೋಪ ಕೇಳಿಬಂದಿದ್ದು, ಬೀದಿ ಬದಿ ವ್ಯಾಪಾರಿಗಳ ಸಂಘ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದೆ. ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವದ ಜಾತ್ರೆ ನಡೆಯಲಿದೆ. ಆದರೆ, ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ

ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್| ಕುಡುಪು ಷಷ್ಠಿ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ Read More »

ಸುಳ್ಯ: ದಿ. ಸೌಜನ್ಯಳ ಬ್ಯಾನರ್ ತೆರವುಗೊಳಿಸುವಂತೆ ಮನವಿ| ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡನೆ

ಸಮಗ್ರ ನ್ಯೂಸ್: ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಗುತ್ತಿಗಾರು ಸಮಿತಿಯಿಂದ 16ರಂದು ನಡೆಯಲಿರುವ ಬೃಹತ್ ಪ್ರತಿಭಟನೆ ಕಾರ್ಯಕ್ರಮದ ಬ್ಯಾನರ್ ತೆರವುಗೊಳಿಸುವಂತೆ ತಾಲೂಕು ಕಾರ್ಯನಿರ್ವಾಹಣಧಿಕಾರಿಗಳಿಗೆ ಜನ ಜಾಗೃತಿ ವೇದಿಕೆಯಿಂದ ಮನವಿ ಮಾಡಿರುವುದನ್ನು ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಸುಳ್ಯ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡಿಸಿದ್ದಾರೆ. 12 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ, ಕೊಲೆ ವಿಚಾರವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ನಾವು ಹೋರಾಟ ಮಾಡುತ್ತ ಬಂದಿದ್ದು, ಜನ ಸಾಮಾನ್ಯರು ಪಕ್ಷಾತೀತ, ಜಾತ್ಯತೀತ ವಾಗಿ ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಸುಳ್ಯ: ದಿ. ಸೌಜನ್ಯಳ ಬ್ಯಾನರ್ ತೆರವುಗೊಳಿಸುವಂತೆ ಮನವಿ| ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡನೆ Read More »