ಕರಾವಳಿ

ಮಂಗಳೂರು: ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ಹಾರಿದ ಲಾರಿ| ಪವಾಡಸದೃಶ ಪಾರಾದ ಪಾದಚಾರಿಗಳು| ಹಲವು ವಾಹನಗಳು ಜಖಂ

ಸಮಗ್ರ ನ್ಯೂಸ್‌: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್‌ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ಮಂಗಳೂರು ಹೊರವಲಯದ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್‌ ಬಳಿ ನಡೆದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೊಲೀಸ್‌ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ಸ್ಕೂಟರ್‌ ಸವಾರ, ಬಪ್ಪನಾಡು ಬಳಿಯ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್, ಉತ್ತರ ಕರ್ನಾಟಕ ಮೂಲದ ಗಂಭೀರ ಗಾಯಗೊಂಡು ಮುಕ್ಕ […]

ಮಂಗಳೂರು: ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ಹಾರಿದ ಲಾರಿ| ಪವಾಡಸದೃಶ ಪಾರಾದ ಪಾದಚಾರಿಗಳು| ಹಲವು ವಾಹನಗಳು ಜಖಂ Read More »

ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಬೆಲೆ ಏರಿಕೆ ಯಾಕೆ?ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ

ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ Read More »

ಜೈನಮುನಿ ಹತ್ಯೆಗೆ ಮತ್ತೊಂದು ಕಾರಣ?

ಸಮಗ್ರ ನ್ಯೂಸ್: ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಜುಲೈ 5ರ ರಾತ್ರಿ ಜೈನಮುನಿಯನ್ನು ಹಂತಕರು ಕರೆಂಟ್ ಶಾಕ್ ಕೊಟ್ಟು ತುಂಡರಿಸಿ ಬೋರ್ ವೆಲ್‍ಗೆ ಬಿಸಾಡಿದ್ದರು. ಇದೀಗ ಹಣವಷ್ಟೇ ಅಲ್ಲ. ಜೈನಮುನಿಯ ಬೈಗುಳವೇ ಕೊಲೆಗೆ ಕಾರಣ ಎಂಬ ಸ್ಫೋಟಕ ಸತ್ಯವನ್ನು ಆರೋಪಿಗಳು ಸಿಐಡಿ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಾರ್ಜ್‍ಶೀಟ್‍ನಲ್ಲಿ ಏನಿದೆ.?: ಆರೋಪಿ ನಾರಾಯಣ ಮಾಳಿಯು

ಜೈನಮುನಿ ಹತ್ಯೆಗೆ ಮತ್ತೊಂದು ಕಾರಣ? Read More »

ಸುಳ್ಯ: ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಲು ಜನಜಾಗೃತಿ ವೇದಿಕೆಯಿಂದ ಮನವಿ

ಸಮಗ್ರ ನ್ಯೂಸ್: ಅತ್ಯಾಚಾರ ಮತ್ತು ದೌರ್ಜನ್ಯಕ್ಕೊಳಗಾಗಿ ಹತ್ಯೆಯಾದ ಧರ್ಮಸ್ಥಳ ಸಮೀಪದ ಪಾಂಗಾಳದ ಅಪ್ರಾಪ್ತ ಬಾಲಕಿ‌ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಅಳವಡಿಸಲಾದ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಮಾಡಿದೆ. ಈ ಹಿನ್ನಲೆಯಲ್ಲಿ ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ತಾಲೂಕಿನ ಎಲ್ಲಾ ಗ್ರಾ.ಪಂ ಪಿಡಿಒ ಗಳಿಗೆ ಬ್ಯಾನರ್ ಅಳವಡಿಕೆ ಕುರಿತು ಕ್ರಮವಹಿಸುವಂತೆ ಸುತ್ತೋಲೆ ಹೊರಡಿಸಿದ್ದಾರೆ. ಸುಳ್ಯ ತಾಲೂಕಿನಾದ್ಯಂತ ಹಲವು ಕಡೆಗಳಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆಗ್ರಹಿಸಿ ಹೋರಾಟಗಾರರು ಬ್ಯಾನರ್ ಅಳವಡಿಕೆ

ಸುಳ್ಯ: ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಲು ಜನಜಾಗೃತಿ ವೇದಿಕೆಯಿಂದ ಮನವಿ Read More »

ಕುಕ್ಕೆ ಸುಬ್ರಹ್ಮಣ್ಯ: ಲೋಕಸಭಾ ಕಲಾಪದ ಕನ್ಸಲ್ಟಂಟ್‌ ಇಂಟಪ್ರಿಟರ್‌ ಆಗಿ ಡಾ. ಗೋವಿಂದ ಎನ್.ಎಸ್ ನೇಮಕ

ಸಮಗ್ರ ನ್ಯೂಸ್: ಲೋಕಸಭೆಯ ಕಲಾಪದಲ್ಲಿ ಆಗುವ ಚರ್ಚೆಗಳನ್ನು ಆಂಗ್ಲ ಹಾಗೂ ಪ್ರಾದೇಶಿಕ ಭಾಷೆಗೆ ಭಾಷಾಂತರ ಮಾಡುವ ಕನ್ಸಲ್ಟಂಟ್‌ ಇಂಟಪ್ರಿಟರ್‌ ಹುದ್ದೆಗೆ ಸುಬ್ರಹ್ಮಣ್ಯ ಸಮೀಪದ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಗುಂಡಿಹಿತ್ಲುವಿನ ಡಾ| ಗೋವಿಂದ ಎನ್‌.ಎಸ್‌ ನೇಮಕಗೊಂಡಿದ್ದಾರೆ. ಲೋಕಸಭೆಯ ಅಧಿವೇಶನದಲ್ಲಿನ ಕಾರ್ಯಕಲಾಪಗಳನ್ನು ಭಾರತೀಯ ವ್ಯವಸ್ಥೆಗೆ ಭಾಷಾಂತರಿಸುವ ಸಲುವಾಗಿ ಹೊಸ ಸಂಸತ್‌ ಭವನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಿರುವ ಎಲ್ಲ ಭಾಷೆಗಳಲ್ಲೂ ತಲಾ 5 ಕನ್ಸಲ್ಟಂಟ್‌ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಕನ್ನಡಕ್ಕೆ ಭಾಷಾಂತರ ಹುದ್ದೆಗೆ 15 ಮಂದಿ

ಕುಕ್ಕೆ ಸುಬ್ರಹ್ಮಣ್ಯ: ಲೋಕಸಭಾ ಕಲಾಪದ ಕನ್ಸಲ್ಟಂಟ್‌ ಇಂಟಪ್ರಿಟರ್‌ ಆಗಿ ಡಾ. ಗೋವಿಂದ ಎನ್.ಎಸ್ ನೇಮಕ Read More »

ಡಿ.09: ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ಕೊನೆದಿನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25,045 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಯುವ ಮತದಾರರ ಹೆಸರು ಸೇರ್ಪಡೆಗೆ ಡಿ. 9 ಕೊನೆಯ ದಿನವಾಗಿದೆ. ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45,530 ಯುವ ಜನರಿದ್ದಾರೆ. ಈ ಪೈಕಿ 25,045 ಜನ ಮಾತ್ರ ನೋಂದಾಯಿಸಿದ್ದಾರೆ. 20,494 ಮಂದಿ ಬಾಕಿ ಇದ್ದು ಅವರನ್ನು ಸೇರಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಯುವ ಮತದಾರರಲ್ಲಿ 3,742 ಮಂದಿಯ ಫಾರ್ಮ್-6 ಅರ್ಜಿಗಳು

ಡಿ.09: ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ಕೊನೆದಿನ Read More »

ಡಿ. 31ರಂದು ದೆಹಲಿಯಲ್ಲಿ ನಡೆಯಲಿರುವ ಅಮ್ ಆದ್ಮಿ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅಶೋಕ್ ಎಡಮಲೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಕರ್ನಾಟಕದಿಂದ ಒಟ್ಟು 8 ರಾಷ್ಟ್ರೀಯ ಸಮಿತಿ ಸದಸ್ಯರಲ್ಲಿ ಓರ್ವರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಧ್ಯಕ್ಷರಾಗಿದ್ದ ಅಶೋಕ ಎಡಮಲೆ ಅವರು ಇದೇ ಡಿ. 31ರಂದು ದೆಹಲಿಯಿಂದ ನಡೆಯುವ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ 2021 ರಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯರ ಆಯ್ಕೆಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ 3ವರ್ಷದ ಅವಧಿಗೆ ಚುನಾಯಿತರಾಗಿದ್ದರು. ಕಳೆದ ಬಾರಿ 2022ರಲ್ಲಿ ದೆಹಲಿಯಲ್ಲಿ ನಡೆದ

ಡಿ. 31ರಂದು ದೆಹಲಿಯಲ್ಲಿ ನಡೆಯಲಿರುವ ಅಮ್ ಆದ್ಮಿ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅಶೋಕ್ ಎಡಮಲೆ Read More »

ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡುವ ಭಕ್ತಾದಿಗಳಿಗೆ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಮಣ್ಯ. ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯ ಪ್ರವಾಸ ಕೈಗೊಳ್ಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದಿದೆ. ದೇವಾಲಯಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ. ಮಹಾತೋಭಾರ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ, ಸುಬ್ರಮಣ್ಯ, ಕಡಬ ತಾಲೂಕು

ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡುವ ಭಕ್ತಾದಿಗಳಿಗೆ ಮಹತ್ವದ ಸೂಚನೆ Read More »

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ನಡೆದಿದೆ.ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ (ಡಿ.5) ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಡಿ. 6ರಂದು ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬoದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳಿಗೆ ಹಾನಿಯಾಗಿದ್ದು, ರಾತ್ರಿ ವೇಳೆ

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ Read More »

ಕಾಫಿತೋಟದ ಮ್ಯಾನೇಜರ್ ಮೇಲೆ ಕಾಡುಕೋಣ ದಾಳಿ

ಸಮಗ್ರ ನ್ಯೂಸ್: ಕಾಡುಕೋಣ ದಾಳಿಯಿಂದ ಕಾಫಿತೋಟದ ಮ್ಯಾನೇಜರ್ ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಗ್ರಾಮದಲ್ಲಿ ದ.4 ರಂದು ಮಧ್ಯಾಹ್ನ ನಡೆದಿದೆ. ಸಾರಗೋಡು ಗ್ರಾಮದ ಎಸ್.ಟಿ. ಸುರೇಂದ್ರಗೌಡ ಎಂಬುವರ ಹಲಸೂರು ಎಸ್ಟೇಟ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸೋಮವಾರ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲ್ವಿಚಾರಣೆ ಮಾಡಲು ತೆರಳಿದ್ದಾಗ ಎಸ್ಟೇಟ್ ಮ್ಯಾನೇಜರ್ ಸುನಿಲ್ ಅವರ ಮೇಲೆ ಕಾಡುಕೋಣ ದಾಳಿಮಾಡಿದೆ ಎಂದು ತಿಳಿದುಬಂದಿದೆ. ಹಲಸೂರು ಎಸ್ಟೇಟ್ ಗೆ ಎಲೆಕ್ಟ್ರೀಕ್ ಬೇಲಿ ಇದ್ದರೂ ಸಹ ಅದನ್ನು

ಕಾಫಿತೋಟದ ಮ್ಯಾನೇಜರ್ ಮೇಲೆ ಕಾಡುಕೋಣ ದಾಳಿ Read More »