ಅರಣ್ಯಾಧಿಕಾರಿಗಳ ಮೇಲೆ ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಹರೀಶ್ ಪೂಂಜಾ| ಎಫ್ಐಆರ್ ವಾಪಾಸ್ಸಿಗೆ ಬಿಜೆಪಿ ಆಗ್ರಹ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣವನ್ನು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಆದರೆ ಈ ವೇಳೆ ಬರಗಾಲ ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಅವಕಾಶ ನೀಡದ್ದಕ್ಕೆ ಸಿಟ್ಟಿಗೆದ್ದ ಶಾಸಕ ಪೂಂಜಾ ಸದನದ ಬಾವಿಗಿಳಿದು ಜೆಡಿಎಸ್, ಬಿಜೆಪಿ ಸದಸ್ಯರಿಂದ ಪ್ರತಿಭಟನೆ ಮಾಡಿದ್ದಾರೆ. ಬಳಿಕ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಸ್ಪೀಕರ್ ಖಾದರ್ ಅವಕಾಶ ನೀಡಿದ್ದು, ಬಳಿಕ ವಿಪಕ್ಷ ಸದಸ್ಯರು ಧರಣಿ ಹಿಂಪಡೆದಿದ್ದಾರೆ. […]










